Homeಮುಖಪುಟಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ಈಗಾಗಲೇ ಇರುವ ಸಿದ್ಧ ಮಾದರಿಯ ರಂಗಭೂಮಿಯ ಚಟುವಟಿಕೆಗಳಲ್ಲಿ ಹಲವು ತೊಡಕುಗಳಿವೆ. ಅವುಗಳನ್ನೇ ಇಟ್ಟಕೊಂಡು ಮತ್ತೆ ಶುರುಮಾಡುವುದು ಏಕತಾನತೆಯನ್ನು ಸೃಷ್ಟಿಸುತ್ತದೆ ಹೊರತು ಮತ್ತೇನು ಪ್ರಯೋಜನವಾಗಲಾರದು.

- Advertisement -
- Advertisement -

ರಂಗಭೂಮಿ ತನ್ನ ಮೂಲ ಗುಣದಂತೆ ನಿಂತ ನೀರಾಗಲು ಬಯಸುವುದಿಲ್ಲ. ಅದು ಸದಾ ಒಂದಿಲ್ಲೊಂದು  ಬದಲಾವಣೆಯ ಪರಿವರ್ತನೆಯಲ್ಲಿ ತೊಡಗಿಕೊಂಡು ಹರಿಯುವ ನದಿಯ ಗುಣವನ್ನು ಹೊಂದಿದೆ. ಕೊರೊನಾ ಸಾಂಕ್ರಾಮಿಕದಿಂದ ಎಲ್ಲಾ ಕ್ಷೇತ್ರಗಳಿಗೂ ಹೊಡೆತ ಬಿದ್ದಂತೆ ರಂಗಭೂಮಿ ಕ್ಷೇತ್ರವು ತತ್ತಿರಿಸಿತು. ಆರೇಳು ತಿಂಗಳುಗಳ ಕಾಲ ಚಟುವಟಿಕೆಗಳು ಸ್ಥಗಿತಗೊಂಡವು.

ಈ ಸಮಯದಲ್ಲಿ ರಂಗಭೂಮಿಯ ಮೂಲಕ ಹೊಸದೊಂದನ್ನು ಹೇಳಲು ತವಕಿಸುವ ಸೃಜನಶೀಲ ಕಲಾವಿದರು ಮತ್ತು ರಂಗಭೂಮಿಯೇ ತಮ್ಮ ಜೀವನ ಎಂದು ಬದುಕು ಕಟ್ಟಿಕೊಳ್ಳಲು ಹೊರಟಿದ್ದವರ ಕಥೆ ಏನು? ಕೊರೊನಾ ಹೊಡೆತಕ್ಕೆ ಸಿಕ್ಕಿ ನಲುಗುತ್ತಿರುವ ರಂಗಕರ್ಮಿಗಳ ಮುಂದಿನ ಜೀವನ ಹೇಗೆ ? ರಂಗಭೂಮಿಯನ್ನು ಕಲಿಯುವ ಮತ್ತು ಕಲಿಸುವ ಬಗೆಯಾದರು ಹೇಗೆ? ರಂಗಭೂಮಿಯನ್ನು ಹೊಸ ರೀತಿಯಾಗಿ ಜನಸಮುದಾಯದ ಮಧ್ಯೆ ತರುವುದು ಹೇಗೆ ಎಂಬ ಹತ್ತು ಹಲವು ಹೊಸ ಚಿಂತನೆಗಳ ಮೂಲಕ ರಂಗಭೂಮಿಯನ್ನು ಮತ್ತೆ ಮುನ್ನಲೆಗೆ ತರಬೇಕು ಎಂಬ ಆಶಯದಲ್ಲಿ ‘ಪಾರಿಜಾತ‘ ಯುವಬಳಗವು ‘ಥೀಯೇಟರ್ ರೀಥೀಂಕಿಂಗ್’ ಎಂಬ ಪರಿಕಲ್ಪನೆಯ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ.

