Homeಮುಖಪುಟಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ಈಗಾಗಲೇ ಇರುವ ಸಿದ್ಧ ಮಾದರಿಯ ರಂಗಭೂಮಿಯ ಚಟುವಟಿಕೆಗಳಲ್ಲಿ ಹಲವು ತೊಡಕುಗಳಿವೆ. ಅವುಗಳನ್ನೇ ಇಟ್ಟಕೊಂಡು ಮತ್ತೆ ಶುರುಮಾಡುವುದು ಏಕತಾನತೆಯನ್ನು ಸೃಷ್ಟಿಸುತ್ತದೆ ಹೊರತು ಮತ್ತೇನು ಪ್ರಯೋಜನವಾಗಲಾರದು.

- Advertisement -
- Advertisement -

ರಂಗಭೂಮಿ ತನ್ನ ಮೂಲ ಗುಣದಂತೆ ನಿಂತ ನೀರಾಗಲು ಬಯಸುವುದಿಲ್ಲ. ಅದು ಸದಾ ಒಂದಿಲ್ಲೊಂದು  ಬದಲಾವಣೆಯ ಪರಿವರ್ತನೆಯಲ್ಲಿ ತೊಡಗಿಕೊಂಡು ಹರಿಯುವ ನದಿಯ ಗುಣವನ್ನು ಹೊಂದಿದೆ. ಕೊರೊನಾ ಸಾಂಕ್ರಾಮಿಕದಿಂದ ಎಲ್ಲಾ ಕ್ಷೇತ್ರಗಳಿಗೂ ಹೊಡೆತ ಬಿದ್ದಂತೆ ರಂಗಭೂಮಿ ಕ್ಷೇತ್ರವು ತತ್ತಿರಿಸಿತು. ಆರೇಳು ತಿಂಗಳುಗಳ ಕಾಲ ಚಟುವಟಿಕೆಗಳು ಸ್ಥಗಿತಗೊಂಡವು.

ಈ ಸಮಯದಲ್ಲಿ ರಂಗಭೂಮಿಯ ಮೂಲಕ ಹೊಸದೊಂದನ್ನು ಹೇಳಲು ತವಕಿಸುವ ಸೃಜನಶೀಲ ಕಲಾವಿದರು ಮತ್ತು ರಂಗಭೂಮಿಯೇ ತಮ್ಮ ಜೀವನ ಎಂದು ಬದುಕು ಕಟ್ಟಿಕೊಳ್ಳಲು ಹೊರಟಿದ್ದವರ ಕಥೆ ಏನು? ಕೊರೊನಾ ಹೊಡೆತಕ್ಕೆ ಸಿಕ್ಕಿ ನಲುಗುತ್ತಿರುವ ರಂಗಕರ್ಮಿಗಳ ಮುಂದಿನ ಜೀವನ ಹೇಗೆ ? ರಂಗಭೂಮಿಯನ್ನು ಕಲಿಯುವ ಮತ್ತು ಕಲಿಸುವ ಬಗೆಯಾದರು ಹೇಗೆ? ರಂಗಭೂಮಿಯನ್ನು ಹೊಸ ರೀತಿಯಾಗಿ ಜನಸಮುದಾಯದ ಮಧ್ಯೆ ತರುವುದು ಹೇಗೆ ಎಂಬ ಹತ್ತು ಹಲವು ಹೊಸ ಚಿಂತನೆಗಳ ಮೂಲಕ ರಂಗಭೂಮಿಯನ್ನು ಮತ್ತೆ ಮುನ್ನಲೆಗೆ ತರಬೇಕು ಎಂಬ ಆಶಯದಲ್ಲಿ ‘ಪಾರಿಜಾತ‘ ಯುವಬಳಗವು ‘ಥೀಯೇಟರ್ ರೀಥೀಂಕಿಂಗ್’ ಎಂಬ ಪರಿಕಲ್ಪನೆಯ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ.

