Homeಮುಖಪುಟರಜನಿಕಾಂತ್ ಅಭಿನಯದ 'ವೇಟ್ಟೈಯಾನ್‌' ಸಿನಿಮಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಿವೃತ್ತ ಬಸ್ ಕಂಡಕ್ಟರ್

ರಜನಿಕಾಂತ್ ಅಭಿನಯದ ‘ವೇಟ್ಟೈಯಾನ್‌’ ಸಿನಿಮಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಿವೃತ್ತ ಬಸ್ ಕಂಡಕ್ಟರ್

- Advertisement -
- Advertisement -

ಅಕ್ಟೋಬರ್ 10ರಂದು ಬಿಡುಗಡೆಯಾಗಲಿರುವ ರಜನಿಕಾಂತ್ ಅಭಿನಯದ ‘ವೇಟ್ಟೈಯಾನ್‌’ ಸಿನಿಮಾದ ಡೈಲಾಗ್‌ಗಳ ವಿರುದ್ಧ ತಮಿಳುನಾಡು ರಾಜ್ಯ ರಸ್ತೆ ಸಾರಿಗೆ ನಿಗಮದ ನಿವೃತ್ತ ನಿರ್ವಾಹಕರೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್‌ನಲ್ಲಿರುವ ಡೈಲಾಗ್‌ಗಳು ಪೊಲೀಸರ ಕಾನೂನುಬಾಹಿರ ಹತ್ಯೆ ಅಥವಾ ಎನ್‌ಕೌಂಟರ್‌ಗಳನ್ನು ವೈಭವೀಕರಿಸುತ್ತದೆ ಎಂದು ಪಳನಿವೇಲು ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದಾರೆ. ಈ ಸಂಬಂಧ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಪೊಲೀಸರ ಕಾನೂನು ಬಾಹಿರ ಕ್ರಮಗಳು, ಎನ್‌ಕೌಂಟರ್ ಹೆಸರಿನಲ್ಲಿ ಅವರು ಮಾಡುವ ಹತ್ಯೆಗಳನ್ನು “ಎನ್‌ಕೌಂಟರ್ ಕೇವಲ ಶಿಕ್ಷೆಯಲ್ಲ, ಅದು ಅಪರಾಧಗಳನ್ನು ತಡೆಗಟ್ಟುವ ಕ್ರಮ” ಎಂಬ ಸಿನಿಮಾದ ಡೈಲಾಗ್‌ ಮೂಲಕ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಅದು ‘ಅಸಂವಿಧಾನಿಕ’ ದೃಷ್ಟಿಕೋನವಾಗಿದೆ. ಕಾನೂನು ಬಾಹಿರ ಕ್ರಮಗಳನ್ನು ಗೌರವಿಸಲು ಪ್ರೇಕ್ಷಕರನ್ನು ಪ್ರೋತ್ಸಾಹಿಸುತ್ತದೆ ಎಂದು ಕಂಡಕ್ಟರ್ ಪಳನಿವೇಲು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದ್ದಾರೆ.

ತಮಿಳುನಾಡು ಸರ್ಕಾರ, ವೇಟ್ಟೈಯಾನ್‌ ನಿರ್ಮಾಪಕರಾದ ಲೈಕಾ ಪ್ರೊಡಕ್ಷನ್ಸ್ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ವಿರುದ್ಧ ಅರ್ಜಿ ಸಲ್ಲಿಸಿರುವ ಪಳನಿವೇಲು ಅವರು, ವಿವಾದಾತ್ಮಕ ಡೈಲಾಗ್‌ಗಳನ್ನು ತೆಗೆದು ಹಾಕುವವರೆಗೆ ಸಿನಿಮಾ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕು. ಸಿನಿಮಾಗೆ ನೀಡಿರುವ ‘ಯುಎ’ ಸರ್ಟಿಫಿಕೇಟ್ ಹಿಂಪಡೆದು ‘ಎ’ ಸರ್ಟಿಫಿಕೇಟ್ ನೀಡಲು ಸಿಬಿಎಫ್‌ಸಿ ಗೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದ್ದಾರೆ. ಮಧುರೈ ಪೀಠ ಮೂವರಿಗೂ ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ನೋಟಿಸ್ ಜಾರಿ ಮಾಡಿದೆ.

