Homeಮುಖಪುಟ'ಇಂಡಿಯಾ' ಅಭ್ಯರ್ಥಿ ಸುದರ್ಶನ್ ರೆಡ್ಡಿ ವಿರುದ್ಧ ಅಮಿತ್ ಶಾ ಹೇಳಿಕೆ: ನಿವೃತ್ತ ನ್ಯಾಯಾಧೀಶರಿಂದ ಖಂಡನೆ

‘ಇಂಡಿಯಾ’ ಅಭ್ಯರ್ಥಿ ಸುದರ್ಶನ್ ರೆಡ್ಡಿ ವಿರುದ್ಧ ಅಮಿತ್ ಶಾ ಹೇಳಿಕೆ: ನಿವೃತ್ತ ನ್ಯಾಯಾಧೀಶರಿಂದ ಖಂಡನೆ

- Advertisement -
- Advertisement -

ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ‘ಇಂಡಿಯಾ ಒಕ್ಕೂಟ’ದ ಅಭ್ಯರ್ಥಿಯಾಗಿರುವ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರ ವಿರುದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಹೇಳಿಕೆಯನ್ನು ಸುಪ್ರೀಂ ಕೋರ್ಟ್‌ನ ಹಲವು ಮಾಜಿ ನ್ಯಾಯಮೂರ್ತಿಗಳು ಸೇರಿದಂತೆ 18 ನಿವೃತ್ತ ನ್ಯಾಯಾಧೀಶರ ಗುಂಪು ಖಂಡಿಸಿದೆ.

ಅಮಿತ್ ಶಾ ಅವರ ಹೇಳಿಕೆ ‘ದುರದೃಷ್ಟಕರ’ ಮತ್ತು ಸುಪ್ರೀಂ ಕೋರ್ಟ್ ತೀರ್ಪಿನ ‘ಪೂರ್ವಾಗ್ರಹ ಪೀಡಿತ ತಪ್ಪು ವ್ಯಾಖ್ಯಾನ’ ಎಂದು ಎಂದು ನ್ಯಾಯಾಧೀಶರ ಗುಂಪು ಹೇಳಿದೆ.

“2011ರ ಸಲ್ವಾ ಜುಡುಂ ತೀರ್ಪಿನ ಮೂಲಕ ನ್ಯಾಯಮೂರ್ತಿ ಸುದರ್ಶನ್‌ ರೆಡ್ಡಿ ಅವರು ‘ನಕ್ಸಲಿಸಂ’ ಅನ್ನು ಬೆಂಬಲಿಸಿದ್ದಾರೆ” ಎಂದು ಅಮಿತ್ ಶಾ ಆರೋಪಿಸಿದ್ದರು. “ನ್ಯಾಯಾಲಯವು ಜಾಗೃತ ಚಳವಳಿಯ ವಿರುದ್ಧ ತೀರ್ಪು ನೀಡದಿದ್ದರೆ 2020ರ ವೇಳೆಗೆ ಎಡಪಂಥೀಯ ಉಗ್ರವಾದ ಕೊನೆಗೊಳ್ಳುತ್ತಿತ್ತು” ಎಂದಿದ್ದರು.

ಕೇರಳದಲ್ಲಿ ಮಾತನಾಡಿದ್ದ ಅಮಿತ್ ಶಾ, “ನಕ್ಸಲ್ ವಿರೋಧಿ ಪ್ರಯತ್ನಗಳಿಗೆ ಅಡ್ಡಿಯಾಗುವ ಸಿದ್ಧಾಂತದಿಂದ ಸುದರ್ಶನ್‌ ರೆಡ್ಡಿ ಪ್ರೇರಿತರಾಗಿದ್ದಾರೆ” ಎಂದು ಆರೋಪಿಸಿದ್ದರು.

ನಿವೃತ್ತ ನ್ಯಾಯಾಧೀಶರ ಜಂಟಿ ಹೇಳಿಕೆಯಲ್ಲಿ, “ಸಲ್ವಾ ಜುಡುಂ ತೀರ್ಪು ಯಾವುದೇ ರೀತಿಯಲ್ಲೂ ನಕ್ಸಲಿಸಂ ಅನ್ನು ಬೆಂಬಲಿಸುವುದಿಲ್ಲ ಎಂದು ತಿಳಿಸಲಾಗಿದೆ. ಅಮಿತ್ ಶಾ ಅವರ ಹೇಳಿಕೆಗಳನ್ನು ‘ನ್ಯಾಯಾಂಗದ ತಾರ್ಕಿಕತೆಯ ವಿರೂಪಗೊಳಿಸುವ ಪ್ರಯತ್ನ” ಎಂದು ಖಂಡಿಸಲಾಗಿದೆ.