ಕೊರೊನಾ ಸಮಯದಲ್ಲಿ ರಂಗಭೂಮಿಯನ್ನು ಪ್ರತಿ ದಿನ ತಮ್ಮ ಜೀವನದ ಭಾಗವಾಗಿಸಿಕೊಂಡಿದ್ದ ನಿರ್ದೇಶಕರು, ನಟರು, ತಂತ್ರಜ್ಞರು ಒಟ್ಟಾರೆ ರಂಗತಂಡಗಳು ಎಲ್ಲರು ಸಹ ಹೈರಾಣಾಗಿ ಹೋದರು. ಇಂತಹ ಸಂಕಷ್ಟದ ಸಮಯದಲ್ಲಿ ರಂಗಭೂಮಿಯ ಜೊತೆಗೆ ನಿಲ್ಲಬೇಕಿದ್ದ ಸರ್ಕಾರ ತನ್ನ ಸಂಸ್ಕೃತಿ ಇಲಾಖೆ ಮತ್ತು ನಾಟಕ ಅಕಾಡೆಮಿ ಮೂಲಕ ಕಲಾವಿದರನ್ನು ಪಟ್ಟಿ ಮಾಡಿ 6 ತಿಂಗಳ ನಷ್ಟಕ್ಕೆ ತಲಾ 2000 ರೂ ಕೊಡುವ ಭರವಸೆ ನೀಡಿ ಕೆಲವರಿಗಷ್ಟೇ ನೀಡಿ ತನ್ನ ಬೇಜಾವಾಬ್ದಾರಿಯನ್ನು ತೋರಿತು.

ಯೋಚಿಸುವುದು ದಿನವೂ ಇರುತ್ತದೆ. ಆದರೆ ಇಂದಿನ ಅಸಹನೆ, ಸಿನಿಕತನಗಳ ನಡುವೆ ಕಳೆದುಕೊಳ್ಳುತ್ತಿರುವ ಸಾಂಸ್ಕೃತಿಕ ಪ್ರಜ್ಞೆಯನ್ನು ಮತ್ತೊಮ್ಮೆ ಮರುಪರಿಶೀಲಿಸುವ ರೀಥಿಂಕ್ ಇಂದಿನ ಅಗತ್ಯವಾಗಿದೆ. – ಮಹದೇವ ಹಡಪದ, ರಂಗನಿರ್ದೇಶಕರು.

ಕೊರೊನಾ ಪೆಟ್ಟಿನಿಂದ ಕಳೆದುಕೊಂಡ ಉತ್ಸಾಹವನ್ನು ರಂಗಭೂಮಿ ಮತ್ತೆ ಮುನ್ನೆಲೆಗೆ ತರಬೇಕಿದೆ. ಈಗಾಗಲೇ ಇರುವ ಸಿದ್ಧ ಮಾದರಿಯ ರಂಗಭೂಮಿಯ ಚಟುವಟಿಕೆಗಳಲ್ಲಿ ಹಲವು ತೊಡಕುಗಳಿವೆ. ಅವುಗಳನ್ನೇ ಇಟ್ಟಕೊಂಡು ಮತ್ತೆ ಶುರುಮಾಡುವುದು ಏಕತಾನತೆಯನ್ನು ಸೃಷ್ಟಿಸುತ್ತದೆ ಹೊರತು ಮತ್ತೇನು ಪ್ರಯೋಜನವಾಗಲಾರದು. ಜಗತ್ತೇ ಆನ್‍ಲೈನ್ ಹಿಂದೆ ಓಡುತ್ತಿರುವಾಗ ಆಫ್‌ಲೈನ್ ರಂಗಭೂಮಿಯ ಬಗ್ಗೆ ಯಾರು ತಲೆಕೆಡಿಸಿಕೊಳ್ಳುತ್ತಿಲ್ಲ. ಹಾಗಾಗಿ ರಂಗಭೂಮಿಯಲ್ಲಿ ಹೊಸ ಬದಲಾವಣೆ, ಮರುಹಟ್ಟು ಹೇಗಿರಬೇಕೆಂಬ ಚಿಂತನೆಗಳಾಗಬೇಕಿದೆ. ರಂಗಭೂಮಿಯ ಹಿರಿಕಿರಿಯಿರೆಲ್ಲರೂ ಸೇರಿ ಈ ಚಿಂತನೆ ನಡೆಸಬೇಕೆಂಬುದು ಪಾರಿಜಾತ ಬಳಗದ ಅಭಿಮತವಾಗಿದೆ.

ನಾವು ಈಗ ಒಳಗೂ ಹೊರಗೂ ವಿಚಿತ್ರ ಬಗೆಯ ಬರ ಭಯ ರೋಗದ ಕಾಲವನ್ನು ಅನುಭವಿಸುತ್ತಿದ್ದೇನೆ. ಇದನ್ನು ನಾವು ಕಾಲದ ಎಚ್ಚರಿಕೆ ಅಂತಲೇ ಭಾವಿಸಿ, ನಮಗೆ ಕಾಲವು ನೀಡಿರುವ ಪಾಠಗಳನ್ನು ಸರಿಯಾಗಿ ಗ್ರಹಿಸಿ ನಮ್ಮ ಮುಂದಿನ ಸಾಂಸ್ಕೃತಿಕ ಮಾದರಿಗಳ ಕುರಿತು ‘ರೀ-ಥಿಂಕ್’ ಮಾಡಲೇಬೇಕಿದೆ. ಇದು ಸಾಂಸ್ಕೃತಿಕ ಸಮುದಾಯ – ಜನ ಸಮುದಾಯ- ಸರಕಾರ ಎಲ್ಲರೂ ಕೂಡಿ ಮಾಡಬೇಕಾದ ಕೆಲಸ. – ಲಕ್ಷ್ಮಣ್ ಕೆ ಪಿ, ಯುವ ರಂಗಕರ್ಮಿ.

