Homeಮುಖಪುಟ‘ತಿದ್ದುಪಡಿಯೊಂದಿಗೆ ದೇಶದ್ರೋಹ ಕಾನೂನು ಉಳಿಸಿಕೊಳ್ಳಿ’: ಕಾನೂನು ಆಯೋಗ ಪ್ರಸ್ತಾಪ

‘ತಿದ್ದುಪಡಿಯೊಂದಿಗೆ ದೇಶದ್ರೋಹ ಕಾನೂನು ಉಳಿಸಿಕೊಳ್ಳಿ’: ಕಾನೂನು ಆಯೋಗ ಪ್ರಸ್ತಾಪ

- Advertisement -
- Advertisement -

ಪ್ರಮುಖ ತಿದ್ದುಪಡಿಗಳೊಂದಿಗೆ ದೇಶದ್ರೋಹ ಕಾನೂನನ್ನು ಉಳಿಸಿಕೊಳ್ಳಲು ಭಾರತೀಯ ಕಾನೂನು ಆಯೋಗ ಪ್ರಸ್ತಾಪಿಸಿದೆ ಎಂದು ‘ಬಾರ್ ಮತ್ತು ಬೆಂಚ್’ ಶುಕ್ರವಾರ ವರದಿ ಮಾಡಿದೆ.

ಕರ್ನಾಟಕ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ನೇತೃತ್ವದ ಆಯೋಗವು, “ದೇಶದ್ರೋಹ ಕಾನೂನನ್ನು ವಸಾಹತುಶಾಹಿ ಪರಂಪರೆಯ ಭಾಗವೆನ್ನುವುದೇ ಅದರ ರದ್ಧತಿಗೆ ಮಾನ್ಯವಾದ ಕಾರಣವಾಗಬಾರದು” ಎಂದು ಹೇಳಿದೆ.

“ಭಾರತೀಯ ಕಾನೂನು ವ್ಯವಸ್ಥೆಯ ಸಂಪೂರ್ಣ ಚೌಕಟ್ಟು ವಸಾಹತುಶಾಹಿ ಪರಂಪರೆಯದ್ದಾಗಿದೆ” ಎಂದು ಆಯೋಗ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. “ಪೊಲೀಸ್ ಪಡೆ ಮತ್ತು ಅಖಿಲ ಭಾರತ ನಾಗರಿಕ ಸೇವೆಯ ಕಲ್ಪನೆಯು ಬ್ರಿಟಿಷ್ ಕಾಲದ ತಾತ್ಕಾಲಿಕ ಅವಶೇಷಗಳಾಗಿವೆ” ಎಂದು ಆಯೋಗ ಅಭಿಪ್ರಾಯಪಟ್ಟಿದೆ.

ಕಾನೂನಿನಡಿಯಲ್ಲಿ ಜೈಲು ಶಿಕ್ಷೆಯನ್ನು ಮೂರು ವರ್ಷದಿಂದ ಏಳು ವರ್ಷಕ್ಕೆ ಹೆಚ್ಚಿಸಬೇಕು ಎಂದು ಆಯೋಗ ಸೂಚಿಸಿದೆ.

“ಇದು ಎಸಗಿದ ಕೃತ್ಯದ ಪ್ರಮಾಣ ಮತ್ತು ತೀವ್ರತೆಗೆ ಅನುಗುಣವಾಗಿ ದೇಶದ್ರೋಹದ ಪ್ರಕರಣಕ್ಕೆ ಶಿಕ್ಷೆಯನ್ನು ನೀಡಲು ನ್ಯಾಯಾಲಯಗಳಿಗೆ ಹೆಚ್ಚಿನ ಅವಕಾಶವನ್ನು ನೀಡುತ್ತದೆ” ಎಂದು ಆಯೋಗವು ತನ್ನ ವರದಿಯಲ್ಲಿ ತಿಳಿಸಿದೆ.

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

ವಸಾಹತುಶಾಹಿ ಯುಗದ ದೇಶದ್ರೋಹ ಕಾನೂನಿಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಅದನ್ನು ಮರುಪರಿಶೀಲಿಸುವವರೆಗೆ ಈ ಕಾನೂನಿನ ಅಡಿಯಲ್ಲಿ ಯಾವುದೇ ಹೊಸ ಪ್ರಕರಣಗಳನ್ನು ದಾಖಲಿಸದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ತಿಳಿಸಿತ್ತು.

“ಭಾರತದಲ್ಲಿ ಕಾನೂನಿನ ಮೂಲಕ ಸ್ಥಾಪಿಸಲಾದ ಸರ್ಕಾರದ ಬಗ್ಗೆ ದ್ವೇಷ ಅಥವಾ ತಿರಸ್ಕಾರವನ್ನು ತರಲು, ಅಸಮಾಧಾನವನ್ನು ಪ್ರಚೋದಿಸುವ ಪ್ರಯತ್ನಗಳನ್ನು ದೇಶದ್ರೋಹದ ಅಪರಾಧ” ಎಂದು ಪರಿಗಣಿಸಲಾಗಿತ್ತು.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರಿಗೆ ಪತ್ರ ಬರೆದಿರುವ ಆಯೋಗವು, “ಹಿಂಸಾಚಾರವನ್ನು ಪ್ರಚೋದಿಸುವ ಅಥವಾ ಸಾರ್ವಜನಿಕ ಅಸ್ವಸ್ಥತೆಯನ್ನು ಉಂಟುಮಾಡುವ ಪ್ರವೃತ್ತಿ” ಎಂಬ ಪದಗಳನ್ನು ಸೇರಿಸಲು ಸೂಚಿಸಿದೆ.

“ಕೆಲವು ದೇಶಗಳು ಹಾಗೆ ಮಾಡಿವೆ ಎಂಬ ಆಧಾರದ ಮೇಲೆ ದೇಶದ್ರೋಹ ಕಾನೂನನ್ನು ರದ್ದುಗೊಳಿಸುವುದು ಮೂಲಭೂತವಾಗಿ ಭಾರತದಲ್ಲಿ ಅಸ್ತಿತ್ವದಲ್ಲಿರುವ ನೆಲದ ವಾಸ್ತವಗಳಿಗೆ ಕರುಡಾಗಿಸುತ್ತದೆ” ಎಂದು ಆಯೋಗ ಅಭಿಪ್ರಾಯಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...