Homeಅಂತರಾಷ್ಟ್ರೀಯನೆತನ್ಯಾಹು ಮನೆ ಮೇಲಿನ ಡ್ರೋನ್ ಉಡಾವಣೆಗೆ ಪ್ರತೀಕಾರ; ಹೆಜ್ಬುಲ್ಲಾ ಗುಪ್ತಚರ ಕೇಂದ್ರ ಕಚೇರಿ ಮೇಲೆ ಇಸ್ರೇಲ್...

ನೆತನ್ಯಾಹು ಮನೆ ಮೇಲಿನ ಡ್ರೋನ್ ಉಡಾವಣೆಗೆ ಪ್ರತೀಕಾರ; ಹೆಜ್ಬುಲ್ಲಾ ಗುಪ್ತಚರ ಕೇಂದ್ರ ಕಚೇರಿ ಮೇಲೆ ಇಸ್ರೇಲ್ ದಾಳಿ

- Advertisement -
- Advertisement -

ಬೆಂಜಮಿನ್ ನೆತನ್ಯಾಹು ಮನೆ ಮೇಲಿನ ದಾಳಿಗೆ ಪ್ರತೀಕಾರವಾಗಿ ಲೆಬನಾನಿನ ರಾಜಧಾನಿಯಲ್ಲಿನ ಹೆಜ್ಬೊಲ್ಲಾ ‘ಕಮಾಂಡ್ ಸೆಂಟರ್’ ಮೇಲೆ ಇಸ್ರೇಲ್ ಮರುದಾಳಿ ನಡೆಸಿದೆ. ಇದೇ ಸಂದರ್ಭದಲ್ಲಿ ಗಾಜಾದಲ್ಲಿ ನಡೆದ ಒಂದೇ ವೈಮಾನಿಕ ದಾಳಿಯಲ್ಲಿ 73 ಜನರು ಸಾವನ್ನಪ್ಪಿದ್ದಾರೆ ಸ್ಥಳೀಯ ಆಡಳಿತ ವರದಿ ಮಾಡಿದ್ದಾರೆ.

ಇರಾನ್ ಬೆಂಬಲಿತ ಗುಂಪು ತನ್ನ ನಿವಾಸವನ್ನು ಗುರಿಯಾಗಿಸಿಕೊಂಡು ತನ್ನನ್ನು ಹತ್ಯೆ ಮಾಡಲು ಯತ್ನಿಸುತ್ತಿದೆ ಎಂದು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆರೋಪಿಸಿದ ನಂತರ ಹೆಜ್ಬುಲ್ಲಾದ ದಕ್ಷಿಣ ಬೈರುತ್ ಭದ್ರಕೋಟೆಯ ಮೇಲೆ ದಾಳಿಗಳು ನಡೆದವು.

ಲೆಬನಾನ್‌ನ ಅಧಿಕೃತ ರಾಷ್ಟ್ರೀಯ ಸುದ್ದಿ ಸಂಸ್ಥೆ (ಎನ್‌ಎನ್‌ಎ) ಬೈರುತ್‌ನಲ್ಲಿ ಇಸ್ರೇಲ್‌ನ ದಾಳಿಗಳು ಮಸೀದಿ ಮತ್ತು ಆಸ್ಪತ್ರೆಯ ಸಮೀಪವಿರುವ ಹರೆಟ್ ಹ್ರೀಕ್‌ನಲ್ಲಿರುವ ವಸತಿ ಕಟ್ಟಡಕ್ಕೆ ಅಪ್ಪಳಿಸಿದೆ ಎಂದು ಹೇಳಿದೆ.

ಇಸ್ರೇಲಿ ಮಿಲಿಟರಿಯು ಹೆಜ್ಬೊಲ್ಲಾ “ಗುಪ್ತಚರ ಕೇಂದ್ರ ಕಚೇರಿಯ ಕಮಾಂಡ್ ಸೆಂಟರ್” ಮತ್ತು ಬೈರುತ್‌ನಲ್ಲಿನ ಭೂಗತ ಶಸ್ತ್ರಾಸ್ತ್ರ ಸೌಲಭ್ಯವನ್ನು ಹೊಡೆದಿದೆ. ಇತರ ದಾಳಿಗಳಲ್ಲಿ ಮೂರು ಹೆಜ್ಬುಲ್ಲಾ ಉಗ್ರಗಾಮಿಗಳನ್ನು ಕೊಂದಿದೆ ಎಂದು ಹೇಳಿದೆ.

ಲೆಬನಾನ್‌ನಿಂದ ಹಾರಿಸಲಾದ ಸುಮಾರು 70 ಸ್ಪೋಟಕಗಳು ಕೆಲವೇ ನಿಮಿಷಗಳಲ್ಲಿ ಇಸ್ರೇಲ್‌ಗೆ ತಲುಪಿದವು, ಅವುಗಳಲ್ಲಿ ಕೆಲವನ್ನು ಇಸ್ರೇಲ್ ತಡೆದಿದೆ ಎಂದು ಅದು ನಂತರ ಹೇಳಿದೆ.

ಈ ಮಧ್ಯೆ, ಗಾಜಾದ ನಾಗರಿಕ ರಕ್ಷಣಾ ಸಂಸ್ಥೆಯು ವಸತಿ ಪ್ರದೇಶದ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯು ಭೂಪ್ರದೇಶದ ಉತ್ತರದ ಬೀಟ್ ಲಾಹಿಯಾದಲ್ಲಿ ಕನಿಷ್ಠ 73 ಪ್ಯಾಲೆಸ್ಟೀನಿಯಾದವರನ್ನು ಕೊಂದಿದೆ ಎಂದು ಹೇಳಿದೆ.

“ನಮ್ಮ ನಾಗರಿಕ ರಕ್ಷಣಾ ಸಿಬ್ಬಂದಿಗಳು 73 ಹುತಾತ್ಮರ ಶವಗಳನ್ನು ಮತ್ತು ಹೆಚ್ಚಿನ ಸಂಖ್ಯೆಯ ಗಾಯಾಳುಗಳನ್ನು ಇಸ್ರೇಲಿ ವಾಯುಪಡೆಯು ವಸತಿ ಪ್ರದೇಶದಿಂದ ಪತ್ತೆಹಚ್ಚಿದೆ. ಉತ್ತರ ಗಾಜಾದ ಬೀಟ್ ಲಾಹಿಯಾದಲ್ಲಿ ಇಸ್ರೇಲ್ ದಾಳಿ ನಡೆಸಿದೆ” ಎಂದು ನಾಗರಿಕ ರಕ್ಷಣಾ ಸಂಸ್ಥೆಯ ವಕ್ತಾರ ಮಹ್ಮದ್ ಬಾಸ್ಸಲ್ ಹೇಳಿದ್ದಾರೆ.

ಇದನ್ನೂ ಓದಿ; ಗಾಜಾದಲ್ಲಿ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆ; ‘ಯುದ್ಧ ಇನ್ನೂ ಕೊನೆಗೊಂಡಿಲ್ಲ..’ ಎಂದ ನೆತನ್ಯಾಹು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...