ಕೊರೊನಾ ಸಮಯದಲ್ಲಿ ರಂಗಭೂಮಿಯನ್ನು ಪ್ರತಿ ದಿನ ತಮ್ಮ ಜೀವನದ ಭಾಗವಾಗಿಸಿಕೊಂಡಿದ್ದ ನಿರ್ದೇಶಕರು, ನಟರು, ತಂತ್ರಜ್ಞರು ಒಟ್ಟಾರೆ ರಂಗತಂಡಗಳು ಎಲ್ಲರು ಸಹ ಹೈರಾಣಾಗಿ ಹೋದರು. ಇಂತಹ ಸಂಕಷ್ಟದ ಸಮಯದಲ್ಲಿ ರಂಗಭೂಮಿಯ ಜೊತೆಗೆ ನಿಲ್ಲಬೇಕಿದ್ದ ಸರ್ಕಾರ ತನ್ನ ಸಂಸ್ಕೃತಿ ಇಲಾಖೆ ಮತ್ತು ನಾಟಕ ಅಕಾಡೆಮಿ ಮೂಲಕ ಕಲಾವಿದರನ್ನು ಪಟ್ಟಿ ಮಾಡಿ 6 ತಿಂಗಳ ನಷ್ಟಕ್ಕೆ ತಲಾ 2000 ರೂ ಕೊಡುವ ಭರವಸೆ ನೀಡಿ ಕೆಲವರಿಗಷ್ಟೇ ನೀಡಿ ತನ್ನ ಬೇಜಾವಾಬ್ದಾರಿಯನ್ನು ತೋರಿತು.

ಯೋಚಿಸುವುದು ದಿನವೂ ಇರುತ್ತದೆ. ಆದರೆ ಇಂದಿನ ಅಸಹನೆ, ಸಿನಿಕತನಗಳ ನಡುವೆ ಕಳೆದುಕೊಳ್ಳುತ್ತಿರುವ ಸಾಂಸ್ಕೃತಿಕ ಪ್ರಜ್ಞೆಯನ್ನು ಮತ್ತೊಮ್ಮೆ ಮರುಪರಿಶೀಲಿಸುವ ರೀಥಿಂಕ್ ಇಂದಿನ ಅಗತ್ಯವಾಗಿದೆ. – ಮಹದೇವ ಹಡಪದ, ರಂಗನಿರ್ದೇಶಕರು.

ಕೊರೊನಾ ಪೆಟ್ಟಿನಿಂದ ಕಳೆದುಕೊಂಡ ಉತ್ಸಾಹವನ್ನು ರಂಗಭೂಮಿ ಮತ್ತೆ ಮುನ್ನೆಲೆಗೆ ತರಬೇಕಿದೆ. ಈಗಾಗಲೇ ಇರುವ ಸಿದ್ಧ ಮಾದರಿಯ ರಂಗಭೂಮಿಯ ಚಟುವಟಿಕೆಗಳಲ್ಲಿ ಹಲವು ತೊಡಕುಗಳಿವೆ. ಅವುಗಳನ್ನೇ ಇಟ್ಟಕೊಂಡು ಮತ್ತೆ ಶುರುಮಾಡುವುದು ಏಕತಾನತೆಯನ್ನು ಸೃಷ್ಟಿಸುತ್ತದೆ ಹೊರತು ಮತ್ತೇನು ಪ್ರಯೋಜನವಾಗಲಾರದು. ಜಗತ್ತೇ ಆನ್‍ಲೈನ್ ಹಿಂದೆ ಓಡುತ್ತಿರುವಾಗ ಆಫ್‌ಲೈನ್ ರಂಗಭೂಮಿಯ ಬಗ್ಗೆ ಯಾರು ತಲೆಕೆಡಿಸಿಕೊಳ್ಳುತ್ತಿಲ್ಲ. ಹಾಗಾಗಿ ರಂಗಭೂಮಿಯಲ್ಲಿ ಹೊಸ ಬದಲಾವಣೆ, ಮರುಹಟ್ಟು ಹೇಗಿರಬೇಕೆಂಬ ಚಿಂತನೆಗಳಾಗಬೇಕಿದೆ. ರಂಗಭೂಮಿಯ ಹಿರಿಕಿರಿಯಿರೆಲ್ಲರೂ ಸೇರಿ ಈ ಚಿಂತನೆ ನಡೆಸಬೇಕೆಂಬುದು ಪಾರಿಜಾತ ಬಳಗದ ಅಭಿಮತವಾಗಿದೆ.

ನಾವು ಈಗ ಒಳಗೂ ಹೊರಗೂ ವಿಚಿತ್ರ ಬಗೆಯ ಬರ ಭಯ ರೋಗದ ಕಾಲವನ್ನು ಅನುಭವಿಸುತ್ತಿದ್ದೇನೆ. ಇದನ್ನು ನಾವು ಕಾಲದ ಎಚ್ಚರಿಕೆ ಅಂತಲೇ ಭಾವಿಸಿ, ನಮಗೆ ಕಾಲವು ನೀಡಿರುವ ಪಾಠಗಳನ್ನು ಸರಿಯಾಗಿ ಗ್ರಹಿಸಿ ನಮ್ಮ ಮುಂದಿನ ಸಾಂಸ್ಕೃತಿಕ ಮಾದರಿಗಳ ಕುರಿತು ‘ರೀ-ಥಿಂಕ್’ ಮಾಡಲೇಬೇಕಿದೆ. ಇದು ಸಾಂಸ್ಕೃತಿಕ ಸಮುದಾಯ – ಜನ ಸಮುದಾಯ- ಸರಕಾರ ಎಲ್ಲರೂ ಕೂಡಿ ಮಾಡಬೇಕಾದ ಕೆಲಸ. – ಲಕ್ಷ್ಮಣ್ ಕೆ ಪಿ, ಯುವ ರಂಗಕರ್ಮಿ.

