Homeಮುಖಪುಟಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ಈಗಾಗಲೇ ಇರುವ ಸಿದ್ಧ ಮಾದರಿಯ ರಂಗಭೂಮಿಯ ಚಟುವಟಿಕೆಗಳಲ್ಲಿ ಹಲವು ತೊಡಕುಗಳಿವೆ. ಅವುಗಳನ್ನೇ ಇಟ್ಟಕೊಂಡು ಮತ್ತೆ ಶುರುಮಾಡುವುದು ಏಕತಾನತೆಯನ್ನು ಸೃಷ್ಟಿಸುತ್ತದೆ ಹೊರತು ಮತ್ತೇನು ಪ್ರಯೋಜನವಾಗಲಾರದು.

- Advertisement -
- Advertisement -

ರಂಗಭೂಮಿ ತನ್ನ ಮೂಲ ಗುಣದಂತೆ ನಿಂತ ನೀರಾಗಲು ಬಯಸುವುದಿಲ್ಲ. ಅದು ಸದಾ ಒಂದಿಲ್ಲೊಂದು  ಬದಲಾವಣೆಯ ಪರಿವರ್ತನೆಯಲ್ಲಿ ತೊಡಗಿಕೊಂಡು ಹರಿಯುವ ನದಿಯ ಗುಣವನ್ನು ಹೊಂದಿದೆ. ಕೊರೊನಾ ಸಾಂಕ್ರಾಮಿಕದಿಂದ ಎಲ್ಲಾ ಕ್ಷೇತ್ರಗಳಿಗೂ ಹೊಡೆತ ಬಿದ್ದಂತೆ ರಂಗಭೂಮಿ ಕ್ಷೇತ್ರವು ತತ್ತಿರಿಸಿತು. ಆರೇಳು ತಿಂಗಳುಗಳ ಕಾಲ ಚಟುವಟಿಕೆಗಳು ಸ್ಥಗಿತಗೊಂಡವು.

ಈ ಸಮಯದಲ್ಲಿ ರಂಗಭೂಮಿಯ ಮೂಲಕ ಹೊಸದೊಂದನ್ನು ಹೇಳಲು ತವಕಿಸುವ ಸೃಜನಶೀಲ ಕಲಾವಿದರು ಮತ್ತು ರಂಗಭೂಮಿಯೇ ತಮ್ಮ ಜೀವನ ಎಂದು ಬದುಕು ಕಟ್ಟಿಕೊಳ್ಳಲು ಹೊರಟಿದ್ದವರ ಕಥೆ ಏನು? ಕೊರೊನಾ ಹೊಡೆತಕ್ಕೆ ಸಿಕ್ಕಿ ನಲುಗುತ್ತಿರುವ ರಂಗಕರ್ಮಿಗಳ ಮುಂದಿನ ಜೀವನ ಹೇಗೆ ? ರಂಗಭೂಮಿಯನ್ನು ಕಲಿಯುವ ಮತ್ತು ಕಲಿಸುವ ಬಗೆಯಾದರು ಹೇಗೆ? ರಂಗಭೂಮಿಯನ್ನು ಹೊಸ ರೀತಿಯಾಗಿ ಜನಸಮುದಾಯದ ಮಧ್ಯೆ ತರುವುದು ಹೇಗೆ ಎಂಬ ಹತ್ತು ಹಲವು ಹೊಸ ಚಿಂತನೆಗಳ ಮೂಲಕ ರಂಗಭೂಮಿಯನ್ನು ಮತ್ತೆ ಮುನ್ನಲೆಗೆ ತರಬೇಕು ಎಂಬ ಆಶಯದಲ್ಲಿ ‘ಪಾರಿಜಾತ‘ ಯುವಬಳಗವು ‘ಥೀಯೇಟರ್ ರೀಥೀಂಕಿಂಗ್’ ಎಂಬ ಪರಿಕಲ್ಪನೆಯ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ.