ಮುಖ್ಯವಾಗಿ ಪರಿಜಾತ ಬಳಗ ಸದ್ಯಕ್ಕೆ ಈ ಕೆಳಗಿನ ಐದು ಪ್ರಮುಖ ಚಿಂತನೆಗಳನ್ನು ಬೇಡಿಕೆಯ ರೂಪದಲ್ಲಿ ಮುಂದಿಟ್ಟಿದೆ.

  1. ಕರ್ನಾಟಕದ ಎಲ್ಲ ಮುಖ್ಯ ಸಾಂಸ್ಕೃತಿಕ ಸಂಸ್ಥೆಗಳು, ರಂಗಶಾಲೆಗಳು, ರೆಪರ್ಟರಿಗಳು ತಮ್ಮ ಪಠ್ಯಕ್ರಮ ಮತ್ತು ಕೆಲಸದ ರೂಪುರೇಷೆಗಳನ್ನು ರೀಥಿಂಕ್ ಮಾಡಬೇಕು.
  2. ರಂಗಶಾಲೆಗಳು ತಮ್ಮ ಪಠ್ಯಕ್ರಮದ ಕುರಿತು ರೀಥಿಂಕ್ ಮಾಡಬೇಕು.
  3. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತನ್ನ ಅನುದಾನದ ನೀತಿಗಳ ಕುರಿತು ರೀಥಿಂಕ್‌ ಮಾಡಬೇಕು.
  4. ಹೊಸ ರಂಗಮಂದಿರಗಳನ್ನು ಕಟ್ಟುವ ಮೊದಲು ಈಗಿರುವ ಜಿಲ್ಲಾ ಮತ್ತು ತಾಲ್ಲೂಕು ರಂಗಮಂದಿರಗಳ ಸಾಂಸ್ಕೃತಿಕ ಜೀವಂತಿಕೆಯ ಬಗ್ಗೆ ರೀಥಿಂಕ್ ಮಾಡಬೇಕು.
  5. ನಗರ ಕೇಂದ್ರಿತ ಸಾಂಸ್ಕೃತಿಕ ಯಜಮಾನ್ಯವನ್ನು ನಿಲ್ಲಿಸಿ, ಸಾಂಸ್ಕೃತಿಕ ವಿಕೇಂದ್ರೀಕರಣ ಸಾಧಿಸಲು ಯೋಜನೆಗಳನ್ನು ರೂಪಿಸಬೇಕು.
  6. ಈಗಿರುವ ರಂಗಮಂದಿರಗಳನ್ನು ತೆರೆಯುವ ಮತ್ತು ಅಲ್ಲಿ ಕೊರೊನಾ ಸುರಕ್ಷತೆಗಳೊಂದಿಗೆ ಪ್ರದರ್ಶನಗಳನ್ನು ಆರಂಭಿಸುವಂತೆ ಅವಕಾಶ ನೀಡಲು ಮತ್ತು ಅದಕ್ಕೆ ಬೇಕಾದ ತಯಾರಿ ನಡೆಸಲು ಸರ್ಕಾರ ಸಹಾಯ ನೀಡಲು ಒತ್ತಾಯಿಸುತ್ತೇವೆ.

ಈ  ಬೇಡಿಕೆಗಳನ್ನು ತಮ್ಮದು ಎಂದುಕೊಂಡಂತಹ ಎಲ್ಲಾ ರಂಗಕರ್ಮಿಗಳು ಈ ಕುರಿತು ಎಲ್ಲ ಜಿಲ್ಲೆಗಳಲ್ಲಿ ಅಕ್ಟೋಬರ್ 2 ರಂದು (ಗಾಂಧಿ ಜಯಂತಿ ದಿನ) ತಾವು ಇರುವಲ್ಲಿಯೇ ಪ್ರತಿಭಟನೆ ದಾಖಲಿಸಬೇಕಾಗಿ ‘ಪಾರಿಜಾತ ಬಳಗ’ ಕೋರಿದೆ.


ಇದನ್ನೂ ಓದಿ: ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...