Homeಮುಖಪುಟಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ಈಗಾಗಲೇ ಇರುವ ಸಿದ್ಧ ಮಾದರಿಯ ರಂಗಭೂಮಿಯ ಚಟುವಟಿಕೆಗಳಲ್ಲಿ ಹಲವು ತೊಡಕುಗಳಿವೆ. ಅವುಗಳನ್ನೇ ಇಟ್ಟಕೊಂಡು ಮತ್ತೆ ಶುರುಮಾಡುವುದು ಏಕತಾನತೆಯನ್ನು ಸೃಷ್ಟಿಸುತ್ತದೆ ಹೊರತು ಮತ್ತೇನು ಪ್ರಯೋಜನವಾಗಲಾರದು.

- Advertisement -
- Advertisement -

ರಂಗಭೂಮಿ ತನ್ನ ಮೂಲ ಗುಣದಂತೆ ನಿಂತ ನೀರಾಗಲು ಬಯಸುವುದಿಲ್ಲ. ಅದು ಸದಾ ಒಂದಿಲ್ಲೊಂದು  ಬದಲಾವಣೆಯ ಪರಿವರ್ತನೆಯಲ್ಲಿ ತೊಡಗಿಕೊಂಡು ಹರಿಯುವ ನದಿಯ ಗುಣವನ್ನು ಹೊಂದಿದೆ. ಕೊರೊನಾ ಸಾಂಕ್ರಾಮಿಕದಿಂದ ಎಲ್ಲಾ ಕ್ಷೇತ್ರಗಳಿಗೂ ಹೊಡೆತ ಬಿದ್ದಂತೆ ರಂಗಭೂಮಿ ಕ್ಷೇತ್ರವು ತತ್ತಿರಿಸಿತು. ಆರೇಳು ತಿಂಗಳುಗಳ ಕಾಲ ಚಟುವಟಿಕೆಗಳು ಸ್ಥಗಿತಗೊಂಡವು.

ಈ ಸಮಯದಲ್ಲಿ ರಂಗಭೂಮಿಯ ಮೂಲಕ ಹೊಸದೊಂದನ್ನು ಹೇಳಲು ತವಕಿಸುವ ಸೃಜನಶೀಲ ಕಲಾವಿದರು ಮತ್ತು ರಂಗಭೂಮಿಯೇ ತಮ್ಮ ಜೀವನ ಎಂದು ಬದುಕು ಕಟ್ಟಿಕೊಳ್ಳಲು ಹೊರಟಿದ್ದವರ ಕಥೆ ಏನು? ಕೊರೊನಾ ಹೊಡೆತಕ್ಕೆ ಸಿಕ್ಕಿ ನಲುಗುತ್ತಿರುವ ರಂಗಕರ್ಮಿಗಳ ಮುಂದಿನ ಜೀವನ ಹೇಗೆ ? ರಂಗಭೂಮಿಯನ್ನು ಕಲಿಯುವ ಮತ್ತು ಕಲಿಸುವ ಬಗೆಯಾದರು ಹೇಗೆ? ರಂಗಭೂಮಿಯನ್ನು ಹೊಸ ರೀತಿಯಾಗಿ ಜನಸಮುದಾಯದ ಮಧ್ಯೆ ತರುವುದು ಹೇಗೆ ಎಂಬ ಹತ್ತು ಹಲವು ಹೊಸ ಚಿಂತನೆಗಳ ಮೂಲಕ ರಂಗಭೂಮಿಯನ್ನು ಮತ್ತೆ ಮುನ್ನಲೆಗೆ ತರಬೇಕು ಎಂಬ ಆಶಯದಲ್ಲಿ ‘ಪಾರಿಜಾತ‘ ಯುವಬಳಗವು ‘ಥೀಯೇಟರ್ ರೀಥೀಂಕಿಂಗ್’ ಎಂಬ ಪರಿಕಲ್ಪನೆಯ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ.