ಕೊರೊನಾ ಸಮಯದಲ್ಲಿ ರಂಗಭೂಮಿಯನ್ನು ಪ್ರತಿ ದಿನ ತಮ್ಮ ಜೀವನದ ಭಾಗವಾಗಿಸಿಕೊಂಡಿದ್ದ ನಿರ್ದೇಶಕರು, ನಟರು, ತಂತ್ರಜ್ಞರು ಒಟ್ಟಾರೆ ರಂಗತಂಡಗಳು ಎಲ್ಲರು ಸಹ ಹೈರಾಣಾಗಿ ಹೋದರು. ಇಂತಹ ಸಂಕಷ್ಟದ ಸಮಯದಲ್ಲಿ ರಂಗಭೂಮಿಯ ಜೊತೆಗೆ ನಿಲ್ಲಬೇಕಿದ್ದ ಸರ್ಕಾರ ತನ್ನ ಸಂಸ್ಕೃತಿ ಇಲಾಖೆ ಮತ್ತು ನಾಟಕ ಅಕಾಡೆಮಿ ಮೂಲಕ ಕಲಾವಿದರನ್ನು ಪಟ್ಟಿ ಮಾಡಿ 6 ತಿಂಗಳ ನಷ್ಟಕ್ಕೆ ತಲಾ 2000 ರೂ ಕೊಡುವ ಭರವಸೆ ನೀಡಿ ಕೆಲವರಿಗಷ್ಟೇ ನೀಡಿ ತನ್ನ ಬೇಜಾವಾಬ್ದಾರಿಯನ್ನು ತೋರಿತು.

ಯೋಚಿಸುವುದು ದಿನವೂ ಇರುತ್ತದೆ. ಆದರೆ ಇಂದಿನ ಅಸಹನೆ, ಸಿನಿಕತನಗಳ ನಡುವೆ ಕಳೆದುಕೊಳ್ಳುತ್ತಿರುವ ಸಾಂಸ್ಕೃತಿಕ ಪ್ರಜ್ಞೆಯನ್ನು ಮತ್ತೊಮ್ಮೆ ಮರುಪರಿಶೀಲಿಸುವ ರೀಥಿಂಕ್ ಇಂದಿನ ಅಗತ್ಯವಾಗಿದೆ. – ಮಹದೇವ ಹಡಪದ, ರಂಗನಿರ್ದೇಶಕರು.

ಕೊರೊನಾ ಪೆಟ್ಟಿನಿಂದ ಕಳೆದುಕೊಂಡ ಉತ್ಸಾಹವನ್ನು ರಂಗಭೂಮಿ ಮತ್ತೆ ಮುನ್ನೆಲೆಗೆ ತರಬೇಕಿದೆ. ಈಗಾಗಲೇ ಇರುವ ಸಿದ್ಧ ಮಾದರಿಯ ರಂಗಭೂಮಿಯ ಚಟುವಟಿಕೆಗಳಲ್ಲಿ ಹಲವು ತೊಡಕುಗಳಿವೆ. ಅವುಗಳನ್ನೇ ಇಟ್ಟಕೊಂಡು ಮತ್ತೆ ಶುರುಮಾಡುವುದು ಏಕತಾನತೆಯನ್ನು ಸೃಷ್ಟಿಸುತ್ತದೆ ಹೊರತು ಮತ್ತೇನು ಪ್ರಯೋಜನವಾಗಲಾರದು. ಜಗತ್ತೇ ಆನ್‍ಲೈನ್ ಹಿಂದೆ ಓಡುತ್ತಿರುವಾಗ ಆಫ್‌ಲೈನ್ ರಂಗಭೂಮಿಯ ಬಗ್ಗೆ ಯಾರು ತಲೆಕೆಡಿಸಿಕೊಳ್ಳುತ್ತಿಲ್ಲ. ಹಾಗಾಗಿ ರಂಗಭೂಮಿಯಲ್ಲಿ ಹೊಸ ಬದಲಾವಣೆ, ಮರುಹಟ್ಟು ಹೇಗಿರಬೇಕೆಂಬ ಚಿಂತನೆಗಳಾಗಬೇಕಿದೆ. ರಂಗಭೂಮಿಯ ಹಿರಿಕಿರಿಯಿರೆಲ್ಲರೂ ಸೇರಿ ಈ ಚಿಂತನೆ ನಡೆಸಬೇಕೆಂಬುದು ಪಾರಿಜಾತ ಬಳಗದ ಅಭಿಮತವಾಗಿದೆ.

ನಾವು ಈಗ ಒಳಗೂ ಹೊರಗೂ ವಿಚಿತ್ರ ಬಗೆಯ ಬರ ಭಯ ರೋಗದ ಕಾಲವನ್ನು ಅನುಭವಿಸುತ್ತಿದ್ದೇನೆ. ಇದನ್ನು ನಾವು ಕಾಲದ ಎಚ್ಚರಿಕೆ ಅಂತಲೇ ಭಾವಿಸಿ, ನಮಗೆ ಕಾಲವು ನೀಡಿರುವ ಪಾಠಗಳನ್ನು ಸರಿಯಾಗಿ ಗ್ರಹಿಸಿ ನಮ್ಮ ಮುಂದಿನ ಸಾಂಸ್ಕೃತಿಕ ಮಾದರಿಗಳ ಕುರಿತು ‘ರೀ-ಥಿಂಕ್’ ಮಾಡಲೇಬೇಕಿದೆ. ಇದು ಸಾಂಸ್ಕೃತಿಕ ಸಮುದಾಯ – ಜನ ಸಮುದಾಯ- ಸರಕಾರ ಎಲ್ಲರೂ ಕೂಡಿ ಮಾಡಬೇಕಾದ ಕೆಲಸ. – ಲಕ್ಷ್ಮಣ್ ಕೆ ಪಿ, ಯುವ ರಂಗಕರ್ಮಿ.

