Homeಮುಖಪುಟರಜನಿಕಾಂತ್ ಅಭಿನಯದ 'ವೇಟ್ಟೈಯಾನ್‌' ಸಿನಿಮಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಿವೃತ್ತ ಬಸ್ ಕಂಡಕ್ಟರ್

ರಜನಿಕಾಂತ್ ಅಭಿನಯದ ‘ವೇಟ್ಟೈಯಾನ್‌’ ಸಿನಿಮಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಿವೃತ್ತ ಬಸ್ ಕಂಡಕ್ಟರ್

- Advertisement -
- Advertisement -

ಅಕ್ಟೋಬರ್ 10ರಂದು ಬಿಡುಗಡೆಯಾಗಲಿರುವ ರಜನಿಕಾಂತ್ ಅಭಿನಯದ ‘ವೇಟ್ಟೈಯಾನ್‌’ ಸಿನಿಮಾದ ಡೈಲಾಗ್‌ಗಳ ವಿರುದ್ಧ ತಮಿಳುನಾಡು ರಾಜ್ಯ ರಸ್ತೆ ಸಾರಿಗೆ ನಿಗಮದ ನಿವೃತ್ತ ನಿರ್ವಾಹಕರೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್‌ನಲ್ಲಿರುವ ಡೈಲಾಗ್‌ಗಳು ಪೊಲೀಸರ ಕಾನೂನುಬಾಹಿರ ಹತ್ಯೆ ಅಥವಾ ಎನ್‌ಕೌಂಟರ್‌ಗಳನ್ನು ವೈಭವೀಕರಿಸುತ್ತದೆ ಎಂದು ಪಳನಿವೇಲು ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದಾರೆ. ಈ ಸಂಬಂಧ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಪೊಲೀಸರ ಕಾನೂನು ಬಾಹಿರ ಕ್ರಮಗಳು, ಎನ್‌ಕೌಂಟರ್ ಹೆಸರಿನಲ್ಲಿ ಅವರು ಮಾಡುವ ಹತ್ಯೆಗಳನ್ನು “ಎನ್‌ಕೌಂಟರ್ ಕೇವಲ ಶಿಕ್ಷೆಯಲ್ಲ, ಅದು ಅಪರಾಧಗಳನ್ನು ತಡೆಗಟ್ಟುವ ಕ್ರಮ” ಎಂಬ ಸಿನಿಮಾದ ಡೈಲಾಗ್‌ ಮೂಲಕ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಅದು ‘ಅಸಂವಿಧಾನಿಕ’ ದೃಷ್ಟಿಕೋನವಾಗಿದೆ. ಕಾನೂನು ಬಾಹಿರ ಕ್ರಮಗಳನ್ನು ಗೌರವಿಸಲು ಪ್ರೇಕ್ಷಕರನ್ನು ಪ್ರೋತ್ಸಾಹಿಸುತ್ತದೆ ಎಂದು ಕಂಡಕ್ಟರ್ ಪಳನಿವೇಲು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದ್ದಾರೆ.

ತಮಿಳುನಾಡು ಸರ್ಕಾರ, ವೇಟ್ಟೈಯಾನ್‌ ನಿರ್ಮಾಪಕರಾದ ಲೈಕಾ ಪ್ರೊಡಕ್ಷನ್ಸ್ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ವಿರುದ್ಧ ಅರ್ಜಿ ಸಲ್ಲಿಸಿರುವ ಪಳನಿವೇಲು ಅವರು, ವಿವಾದಾತ್ಮಕ ಡೈಲಾಗ್‌ಗಳನ್ನು ತೆಗೆದು ಹಾಕುವವರೆಗೆ ಸಿನಿಮಾ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕು. ಸಿನಿಮಾಗೆ ನೀಡಿರುವ ‘ಯುಎ’ ಸರ್ಟಿಫಿಕೇಟ್ ಹಿಂಪಡೆದು ‘ಎ’ ಸರ್ಟಿಫಿಕೇಟ್ ನೀಡಲು ಸಿಬಿಎಫ್‌ಸಿ ಗೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದ್ದಾರೆ. ಮಧುರೈ ಪೀಠ ಮೂವರಿಗೂ ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ನೋಟಿಸ್ ಜಾರಿ ಮಾಡಿದೆ.

