Homeಅಂತರಾಷ್ಟ್ರೀಯಗಾಝಾದಲ್ಲಿ ಭಾರತೀಯ ಸೇನಾ ನಿವೃತ್ತ ಅಧಿಕಾರಿಯನ್ನು ಹತ್ಯೆ ಮಾಡಿದ ಇಸ್ರೇಲ್‌

ಗಾಝಾದಲ್ಲಿ ಭಾರತೀಯ ಸೇನಾ ನಿವೃತ್ತ ಅಧಿಕಾರಿಯನ್ನು ಹತ್ಯೆ ಮಾಡಿದ ಇಸ್ರೇಲ್‌

- Advertisement -
- Advertisement -

ರಫಾದಲ್ಲಿ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಭಾರತೀಯ ಸೇನಾ ನಿವೃತ್ತ ಅಧಿಕಾರಿ ಕರ್ನಲ್ ವೈಭವ್ ಅನಿಲ್ ಕಾಳೆ ಮೃತಪಟ್ಟಿದ್ದು, ಇಸ್ರೇಲ್‌ ಗಾಝಾದಲ್ಲಿ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಮೊದಲ ಬಾರಿಗೆ ಭಾರತೀಯನೋರ್ವ ಬಲಿಯಾಗಿದ್ದಾರೆ.

ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಭಾರತೀಯ ಸೇನೆಯ ನಿವೃತ್ತ ಕರ್ನಲ್ ವೈಭವ್ ಅನಿಲ್ ಕಾಳೆ (46) ಮೃತರು. ಇವರು ವಿಶ್ವಸಂಸ್ಥೆಯ ವಾಹನದಲ್ಲಿ ರಾಫಾದಲ್ಲಿರುವ ಯುರೋಪಿಯನ್ ಆಸ್ಪತ್ರೆಗೆ ಪ್ರಯಾಣಿಸುತ್ತಿದ್ದಾಗ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

ಯುನೈಟೆಡ್ ನೇಷನ್ಸ್ ಡಿಪಾರ್ಟ್ಮೆಂಟ್ ಆಫ್ ಸೇಫ್ಟಿ ಅಂಡ್ ಸೆಕ್ಯುರಿಟಿ (ಡಿಎಸ್ಎಸ್) ನ ಸಿಬ್ಬಂದಿ ಸದಸ್ಯರಾಗಿರುವ ಅವರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ಕುಟುಂಬ ಪುಣೆಯಲ್ಲಿ ವಾಸಿಸುತ್ತಿದೆ. ಘಟನೆಯಲ್ಲಿ ಕಾಳೆ ಜತೆಗಿದ್ದ ಮತ್ತೋರ್ವ ಡಿಎಸ್‌ಎಸ್ ಸಿಬ್ಬಂದಿ ಕೂಡ ಗಾಯಗೊಂಡಿದ್ದಾರೆ.

2022ರಲ್ಲಿ ಸೈನ್ಯದಿಂದ ನಿವೃತ್ತರಾದ ಅನಿಲ್ ಕಾಳೆ ಎರಡು ತಿಂಗಳ ಹಿಂದೆ ಯುಎನ್‌ಡಿಎಸ್‌ಎಸ್‌ಗೆ ಭದ್ರತಾ ಸಮನ್ವಯ ಅಧಿಕಾರಿಯಾಗಿ ಸೇರಿಕೊಂಡಿದ್ದರು ಮತ್ತು ಒಂದು ತಿಂಗಳ ಹಿಂದೆ ಗಾಝಾಗೆ ತೆರಳಿದ್ದರು. ವಿಶ್ವಸಂಸ್ಥೆಯ ವಾಹನದಲ್ಲಿ ನಾಮಫಲಕವಿದ್ದರೂ ದಾಳಿ ನಡೆಸಲಾಗಿದೆ. ಹಮಾಸ್-ಇಸ್ರೇಲ್ ಯುದ್ಧ ಘೋಷಣೆ ಬಳಿಕ ಸಂಭವಿಸಿದ ಜಾಗತಿಕ ಸಂಸ್ಥೆಯ ಮೊಟ್ಟಮೊದಲ ಅಂತರಾಷ್ಟ್ರೀಯ ಯೋಧನ ಸಾವು ಇದಾಗಿದೆ.

