Homeಅಂತರಾಷ್ಟ್ರೀಯನೆತನ್ಯಾಹು ಮನೆ ಮೇಲಿನ ಡ್ರೋನ್ ಉಡಾವಣೆಗೆ ಪ್ರತೀಕಾರ; ಹೆಜ್ಬುಲ್ಲಾ ಗುಪ್ತಚರ ಕೇಂದ್ರ ಕಚೇರಿ ಮೇಲೆ ಇಸ್ರೇಲ್...

ನೆತನ್ಯಾಹು ಮನೆ ಮೇಲಿನ ಡ್ರೋನ್ ಉಡಾವಣೆಗೆ ಪ್ರತೀಕಾರ; ಹೆಜ್ಬುಲ್ಲಾ ಗುಪ್ತಚರ ಕೇಂದ್ರ ಕಚೇರಿ ಮೇಲೆ ಇಸ್ರೇಲ್ ದಾಳಿ

- Advertisement -
- Advertisement -

ಬೆಂಜಮಿನ್ ನೆತನ್ಯಾಹು ಮನೆ ಮೇಲಿನ ದಾಳಿಗೆ ಪ್ರತೀಕಾರವಾಗಿ ಲೆಬನಾನಿನ ರಾಜಧಾನಿಯಲ್ಲಿನ ಹೆಜ್ಬೊಲ್ಲಾ ‘ಕಮಾಂಡ್ ಸೆಂಟರ್’ ಮೇಲೆ ಇಸ್ರೇಲ್ ಮರುದಾಳಿ ನಡೆಸಿದೆ. ಇದೇ ಸಂದರ್ಭದಲ್ಲಿ ಗಾಜಾದಲ್ಲಿ ನಡೆದ ಒಂದೇ ವೈಮಾನಿಕ ದಾಳಿಯಲ್ಲಿ 73 ಜನರು ಸಾವನ್ನಪ್ಪಿದ್ದಾರೆ ಸ್ಥಳೀಯ ಆಡಳಿತ ವರದಿ ಮಾಡಿದ್ದಾರೆ.

ಇರಾನ್ ಬೆಂಬಲಿತ ಗುಂಪು ತನ್ನ ನಿವಾಸವನ್ನು ಗುರಿಯಾಗಿಸಿಕೊಂಡು ತನ್ನನ್ನು ಹತ್ಯೆ ಮಾಡಲು ಯತ್ನಿಸುತ್ತಿದೆ ಎಂದು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆರೋಪಿಸಿದ ನಂತರ ಹೆಜ್ಬುಲ್ಲಾದ ದಕ್ಷಿಣ ಬೈರುತ್ ಭದ್ರಕೋಟೆಯ ಮೇಲೆ ದಾಳಿಗಳು ನಡೆದವು.

ಲೆಬನಾನ್‌ನ ಅಧಿಕೃತ ರಾಷ್ಟ್ರೀಯ ಸುದ್ದಿ ಸಂಸ್ಥೆ (ಎನ್‌ಎನ್‌ಎ) ಬೈರುತ್‌ನಲ್ಲಿ ಇಸ್ರೇಲ್‌ನ ದಾಳಿಗಳು ಮಸೀದಿ ಮತ್ತು ಆಸ್ಪತ್ರೆಯ ಸಮೀಪವಿರುವ ಹರೆಟ್ ಹ್ರೀಕ್‌ನಲ್ಲಿರುವ ವಸತಿ ಕಟ್ಟಡಕ್ಕೆ ಅಪ್ಪಳಿಸಿದೆ ಎಂದು ಹೇಳಿದೆ.

ಇಸ್ರೇಲಿ ಮಿಲಿಟರಿಯು ಹೆಜ್ಬೊಲ್ಲಾ “ಗುಪ್ತಚರ ಕೇಂದ್ರ ಕಚೇರಿಯ ಕಮಾಂಡ್ ಸೆಂಟರ್” ಮತ್ತು ಬೈರುತ್‌ನಲ್ಲಿನ ಭೂಗತ ಶಸ್ತ್ರಾಸ್ತ್ರ ಸೌಲಭ್ಯವನ್ನು ಹೊಡೆದಿದೆ. ಇತರ ದಾಳಿಗಳಲ್ಲಿ ಮೂರು ಹೆಜ್ಬುಲ್ಲಾ ಉಗ್ರಗಾಮಿಗಳನ್ನು ಕೊಂದಿದೆ ಎಂದು ಹೇಳಿದೆ.

ಲೆಬನಾನ್‌ನಿಂದ ಹಾರಿಸಲಾದ ಸುಮಾರು 70 ಸ್ಪೋಟಕಗಳು ಕೆಲವೇ ನಿಮಿಷಗಳಲ್ಲಿ ಇಸ್ರೇಲ್‌ಗೆ ತಲುಪಿದವು, ಅವುಗಳಲ್ಲಿ ಕೆಲವನ್ನು ಇಸ್ರೇಲ್ ತಡೆದಿದೆ ಎಂದು ಅದು ನಂತರ ಹೇಳಿದೆ.

ಈ ಮಧ್ಯೆ, ಗಾಜಾದ ನಾಗರಿಕ ರಕ್ಷಣಾ ಸಂಸ್ಥೆಯು ವಸತಿ ಪ್ರದೇಶದ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯು ಭೂಪ್ರದೇಶದ ಉತ್ತರದ ಬೀಟ್ ಲಾಹಿಯಾದಲ್ಲಿ ಕನಿಷ್ಠ 73 ಪ್ಯಾಲೆಸ್ಟೀನಿಯಾದವರನ್ನು ಕೊಂದಿದೆ ಎಂದು ಹೇಳಿದೆ.

“ನಮ್ಮ ನಾಗರಿಕ ರಕ್ಷಣಾ ಸಿಬ್ಬಂದಿಗಳು 73 ಹುತಾತ್ಮರ ಶವಗಳನ್ನು ಮತ್ತು ಹೆಚ್ಚಿನ ಸಂಖ್ಯೆಯ ಗಾಯಾಳುಗಳನ್ನು ಇಸ್ರೇಲಿ ವಾಯುಪಡೆಯು ವಸತಿ ಪ್ರದೇಶದಿಂದ ಪತ್ತೆಹಚ್ಚಿದೆ. ಉತ್ತರ ಗಾಜಾದ ಬೀಟ್ ಲಾಹಿಯಾದಲ್ಲಿ ಇಸ್ರೇಲ್ ದಾಳಿ ನಡೆಸಿದೆ” ಎಂದು ನಾಗರಿಕ ರಕ್ಷಣಾ ಸಂಸ್ಥೆಯ ವಕ್ತಾರ ಮಹ್ಮದ್ ಬಾಸ್ಸಲ್ ಹೇಳಿದ್ದಾರೆ.

ಇದನ್ನೂ ಓದಿ; ಗಾಜಾದಲ್ಲಿ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆ; ‘ಯುದ್ಧ ಇನ್ನೂ ಕೊನೆಗೊಂಡಿಲ್ಲ..’ ಎಂದ ನೆತನ್ಯಾಹು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...