“ಹಿರಿಯ ರಾಜಕೀಯ ನಾಯಕರೊಬ್ಬರು ಸುಪ್ರೀಂ ಕೋರ್ಟ್ ತೀರ್ಪನ್ನು ತಪ್ಪಾಗಿ ನಿರೂಪಿಸುವುದರಿಂದ ನ್ಯಾಯಾಂಗದ ಸ್ವಾತಂತ್ರ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿಗಳಾದ ಕುರಿಯನ್ ಜೋಸೆಫ್, ಮದನ್ ಬಿ ಲೋಕೂರ್, ಜೆ ಚೆಲಮೇಶ್ವರ್, ಎ.ಕೆ ಪಟ್ನಾಯಕ್, ಅಭಯ್ ಓಕಾ, ವಿಕ್ರಮಜಿತ್ ಸೇನ್, ಗೋಪಾಲ ಗೌಡ, ಮಾಜಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ಹೈಕೋರ್ಟ್ ನ್ಯಾಯಾಧೀಶರಾದ ಎಸ್. ಮುರಳೀಧರ್, ಗೋವಿಂದ್ ಮಾಥುರ್, ಸಂಜೀವ್ ಬ್ಯಾನರ್ಜಿ ಮತ್ತು ಅಂಜನಾ ಪ್ರಕಾಶ್ ಜಂಟಿ ಹೇಳಿಕೆಗೆ ಸಹಿ ಹಾಕಿದ್ದಾರೆ.

ರಾಜಕೀಯ ಚರ್ಚೆಯಲ್ಲಿ, ವಿಶೇಷವಾಗಿ ಉನ್ನತ ಸಾಂವಿಧಾನಿಕ ಚುನಾವಣೆಗಳ ಸಮಯದಲ್ಲಿ ಸಂಯಮ ಮತ್ತು ನಾಗರಿಕತೆ ಕಾಪಾಡಿಕೊಳ್ಳಬೇಕು ಎಂದು ಹೇಳಿಕೆಯು ಒತ್ತಾಯಿಸಿದೆ. “ಸೈದ್ಧಾಂತಿಕ ಹೋರಾಟಗಳು ಪ್ರಚಾರಗಳ ಭಾಗವಾಗಿರಬಹುದು. ಆದರೆ, ಅವುಗಳನ್ನು ಘನತೆಯಿಂದ ನಡೆಸಬೇಕು. ಅಶ್ಲೀಲ ಪದಗಳಿಂದ ನಿಂದಿಸುವುದು ಸ್ಪರ್ಧಿಸುತ್ತಿರುವ ಹುದ್ದೆಗಳನ್ನು ಅವಮಾನಿಸುತ್ತದೆ” ಎಂದು ಹೇಳಿಕೆ ಅಭಿಪ್ರಾಯಪಟ್ಟಿದೆ.

ಅಮಿತ್ ಶಾ ಹೇಳಿಕೆಗೆ ಸಂಕ್ಷಿಪ್ತವಾಗಿ ಪ್ರತಿಕ್ರಿಯಿಸಿರುವ ನ್ಯಾಯಮೂರ್ತಿ ರೆಡ್ಡಿ ಅವರು, ರಾಜಕೀಯ ಹೇಳಿಕೆ ನೀಡಲು ನಿರಾಕರಿಸಿದ್ದಾರೆ. “ಸಲ್ವಾ ಜುಡುಂ ಕುರಿತ ತೀರ್ಪು ಸುಪ್ರೀಂ ಕೋರ್ಟ್‌ನದ್ದು, ನನ್ನೊಬ್ಬನದ್ದೇ ಅಲ್ಲ” ಎಂದು ಹೇಳಿದ್ದಾರೆ. ಅಮಿತ್ ಶಾ ಅವರು ಹೇಳಿಕೆ ನೀಡುವ ಮೊದಲು ಪೂರ್ಣ ತೀರ್ಪನ್ನು ಓದಿಲ್ಲ ಎಂದನಿಸುತ್ತದೆ” ಎಂದಿದ್ದಾರೆ.

ನ್ಯಾಯಮೂರ್ತಿಗಳಾದ ಸುದರ್ಶನ್‌ ರೆಡ್ಡಿ ಮತ್ತು ಎಸ್.ಎಸ್ ನಿಜ್ಜರ್ ಅವರು ನೀಡಿದ್ದ 2011ರ ಸುಪ್ರೀಂ ಕೋರ್ಟ್ ತೀರ್ಪು, ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಬುಡಕಟ್ಟು ಯುವಕರು ಮತ್ತು ಮಾಜಿ ನಕ್ಸಲರನ್ನು ವಿಶೇಷ ಪೊಲೀಸ್ ಅಧಿಕಾರಿಗಳಾಗಿ ಬಳಸುವುದು ಅಸಾಂವಿಧಾನಿಕ ಎಂದು ಘೋಷಿಸಿತ್ತು. ಛತ್ತೀಸ್‌ಗಢ ಸರ್ಕಾರದಿಂದ ಬೆಂಬಲಿತವಾದ ವಿವಾದಾತ್ಮಕ ನಕ್ಸಲ್ ವಿರೋಧಿ ಪಡೆಯಾದ ಸಲ್ವಾ ಜುಡುಂ ಅನ್ನು ವಿಸರ್ಜಿಸುವಂತೆ ಆದೇಶಿಸಿತ್ತು.

ನರಮೇಧಕ್ಕೆ ಪ್ರತಿಕ್ರಿಯೆ: ಜೆಎನ್‌ಯುನಲ್ಲಿ ಗಾಜಾ ಪರ ದನಿ, ಇಸ್ರೇಲ್ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...