Homeಮುಖಪುಟ'ಇಂಡಿಯಾ' ಅಭ್ಯರ್ಥಿ ಸುದರ್ಶನ್ ರೆಡ್ಡಿ ವಿರುದ್ಧ ಅಮಿತ್ ಶಾ ಹೇಳಿಕೆ: ನಿವೃತ್ತ ನ್ಯಾಯಾಧೀಶರಿಂದ ಖಂಡನೆ

‘ಇಂಡಿಯಾ’ ಅಭ್ಯರ್ಥಿ ಸುದರ್ಶನ್ ರೆಡ್ಡಿ ವಿರುದ್ಧ ಅಮಿತ್ ಶಾ ಹೇಳಿಕೆ: ನಿವೃತ್ತ ನ್ಯಾಯಾಧೀಶರಿಂದ ಖಂಡನೆ

- Advertisement -
- Advertisement -

ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ‘ಇಂಡಿಯಾ ಒಕ್ಕೂಟ’ದ ಅಭ್ಯರ್ಥಿಯಾಗಿರುವ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರ ವಿರುದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಹೇಳಿಕೆಯನ್ನು ಸುಪ್ರೀಂ ಕೋರ್ಟ್‌ನ ಹಲವು ಮಾಜಿ ನ್ಯಾಯಮೂರ್ತಿಗಳು ಸೇರಿದಂತೆ 18 ನಿವೃತ್ತ ನ್ಯಾಯಾಧೀಶರ ಗುಂಪು ಖಂಡಿಸಿದೆ.

ಅಮಿತ್ ಶಾ ಅವರ ಹೇಳಿಕೆ ‘ದುರದೃಷ್ಟಕರ’ ಮತ್ತು ಸುಪ್ರೀಂ ಕೋರ್ಟ್ ತೀರ್ಪಿನ ‘ಪೂರ್ವಾಗ್ರಹ ಪೀಡಿತ ತಪ್ಪು ವ್ಯಾಖ್ಯಾನ’ ಎಂದು ಎಂದು ನ್ಯಾಯಾಧೀಶರ ಗುಂಪು ಹೇಳಿದೆ.

“2011ರ ಸಲ್ವಾ ಜುಡುಂ ತೀರ್ಪಿನ ಮೂಲಕ ನ್ಯಾಯಮೂರ್ತಿ ಸುದರ್ಶನ್‌ ರೆಡ್ಡಿ ಅವರು ‘ನಕ್ಸಲಿಸಂ’ ಅನ್ನು ಬೆಂಬಲಿಸಿದ್ದಾರೆ” ಎಂದು ಅಮಿತ್ ಶಾ ಆರೋಪಿಸಿದ್ದರು. “ನ್ಯಾಯಾಲಯವು ಜಾಗೃತ ಚಳವಳಿಯ ವಿರುದ್ಧ ತೀರ್ಪು ನೀಡದಿದ್ದರೆ 2020ರ ವೇಳೆಗೆ ಎಡಪಂಥೀಯ ಉಗ್ರವಾದ ಕೊನೆಗೊಳ್ಳುತ್ತಿತ್ತು” ಎಂದಿದ್ದರು.

ಕೇರಳದಲ್ಲಿ ಮಾತನಾಡಿದ್ದ ಅಮಿತ್ ಶಾ, “ನಕ್ಸಲ್ ವಿರೋಧಿ ಪ್ರಯತ್ನಗಳಿಗೆ ಅಡ್ಡಿಯಾಗುವ ಸಿದ್ಧಾಂತದಿಂದ ಸುದರ್ಶನ್‌ ರೆಡ್ಡಿ ಪ್ರೇರಿತರಾಗಿದ್ದಾರೆ” ಎಂದು ಆರೋಪಿಸಿದ್ದರು.

ನಿವೃತ್ತ ನ್ಯಾಯಾಧೀಶರ ಜಂಟಿ ಹೇಳಿಕೆಯಲ್ಲಿ, “ಸಲ್ವಾ ಜುಡುಂ ತೀರ್ಪು ಯಾವುದೇ ರೀತಿಯಲ್ಲೂ ನಕ್ಸಲಿಸಂ ಅನ್ನು ಬೆಂಬಲಿಸುವುದಿಲ್ಲ ಎಂದು ತಿಳಿಸಲಾಗಿದೆ. ಅಮಿತ್ ಶಾ ಅವರ ಹೇಳಿಕೆಗಳನ್ನು ‘ನ್ಯಾಯಾಂಗದ ತಾರ್ಕಿಕತೆಯ ವಿರೂಪಗೊಳಿಸುವ ಪ್ರಯತ್ನ” ಎಂದು ಖಂಡಿಸಲಾಗಿದೆ.