ವೇಟ್ಟೈಯಾನ್‌ ಸಿನಿಮಾದ ಮೊದಲ ಟೀಸರ್ ಸೆಪ್ಟೆಂಬರ್ 20ರಂದು ಬಿಡುಗಡೆಯಾಗಿತ್ತು. ಅಕ್ಟೋಬರ್ 2 ರಂದು ಅಂತಿಮ ಟ್ರೇಲರ್ ಬಿಡುಗಡೆಗೊಳಿಸಲಾಗಿದೆ. ಚಿತ್ರವು ಅಕ್ಟೋಬರ್ 10 ರಂದು ತೆರೆಗೆ ಬರಲಿದೆ. ರಜನಿಕಾಂತ್, ಮಂಜು ವಾರಿಯರ್, ಅಮಿತಾಬ್ ಬಚ್ಚನ್, ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ, ರಿತಿಕಾ ಸಿಂಗ್, ದುಶಾರ ವಿಜಯನ್ ಸಿನಿಮಾದಲ್ಲಿ ನಟಿಸಿದ್ದಾರೆ.

ಸಿನಿಮಾದಲ್ಲಿ ರಜನಿಕಾಂತ್ ಅವರ ‘ಪ್ರಸಿದ್ಧ ಎನ್‌ಕೌಂಟರ್ ಸ್ಪೆಷಲಿಸ್ಟ್’ ಎಂಬ ಪಾತ್ರದ ಕುರಿತು ಪಳನಿವೇಲು ತನ್ನ ಅರ್ಜಿಯಲ್ಲಿ ಪ್ರಶ್ನೆ ಎತ್ತಿದ್ದಾರೆ. ಎನ್‌ಕೌಂಟರ್ ಎನ್ನುವುದು ಅಪರಾಧಿಗಳು ಪೊಲೀಸರ ಮೇಲೆ ದಾಳಿ ಮಾಡಲು ಮುಂದಾದಾಗ ಗುಂಡು ಹಾರಿಸುವ ಮೂಲಕ ಅಥವಾ ಗುಂಡಿಕ್ಕಿ ಕೊಲ್ಲುವ ಮೂಲಕ ಆತ್ಮರಕ್ಷಣೆ ಮಾಡುವ ಪ್ರಕ್ರಿಯೆ. ಒಬ್ಬ ಪೋಲೀಸ್‌ ತನ್ನ ಸೇವಾವಧಿಯಲ್ಲಿ ಒಂದು ಅಥವಾ ಎರಡು ಬಾರಿ ಇಂತಹ ಅಹಿತಕರ ಘಟನೆಯನ್ನು ಎದುರಿಸಬಹುದು ಅಥವಾ ‘ಎನ್ಕೌಂಟರ್’ ಮಾಡಬಹುದು. ಯಾವುದೇ ಪೊಲೀಸರು ‘ಹೆಸರಾಂತ ಎನ್‌ಕೌಂಟರ್ ಸ್ಪೆಷಲಿಸ್ಟ್’ ಆಗಲು ಸಾಧ್ಯವಿಲ್ಲ” ಎಂದಿದ್ದಾರೆ.

