Homeಮುಖಪುಟರಜನಿಕಾಂತ್ ಅಭಿನಯದ 'ವೇಟ್ಟೈಯಾನ್‌' ಸಿನಿಮಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಿವೃತ್ತ ಬಸ್ ಕಂಡಕ್ಟರ್

ರಜನಿಕಾಂತ್ ಅಭಿನಯದ ‘ವೇಟ್ಟೈಯಾನ್‌’ ಸಿನಿಮಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಿವೃತ್ತ ಬಸ್ ಕಂಡಕ್ಟರ್

- Advertisement -
- Advertisement -

ಅಕ್ಟೋಬರ್ 10ರಂದು ಬಿಡುಗಡೆಯಾಗಲಿರುವ ರಜನಿಕಾಂತ್ ಅಭಿನಯದ ‘ವೇಟ್ಟೈಯಾನ್‌’ ಸಿನಿಮಾದ ಡೈಲಾಗ್‌ಗಳ ವಿರುದ್ಧ ತಮಿಳುನಾಡು ರಾಜ್ಯ ರಸ್ತೆ ಸಾರಿಗೆ ನಿಗಮದ ನಿವೃತ್ತ ನಿರ್ವಾಹಕರೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್‌ನಲ್ಲಿರುವ ಡೈಲಾಗ್‌ಗಳು ಪೊಲೀಸರ ಕಾನೂನುಬಾಹಿರ ಹತ್ಯೆ ಅಥವಾ ಎನ್‌ಕೌಂಟರ್‌ಗಳನ್ನು ವೈಭವೀಕರಿಸುತ್ತದೆ ಎಂದು ಪಳನಿವೇಲು ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದಾರೆ. ಈ ಸಂಬಂಧ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಪೊಲೀಸರ ಕಾನೂನು ಬಾಹಿರ ಕ್ರಮಗಳು, ಎನ್‌ಕೌಂಟರ್ ಹೆಸರಿನಲ್ಲಿ ಅವರು ಮಾಡುವ ಹತ್ಯೆಗಳನ್ನು “ಎನ್‌ಕೌಂಟರ್ ಕೇವಲ ಶಿಕ್ಷೆಯಲ್ಲ, ಅದು ಅಪರಾಧಗಳನ್ನು ತಡೆಗಟ್ಟುವ ಕ್ರಮ” ಎಂಬ ಸಿನಿಮಾದ ಡೈಲಾಗ್‌ ಮೂಲಕ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಅದು ‘ಅಸಂವಿಧಾನಿಕ’ ದೃಷ್ಟಿಕೋನವಾಗಿದೆ. ಕಾನೂನು ಬಾಹಿರ ಕ್ರಮಗಳನ್ನು ಗೌರವಿಸಲು ಪ್ರೇಕ್ಷಕರನ್ನು ಪ್ರೋತ್ಸಾಹಿಸುತ್ತದೆ ಎಂದು ಕಂಡಕ್ಟರ್ ಪಳನಿವೇಲು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದ್ದಾರೆ.

ತಮಿಳುನಾಡು ಸರ್ಕಾರ, ವೇಟ್ಟೈಯಾನ್‌ ನಿರ್ಮಾಪಕರಾದ ಲೈಕಾ ಪ್ರೊಡಕ್ಷನ್ಸ್ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ವಿರುದ್ಧ ಅರ್ಜಿ ಸಲ್ಲಿಸಿರುವ ಪಳನಿವೇಲು ಅವರು, ವಿವಾದಾತ್ಮಕ ಡೈಲಾಗ್‌ಗಳನ್ನು ತೆಗೆದು ಹಾಕುವವರೆಗೆ ಸಿನಿಮಾ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕು. ಸಿನಿಮಾಗೆ ನೀಡಿರುವ ‘ಯುಎ’ ಸರ್ಟಿಫಿಕೇಟ್ ಹಿಂಪಡೆದು ‘ಎ’ ಸರ್ಟಿಫಿಕೇಟ್ ನೀಡಲು ಸಿಬಿಎಫ್‌ಸಿ ಗೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದ್ದಾರೆ. ಮಧುರೈ ಪೀಠ ಮೂವರಿಗೂ ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ನೋಟಿಸ್ ಜಾರಿ ಮಾಡಿದೆ.

