Homeಮುಖಪುಟಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ಈಗಾಗಲೇ ಇರುವ ಸಿದ್ಧ ಮಾದರಿಯ ರಂಗಭೂಮಿಯ ಚಟುವಟಿಕೆಗಳಲ್ಲಿ ಹಲವು ತೊಡಕುಗಳಿವೆ. ಅವುಗಳನ್ನೇ ಇಟ್ಟಕೊಂಡು ಮತ್ತೆ ಶುರುಮಾಡುವುದು ಏಕತಾನತೆಯನ್ನು ಸೃಷ್ಟಿಸುತ್ತದೆ ಹೊರತು ಮತ್ತೇನು ಪ್ರಯೋಜನವಾಗಲಾರದು.

- Advertisement -
- Advertisement -

ರಂಗಭೂಮಿ ತನ್ನ ಮೂಲ ಗುಣದಂತೆ ನಿಂತ ನೀರಾಗಲು ಬಯಸುವುದಿಲ್ಲ. ಅದು ಸದಾ ಒಂದಿಲ್ಲೊಂದು  ಬದಲಾವಣೆಯ ಪರಿವರ್ತನೆಯಲ್ಲಿ ತೊಡಗಿಕೊಂಡು ಹರಿಯುವ ನದಿಯ ಗುಣವನ್ನು ಹೊಂದಿದೆ. ಕೊರೊನಾ ಸಾಂಕ್ರಾಮಿಕದಿಂದ ಎಲ್ಲಾ ಕ್ಷೇತ್ರಗಳಿಗೂ ಹೊಡೆತ ಬಿದ್ದಂತೆ ರಂಗಭೂಮಿ ಕ್ಷೇತ್ರವು ತತ್ತಿರಿಸಿತು. ಆರೇಳು ತಿಂಗಳುಗಳ ಕಾಲ ಚಟುವಟಿಕೆಗಳು ಸ್ಥಗಿತಗೊಂಡವು.

ಈ ಸಮಯದಲ್ಲಿ ರಂಗಭೂಮಿಯ ಮೂಲಕ ಹೊಸದೊಂದನ್ನು ಹೇಳಲು ತವಕಿಸುವ ಸೃಜನಶೀಲ ಕಲಾವಿದರು ಮತ್ತು ರಂಗಭೂಮಿಯೇ ತಮ್ಮ ಜೀವನ ಎಂದು ಬದುಕು ಕಟ್ಟಿಕೊಳ್ಳಲು ಹೊರಟಿದ್ದವರ ಕಥೆ ಏನು? ಕೊರೊನಾ ಹೊಡೆತಕ್ಕೆ ಸಿಕ್ಕಿ ನಲುಗುತ್ತಿರುವ ರಂಗಕರ್ಮಿಗಳ ಮುಂದಿನ ಜೀವನ ಹೇಗೆ ? ರಂಗಭೂಮಿಯನ್ನು ಕಲಿಯುವ ಮತ್ತು ಕಲಿಸುವ ಬಗೆಯಾದರು ಹೇಗೆ? ರಂಗಭೂಮಿಯನ್ನು ಹೊಸ ರೀತಿಯಾಗಿ ಜನಸಮುದಾಯದ ಮಧ್ಯೆ ತರುವುದು ಹೇಗೆ ಎಂಬ ಹತ್ತು ಹಲವು ಹೊಸ ಚಿಂತನೆಗಳ ಮೂಲಕ ರಂಗಭೂಮಿಯನ್ನು ಮತ್ತೆ ಮುನ್ನಲೆಗೆ ತರಬೇಕು ಎಂಬ ಆಶಯದಲ್ಲಿ ‘ಪಾರಿಜಾತ‘ ಯುವಬಳಗವು ‘ಥೀಯೇಟರ್ ರೀಥೀಂಕಿಂಗ್’ ಎಂಬ ಪರಿಕಲ್ಪನೆಯ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ.