ವೇಟ್ಟೈಯಾನ್‌ ಸಿನಿಮಾದ ಮೊದಲ ಟೀಸರ್ ಸೆಪ್ಟೆಂಬರ್ 20ರಂದು ಬಿಡುಗಡೆಯಾಗಿತ್ತು. ಅಕ್ಟೋಬರ್ 2 ರಂದು ಅಂತಿಮ ಟ್ರೇಲರ್ ಬಿಡುಗಡೆಗೊಳಿಸಲಾಗಿದೆ. ಚಿತ್ರವು ಅಕ್ಟೋಬರ್ 10 ರಂದು ತೆರೆಗೆ ಬರಲಿದೆ. ರಜನಿಕಾಂತ್, ಮಂಜು ವಾರಿಯರ್, ಅಮಿತಾಬ್ ಬಚ್ಚನ್, ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ, ರಿತಿಕಾ ಸಿಂಗ್, ದುಶಾರ ವಿಜಯನ್ ಸಿನಿಮಾದಲ್ಲಿ ನಟಿಸಿದ್ದಾರೆ.

ಸಿನಿಮಾದಲ್ಲಿ ರಜನಿಕಾಂತ್ ಅವರ ‘ಪ್ರಸಿದ್ಧ ಎನ್‌ಕೌಂಟರ್ ಸ್ಪೆಷಲಿಸ್ಟ್’ ಎಂಬ ಪಾತ್ರದ ಕುರಿತು ಪಳನಿವೇಲು ತನ್ನ ಅರ್ಜಿಯಲ್ಲಿ ಪ್ರಶ್ನೆ ಎತ್ತಿದ್ದಾರೆ. ಎನ್‌ಕೌಂಟರ್ ಎನ್ನುವುದು ಅಪರಾಧಿಗಳು ಪೊಲೀಸರ ಮೇಲೆ ದಾಳಿ ಮಾಡಲು ಮುಂದಾದಾಗ ಗುಂಡು ಹಾರಿಸುವ ಮೂಲಕ ಅಥವಾ ಗುಂಡಿಕ್ಕಿ ಕೊಲ್ಲುವ ಮೂಲಕ ಆತ್ಮರಕ್ಷಣೆ ಮಾಡುವ ಪ್ರಕ್ರಿಯೆ. ಒಬ್ಬ ಪೋಲೀಸ್‌ ತನ್ನ ಸೇವಾವಧಿಯಲ್ಲಿ ಒಂದು ಅಥವಾ ಎರಡು ಬಾರಿ ಇಂತಹ ಅಹಿತಕರ ಘಟನೆಯನ್ನು ಎದುರಿಸಬಹುದು ಅಥವಾ ‘ಎನ್ಕೌಂಟರ್’ ಮಾಡಬಹುದು. ಯಾವುದೇ ಪೊಲೀಸರು ‘ಹೆಸರಾಂತ ಎನ್‌ಕೌಂಟರ್ ಸ್ಪೆಷಲಿಸ್ಟ್’ ಆಗಲು ಸಾಧ್ಯವಿಲ್ಲ” ಎಂದಿದ್ದಾರೆ.