ಕೊರೊನಾ ಸಮಯದಲ್ಲಿ ರಂಗಭೂಮಿಯನ್ನು ಪ್ರತಿ ದಿನ ತಮ್ಮ ಜೀವನದ ಭಾಗವಾಗಿಸಿಕೊಂಡಿದ್ದ ನಿರ್ದೇಶಕರು, ನಟರು, ತಂತ್ರಜ್ಞರು ಒಟ್ಟಾರೆ ರಂಗತಂಡಗಳು ಎಲ್ಲರು ಸಹ ಹೈರಾಣಾಗಿ ಹೋದರು. ಇಂತಹ ಸಂಕಷ್ಟದ ಸಮಯದಲ್ಲಿ ರಂಗಭೂಮಿಯ ಜೊತೆಗೆ ನಿಲ್ಲಬೇಕಿದ್ದ ಸರ್ಕಾರ ತನ್ನ ಸಂಸ್ಕೃತಿ ಇಲಾಖೆ ಮತ್ತು ನಾಟಕ ಅಕಾಡೆಮಿ ಮೂಲಕ ಕಲಾವಿದರನ್ನು ಪಟ್ಟಿ ಮಾಡಿ 6 ತಿಂಗಳ ನಷ್ಟಕ್ಕೆ ತಲಾ 2000 ರೂ ಕೊಡುವ ಭರವಸೆ ನೀಡಿ ಕೆಲವರಿಗಷ್ಟೇ ನೀಡಿ ತನ್ನ ಬೇಜಾವಾಬ್ದಾರಿಯನ್ನು ತೋರಿತು.

ಯೋಚಿಸುವುದು ದಿನವೂ ಇರುತ್ತದೆ. ಆದರೆ ಇಂದಿನ ಅಸಹನೆ, ಸಿನಿಕತನಗಳ ನಡುವೆ ಕಳೆದುಕೊಳ್ಳುತ್ತಿರುವ ಸಾಂಸ್ಕೃತಿಕ ಪ್ರಜ್ಞೆಯನ್ನು ಮತ್ತೊಮ್ಮೆ ಮರುಪರಿಶೀಲಿಸುವ ರೀಥಿಂಕ್ ಇಂದಿನ ಅಗತ್ಯವಾಗಿದೆ. – ಮಹದೇವ ಹಡಪದ, ರಂಗನಿರ್ದೇಶಕರು.

ಕೊರೊನಾ ಪೆಟ್ಟಿನಿಂದ ಕಳೆದುಕೊಂಡ ಉತ್ಸಾಹವನ್ನು ರಂಗಭೂಮಿ ಮತ್ತೆ ಮುನ್ನೆಲೆಗೆ ತರಬೇಕಿದೆ. ಈಗಾಗಲೇ ಇರುವ ಸಿದ್ಧ ಮಾದರಿಯ ರಂಗಭೂಮಿಯ ಚಟುವಟಿಕೆಗಳಲ್ಲಿ ಹಲವು ತೊಡಕುಗಳಿವೆ. ಅವುಗಳನ್ನೇ ಇಟ್ಟಕೊಂಡು ಮತ್ತೆ ಶುರುಮಾಡುವುದು ಏಕತಾನತೆಯನ್ನು ಸೃಷ್ಟಿಸುತ್ತದೆ ಹೊರತು ಮತ್ತೇನು ಪ್ರಯೋಜನವಾಗಲಾರದು. ಜಗತ್ತೇ ಆನ್‍ಲೈನ್ ಹಿಂದೆ ಓಡುತ್ತಿರುವಾಗ ಆಫ್‌ಲೈನ್ ರಂಗಭೂಮಿಯ ಬಗ್ಗೆ ಯಾರು ತಲೆಕೆಡಿಸಿಕೊಳ್ಳುತ್ತಿಲ್ಲ. ಹಾಗಾಗಿ ರಂಗಭೂಮಿಯಲ್ಲಿ ಹೊಸ ಬದಲಾವಣೆ, ಮರುಹಟ್ಟು ಹೇಗಿರಬೇಕೆಂಬ ಚಿಂತನೆಗಳಾಗಬೇಕಿದೆ. ರಂಗಭೂಮಿಯ ಹಿರಿಕಿರಿಯಿರೆಲ್ಲರೂ ಸೇರಿ ಈ ಚಿಂತನೆ ನಡೆಸಬೇಕೆಂಬುದು ಪಾರಿಜಾತ ಬಳಗದ ಅಭಿಮತವಾಗಿದೆ.

ನಾವು ಈಗ ಒಳಗೂ ಹೊರಗೂ ವಿಚಿತ್ರ ಬಗೆಯ ಬರ ಭಯ ರೋಗದ ಕಾಲವನ್ನು ಅನುಭವಿಸುತ್ತಿದ್ದೇನೆ. ಇದನ್ನು ನಾವು ಕಾಲದ ಎಚ್ಚರಿಕೆ ಅಂತಲೇ ಭಾವಿಸಿ, ನಮಗೆ ಕಾಲವು ನೀಡಿರುವ ಪಾಠಗಳನ್ನು ಸರಿಯಾಗಿ ಗ್ರಹಿಸಿ ನಮ್ಮ ಮುಂದಿನ ಸಾಂಸ್ಕೃತಿಕ ಮಾದರಿಗಳ ಕುರಿತು ‘ರೀ-ಥಿಂಕ್’ ಮಾಡಲೇಬೇಕಿದೆ. ಇದು ಸಾಂಸ್ಕೃತಿಕ ಸಮುದಾಯ – ಜನ ಸಮುದಾಯ- ಸರಕಾರ ಎಲ್ಲರೂ ಕೂಡಿ ಮಾಡಬೇಕಾದ ಕೆಲಸ. – ಲಕ್ಷ್ಮಣ್ ಕೆ ಪಿ, ಯುವ ರಂಗಕರ್ಮಿ.

