Homeಮುಖಪುಟರಜನಿಕಾಂತ್ ಅಭಿನಯದ 'ವೇಟ್ಟೈಯಾನ್‌' ಸಿನಿಮಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಿವೃತ್ತ ಬಸ್ ಕಂಡಕ್ಟರ್

ರಜನಿಕಾಂತ್ ಅಭಿನಯದ ‘ವೇಟ್ಟೈಯಾನ್‌’ ಸಿನಿಮಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಿವೃತ್ತ ಬಸ್ ಕಂಡಕ್ಟರ್

- Advertisement -
- Advertisement -

ಅಕ್ಟೋಬರ್ 10ರಂದು ಬಿಡುಗಡೆಯಾಗಲಿರುವ ರಜನಿಕಾಂತ್ ಅಭಿನಯದ ‘ವೇಟ್ಟೈಯಾನ್‌’ ಸಿನಿಮಾದ ಡೈಲಾಗ್‌ಗಳ ವಿರುದ್ಧ ತಮಿಳುನಾಡು ರಾಜ್ಯ ರಸ್ತೆ ಸಾರಿಗೆ ನಿಗಮದ ನಿವೃತ್ತ ನಿರ್ವಾಹಕರೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್‌ನಲ್ಲಿರುವ ಡೈಲಾಗ್‌ಗಳು ಪೊಲೀಸರ ಕಾನೂನುಬಾಹಿರ ಹತ್ಯೆ ಅಥವಾ ಎನ್‌ಕೌಂಟರ್‌ಗಳನ್ನು ವೈಭವೀಕರಿಸುತ್ತದೆ ಎಂದು ಪಳನಿವೇಲು ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದಾರೆ. ಈ ಸಂಬಂಧ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಪೊಲೀಸರ ಕಾನೂನು ಬಾಹಿರ ಕ್ರಮಗಳು, ಎನ್‌ಕೌಂಟರ್ ಹೆಸರಿನಲ್ಲಿ ಅವರು ಮಾಡುವ ಹತ್ಯೆಗಳನ್ನು “ಎನ್‌ಕೌಂಟರ್ ಕೇವಲ ಶಿಕ್ಷೆಯಲ್ಲ, ಅದು ಅಪರಾಧಗಳನ್ನು ತಡೆಗಟ್ಟುವ ಕ್ರಮ” ಎಂಬ ಸಿನಿಮಾದ ಡೈಲಾಗ್‌ ಮೂಲಕ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಅದು ‘ಅಸಂವಿಧಾನಿಕ’ ದೃಷ್ಟಿಕೋನವಾಗಿದೆ. ಕಾನೂನು ಬಾಹಿರ ಕ್ರಮಗಳನ್ನು ಗೌರವಿಸಲು ಪ್ರೇಕ್ಷಕರನ್ನು ಪ್ರೋತ್ಸಾಹಿಸುತ್ತದೆ ಎಂದು ಕಂಡಕ್ಟರ್ ಪಳನಿವೇಲು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದ್ದಾರೆ.

ತಮಿಳುನಾಡು ಸರ್ಕಾರ, ವೇಟ್ಟೈಯಾನ್‌ ನಿರ್ಮಾಪಕರಾದ ಲೈಕಾ ಪ್ರೊಡಕ್ಷನ್ಸ್ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ವಿರುದ್ಧ ಅರ್ಜಿ ಸಲ್ಲಿಸಿರುವ ಪಳನಿವೇಲು ಅವರು, ವಿವಾದಾತ್ಮಕ ಡೈಲಾಗ್‌ಗಳನ್ನು ತೆಗೆದು ಹಾಕುವವರೆಗೆ ಸಿನಿಮಾ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕು. ಸಿನಿಮಾಗೆ ನೀಡಿರುವ ‘ಯುಎ’ ಸರ್ಟಿಫಿಕೇಟ್ ಹಿಂಪಡೆದು ‘ಎ’ ಸರ್ಟಿಫಿಕೇಟ್ ನೀಡಲು ಸಿಬಿಎಫ್‌ಸಿ ಗೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದ್ದಾರೆ. ಮಧುರೈ ಪೀಠ ಮೂವರಿಗೂ ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ನೋಟಿಸ್ ಜಾರಿ ಮಾಡಿದೆ.