“ಸಿನಿಮಾದ ಡೈಲಾಗ್‌ಗಳು ಸಂವಿಧಾನ ವಿರೋಧಿ ನೀತಿಯನ್ನು ವೈಭವೀಕರಿಸುತ್ತದೆ. ಇದಕ್ಕೆ ಅನುಮತಿ ನೀಡಿದರೆ, ಸಂವಿಧಾನದ ಮೌಲ್ಯಗಳು ಮನೋರಂಜನೆಯ ವಸ್ತುವಾಗಿ ಪ್ರಜಾಪ್ರಭುತ್ವದ ಅಡಿಪಾಯಕ್ಕೆ ಕುತ್ತು ತರಬಹುದು. ಅಸಂವಿಧಾನಿಕ ಡೈಲಾಗ್‌ಗಳ ಪ್ರದರ್ಶನಕ್ಕೆ ಅನುಮತಿಸಿದರೆ, ಜನರು ನ್ಯಾಯಾಂಗ ವಿಚಾರಣೆಯ ಮೂಲಕ ಅಪರಾಧಿಯನ್ನು ಕಂಬಿ ಹಿಂದೆ ತಳ್ಳುವ ಬದಲು, ಪ್ರತಿ ಕ್ರಿಮಿನಲ್ ಪ್ರಕರಣದಲ್ಲಿ ‘ಎನ್‌ಕೌಂಟರ್’ ಪರಿಹಾರವನ್ನು ಕೇಳಬಹುದು. ಆ ಸಂದರ್ಭದಲ್ಲಿ, ಅಪರಾಧಿಯು ಭಾರತದ ಸಂವಿಧಾನದ 21 ನೇ ವಿಧಿಯಡಿ ನೀಡಿರುವ ರಕ್ಷಣೆಯ ಮೂಲಭೂತ ಹಕ್ಕನ್ನು ಕಳೆದುಕೊಳ್ಳುವ ಮೂಲಕ ರಕ್ಷಣೆಯಿಲ್ಲದವನಾಗುತ್ತಾನೆ” ಎಂದು ಪಲನಿವೇಳು ತನ್ನ ಅರ್ಜಿಯಲ್ಲಿ ವಿವರಿಸಿದ್ದಾರೆ.

ರಜನಿಕಾಂತ್ ಮತ್ತು ಕಾಲಿವುಡ್ ಚಲನಚಿತ್ರಗಳಲ್ಲಿ ನಾಯಕನ ಆರಾಧನೆಯನ್ನು ಉತ್ತೇಜಿಸುವ ಪ್ರವೃತ್ತಿಯನ್ನು ಪಳನಿವೇಲು ಟೀಕಿಸಿದ್ದು, “ಸಿನಿಮಾವನ್ನು ಕೇವಲ ಮನರಂಜನೆ ಎಂದು ನಾವು ಕಡಿಮೆ ಅಂದಾಜು ಮಾಡಲು ಸಾಧ್ಯವಿಲ್ಲ. ಸಿನೆಮಾದಲ್ಲಿನ ವೈಭವೀಕರಣವು ನೈತಿಕ, ಕಲಾತ್ಮಕ ಮತ್ತು ಸಾಮಾಜಿಕ ಪ್ರಶ್ನೆಗಳನ್ನು ಹುಟ್ಟುಹಾಕುವ ಒಂದು ಸಂಕೀರ್ಣ ವಿದ್ಯಮಾನವಾಗಿದೆ. ಹಿಂಸಾಚಾರದಲ್ಲಿ ತೊಡಗುವ ಪಾತ್ರಗಳನ್ನು, ಆಕ್ರಮಣಕಾರಿ ಕ್ರಮಗಳ ಹೊರತಾಗಿಯೂ ವೀರರು, ಕೆಚ್ಚೆದೆಯ, ಪ್ರಶಂಸನೀಯ ಮತ್ತು ‘ಜೀವನಕ್ಕಿಂತ ದೊಡ್ಡವರು’ ಎಂದು ಚಿತ್ರಿಸಲಾಗುತ್ತಿದೆ. ವೇಟ್ಟೈಯಾನ್‌ ಸಿನಿಮಾದಲ್ಲೂ ‘ಎನ್‌ಕೌಂಟರ್’ ಹಿಂಸೆಯನ್ನು ಜನರ ಸಂರಕ್ಷಕನಂತೆ ಬಿಂಬಿಸಲಾಗಿದೆ” ಎಂದಿದ್ದಾರೆ.

ಸೌಜನ್ಯ : thenewsminute.com

ಇದನ್ನೂ ಓದಿ : ನವರಾತ್ರಿ | ಸುಪ್ರೀಂಕೋರ್ಟ್‌ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಇಲ್ಲ; ಪ್ರತಿಭಟನೆ ಹಿನ್ನಲೆ ನಿರ್ಧಾರ ವಾಪಾಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...