“ಸಿನಿಮಾದ ಡೈಲಾಗ್‌ಗಳು ಸಂವಿಧಾನ ವಿರೋಧಿ ನೀತಿಯನ್ನು ವೈಭವೀಕರಿಸುತ್ತದೆ. ಇದಕ್ಕೆ ಅನುಮತಿ ನೀಡಿದರೆ, ಸಂವಿಧಾನದ ಮೌಲ್ಯಗಳು ಮನೋರಂಜನೆಯ ವಸ್ತುವಾಗಿ ಪ್ರಜಾಪ್ರಭುತ್ವದ ಅಡಿಪಾಯಕ್ಕೆ ಕುತ್ತು ತರಬಹುದು. ಅಸಂವಿಧಾನಿಕ ಡೈಲಾಗ್‌ಗಳ ಪ್ರದರ್ಶನಕ್ಕೆ ಅನುಮತಿಸಿದರೆ, ಜನರು ನ್ಯಾಯಾಂಗ ವಿಚಾರಣೆಯ ಮೂಲಕ ಅಪರಾಧಿಯನ್ನು ಕಂಬಿ ಹಿಂದೆ ತಳ್ಳುವ ಬದಲು, ಪ್ರತಿ ಕ್ರಿಮಿನಲ್ ಪ್ರಕರಣದಲ್ಲಿ ‘ಎನ್‌ಕೌಂಟರ್’ ಪರಿಹಾರವನ್ನು ಕೇಳಬಹುದು. ಆ ಸಂದರ್ಭದಲ್ಲಿ, ಅಪರಾಧಿಯು ಭಾರತದ ಸಂವಿಧಾನದ 21 ನೇ ವಿಧಿಯಡಿ ನೀಡಿರುವ ರಕ್ಷಣೆಯ ಮೂಲಭೂತ ಹಕ್ಕನ್ನು ಕಳೆದುಕೊಳ್ಳುವ ಮೂಲಕ ರಕ್ಷಣೆಯಿಲ್ಲದವನಾಗುತ್ತಾನೆ” ಎಂದು ಪಲನಿವೇಳು ತನ್ನ ಅರ್ಜಿಯಲ್ಲಿ ವಿವರಿಸಿದ್ದಾರೆ.

ರಜನಿಕಾಂತ್ ಮತ್ತು ಕಾಲಿವುಡ್ ಚಲನಚಿತ್ರಗಳಲ್ಲಿ ನಾಯಕನ ಆರಾಧನೆಯನ್ನು ಉತ್ತೇಜಿಸುವ ಪ್ರವೃತ್ತಿಯನ್ನು ಪಳನಿವೇಲು ಟೀಕಿಸಿದ್ದು, “ಸಿನಿಮಾವನ್ನು ಕೇವಲ ಮನರಂಜನೆ ಎಂದು ನಾವು ಕಡಿಮೆ ಅಂದಾಜು ಮಾಡಲು ಸಾಧ್ಯವಿಲ್ಲ. ಸಿನೆಮಾದಲ್ಲಿನ ವೈಭವೀಕರಣವು ನೈತಿಕ, ಕಲಾತ್ಮಕ ಮತ್ತು ಸಾಮಾಜಿಕ ಪ್ರಶ್ನೆಗಳನ್ನು ಹುಟ್ಟುಹಾಕುವ ಒಂದು ಸಂಕೀರ್ಣ ವಿದ್ಯಮಾನವಾಗಿದೆ. ಹಿಂಸಾಚಾರದಲ್ಲಿ ತೊಡಗುವ ಪಾತ್ರಗಳನ್ನು, ಆಕ್ರಮಣಕಾರಿ ಕ್ರಮಗಳ ಹೊರತಾಗಿಯೂ ವೀರರು, ಕೆಚ್ಚೆದೆಯ, ಪ್ರಶಂಸನೀಯ ಮತ್ತು ‘ಜೀವನಕ್ಕಿಂತ ದೊಡ್ಡವರು’ ಎಂದು ಚಿತ್ರಿಸಲಾಗುತ್ತಿದೆ. ವೇಟ್ಟೈಯಾನ್‌ ಸಿನಿಮಾದಲ್ಲೂ ‘ಎನ್‌ಕೌಂಟರ್’ ಹಿಂಸೆಯನ್ನು ಜನರ ಸಂರಕ್ಷಕನಂತೆ ಬಿಂಬಿಸಲಾಗಿದೆ” ಎಂದಿದ್ದಾರೆ.

ಸೌಜನ್ಯ : thenewsminute.com

ಇದನ್ನೂ ಓದಿ : ನವರಾತ್ರಿ | ಸುಪ್ರೀಂಕೋರ್ಟ್‌ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಇಲ್ಲ; ಪ್ರತಿಭಟನೆ ಹಿನ್ನಲೆ ನಿರ್ಧಾರ ವಾಪಾಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...