ಈ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರಸ್, ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು. ಮಾನವೀಯ ಕಾರ್ಯಕರ್ತರನ್ನು ರಕ್ಷಿಸಬೇಕು ಎಂದು ಹೇಳಿದ್ದಾರೆ.

ಅನಿಲ್ ಕಾಳೆ ಎರಡು ದಶಕಗಳಿಗೂ ಹೆಚ್ಚು ಕಾಲ ಮಿಲಿಟರಿ ಪಡೆಯಲ್ಲಿ ಕೆಲಸ ನಿರ್ವಹಿಸಿದ್ದರು. ಭಾರತೀಯ ಸೇನಾ ಅಕಾಡೆಮಿಯಲ್ಲಿ ಉತ್ತೀರ್ಣರಾದ ಬಳಿಕ 11 ಜಮ್ಮು & ಕಾಶ್ಮೀರ ರೈಫಲ್‌ನಲ್ಲಿ ನಿಯೋಜಿತರಾದ ಕಾಳೆ, ಕಾಶ್ಮೀರ ಮತ್ತು ಈಶಾನ್ಯ ಭಾರತ ಸೇರಿದಂತೆ ದೇಶದ ವಿವಿಧೆಡೆ ಸೇವೆ ಸಲ್ಲಿಸಿದ್ದರು. 2022ರಲ್ಲಿ ಅವಧಿಪೂರ್ವ ನಿವೃತ್ತಿ ಪಡೆದಿದ್ದರು.

ಇಸ್ರೇಲ್‌- ಗಾಝಾ ಮೇಲೆ ಕಳೆದ 8 ತಿಂಗಳಿನಿಂದ ದಾಳಿಯನ್ನು ನಡೆಸುತ್ತಿದ್ದು, ಮೃತರ ಸಂಖ್ಯೆ 35,000 ದಾಟಿದೆ. ಗಾಝಾದಲ್ಲಿ ಹತ್ಯಾಕಾಂಡ ಮುಂದುವರಿಸಿರುವ ಇಸ್ರೇಲ್‌, ಗಾಝಾದ ನಿರಾಶ್ರಿತರು ಆಶ್ರಯವನ್ನು ಪಡೆದುಕೊಂಡಿರುವ ರಫಾ ಮೇಲೆ ದಾಳಿಯನ್ನು ನಡೆಸುತ್ತಿದೆ. ಗಾಝಾದ ಉತ್ತರ ಪ್ರಾಂತವನ್ನು ಮರಳಿ ವಶಪಡಿಸಿಕೊಳ್ಳುವ ಜೊತೆಗೆ ದಕ್ಷಿಣ ಗಾಝಾದ ರಫಾ ನಗರದ ಮೇಲೆ ಆಕ್ರಮಣ ನಡೆಸುವ ಜಂಟಿ ಕಾರ್ಯಾಚರಣೆಯನ್ನು ಇಸ್ರೇಲ್ ತೀವ್ರಗೊಳಿಸಿದೆ.

ರಫಾ ನಗರವನ್ನು ಸಂಪರ್ಕಿಸುವ ಹೆದ್ದಾರಿಯಲ್ಲಿ ಇಸ್ರೇಲ್‍ನ ಯುದ್ಧಟ್ಯಾಂಕ್‌ಗಳಿದ್ದು, ಇಸ್ರೇಲ್‌ ಆಕ್ರಮಣ ಮುಂದುವರಿಯುತ್ತಿದೆ ಎಂದು ವರದಿ ಹೇಳಿದೆ. ಗಾಝಾದ ಉತ್ತರ ಮತ್ತು ದಕ್ಷಿಣ ಪ್ರದೇಶಗಳಲ್ಲಿ ಸಾವಿರಾರು ಫೆಲೆಸ್ತೀನಿಯರು ಅತಂತ್ರ ಸ್ಥಿತಿಯಲ್ಲಿದ್ದು ಮಾನವೀಯ ಬಿಕ್ಕಟ್ಟು ಮತ್ತಷ್ಟು ಹದಗೆಡಲಿದೆ ಎಂದು ವಿಶ್ವಸಂಸ್ಥೆ ಎಚ್ಚರಿಸಿವೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...