Homeಮುಖಪುಟರಜನಿಕಾಂತ್ ಅಭಿನಯದ 'ವೇಟ್ಟೈಯಾನ್‌' ಸಿನಿಮಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಿವೃತ್ತ ಬಸ್ ಕಂಡಕ್ಟರ್

ರಜನಿಕಾಂತ್ ಅಭಿನಯದ ‘ವೇಟ್ಟೈಯಾನ್‌’ ಸಿನಿಮಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಿವೃತ್ತ ಬಸ್ ಕಂಡಕ್ಟರ್

- Advertisement -
- Advertisement -

ಅಕ್ಟೋಬರ್ 10ರಂದು ಬಿಡುಗಡೆಯಾಗಲಿರುವ ರಜನಿಕಾಂತ್ ಅಭಿನಯದ ‘ವೇಟ್ಟೈಯಾನ್‌’ ಸಿನಿಮಾದ ಡೈಲಾಗ್‌ಗಳ ವಿರುದ್ಧ ತಮಿಳುನಾಡು ರಾಜ್ಯ ರಸ್ತೆ ಸಾರಿಗೆ ನಿಗಮದ ನಿವೃತ್ತ ನಿರ್ವಾಹಕರೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್‌ನಲ್ಲಿರುವ ಡೈಲಾಗ್‌ಗಳು ಪೊಲೀಸರ ಕಾನೂನುಬಾಹಿರ ಹತ್ಯೆ ಅಥವಾ ಎನ್‌ಕೌಂಟರ್‌ಗಳನ್ನು ವೈಭವೀಕರಿಸುತ್ತದೆ ಎಂದು ಪಳನಿವೇಲು ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದಾರೆ. ಈ ಸಂಬಂಧ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಪೊಲೀಸರ ಕಾನೂನು ಬಾಹಿರ ಕ್ರಮಗಳು, ಎನ್‌ಕೌಂಟರ್ ಹೆಸರಿನಲ್ಲಿ ಅವರು ಮಾಡುವ ಹತ್ಯೆಗಳನ್ನು “ಎನ್‌ಕೌಂಟರ್ ಕೇವಲ ಶಿಕ್ಷೆಯಲ್ಲ, ಅದು ಅಪರಾಧಗಳನ್ನು ತಡೆಗಟ್ಟುವ ಕ್ರಮ” ಎಂಬ ಸಿನಿಮಾದ ಡೈಲಾಗ್‌ ಮೂಲಕ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಅದು ‘ಅಸಂವಿಧಾನಿಕ’ ದೃಷ್ಟಿಕೋನವಾಗಿದೆ. ಕಾನೂನು ಬಾಹಿರ ಕ್ರಮಗಳನ್ನು ಗೌರವಿಸಲು ಪ್ರೇಕ್ಷಕರನ್ನು ಪ್ರೋತ್ಸಾಹಿಸುತ್ತದೆ ಎಂದು ಕಂಡಕ್ಟರ್ ಪಳನಿವೇಲು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದ್ದಾರೆ.

ತಮಿಳುನಾಡು ಸರ್ಕಾರ, ವೇಟ್ಟೈಯಾನ್‌ ನಿರ್ಮಾಪಕರಾದ ಲೈಕಾ ಪ್ರೊಡಕ್ಷನ್ಸ್ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ವಿರುದ್ಧ ಅರ್ಜಿ ಸಲ್ಲಿಸಿರುವ ಪಳನಿವೇಲು ಅವರು, ವಿವಾದಾತ್ಮಕ ಡೈಲಾಗ್‌ಗಳನ್ನು ತೆಗೆದು ಹಾಕುವವರೆಗೆ ಸಿನಿಮಾ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕು. ಸಿನಿಮಾಗೆ ನೀಡಿರುವ ‘ಯುಎ’ ಸರ್ಟಿಫಿಕೇಟ್ ಹಿಂಪಡೆದು ‘ಎ’ ಸರ್ಟಿಫಿಕೇಟ್ ನೀಡಲು ಸಿಬಿಎಫ್‌ಸಿ ಗೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದ್ದಾರೆ. ಮಧುರೈ ಪೀಠ ಮೂವರಿಗೂ ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ನೋಟಿಸ್ ಜಾರಿ ಮಾಡಿದೆ.