ಕೊರೊನಾ ಸಮಯದಲ್ಲಿ ರಂಗಭೂಮಿಯನ್ನು ಪ್ರತಿ ದಿನ ತಮ್ಮ ಜೀವನದ ಭಾಗವಾಗಿಸಿಕೊಂಡಿದ್ದ ನಿರ್ದೇಶಕರು, ನಟರು, ತಂತ್ರಜ್ಞರು ಒಟ್ಟಾರೆ ರಂಗತಂಡಗಳು ಎಲ್ಲರು ಸಹ ಹೈರಾಣಾಗಿ ಹೋದರು. ಇಂತಹ ಸಂಕಷ್ಟದ ಸಮಯದಲ್ಲಿ ರಂಗಭೂಮಿಯ ಜೊತೆಗೆ ನಿಲ್ಲಬೇಕಿದ್ದ ಸರ್ಕಾರ ತನ್ನ ಸಂಸ್ಕೃತಿ ಇಲಾಖೆ ಮತ್ತು ನಾಟಕ ಅಕಾಡೆಮಿ ಮೂಲಕ ಕಲಾವಿದರನ್ನು ಪಟ್ಟಿ ಮಾಡಿ 6 ತಿಂಗಳ ನಷ್ಟಕ್ಕೆ ತಲಾ 2000 ರೂ ಕೊಡುವ ಭರವಸೆ ನೀಡಿ ಕೆಲವರಿಗಷ್ಟೇ ನೀಡಿ ತನ್ನ ಬೇಜಾವಾಬ್ದಾರಿಯನ್ನು ತೋರಿತು.

ಯೋಚಿಸುವುದು ದಿನವೂ ಇರುತ್ತದೆ. ಆದರೆ ಇಂದಿನ ಅಸಹನೆ, ಸಿನಿಕತನಗಳ ನಡುವೆ ಕಳೆದುಕೊಳ್ಳುತ್ತಿರುವ ಸಾಂಸ್ಕೃತಿಕ ಪ್ರಜ್ಞೆಯನ್ನು ಮತ್ತೊಮ್ಮೆ ಮರುಪರಿಶೀಲಿಸುವ ರೀಥಿಂಕ್ ಇಂದಿನ ಅಗತ್ಯವಾಗಿದೆ. – ಮಹದೇವ ಹಡಪದ, ರಂಗನಿರ್ದೇಶಕರು.

ಕೊರೊನಾ ಪೆಟ್ಟಿನಿಂದ ಕಳೆದುಕೊಂಡ ಉತ್ಸಾಹವನ್ನು ರಂಗಭೂಮಿ ಮತ್ತೆ ಮುನ್ನೆಲೆಗೆ ತರಬೇಕಿದೆ. ಈಗಾಗಲೇ ಇರುವ ಸಿದ್ಧ ಮಾದರಿಯ ರಂಗಭೂಮಿಯ ಚಟುವಟಿಕೆಗಳಲ್ಲಿ ಹಲವು ತೊಡಕುಗಳಿವೆ. ಅವುಗಳನ್ನೇ ಇಟ್ಟಕೊಂಡು ಮತ್ತೆ ಶುರುಮಾಡುವುದು ಏಕತಾನತೆಯನ್ನು ಸೃಷ್ಟಿಸುತ್ತದೆ ಹೊರತು ಮತ್ತೇನು ಪ್ರಯೋಜನವಾಗಲಾರದು. ಜಗತ್ತೇ ಆನ್‍ಲೈನ್ ಹಿಂದೆ ಓಡುತ್ತಿರುವಾಗ ಆಫ್‌ಲೈನ್ ರಂಗಭೂಮಿಯ ಬಗ್ಗೆ ಯಾರು ತಲೆಕೆಡಿಸಿಕೊಳ್ಳುತ್ತಿಲ್ಲ. ಹಾಗಾಗಿ ರಂಗಭೂಮಿಯಲ್ಲಿ ಹೊಸ ಬದಲಾವಣೆ, ಮರುಹಟ್ಟು ಹೇಗಿರಬೇಕೆಂಬ ಚಿಂತನೆಗಳಾಗಬೇಕಿದೆ. ರಂಗಭೂಮಿಯ ಹಿರಿಕಿರಿಯಿರೆಲ್ಲರೂ ಸೇರಿ ಈ ಚಿಂತನೆ ನಡೆಸಬೇಕೆಂಬುದು ಪಾರಿಜಾತ ಬಳಗದ ಅಭಿಮತವಾಗಿದೆ.

ನಾವು ಈಗ ಒಳಗೂ ಹೊರಗೂ ವಿಚಿತ್ರ ಬಗೆಯ ಬರ ಭಯ ರೋಗದ ಕಾಲವನ್ನು ಅನುಭವಿಸುತ್ತಿದ್ದೇನೆ. ಇದನ್ನು ನಾವು ಕಾಲದ ಎಚ್ಚರಿಕೆ ಅಂತಲೇ ಭಾವಿಸಿ, ನಮಗೆ ಕಾಲವು ನೀಡಿರುವ ಪಾಠಗಳನ್ನು ಸರಿಯಾಗಿ ಗ್ರಹಿಸಿ ನಮ್ಮ ಮುಂದಿನ ಸಾಂಸ್ಕೃತಿಕ ಮಾದರಿಗಳ ಕುರಿತು ‘ರೀ-ಥಿಂಕ್’ ಮಾಡಲೇಬೇಕಿದೆ. ಇದು ಸಾಂಸ್ಕೃತಿಕ ಸಮುದಾಯ – ಜನ ಸಮುದಾಯ- ಸರಕಾರ ಎಲ್ಲರೂ ಕೂಡಿ ಮಾಡಬೇಕಾದ ಕೆಲಸ. – ಲಕ್ಷ್ಮಣ್ ಕೆ ಪಿ, ಯುವ ರಂಗಕರ್ಮಿ.