ಮುಖ್ಯವಾಗಿ ಪರಿಜಾತ ಬಳಗ ಸದ್ಯಕ್ಕೆ ಈ ಕೆಳಗಿನ ಐದು ಪ್ರಮುಖ ಚಿಂತನೆಗಳನ್ನು ಬೇಡಿಕೆಯ ರೂಪದಲ್ಲಿ ಮುಂದಿಟ್ಟಿದೆ.

  1. ಕರ್ನಾಟಕದ ಎಲ್ಲ ಮುಖ್ಯ ಸಾಂಸ್ಕೃತಿಕ ಸಂಸ್ಥೆಗಳು, ರಂಗಶಾಲೆಗಳು, ರೆಪರ್ಟರಿಗಳು ತಮ್ಮ ಪಠ್ಯಕ್ರಮ ಮತ್ತು ಕೆಲಸದ ರೂಪುರೇಷೆಗಳನ್ನು ರೀಥಿಂಕ್ ಮಾಡಬೇಕು.
  2. ರಂಗಶಾಲೆಗಳು ತಮ್ಮ ಪಠ್ಯಕ್ರಮದ ಕುರಿತು ರೀಥಿಂಕ್ ಮಾಡಬೇಕು.
  3. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತನ್ನ ಅನುದಾನದ ನೀತಿಗಳ ಕುರಿತು ರೀಥಿಂಕ್‌ ಮಾಡಬೇಕು.
  4. ಹೊಸ ರಂಗಮಂದಿರಗಳನ್ನು ಕಟ್ಟುವ ಮೊದಲು ಈಗಿರುವ ಜಿಲ್ಲಾ ಮತ್ತು ತಾಲ್ಲೂಕು ರಂಗಮಂದಿರಗಳ ಸಾಂಸ್ಕೃತಿಕ ಜೀವಂತಿಕೆಯ ಬಗ್ಗೆ ರೀಥಿಂಕ್ ಮಾಡಬೇಕು.
  5. ನಗರ ಕೇಂದ್ರಿತ ಸಾಂಸ್ಕೃತಿಕ ಯಜಮಾನ್ಯವನ್ನು ನಿಲ್ಲಿಸಿ, ಸಾಂಸ್ಕೃತಿಕ ವಿಕೇಂದ್ರೀಕರಣ ಸಾಧಿಸಲು ಯೋಜನೆಗಳನ್ನು ರೂಪಿಸಬೇಕು.
  6. ಈಗಿರುವ ರಂಗಮಂದಿರಗಳನ್ನು ತೆರೆಯುವ ಮತ್ತು ಅಲ್ಲಿ ಕೊರೊನಾ ಸುರಕ್ಷತೆಗಳೊಂದಿಗೆ ಪ್ರದರ್ಶನಗಳನ್ನು ಆರಂಭಿಸುವಂತೆ ಅವಕಾಶ ನೀಡಲು ಮತ್ತು ಅದಕ್ಕೆ ಬೇಕಾದ ತಯಾರಿ ನಡೆಸಲು ಸರ್ಕಾರ ಸಹಾಯ ನೀಡಲು ಒತ್ತಾಯಿಸುತ್ತೇವೆ.

ಈ  ಬೇಡಿಕೆಗಳನ್ನು ತಮ್ಮದು ಎಂದುಕೊಂಡಂತಹ ಎಲ್ಲಾ ರಂಗಕರ್ಮಿಗಳು ಈ ಕುರಿತು ಎಲ್ಲ ಜಿಲ್ಲೆಗಳಲ್ಲಿ ಅಕ್ಟೋಬರ್ 2 ರಂದು (ಗಾಂಧಿ ಜಯಂತಿ ದಿನ) ತಾವು ಇರುವಲ್ಲಿಯೇ ಪ್ರತಿಭಟನೆ ದಾಖಲಿಸಬೇಕಾಗಿ ‘ಪಾರಿಜಾತ ಬಳಗ’ ಕೋರಿದೆ.


ಇದನ್ನೂ ಓದಿ: ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...