ವೇಟ್ಟೈಯಾನ್‌ ಸಿನಿಮಾದ ಮೊದಲ ಟೀಸರ್ ಸೆಪ್ಟೆಂಬರ್ 20ರಂದು ಬಿಡುಗಡೆಯಾಗಿತ್ತು. ಅಕ್ಟೋಬರ್ 2 ರಂದು ಅಂತಿಮ ಟ್ರೇಲರ್ ಬಿಡುಗಡೆಗೊಳಿಸಲಾಗಿದೆ. ಚಿತ್ರವು ಅಕ್ಟೋಬರ್ 10 ರಂದು ತೆರೆಗೆ ಬರಲಿದೆ. ರಜನಿಕಾಂತ್, ಮಂಜು ವಾರಿಯರ್, ಅಮಿತಾಬ್ ಬಚ್ಚನ್, ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ, ರಿತಿಕಾ ಸಿಂಗ್, ದುಶಾರ ವಿಜಯನ್ ಸಿನಿಮಾದಲ್ಲಿ ನಟಿಸಿದ್ದಾರೆ.

ಸಿನಿಮಾದಲ್ಲಿ ರಜನಿಕಾಂತ್ ಅವರ ‘ಪ್ರಸಿದ್ಧ ಎನ್‌ಕೌಂಟರ್ ಸ್ಪೆಷಲಿಸ್ಟ್’ ಎಂಬ ಪಾತ್ರದ ಕುರಿತು ಪಳನಿವೇಲು ತನ್ನ ಅರ್ಜಿಯಲ್ಲಿ ಪ್ರಶ್ನೆ ಎತ್ತಿದ್ದಾರೆ. ಎನ್‌ಕೌಂಟರ್ ಎನ್ನುವುದು ಅಪರಾಧಿಗಳು ಪೊಲೀಸರ ಮೇಲೆ ದಾಳಿ ಮಾಡಲು ಮುಂದಾದಾಗ ಗುಂಡು ಹಾರಿಸುವ ಮೂಲಕ ಅಥವಾ ಗುಂಡಿಕ್ಕಿ ಕೊಲ್ಲುವ ಮೂಲಕ ಆತ್ಮರಕ್ಷಣೆ ಮಾಡುವ ಪ್ರಕ್ರಿಯೆ. ಒಬ್ಬ ಪೋಲೀಸ್‌ ತನ್ನ ಸೇವಾವಧಿಯಲ್ಲಿ ಒಂದು ಅಥವಾ ಎರಡು ಬಾರಿ ಇಂತಹ ಅಹಿತಕರ ಘಟನೆಯನ್ನು ಎದುರಿಸಬಹುದು ಅಥವಾ ‘ಎನ್ಕೌಂಟರ್’ ಮಾಡಬಹುದು. ಯಾವುದೇ ಪೊಲೀಸರು ‘ಹೆಸರಾಂತ ಎನ್‌ಕೌಂಟರ್ ಸ್ಪೆಷಲಿಸ್ಟ್’ ಆಗಲು ಸಾಧ್ಯವಿಲ್ಲ” ಎಂದಿದ್ದಾರೆ.