ಮುಖ್ಯವಾಗಿ ಪರಿಜಾತ ಬಳಗ ಸದ್ಯಕ್ಕೆ ಈ ಕೆಳಗಿನ ಐದು ಪ್ರಮುಖ ಚಿಂತನೆಗಳನ್ನು ಬೇಡಿಕೆಯ ರೂಪದಲ್ಲಿ ಮುಂದಿಟ್ಟಿದೆ.

  1. ಕರ್ನಾಟಕದ ಎಲ್ಲ ಮುಖ್ಯ ಸಾಂಸ್ಕೃತಿಕ ಸಂಸ್ಥೆಗಳು, ರಂಗಶಾಲೆಗಳು, ರೆಪರ್ಟರಿಗಳು ತಮ್ಮ ಪಠ್ಯಕ್ರಮ ಮತ್ತು ಕೆಲಸದ ರೂಪುರೇಷೆಗಳನ್ನು ರೀಥಿಂಕ್ ಮಾಡಬೇಕು.
  2. ರಂಗಶಾಲೆಗಳು ತಮ್ಮ ಪಠ್ಯಕ್ರಮದ ಕುರಿತು ರೀಥಿಂಕ್ ಮಾಡಬೇಕು.
  3. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತನ್ನ ಅನುದಾನದ ನೀತಿಗಳ ಕುರಿತು ರೀಥಿಂಕ್‌ ಮಾಡಬೇಕು.
  4. ಹೊಸ ರಂಗಮಂದಿರಗಳನ್ನು ಕಟ್ಟುವ ಮೊದಲು ಈಗಿರುವ ಜಿಲ್ಲಾ ಮತ್ತು ತಾಲ್ಲೂಕು ರಂಗಮಂದಿರಗಳ ಸಾಂಸ್ಕೃತಿಕ ಜೀವಂತಿಕೆಯ ಬಗ್ಗೆ ರೀಥಿಂಕ್ ಮಾಡಬೇಕು.
  5. ನಗರ ಕೇಂದ್ರಿತ ಸಾಂಸ್ಕೃತಿಕ ಯಜಮಾನ್ಯವನ್ನು ನಿಲ್ಲಿಸಿ, ಸಾಂಸ್ಕೃತಿಕ ವಿಕೇಂದ್ರೀಕರಣ ಸಾಧಿಸಲು ಯೋಜನೆಗಳನ್ನು ರೂಪಿಸಬೇಕು.
  6. ಈಗಿರುವ ರಂಗಮಂದಿರಗಳನ್ನು ತೆರೆಯುವ ಮತ್ತು ಅಲ್ಲಿ ಕೊರೊನಾ ಸುರಕ್ಷತೆಗಳೊಂದಿಗೆ ಪ್ರದರ್ಶನಗಳನ್ನು ಆರಂಭಿಸುವಂತೆ ಅವಕಾಶ ನೀಡಲು ಮತ್ತು ಅದಕ್ಕೆ ಬೇಕಾದ ತಯಾರಿ ನಡೆಸಲು ಸರ್ಕಾರ ಸಹಾಯ ನೀಡಲು ಒತ್ತಾಯಿಸುತ್ತೇವೆ.

ಈ  ಬೇಡಿಕೆಗಳನ್ನು ತಮ್ಮದು ಎಂದುಕೊಂಡಂತಹ ಎಲ್ಲಾ ರಂಗಕರ್ಮಿಗಳು ಈ ಕುರಿತು ಎಲ್ಲ ಜಿಲ್ಲೆಗಳಲ್ಲಿ ಅಕ್ಟೋಬರ್ 2 ರಂದು (ಗಾಂಧಿ ಜಯಂತಿ ದಿನ) ತಾವು ಇರುವಲ್ಲಿಯೇ ಪ್ರತಿಭಟನೆ ದಾಖಲಿಸಬೇಕಾಗಿ ‘ಪಾರಿಜಾತ ಬಳಗ’ ಕೋರಿದೆ.


ಇದನ್ನೂ ಓದಿ: ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...