Homeಮುಖಪುಟ'ಇಂಡಿಯಾ' ಅಭ್ಯರ್ಥಿ ಸುದರ್ಶನ್ ರೆಡ್ಡಿ ವಿರುದ್ಧ ಅಮಿತ್ ಶಾ ಹೇಳಿಕೆ: ನಿವೃತ್ತ ನ್ಯಾಯಾಧೀಶರಿಂದ ಖಂಡನೆ

‘ಇಂಡಿಯಾ’ ಅಭ್ಯರ್ಥಿ ಸುದರ್ಶನ್ ರೆಡ್ಡಿ ವಿರುದ್ಧ ಅಮಿತ್ ಶಾ ಹೇಳಿಕೆ: ನಿವೃತ್ತ ನ್ಯಾಯಾಧೀಶರಿಂದ ಖಂಡನೆ

- Advertisement -
- Advertisement -

ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ‘ಇಂಡಿಯಾ ಒಕ್ಕೂಟ’ದ ಅಭ್ಯರ್ಥಿಯಾಗಿರುವ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರ ವಿರುದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಹೇಳಿಕೆಯನ್ನು ಸುಪ್ರೀಂ ಕೋರ್ಟ್‌ನ ಹಲವು ಮಾಜಿ ನ್ಯಾಯಮೂರ್ತಿಗಳು ಸೇರಿದಂತೆ 18 ನಿವೃತ್ತ ನ್ಯಾಯಾಧೀಶರ ಗುಂಪು ಖಂಡಿಸಿದೆ.

ಅಮಿತ್ ಶಾ ಅವರ ಹೇಳಿಕೆ ‘ದುರದೃಷ್ಟಕರ’ ಮತ್ತು ಸುಪ್ರೀಂ ಕೋರ್ಟ್ ತೀರ್ಪಿನ ‘ಪೂರ್ವಾಗ್ರಹ ಪೀಡಿತ ತಪ್ಪು ವ್ಯಾಖ್ಯಾನ’ ಎಂದು ಎಂದು ನ್ಯಾಯಾಧೀಶರ ಗುಂಪು ಹೇಳಿದೆ.

“2011ರ ಸಲ್ವಾ ಜುಡುಂ ತೀರ್ಪಿನ ಮೂಲಕ ನ್ಯಾಯಮೂರ್ತಿ ಸುದರ್ಶನ್‌ ರೆಡ್ಡಿ ಅವರು ‘ನಕ್ಸಲಿಸಂ’ ಅನ್ನು ಬೆಂಬಲಿಸಿದ್ದಾರೆ” ಎಂದು ಅಮಿತ್ ಶಾ ಆರೋಪಿಸಿದ್ದರು. “ನ್ಯಾಯಾಲಯವು ಜಾಗೃತ ಚಳವಳಿಯ ವಿರುದ್ಧ ತೀರ್ಪು ನೀಡದಿದ್ದರೆ 2020ರ ವೇಳೆಗೆ ಎಡಪಂಥೀಯ ಉಗ್ರವಾದ ಕೊನೆಗೊಳ್ಳುತ್ತಿತ್ತು” ಎಂದಿದ್ದರು.

ಕೇರಳದಲ್ಲಿ ಮಾತನಾಡಿದ್ದ ಅಮಿತ್ ಶಾ, “ನಕ್ಸಲ್ ವಿರೋಧಿ ಪ್ರಯತ್ನಗಳಿಗೆ ಅಡ್ಡಿಯಾಗುವ ಸಿದ್ಧಾಂತದಿಂದ ಸುದರ್ಶನ್‌ ರೆಡ್ಡಿ ಪ್ರೇರಿತರಾಗಿದ್ದಾರೆ” ಎಂದು ಆರೋಪಿಸಿದ್ದರು.

ನಿವೃತ್ತ ನ್ಯಾಯಾಧೀಶರ ಜಂಟಿ ಹೇಳಿಕೆಯಲ್ಲಿ, “ಸಲ್ವಾ ಜುಡುಂ ತೀರ್ಪು ಯಾವುದೇ ರೀತಿಯಲ್ಲೂ ನಕ್ಸಲಿಸಂ ಅನ್ನು ಬೆಂಬಲಿಸುವುದಿಲ್ಲ ಎಂದು ತಿಳಿಸಲಾಗಿದೆ. ಅಮಿತ್ ಶಾ ಅವರ ಹೇಳಿಕೆಗಳನ್ನು ‘ನ್ಯಾಯಾಂಗದ ತಾರ್ಕಿಕತೆಯ ವಿರೂಪಗೊಳಿಸುವ ಪ್ರಯತ್ನ” ಎಂದು ಖಂಡಿಸಲಾಗಿದೆ.