“ಸಿನಿಮಾದ ಡೈಲಾಗ್‌ಗಳು ಸಂವಿಧಾನ ವಿರೋಧಿ ನೀತಿಯನ್ನು ವೈಭವೀಕರಿಸುತ್ತದೆ. ಇದಕ್ಕೆ ಅನುಮತಿ ನೀಡಿದರೆ, ಸಂವಿಧಾನದ ಮೌಲ್ಯಗಳು ಮನೋರಂಜನೆಯ ವಸ್ತುವಾಗಿ ಪ್ರಜಾಪ್ರಭುತ್ವದ ಅಡಿಪಾಯಕ್ಕೆ ಕುತ್ತು ತರಬಹುದು. ಅಸಂವಿಧಾನಿಕ ಡೈಲಾಗ್‌ಗಳ ಪ್ರದರ್ಶನಕ್ಕೆ ಅನುಮತಿಸಿದರೆ, ಜನರು ನ್ಯಾಯಾಂಗ ವಿಚಾರಣೆಯ ಮೂಲಕ ಅಪರಾಧಿಯನ್ನು ಕಂಬಿ ಹಿಂದೆ ತಳ್ಳುವ ಬದಲು, ಪ್ರತಿ ಕ್ರಿಮಿನಲ್ ಪ್ರಕರಣದಲ್ಲಿ ‘ಎನ್‌ಕೌಂಟರ್’ ಪರಿಹಾರವನ್ನು ಕೇಳಬಹುದು. ಆ ಸಂದರ್ಭದಲ್ಲಿ, ಅಪರಾಧಿಯು ಭಾರತದ ಸಂವಿಧಾನದ 21 ನೇ ವಿಧಿಯಡಿ ನೀಡಿರುವ ರಕ್ಷಣೆಯ ಮೂಲಭೂತ ಹಕ್ಕನ್ನು ಕಳೆದುಕೊಳ್ಳುವ ಮೂಲಕ ರಕ್ಷಣೆಯಿಲ್ಲದವನಾಗುತ್ತಾನೆ” ಎಂದು ಪಲನಿವೇಳು ತನ್ನ ಅರ್ಜಿಯಲ್ಲಿ ವಿವರಿಸಿದ್ದಾರೆ.

ರಜನಿಕಾಂತ್ ಮತ್ತು ಕಾಲಿವುಡ್ ಚಲನಚಿತ್ರಗಳಲ್ಲಿ ನಾಯಕನ ಆರಾಧನೆಯನ್ನು ಉತ್ತೇಜಿಸುವ ಪ್ರವೃತ್ತಿಯನ್ನು ಪಳನಿವೇಲು ಟೀಕಿಸಿದ್ದು, “ಸಿನಿಮಾವನ್ನು ಕೇವಲ ಮನರಂಜನೆ ಎಂದು ನಾವು ಕಡಿಮೆ ಅಂದಾಜು ಮಾಡಲು ಸಾಧ್ಯವಿಲ್ಲ. ಸಿನೆಮಾದಲ್ಲಿನ ವೈಭವೀಕರಣವು ನೈತಿಕ, ಕಲಾತ್ಮಕ ಮತ್ತು ಸಾಮಾಜಿಕ ಪ್ರಶ್ನೆಗಳನ್ನು ಹುಟ್ಟುಹಾಕುವ ಒಂದು ಸಂಕೀರ್ಣ ವಿದ್ಯಮಾನವಾಗಿದೆ. ಹಿಂಸಾಚಾರದಲ್ಲಿ ತೊಡಗುವ ಪಾತ್ರಗಳನ್ನು, ಆಕ್ರಮಣಕಾರಿ ಕ್ರಮಗಳ ಹೊರತಾಗಿಯೂ ವೀರರು, ಕೆಚ್ಚೆದೆಯ, ಪ್ರಶಂಸನೀಯ ಮತ್ತು ‘ಜೀವನಕ್ಕಿಂತ ದೊಡ್ಡವರು’ ಎಂದು ಚಿತ್ರಿಸಲಾಗುತ್ತಿದೆ. ವೇಟ್ಟೈಯಾನ್‌ ಸಿನಿಮಾದಲ್ಲೂ ‘ಎನ್‌ಕೌಂಟರ್’ ಹಿಂಸೆಯನ್ನು ಜನರ ಸಂರಕ್ಷಕನಂತೆ ಬಿಂಬಿಸಲಾಗಿದೆ” ಎಂದಿದ್ದಾರೆ.

ಸೌಜನ್ಯ : thenewsminute.com

ಇದನ್ನೂ ಓದಿ : ನವರಾತ್ರಿ | ಸುಪ್ರೀಂಕೋರ್ಟ್‌ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಇಲ್ಲ; ಪ್ರತಿಭಟನೆ ಹಿನ್ನಲೆ ನಿರ್ಧಾರ ವಾಪಾಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...