ವೇಟ್ಟೈಯಾನ್‌ ಸಿನಿಮಾದ ಮೊದಲ ಟೀಸರ್ ಸೆಪ್ಟೆಂಬರ್ 20ರಂದು ಬಿಡುಗಡೆಯಾಗಿತ್ತು. ಅಕ್ಟೋಬರ್ 2 ರಂದು ಅಂತಿಮ ಟ್ರೇಲರ್ ಬಿಡುಗಡೆಗೊಳಿಸಲಾಗಿದೆ. ಚಿತ್ರವು ಅಕ್ಟೋಬರ್ 10 ರಂದು ತೆರೆಗೆ ಬರಲಿದೆ. ರಜನಿಕಾಂತ್, ಮಂಜು ವಾರಿಯರ್, ಅಮಿತಾಬ್ ಬಚ್ಚನ್, ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ, ರಿತಿಕಾ ಸಿಂಗ್, ದುಶಾರ ವಿಜಯನ್ ಸಿನಿಮಾದಲ್ಲಿ ನಟಿಸಿದ್ದಾರೆ.

ಸಿನಿಮಾದಲ್ಲಿ ರಜನಿಕಾಂತ್ ಅವರ ‘ಪ್ರಸಿದ್ಧ ಎನ್‌ಕೌಂಟರ್ ಸ್ಪೆಷಲಿಸ್ಟ್’ ಎಂಬ ಪಾತ್ರದ ಕುರಿತು ಪಳನಿವೇಲು ತನ್ನ ಅರ್ಜಿಯಲ್ಲಿ ಪ್ರಶ್ನೆ ಎತ್ತಿದ್ದಾರೆ. ಎನ್‌ಕೌಂಟರ್ ಎನ್ನುವುದು ಅಪರಾಧಿಗಳು ಪೊಲೀಸರ ಮೇಲೆ ದಾಳಿ ಮಾಡಲು ಮುಂದಾದಾಗ ಗುಂಡು ಹಾರಿಸುವ ಮೂಲಕ ಅಥವಾ ಗುಂಡಿಕ್ಕಿ ಕೊಲ್ಲುವ ಮೂಲಕ ಆತ್ಮರಕ್ಷಣೆ ಮಾಡುವ ಪ್ರಕ್ರಿಯೆ. ಒಬ್ಬ ಪೋಲೀಸ್‌ ತನ್ನ ಸೇವಾವಧಿಯಲ್ಲಿ ಒಂದು ಅಥವಾ ಎರಡು ಬಾರಿ ಇಂತಹ ಅಹಿತಕರ ಘಟನೆಯನ್ನು ಎದುರಿಸಬಹುದು ಅಥವಾ ‘ಎನ್ಕೌಂಟರ್’ ಮಾಡಬಹುದು. ಯಾವುದೇ ಪೊಲೀಸರು ‘ಹೆಸರಾಂತ ಎನ್‌ಕೌಂಟರ್ ಸ್ಪೆಷಲಿಸ್ಟ್’ ಆಗಲು ಸಾಧ್ಯವಿಲ್ಲ” ಎಂದಿದ್ದಾರೆ.