ಮುಖ್ಯವಾಗಿ ಪರಿಜಾತ ಬಳಗ ಸದ್ಯಕ್ಕೆ ಈ ಕೆಳಗಿನ ಐದು ಪ್ರಮುಖ ಚಿಂತನೆಗಳನ್ನು ಬೇಡಿಕೆಯ ರೂಪದಲ್ಲಿ ಮುಂದಿಟ್ಟಿದೆ.

  1. ಕರ್ನಾಟಕದ ಎಲ್ಲ ಮುಖ್ಯ ಸಾಂಸ್ಕೃತಿಕ ಸಂಸ್ಥೆಗಳು, ರಂಗಶಾಲೆಗಳು, ರೆಪರ್ಟರಿಗಳು ತಮ್ಮ ಪಠ್ಯಕ್ರಮ ಮತ್ತು ಕೆಲಸದ ರೂಪುರೇಷೆಗಳನ್ನು ರೀಥಿಂಕ್ ಮಾಡಬೇಕು.
  2. ರಂಗಶಾಲೆಗಳು ತಮ್ಮ ಪಠ್ಯಕ್ರಮದ ಕುರಿತು ರೀಥಿಂಕ್ ಮಾಡಬೇಕು.
  3. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತನ್ನ ಅನುದಾನದ ನೀತಿಗಳ ಕುರಿತು ರೀಥಿಂಕ್‌ ಮಾಡಬೇಕು.
  4. ಹೊಸ ರಂಗಮಂದಿರಗಳನ್ನು ಕಟ್ಟುವ ಮೊದಲು ಈಗಿರುವ ಜಿಲ್ಲಾ ಮತ್ತು ತಾಲ್ಲೂಕು ರಂಗಮಂದಿರಗಳ ಸಾಂಸ್ಕೃತಿಕ ಜೀವಂತಿಕೆಯ ಬಗ್ಗೆ ರೀಥಿಂಕ್ ಮಾಡಬೇಕು.
  5. ನಗರ ಕೇಂದ್ರಿತ ಸಾಂಸ್ಕೃತಿಕ ಯಜಮಾನ್ಯವನ್ನು ನಿಲ್ಲಿಸಿ, ಸಾಂಸ್ಕೃತಿಕ ವಿಕೇಂದ್ರೀಕರಣ ಸಾಧಿಸಲು ಯೋಜನೆಗಳನ್ನು ರೂಪಿಸಬೇಕು.
  6. ಈಗಿರುವ ರಂಗಮಂದಿರಗಳನ್ನು ತೆರೆಯುವ ಮತ್ತು ಅಲ್ಲಿ ಕೊರೊನಾ ಸುರಕ್ಷತೆಗಳೊಂದಿಗೆ ಪ್ರದರ್ಶನಗಳನ್ನು ಆರಂಭಿಸುವಂತೆ ಅವಕಾಶ ನೀಡಲು ಮತ್ತು ಅದಕ್ಕೆ ಬೇಕಾದ ತಯಾರಿ ನಡೆಸಲು ಸರ್ಕಾರ ಸಹಾಯ ನೀಡಲು ಒತ್ತಾಯಿಸುತ್ತೇವೆ.

ಈ  ಬೇಡಿಕೆಗಳನ್ನು ತಮ್ಮದು ಎಂದುಕೊಂಡಂತಹ ಎಲ್ಲಾ ರಂಗಕರ್ಮಿಗಳು ಈ ಕುರಿತು ಎಲ್ಲ ಜಿಲ್ಲೆಗಳಲ್ಲಿ ಅಕ್ಟೋಬರ್ 2 ರಂದು (ಗಾಂಧಿ ಜಯಂತಿ ದಿನ) ತಾವು ಇರುವಲ್ಲಿಯೇ ಪ್ರತಿಭಟನೆ ದಾಖಲಿಸಬೇಕಾಗಿ ‘ಪಾರಿಜಾತ ಬಳಗ’ ಕೋರಿದೆ.


ಇದನ್ನೂ ಓದಿ: ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...