Homeಮುಖಪುಟಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ಈಗಾಗಲೇ ಇರುವ ಸಿದ್ಧ ಮಾದರಿಯ ರಂಗಭೂಮಿಯ ಚಟುವಟಿಕೆಗಳಲ್ಲಿ ಹಲವು ತೊಡಕುಗಳಿವೆ. ಅವುಗಳನ್ನೇ ಇಟ್ಟಕೊಂಡು ಮತ್ತೆ ಶುರುಮಾಡುವುದು ಏಕತಾನತೆಯನ್ನು ಸೃಷ್ಟಿಸುತ್ತದೆ ಹೊರತು ಮತ್ತೇನು ಪ್ರಯೋಜನವಾಗಲಾರದು.

- Advertisement -
- Advertisement -

ರಂಗಭೂಮಿ ತನ್ನ ಮೂಲ ಗುಣದಂತೆ ನಿಂತ ನೀರಾಗಲು ಬಯಸುವುದಿಲ್ಲ. ಅದು ಸದಾ ಒಂದಿಲ್ಲೊಂದು  ಬದಲಾವಣೆಯ ಪರಿವರ್ತನೆಯಲ್ಲಿ ತೊಡಗಿಕೊಂಡು ಹರಿಯುವ ನದಿಯ ಗುಣವನ್ನು ಹೊಂದಿದೆ. ಕೊರೊನಾ ಸಾಂಕ್ರಾಮಿಕದಿಂದ ಎಲ್ಲಾ ಕ್ಷೇತ್ರಗಳಿಗೂ ಹೊಡೆತ ಬಿದ್ದಂತೆ ರಂಗಭೂಮಿ ಕ್ಷೇತ್ರವು ತತ್ತಿರಿಸಿತು. ಆರೇಳು ತಿಂಗಳುಗಳ ಕಾಲ ಚಟುವಟಿಕೆಗಳು ಸ್ಥಗಿತಗೊಂಡವು.

ಈ ಸಮಯದಲ್ಲಿ ರಂಗಭೂಮಿಯ ಮೂಲಕ ಹೊಸದೊಂದನ್ನು ಹೇಳಲು ತವಕಿಸುವ ಸೃಜನಶೀಲ ಕಲಾವಿದರು ಮತ್ತು ರಂಗಭೂಮಿಯೇ ತಮ್ಮ ಜೀವನ ಎಂದು ಬದುಕು ಕಟ್ಟಿಕೊಳ್ಳಲು ಹೊರಟಿದ್ದವರ ಕಥೆ ಏನು? ಕೊರೊನಾ ಹೊಡೆತಕ್ಕೆ ಸಿಕ್ಕಿ ನಲುಗುತ್ತಿರುವ ರಂಗಕರ್ಮಿಗಳ ಮುಂದಿನ ಜೀವನ ಹೇಗೆ ? ರಂಗಭೂಮಿಯನ್ನು ಕಲಿಯುವ ಮತ್ತು ಕಲಿಸುವ ಬಗೆಯಾದರು ಹೇಗೆ? ರಂಗಭೂಮಿಯನ್ನು ಹೊಸ ರೀತಿಯಾಗಿ ಜನಸಮುದಾಯದ ಮಧ್ಯೆ ತರುವುದು ಹೇಗೆ ಎಂಬ ಹತ್ತು ಹಲವು ಹೊಸ ಚಿಂತನೆಗಳ ಮೂಲಕ ರಂಗಭೂಮಿಯನ್ನು ಮತ್ತೆ ಮುನ್ನಲೆಗೆ ತರಬೇಕು ಎಂಬ ಆಶಯದಲ್ಲಿ ‘ಪಾರಿಜಾತ‘ ಯುವಬಳಗವು ‘ಥೀಯೇಟರ್ ರೀಥೀಂಕಿಂಗ್’ ಎಂಬ ಪರಿಕಲ್ಪನೆಯ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ.