ಮುಖ್ಯವಾಗಿ ಪರಿಜಾತ ಬಳಗ ಸದ್ಯಕ್ಕೆ ಈ ಕೆಳಗಿನ ಐದು ಪ್ರಮುಖ ಚಿಂತನೆಗಳನ್ನು ಬೇಡಿಕೆಯ ರೂಪದಲ್ಲಿ ಮುಂದಿಟ್ಟಿದೆ.

  1. ಕರ್ನಾಟಕದ ಎಲ್ಲ ಮುಖ್ಯ ಸಾಂಸ್ಕೃತಿಕ ಸಂಸ್ಥೆಗಳು, ರಂಗಶಾಲೆಗಳು, ರೆಪರ್ಟರಿಗಳು ತಮ್ಮ ಪಠ್ಯಕ್ರಮ ಮತ್ತು ಕೆಲಸದ ರೂಪುರೇಷೆಗಳನ್ನು ರೀಥಿಂಕ್ ಮಾಡಬೇಕು.
  2. ರಂಗಶಾಲೆಗಳು ತಮ್ಮ ಪಠ್ಯಕ್ರಮದ ಕುರಿತು ರೀಥಿಂಕ್ ಮಾಡಬೇಕು.
  3. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತನ್ನ ಅನುದಾನದ ನೀತಿಗಳ ಕುರಿತು ರೀಥಿಂಕ್‌ ಮಾಡಬೇಕು.
  4. ಹೊಸ ರಂಗಮಂದಿರಗಳನ್ನು ಕಟ್ಟುವ ಮೊದಲು ಈಗಿರುವ ಜಿಲ್ಲಾ ಮತ್ತು ತಾಲ್ಲೂಕು ರಂಗಮಂದಿರಗಳ ಸಾಂಸ್ಕೃತಿಕ ಜೀವಂತಿಕೆಯ ಬಗ್ಗೆ ರೀಥಿಂಕ್ ಮಾಡಬೇಕು.
  5. ನಗರ ಕೇಂದ್ರಿತ ಸಾಂಸ್ಕೃತಿಕ ಯಜಮಾನ್ಯವನ್ನು ನಿಲ್ಲಿಸಿ, ಸಾಂಸ್ಕೃತಿಕ ವಿಕೇಂದ್ರೀಕರಣ ಸಾಧಿಸಲು ಯೋಜನೆಗಳನ್ನು ರೂಪಿಸಬೇಕು.
  6. ಈಗಿರುವ ರಂಗಮಂದಿರಗಳನ್ನು ತೆರೆಯುವ ಮತ್ತು ಅಲ್ಲಿ ಕೊರೊನಾ ಸುರಕ್ಷತೆಗಳೊಂದಿಗೆ ಪ್ರದರ್ಶನಗಳನ್ನು ಆರಂಭಿಸುವಂತೆ ಅವಕಾಶ ನೀಡಲು ಮತ್ತು ಅದಕ್ಕೆ ಬೇಕಾದ ತಯಾರಿ ನಡೆಸಲು ಸರ್ಕಾರ ಸಹಾಯ ನೀಡಲು ಒತ್ತಾಯಿಸುತ್ತೇವೆ.

ಈ  ಬೇಡಿಕೆಗಳನ್ನು ತಮ್ಮದು ಎಂದುಕೊಂಡಂತಹ ಎಲ್ಲಾ ರಂಗಕರ್ಮಿಗಳು ಈ ಕುರಿತು ಎಲ್ಲ ಜಿಲ್ಲೆಗಳಲ್ಲಿ ಅಕ್ಟೋಬರ್ 2 ರಂದು (ಗಾಂಧಿ ಜಯಂತಿ ದಿನ) ತಾವು ಇರುವಲ್ಲಿಯೇ ಪ್ರತಿಭಟನೆ ದಾಖಲಿಸಬೇಕಾಗಿ ‘ಪಾರಿಜಾತ ಬಳಗ’ ಕೋರಿದೆ.


ಇದನ್ನೂ ಓದಿ: ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...