ವೇಟ್ಟೈಯಾನ್‌ ಸಿನಿಮಾದ ಮೊದಲ ಟೀಸರ್ ಸೆಪ್ಟೆಂಬರ್ 20ರಂದು ಬಿಡುಗಡೆಯಾಗಿತ್ತು. ಅಕ್ಟೋಬರ್ 2 ರಂದು ಅಂತಿಮ ಟ್ರೇಲರ್ ಬಿಡುಗಡೆಗೊಳಿಸಲಾಗಿದೆ. ಚಿತ್ರವು ಅಕ್ಟೋಬರ್ 10 ರಂದು ತೆರೆಗೆ ಬರಲಿದೆ. ರಜನಿಕಾಂತ್, ಮಂಜು ವಾರಿಯರ್, ಅಮಿತಾಬ್ ಬಚ್ಚನ್, ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ, ರಿತಿಕಾ ಸಿಂಗ್, ದುಶಾರ ವಿಜಯನ್ ಸಿನಿಮಾದಲ್ಲಿ ನಟಿಸಿದ್ದಾರೆ.

ಸಿನಿಮಾದಲ್ಲಿ ರಜನಿಕಾಂತ್ ಅವರ ‘ಪ್ರಸಿದ್ಧ ಎನ್‌ಕೌಂಟರ್ ಸ್ಪೆಷಲಿಸ್ಟ್’ ಎಂಬ ಪಾತ್ರದ ಕುರಿತು ಪಳನಿವೇಲು ತನ್ನ ಅರ್ಜಿಯಲ್ಲಿ ಪ್ರಶ್ನೆ ಎತ್ತಿದ್ದಾರೆ. ಎನ್‌ಕೌಂಟರ್ ಎನ್ನುವುದು ಅಪರಾಧಿಗಳು ಪೊಲೀಸರ ಮೇಲೆ ದಾಳಿ ಮಾಡಲು ಮುಂದಾದಾಗ ಗುಂಡು ಹಾರಿಸುವ ಮೂಲಕ ಅಥವಾ ಗುಂಡಿಕ್ಕಿ ಕೊಲ್ಲುವ ಮೂಲಕ ಆತ್ಮರಕ್ಷಣೆ ಮಾಡುವ ಪ್ರಕ್ರಿಯೆ. ಒಬ್ಬ ಪೋಲೀಸ್‌ ತನ್ನ ಸೇವಾವಧಿಯಲ್ಲಿ ಒಂದು ಅಥವಾ ಎರಡು ಬಾರಿ ಇಂತಹ ಅಹಿತಕರ ಘಟನೆಯನ್ನು ಎದುರಿಸಬಹುದು ಅಥವಾ ‘ಎನ್ಕೌಂಟರ್’ ಮಾಡಬಹುದು. ಯಾವುದೇ ಪೊಲೀಸರು ‘ಹೆಸರಾಂತ ಎನ್‌ಕೌಂಟರ್ ಸ್ಪೆಷಲಿಸ್ಟ್’ ಆಗಲು ಸಾಧ್ಯವಿಲ್ಲ” ಎಂದಿದ್ದಾರೆ.

