Homeಅಂತರಾಷ್ಟ್ರೀಯಗಾಝಾದಲ್ಲಿ ಭಾರತೀಯ ಸೇನಾ ನಿವೃತ್ತ ಅಧಿಕಾರಿಯನ್ನು ಹತ್ಯೆ ಮಾಡಿದ ಇಸ್ರೇಲ್‌

ಗಾಝಾದಲ್ಲಿ ಭಾರತೀಯ ಸೇನಾ ನಿವೃತ್ತ ಅಧಿಕಾರಿಯನ್ನು ಹತ್ಯೆ ಮಾಡಿದ ಇಸ್ರೇಲ್‌

- Advertisement -
- Advertisement -

ರಫಾದಲ್ಲಿ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಭಾರತೀಯ ಸೇನಾ ನಿವೃತ್ತ ಅಧಿಕಾರಿ ಕರ್ನಲ್ ವೈಭವ್ ಅನಿಲ್ ಕಾಳೆ ಮೃತಪಟ್ಟಿದ್ದು, ಇಸ್ರೇಲ್‌ ಗಾಝಾದಲ್ಲಿ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಮೊದಲ ಬಾರಿಗೆ ಭಾರತೀಯನೋರ್ವ ಬಲಿಯಾಗಿದ್ದಾರೆ.

ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಭಾರತೀಯ ಸೇನೆಯ ನಿವೃತ್ತ ಕರ್ನಲ್ ವೈಭವ್ ಅನಿಲ್ ಕಾಳೆ (46) ಮೃತರು. ಇವರು ವಿಶ್ವಸಂಸ್ಥೆಯ ವಾಹನದಲ್ಲಿ ರಾಫಾದಲ್ಲಿರುವ ಯುರೋಪಿಯನ್ ಆಸ್ಪತ್ರೆಗೆ ಪ್ರಯಾಣಿಸುತ್ತಿದ್ದಾಗ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

ಯುನೈಟೆಡ್ ನೇಷನ್ಸ್ ಡಿಪಾರ್ಟ್ಮೆಂಟ್ ಆಫ್ ಸೇಫ್ಟಿ ಅಂಡ್ ಸೆಕ್ಯುರಿಟಿ (ಡಿಎಸ್ಎಸ್) ನ ಸಿಬ್ಬಂದಿ ಸದಸ್ಯರಾಗಿರುವ ಅವರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ಕುಟುಂಬ ಪುಣೆಯಲ್ಲಿ ವಾಸಿಸುತ್ತಿದೆ. ಘಟನೆಯಲ್ಲಿ ಕಾಳೆ ಜತೆಗಿದ್ದ ಮತ್ತೋರ್ವ ಡಿಎಸ್‌ಎಸ್ ಸಿಬ್ಬಂದಿ ಕೂಡ ಗಾಯಗೊಂಡಿದ್ದಾರೆ.

2022ರಲ್ಲಿ ಸೈನ್ಯದಿಂದ ನಿವೃತ್ತರಾದ ಅನಿಲ್ ಕಾಳೆ ಎರಡು ತಿಂಗಳ ಹಿಂದೆ ಯುಎನ್‌ಡಿಎಸ್‌ಎಸ್‌ಗೆ ಭದ್ರತಾ ಸಮನ್ವಯ ಅಧಿಕಾರಿಯಾಗಿ ಸೇರಿಕೊಂಡಿದ್ದರು ಮತ್ತು ಒಂದು ತಿಂಗಳ ಹಿಂದೆ ಗಾಝಾಗೆ ತೆರಳಿದ್ದರು. ವಿಶ್ವಸಂಸ್ಥೆಯ ವಾಹನದಲ್ಲಿ ನಾಮಫಲಕವಿದ್ದರೂ ದಾಳಿ ನಡೆಸಲಾಗಿದೆ. ಹಮಾಸ್-ಇಸ್ರೇಲ್ ಯುದ್ಧ ಘೋಷಣೆ ಬಳಿಕ ಸಂಭವಿಸಿದ ಜಾಗತಿಕ ಸಂಸ್ಥೆಯ ಮೊಟ್ಟಮೊದಲ ಅಂತರಾಷ್ಟ್ರೀಯ ಯೋಧನ ಸಾವು ಇದಾಗಿದೆ.