“ಹಿರಿಯ ರಾಜಕೀಯ ನಾಯಕರೊಬ್ಬರು ಸುಪ್ರೀಂ ಕೋರ್ಟ್ ತೀರ್ಪನ್ನು ತಪ್ಪಾಗಿ ನಿರೂಪಿಸುವುದರಿಂದ ನ್ಯಾಯಾಂಗದ ಸ್ವಾತಂತ್ರ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿಗಳಾದ ಕುರಿಯನ್ ಜೋಸೆಫ್, ಮದನ್ ಬಿ ಲೋಕೂರ್, ಜೆ ಚೆಲಮೇಶ್ವರ್, ಎ.ಕೆ ಪಟ್ನಾಯಕ್, ಅಭಯ್ ಓಕಾ, ವಿಕ್ರಮಜಿತ್ ಸೇನ್, ಗೋಪಾಲ ಗೌಡ, ಮಾಜಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ಹೈಕೋರ್ಟ್ ನ್ಯಾಯಾಧೀಶರಾದ ಎಸ್. ಮುರಳೀಧರ್, ಗೋವಿಂದ್ ಮಾಥುರ್, ಸಂಜೀವ್ ಬ್ಯಾನರ್ಜಿ ಮತ್ತು ಅಂಜನಾ ಪ್ರಕಾಶ್ ಜಂಟಿ ಹೇಳಿಕೆಗೆ ಸಹಿ ಹಾಕಿದ್ದಾರೆ.

ರಾಜಕೀಯ ಚರ್ಚೆಯಲ್ಲಿ, ವಿಶೇಷವಾಗಿ ಉನ್ನತ ಸಾಂವಿಧಾನಿಕ ಚುನಾವಣೆಗಳ ಸಮಯದಲ್ಲಿ ಸಂಯಮ ಮತ್ತು ನಾಗರಿಕತೆ ಕಾಪಾಡಿಕೊಳ್ಳಬೇಕು ಎಂದು ಹೇಳಿಕೆಯು ಒತ್ತಾಯಿಸಿದೆ. “ಸೈದ್ಧಾಂತಿಕ ಹೋರಾಟಗಳು ಪ್ರಚಾರಗಳ ಭಾಗವಾಗಿರಬಹುದು. ಆದರೆ, ಅವುಗಳನ್ನು ಘನತೆಯಿಂದ ನಡೆಸಬೇಕು. ಅಶ್ಲೀಲ ಪದಗಳಿಂದ ನಿಂದಿಸುವುದು ಸ್ಪರ್ಧಿಸುತ್ತಿರುವ ಹುದ್ದೆಗಳನ್ನು ಅವಮಾನಿಸುತ್ತದೆ” ಎಂದು ಹೇಳಿಕೆ ಅಭಿಪ್ರಾಯಪಟ್ಟಿದೆ.

ಅಮಿತ್ ಶಾ ಹೇಳಿಕೆಗೆ ಸಂಕ್ಷಿಪ್ತವಾಗಿ ಪ್ರತಿಕ್ರಿಯಿಸಿರುವ ನ್ಯಾಯಮೂರ್ತಿ ರೆಡ್ಡಿ ಅವರು, ರಾಜಕೀಯ ಹೇಳಿಕೆ ನೀಡಲು ನಿರಾಕರಿಸಿದ್ದಾರೆ. “ಸಲ್ವಾ ಜುಡುಂ ಕುರಿತ ತೀರ್ಪು ಸುಪ್ರೀಂ ಕೋರ್ಟ್‌ನದ್ದು, ನನ್ನೊಬ್ಬನದ್ದೇ ಅಲ್ಲ” ಎಂದು ಹೇಳಿದ್ದಾರೆ. ಅಮಿತ್ ಶಾ ಅವರು ಹೇಳಿಕೆ ನೀಡುವ ಮೊದಲು ಪೂರ್ಣ ತೀರ್ಪನ್ನು ಓದಿಲ್ಲ ಎಂದನಿಸುತ್ತದೆ” ಎಂದಿದ್ದಾರೆ.

ನ್ಯಾಯಮೂರ್ತಿಗಳಾದ ಸುದರ್ಶನ್‌ ರೆಡ್ಡಿ ಮತ್ತು ಎಸ್.ಎಸ್ ನಿಜ್ಜರ್ ಅವರು ನೀಡಿದ್ದ 2011ರ ಸುಪ್ರೀಂ ಕೋರ್ಟ್ ತೀರ್ಪು, ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಬುಡಕಟ್ಟು ಯುವಕರು ಮತ್ತು ಮಾಜಿ ನಕ್ಸಲರನ್ನು ವಿಶೇಷ ಪೊಲೀಸ್ ಅಧಿಕಾರಿಗಳಾಗಿ ಬಳಸುವುದು ಅಸಾಂವಿಧಾನಿಕ ಎಂದು ಘೋಷಿಸಿತ್ತು. ಛತ್ತೀಸ್‌ಗಢ ಸರ್ಕಾರದಿಂದ ಬೆಂಬಲಿತವಾದ ವಿವಾದಾತ್ಮಕ ನಕ್ಸಲ್ ವಿರೋಧಿ ಪಡೆಯಾದ ಸಲ್ವಾ ಜುಡುಂ ಅನ್ನು ವಿಸರ್ಜಿಸುವಂತೆ ಆದೇಶಿಸಿತ್ತು.

ನರಮೇಧಕ್ಕೆ ಪ್ರತಿಕ್ರಿಯೆ: ಜೆಎನ್‌ಯುನಲ್ಲಿ ಗಾಜಾ ಪರ ದನಿ, ಇಸ್ರೇಲ್ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...