“ಸಿನಿಮಾದ ಡೈಲಾಗ್‌ಗಳು ಸಂವಿಧಾನ ವಿರೋಧಿ ನೀತಿಯನ್ನು ವೈಭವೀಕರಿಸುತ್ತದೆ. ಇದಕ್ಕೆ ಅನುಮತಿ ನೀಡಿದರೆ, ಸಂವಿಧಾನದ ಮೌಲ್ಯಗಳು ಮನೋರಂಜನೆಯ ವಸ್ತುವಾಗಿ ಪ್ರಜಾಪ್ರಭುತ್ವದ ಅಡಿಪಾಯಕ್ಕೆ ಕುತ್ತು ತರಬಹುದು. ಅಸಂವಿಧಾನಿಕ ಡೈಲಾಗ್‌ಗಳ ಪ್ರದರ್ಶನಕ್ಕೆ ಅನುಮತಿಸಿದರೆ, ಜನರು ನ್ಯಾಯಾಂಗ ವಿಚಾರಣೆಯ ಮೂಲಕ ಅಪರಾಧಿಯನ್ನು ಕಂಬಿ ಹಿಂದೆ ತಳ್ಳುವ ಬದಲು, ಪ್ರತಿ ಕ್ರಿಮಿನಲ್ ಪ್ರಕರಣದಲ್ಲಿ ‘ಎನ್‌ಕೌಂಟರ್’ ಪರಿಹಾರವನ್ನು ಕೇಳಬಹುದು. ಆ ಸಂದರ್ಭದಲ್ಲಿ, ಅಪರಾಧಿಯು ಭಾರತದ ಸಂವಿಧಾನದ 21 ನೇ ವಿಧಿಯಡಿ ನೀಡಿರುವ ರಕ್ಷಣೆಯ ಮೂಲಭೂತ ಹಕ್ಕನ್ನು ಕಳೆದುಕೊಳ್ಳುವ ಮೂಲಕ ರಕ್ಷಣೆಯಿಲ್ಲದವನಾಗುತ್ತಾನೆ” ಎಂದು ಪಲನಿವೇಳು ತನ್ನ ಅರ್ಜಿಯಲ್ಲಿ ವಿವರಿಸಿದ್ದಾರೆ.

ರಜನಿಕಾಂತ್ ಮತ್ತು ಕಾಲಿವುಡ್ ಚಲನಚಿತ್ರಗಳಲ್ಲಿ ನಾಯಕನ ಆರಾಧನೆಯನ್ನು ಉತ್ತೇಜಿಸುವ ಪ್ರವೃತ್ತಿಯನ್ನು ಪಳನಿವೇಲು ಟೀಕಿಸಿದ್ದು, “ಸಿನಿಮಾವನ್ನು ಕೇವಲ ಮನರಂಜನೆ ಎಂದು ನಾವು ಕಡಿಮೆ ಅಂದಾಜು ಮಾಡಲು ಸಾಧ್ಯವಿಲ್ಲ. ಸಿನೆಮಾದಲ್ಲಿನ ವೈಭವೀಕರಣವು ನೈತಿಕ, ಕಲಾತ್ಮಕ ಮತ್ತು ಸಾಮಾಜಿಕ ಪ್ರಶ್ನೆಗಳನ್ನು ಹುಟ್ಟುಹಾಕುವ ಒಂದು ಸಂಕೀರ್ಣ ವಿದ್ಯಮಾನವಾಗಿದೆ. ಹಿಂಸಾಚಾರದಲ್ಲಿ ತೊಡಗುವ ಪಾತ್ರಗಳನ್ನು, ಆಕ್ರಮಣಕಾರಿ ಕ್ರಮಗಳ ಹೊರತಾಗಿಯೂ ವೀರರು, ಕೆಚ್ಚೆದೆಯ, ಪ್ರಶಂಸನೀಯ ಮತ್ತು ‘ಜೀವನಕ್ಕಿಂತ ದೊಡ್ಡವರು’ ಎಂದು ಚಿತ್ರಿಸಲಾಗುತ್ತಿದೆ. ವೇಟ್ಟೈಯಾನ್‌ ಸಿನಿಮಾದಲ್ಲೂ ‘ಎನ್‌ಕೌಂಟರ್’ ಹಿಂಸೆಯನ್ನು ಜನರ ಸಂರಕ್ಷಕನಂತೆ ಬಿಂಬಿಸಲಾಗಿದೆ” ಎಂದಿದ್ದಾರೆ.

ಸೌಜನ್ಯ : thenewsminute.com

ಇದನ್ನೂ ಓದಿ : ನವರಾತ್ರಿ | ಸುಪ್ರೀಂಕೋರ್ಟ್‌ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಇಲ್ಲ; ಪ್ರತಿಭಟನೆ ಹಿನ್ನಲೆ ನಿರ್ಧಾರ ವಾಪಾಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...