“ಹಿರಿಯ ರಾಜಕೀಯ ನಾಯಕರೊಬ್ಬರು ಸುಪ್ರೀಂ ಕೋರ್ಟ್ ತೀರ್ಪನ್ನು ತಪ್ಪಾಗಿ ನಿರೂಪಿಸುವುದರಿಂದ ನ್ಯಾಯಾಂಗದ ಸ್ವಾತಂತ್ರ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿಗಳಾದ ಕುರಿಯನ್ ಜೋಸೆಫ್, ಮದನ್ ಬಿ ಲೋಕೂರ್, ಜೆ ಚೆಲಮೇಶ್ವರ್, ಎ.ಕೆ ಪಟ್ನಾಯಕ್, ಅಭಯ್ ಓಕಾ, ವಿಕ್ರಮಜಿತ್ ಸೇನ್, ಗೋಪಾಲ ಗೌಡ, ಮಾಜಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ಹೈಕೋರ್ಟ್ ನ್ಯಾಯಾಧೀಶರಾದ ಎಸ್. ಮುರಳೀಧರ್, ಗೋವಿಂದ್ ಮಾಥುರ್, ಸಂಜೀವ್ ಬ್ಯಾನರ್ಜಿ ಮತ್ತು ಅಂಜನಾ ಪ್ರಕಾಶ್ ಜಂಟಿ ಹೇಳಿಕೆಗೆ ಸಹಿ ಹಾಕಿದ್ದಾರೆ.

ರಾಜಕೀಯ ಚರ್ಚೆಯಲ್ಲಿ, ವಿಶೇಷವಾಗಿ ಉನ್ನತ ಸಾಂವಿಧಾನಿಕ ಚುನಾವಣೆಗಳ ಸಮಯದಲ್ಲಿ ಸಂಯಮ ಮತ್ತು ನಾಗರಿಕತೆ ಕಾಪಾಡಿಕೊಳ್ಳಬೇಕು ಎಂದು ಹೇಳಿಕೆಯು ಒತ್ತಾಯಿಸಿದೆ. “ಸೈದ್ಧಾಂತಿಕ ಹೋರಾಟಗಳು ಪ್ರಚಾರಗಳ ಭಾಗವಾಗಿರಬಹುದು. ಆದರೆ, ಅವುಗಳನ್ನು ಘನತೆಯಿಂದ ನಡೆಸಬೇಕು. ಅಶ್ಲೀಲ ಪದಗಳಿಂದ ನಿಂದಿಸುವುದು ಸ್ಪರ್ಧಿಸುತ್ತಿರುವ ಹುದ್ದೆಗಳನ್ನು ಅವಮಾನಿಸುತ್ತದೆ” ಎಂದು ಹೇಳಿಕೆ ಅಭಿಪ್ರಾಯಪಟ್ಟಿದೆ.

ಅಮಿತ್ ಶಾ ಹೇಳಿಕೆಗೆ ಸಂಕ್ಷಿಪ್ತವಾಗಿ ಪ್ರತಿಕ್ರಿಯಿಸಿರುವ ನ್ಯಾಯಮೂರ್ತಿ ರೆಡ್ಡಿ ಅವರು, ರಾಜಕೀಯ ಹೇಳಿಕೆ ನೀಡಲು ನಿರಾಕರಿಸಿದ್ದಾರೆ. “ಸಲ್ವಾ ಜುಡುಂ ಕುರಿತ ತೀರ್ಪು ಸುಪ್ರೀಂ ಕೋರ್ಟ್‌ನದ್ದು, ನನ್ನೊಬ್ಬನದ್ದೇ ಅಲ್ಲ” ಎಂದು ಹೇಳಿದ್ದಾರೆ. ಅಮಿತ್ ಶಾ ಅವರು ಹೇಳಿಕೆ ನೀಡುವ ಮೊದಲು ಪೂರ್ಣ ತೀರ್ಪನ್ನು ಓದಿಲ್ಲ ಎಂದನಿಸುತ್ತದೆ” ಎಂದಿದ್ದಾರೆ.

ನ್ಯಾಯಮೂರ್ತಿಗಳಾದ ಸುದರ್ಶನ್‌ ರೆಡ್ಡಿ ಮತ್ತು ಎಸ್.ಎಸ್ ನಿಜ್ಜರ್ ಅವರು ನೀಡಿದ್ದ 2011ರ ಸುಪ್ರೀಂ ಕೋರ್ಟ್ ತೀರ್ಪು, ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಬುಡಕಟ್ಟು ಯುವಕರು ಮತ್ತು ಮಾಜಿ ನಕ್ಸಲರನ್ನು ವಿಶೇಷ ಪೊಲೀಸ್ ಅಧಿಕಾರಿಗಳಾಗಿ ಬಳಸುವುದು ಅಸಾಂವಿಧಾನಿಕ ಎಂದು ಘೋಷಿಸಿತ್ತು. ಛತ್ತೀಸ್‌ಗಢ ಸರ್ಕಾರದಿಂದ ಬೆಂಬಲಿತವಾದ ವಿವಾದಾತ್ಮಕ ನಕ್ಸಲ್ ವಿರೋಧಿ ಪಡೆಯಾದ ಸಲ್ವಾ ಜುಡುಂ ಅನ್ನು ವಿಸರ್ಜಿಸುವಂತೆ ಆದೇಶಿಸಿತ್ತು.

ನರಮೇಧಕ್ಕೆ ಪ್ರತಿಕ್ರಿಯೆ: ಜೆಎನ್‌ಯುನಲ್ಲಿ ಗಾಜಾ ಪರ ದನಿ, ಇಸ್ರೇಲ್ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...