ಕೊರೊನಾ ಸಮಯದಲ್ಲಿ ರಂಗಭೂಮಿಯನ್ನು ಪ್ರತಿ ದಿನ ತಮ್ಮ ಜೀವನದ ಭಾಗವಾಗಿಸಿಕೊಂಡಿದ್ದ ನಿರ್ದೇಶಕರು, ನಟರು, ತಂತ್ರಜ್ಞರು ಒಟ್ಟಾರೆ ರಂಗತಂಡಗಳು ಎಲ್ಲರು ಸಹ ಹೈರಾಣಾಗಿ ಹೋದರು. ಇಂತಹ ಸಂಕಷ್ಟದ ಸಮಯದಲ್ಲಿ ರಂಗಭೂಮಿಯ ಜೊತೆಗೆ ನಿಲ್ಲಬೇಕಿದ್ದ ಸರ್ಕಾರ ತನ್ನ ಸಂಸ್ಕೃತಿ ಇಲಾಖೆ ಮತ್ತು ನಾಟಕ ಅಕಾಡೆಮಿ ಮೂಲಕ ಕಲಾವಿದರನ್ನು ಪಟ್ಟಿ ಮಾಡಿ 6 ತಿಂಗಳ ನಷ್ಟಕ್ಕೆ ತಲಾ 2000 ರೂ ಕೊಡುವ ಭರವಸೆ ನೀಡಿ ಕೆಲವರಿಗಷ್ಟೇ ನೀಡಿ ತನ್ನ ಬೇಜಾವಾಬ್ದಾರಿಯನ್ನು ತೋರಿತು.

ಯೋಚಿಸುವುದು ದಿನವೂ ಇರುತ್ತದೆ. ಆದರೆ ಇಂದಿನ ಅಸಹನೆ, ಸಿನಿಕತನಗಳ ನಡುವೆ ಕಳೆದುಕೊಳ್ಳುತ್ತಿರುವ ಸಾಂಸ್ಕೃತಿಕ ಪ್ರಜ್ಞೆಯನ್ನು ಮತ್ತೊಮ್ಮೆ ಮರುಪರಿಶೀಲಿಸುವ ರೀಥಿಂಕ್ ಇಂದಿನ ಅಗತ್ಯವಾಗಿದೆ. – ಮಹದೇವ ಹಡಪದ, ರಂಗನಿರ್ದೇಶಕರು.

ಕೊರೊನಾ ಪೆಟ್ಟಿನಿಂದ ಕಳೆದುಕೊಂಡ ಉತ್ಸಾಹವನ್ನು ರಂಗಭೂಮಿ ಮತ್ತೆ ಮುನ್ನೆಲೆಗೆ ತರಬೇಕಿದೆ. ಈಗಾಗಲೇ ಇರುವ ಸಿದ್ಧ ಮಾದರಿಯ ರಂಗಭೂಮಿಯ ಚಟುವಟಿಕೆಗಳಲ್ಲಿ ಹಲವು ತೊಡಕುಗಳಿವೆ. ಅವುಗಳನ್ನೇ ಇಟ್ಟಕೊಂಡು ಮತ್ತೆ ಶುರುಮಾಡುವುದು ಏಕತಾನತೆಯನ್ನು ಸೃಷ್ಟಿಸುತ್ತದೆ ಹೊರತು ಮತ್ತೇನು ಪ್ರಯೋಜನವಾಗಲಾರದು. ಜಗತ್ತೇ ಆನ್‍ಲೈನ್ ಹಿಂದೆ ಓಡುತ್ತಿರುವಾಗ ಆಫ್‌ಲೈನ್ ರಂಗಭೂಮಿಯ ಬಗ್ಗೆ ಯಾರು ತಲೆಕೆಡಿಸಿಕೊಳ್ಳುತ್ತಿಲ್ಲ. ಹಾಗಾಗಿ ರಂಗಭೂಮಿಯಲ್ಲಿ ಹೊಸ ಬದಲಾವಣೆ, ಮರುಹಟ್ಟು ಹೇಗಿರಬೇಕೆಂಬ ಚಿಂತನೆಗಳಾಗಬೇಕಿದೆ. ರಂಗಭೂಮಿಯ ಹಿರಿಕಿರಿಯಿರೆಲ್ಲರೂ ಸೇರಿ ಈ ಚಿಂತನೆ ನಡೆಸಬೇಕೆಂಬುದು ಪಾರಿಜಾತ ಬಳಗದ ಅಭಿಮತವಾಗಿದೆ.

ನಾವು ಈಗ ಒಳಗೂ ಹೊರಗೂ ವಿಚಿತ್ರ ಬಗೆಯ ಬರ ಭಯ ರೋಗದ ಕಾಲವನ್ನು ಅನುಭವಿಸುತ್ತಿದ್ದೇನೆ. ಇದನ್ನು ನಾವು ಕಾಲದ ಎಚ್ಚರಿಕೆ ಅಂತಲೇ ಭಾವಿಸಿ, ನಮಗೆ ಕಾಲವು ನೀಡಿರುವ ಪಾಠಗಳನ್ನು ಸರಿಯಾಗಿ ಗ್ರಹಿಸಿ ನಮ್ಮ ಮುಂದಿನ ಸಾಂಸ್ಕೃತಿಕ ಮಾದರಿಗಳ ಕುರಿತು ‘ರೀ-ಥಿಂಕ್’ ಮಾಡಲೇಬೇಕಿದೆ. ಇದು ಸಾಂಸ್ಕೃತಿಕ ಸಮುದಾಯ – ಜನ ಸಮುದಾಯ- ಸರಕಾರ ಎಲ್ಲರೂ ಕೂಡಿ ಮಾಡಬೇಕಾದ ಕೆಲಸ. – ಲಕ್ಷ್ಮಣ್ ಕೆ ಪಿ, ಯುವ ರಂಗಕರ್ಮಿ.