ಈ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರಸ್, ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು. ಮಾನವೀಯ ಕಾರ್ಯಕರ್ತರನ್ನು ರಕ್ಷಿಸಬೇಕು ಎಂದು ಹೇಳಿದ್ದಾರೆ.

ಅನಿಲ್ ಕಾಳೆ ಎರಡು ದಶಕಗಳಿಗೂ ಹೆಚ್ಚು ಕಾಲ ಮಿಲಿಟರಿ ಪಡೆಯಲ್ಲಿ ಕೆಲಸ ನಿರ್ವಹಿಸಿದ್ದರು. ಭಾರತೀಯ ಸೇನಾ ಅಕಾಡೆಮಿಯಲ್ಲಿ ಉತ್ತೀರ್ಣರಾದ ಬಳಿಕ 11 ಜಮ್ಮು & ಕಾಶ್ಮೀರ ರೈಫಲ್‌ನಲ್ಲಿ ನಿಯೋಜಿತರಾದ ಕಾಳೆ, ಕಾಶ್ಮೀರ ಮತ್ತು ಈಶಾನ್ಯ ಭಾರತ ಸೇರಿದಂತೆ ದೇಶದ ವಿವಿಧೆಡೆ ಸೇವೆ ಸಲ್ಲಿಸಿದ್ದರು. 2022ರಲ್ಲಿ ಅವಧಿಪೂರ್ವ ನಿವೃತ್ತಿ ಪಡೆದಿದ್ದರು.

ಇಸ್ರೇಲ್‌- ಗಾಝಾ ಮೇಲೆ ಕಳೆದ 8 ತಿಂಗಳಿನಿಂದ ದಾಳಿಯನ್ನು ನಡೆಸುತ್ತಿದ್ದು, ಮೃತರ ಸಂಖ್ಯೆ 35,000 ದಾಟಿದೆ. ಗಾಝಾದಲ್ಲಿ ಹತ್ಯಾಕಾಂಡ ಮುಂದುವರಿಸಿರುವ ಇಸ್ರೇಲ್‌, ಗಾಝಾದ ನಿರಾಶ್ರಿತರು ಆಶ್ರಯವನ್ನು ಪಡೆದುಕೊಂಡಿರುವ ರಫಾ ಮೇಲೆ ದಾಳಿಯನ್ನು ನಡೆಸುತ್ತಿದೆ. ಗಾಝಾದ ಉತ್ತರ ಪ್ರಾಂತವನ್ನು ಮರಳಿ ವಶಪಡಿಸಿಕೊಳ್ಳುವ ಜೊತೆಗೆ ದಕ್ಷಿಣ ಗಾಝಾದ ರಫಾ ನಗರದ ಮೇಲೆ ಆಕ್ರಮಣ ನಡೆಸುವ ಜಂಟಿ ಕಾರ್ಯಾಚರಣೆಯನ್ನು ಇಸ್ರೇಲ್ ತೀವ್ರಗೊಳಿಸಿದೆ.

ರಫಾ ನಗರವನ್ನು ಸಂಪರ್ಕಿಸುವ ಹೆದ್ದಾರಿಯಲ್ಲಿ ಇಸ್ರೇಲ್‍ನ ಯುದ್ಧಟ್ಯಾಂಕ್‌ಗಳಿದ್ದು, ಇಸ್ರೇಲ್‌ ಆಕ್ರಮಣ ಮುಂದುವರಿಯುತ್ತಿದೆ ಎಂದು ವರದಿ ಹೇಳಿದೆ. ಗಾಝಾದ ಉತ್ತರ ಮತ್ತು ದಕ್ಷಿಣ ಪ್ರದೇಶಗಳಲ್ಲಿ ಸಾವಿರಾರು ಫೆಲೆಸ್ತೀನಿಯರು ಅತಂತ್ರ ಸ್ಥಿತಿಯಲ್ಲಿದ್ದು ಮಾನವೀಯ ಬಿಕ್ಕಟ್ಟು ಮತ್ತಷ್ಟು ಹದಗೆಡಲಿದೆ ಎಂದು ವಿಶ್ವಸಂಸ್ಥೆ ಎಚ್ಚರಿಸಿವೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...