“ಸಿನಿಮಾದ ಡೈಲಾಗ್‌ಗಳು ಸಂವಿಧಾನ ವಿರೋಧಿ ನೀತಿಯನ್ನು ವೈಭವೀಕರಿಸುತ್ತದೆ. ಇದಕ್ಕೆ ಅನುಮತಿ ನೀಡಿದರೆ, ಸಂವಿಧಾನದ ಮೌಲ್ಯಗಳು ಮನೋರಂಜನೆಯ ವಸ್ತುವಾಗಿ ಪ್ರಜಾಪ್ರಭುತ್ವದ ಅಡಿಪಾಯಕ್ಕೆ ಕುತ್ತು ತರಬಹುದು. ಅಸಂವಿಧಾನಿಕ ಡೈಲಾಗ್‌ಗಳ ಪ್ರದರ್ಶನಕ್ಕೆ ಅನುಮತಿಸಿದರೆ, ಜನರು ನ್ಯಾಯಾಂಗ ವಿಚಾರಣೆಯ ಮೂಲಕ ಅಪರಾಧಿಯನ್ನು ಕಂಬಿ ಹಿಂದೆ ತಳ್ಳುವ ಬದಲು, ಪ್ರತಿ ಕ್ರಿಮಿನಲ್ ಪ್ರಕರಣದಲ್ಲಿ ‘ಎನ್‌ಕೌಂಟರ್’ ಪರಿಹಾರವನ್ನು ಕೇಳಬಹುದು. ಆ ಸಂದರ್ಭದಲ್ಲಿ, ಅಪರಾಧಿಯು ಭಾರತದ ಸಂವಿಧಾನದ 21 ನೇ ವಿಧಿಯಡಿ ನೀಡಿರುವ ರಕ್ಷಣೆಯ ಮೂಲಭೂತ ಹಕ್ಕನ್ನು ಕಳೆದುಕೊಳ್ಳುವ ಮೂಲಕ ರಕ್ಷಣೆಯಿಲ್ಲದವನಾಗುತ್ತಾನೆ” ಎಂದು ಪಲನಿವೇಳು ತನ್ನ ಅರ್ಜಿಯಲ್ಲಿ ವಿವರಿಸಿದ್ದಾರೆ.

ರಜನಿಕಾಂತ್ ಮತ್ತು ಕಾಲಿವುಡ್ ಚಲನಚಿತ್ರಗಳಲ್ಲಿ ನಾಯಕನ ಆರಾಧನೆಯನ್ನು ಉತ್ತೇಜಿಸುವ ಪ್ರವೃತ್ತಿಯನ್ನು ಪಳನಿವೇಲು ಟೀಕಿಸಿದ್ದು, “ಸಿನಿಮಾವನ್ನು ಕೇವಲ ಮನರಂಜನೆ ಎಂದು ನಾವು ಕಡಿಮೆ ಅಂದಾಜು ಮಾಡಲು ಸಾಧ್ಯವಿಲ್ಲ. ಸಿನೆಮಾದಲ್ಲಿನ ವೈಭವೀಕರಣವು ನೈತಿಕ, ಕಲಾತ್ಮಕ ಮತ್ತು ಸಾಮಾಜಿಕ ಪ್ರಶ್ನೆಗಳನ್ನು ಹುಟ್ಟುಹಾಕುವ ಒಂದು ಸಂಕೀರ್ಣ ವಿದ್ಯಮಾನವಾಗಿದೆ. ಹಿಂಸಾಚಾರದಲ್ಲಿ ತೊಡಗುವ ಪಾತ್ರಗಳನ್ನು, ಆಕ್ರಮಣಕಾರಿ ಕ್ರಮಗಳ ಹೊರತಾಗಿಯೂ ವೀರರು, ಕೆಚ್ಚೆದೆಯ, ಪ್ರಶಂಸನೀಯ ಮತ್ತು ‘ಜೀವನಕ್ಕಿಂತ ದೊಡ್ಡವರು’ ಎಂದು ಚಿತ್ರಿಸಲಾಗುತ್ತಿದೆ. ವೇಟ್ಟೈಯಾನ್‌ ಸಿನಿಮಾದಲ್ಲೂ ‘ಎನ್‌ಕೌಂಟರ್’ ಹಿಂಸೆಯನ್ನು ಜನರ ಸಂರಕ್ಷಕನಂತೆ ಬಿಂಬಿಸಲಾಗಿದೆ” ಎಂದಿದ್ದಾರೆ.

ಸೌಜನ್ಯ : thenewsminute.com

ಇದನ್ನೂ ಓದಿ : ನವರಾತ್ರಿ | ಸುಪ್ರೀಂಕೋರ್ಟ್‌ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಇಲ್ಲ; ಪ್ರತಿಭಟನೆ ಹಿನ್ನಲೆ ನಿರ್ಧಾರ ವಾಪಾಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....