ಮುಖ್ಯವಾಗಿ ಪರಿಜಾತ ಬಳಗ ಸದ್ಯಕ್ಕೆ ಈ ಕೆಳಗಿನ ಐದು ಪ್ರಮುಖ ಚಿಂತನೆಗಳನ್ನು ಬೇಡಿಕೆಯ ರೂಪದಲ್ಲಿ ಮುಂದಿಟ್ಟಿದೆ.

  1. ಕರ್ನಾಟಕದ ಎಲ್ಲ ಮುಖ್ಯ ಸಾಂಸ್ಕೃತಿಕ ಸಂಸ್ಥೆಗಳು, ರಂಗಶಾಲೆಗಳು, ರೆಪರ್ಟರಿಗಳು ತಮ್ಮ ಪಠ್ಯಕ್ರಮ ಮತ್ತು ಕೆಲಸದ ರೂಪುರೇಷೆಗಳನ್ನು ರೀಥಿಂಕ್ ಮಾಡಬೇಕು.
  2. ರಂಗಶಾಲೆಗಳು ತಮ್ಮ ಪಠ್ಯಕ್ರಮದ ಕುರಿತು ರೀಥಿಂಕ್ ಮಾಡಬೇಕು.
  3. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತನ್ನ ಅನುದಾನದ ನೀತಿಗಳ ಕುರಿತು ರೀಥಿಂಕ್‌ ಮಾಡಬೇಕು.
  4. ಹೊಸ ರಂಗಮಂದಿರಗಳನ್ನು ಕಟ್ಟುವ ಮೊದಲು ಈಗಿರುವ ಜಿಲ್ಲಾ ಮತ್ತು ತಾಲ್ಲೂಕು ರಂಗಮಂದಿರಗಳ ಸಾಂಸ್ಕೃತಿಕ ಜೀವಂತಿಕೆಯ ಬಗ್ಗೆ ರೀಥಿಂಕ್ ಮಾಡಬೇಕು.
  5. ನಗರ ಕೇಂದ್ರಿತ ಸಾಂಸ್ಕೃತಿಕ ಯಜಮಾನ್ಯವನ್ನು ನಿಲ್ಲಿಸಿ, ಸಾಂಸ್ಕೃತಿಕ ವಿಕೇಂದ್ರೀಕರಣ ಸಾಧಿಸಲು ಯೋಜನೆಗಳನ್ನು ರೂಪಿಸಬೇಕು.
  6. ಈಗಿರುವ ರಂಗಮಂದಿರಗಳನ್ನು ತೆರೆಯುವ ಮತ್ತು ಅಲ್ಲಿ ಕೊರೊನಾ ಸುರಕ್ಷತೆಗಳೊಂದಿಗೆ ಪ್ರದರ್ಶನಗಳನ್ನು ಆರಂಭಿಸುವಂತೆ ಅವಕಾಶ ನೀಡಲು ಮತ್ತು ಅದಕ್ಕೆ ಬೇಕಾದ ತಯಾರಿ ನಡೆಸಲು ಸರ್ಕಾರ ಸಹಾಯ ನೀಡಲು ಒತ್ತಾಯಿಸುತ್ತೇವೆ.

ಈ  ಬೇಡಿಕೆಗಳನ್ನು ತಮ್ಮದು ಎಂದುಕೊಂಡಂತಹ ಎಲ್ಲಾ ರಂಗಕರ್ಮಿಗಳು ಈ ಕುರಿತು ಎಲ್ಲ ಜಿಲ್ಲೆಗಳಲ್ಲಿ ಅಕ್ಟೋಬರ್ 2 ರಂದು (ಗಾಂಧಿ ಜಯಂತಿ ದಿನ) ತಾವು ಇರುವಲ್ಲಿಯೇ ಪ್ರತಿಭಟನೆ ದಾಖಲಿಸಬೇಕಾಗಿ ‘ಪಾರಿಜಾತ ಬಳಗ’ ಕೋರಿದೆ.


ಇದನ್ನೂ ಓದಿ: ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...