Homeಮುಖಪುಟನಿವೃತ್ತ ನ್ಯಾಯಾಧೀಶರು ಸರ್ಕಾರಿ ಹುದ್ದೆಗಳಿಗೆ ನೇಮಕಗೊಳ್ಳುವುದು ನೈತಿಕ ಕಳವಳಗಳನ್ನು ಹುಟ್ಟುಹಾಕುತ್ತದೆ: ಸಿಜೆಐ ಗವಾಯಿ

ನಿವೃತ್ತ ನ್ಯಾಯಾಧೀಶರು ಸರ್ಕಾರಿ ಹುದ್ದೆಗಳಿಗೆ ನೇಮಕಗೊಳ್ಳುವುದು ನೈತಿಕ ಕಳವಳಗಳನ್ನು ಹುಟ್ಟುಹಾಕುತ್ತದೆ: ಸಿಜೆಐ ಗವಾಯಿ

- Advertisement -
- Advertisement -

ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಮತ್ತು ದುಷ್ಕೃತ್ಯದ ಘಟನೆಗಳು ಸಾರ್ವಜನಿಕ ವಿಶ್ವಾಸದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಒಟ್ಟಾರೆ ವ್ಯವಸ್ಥೆಯ ಸಮಗ್ರತೆಯ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಹೇಳಿದ್ದಾರೆ.

ಯುನೈಟೆಡ್ ಕಿಂಗ್‌ಡಂನ ಸುಪ್ರೀಂ ಕೋರ್ಟ್‌ನಲ್ಲಿ ‘ನ್ಯಾಯಾಂಗ ಕಾನೂನುಬದ್ಧತೆ ಮತ್ತು ಸಾರ್ವಜನಿಕ ವಿಶ್ವಾಸವನ್ನು ಕಾಪಾಡಿಕೊಳ್ಳುವುದು’ ಎಂಬ ವಿಷಯದ ಕುರಿತು ನಡೆದ ದುಂಡುಮೇಜಿನ ಸಮ್ಮೇಳನದಲ್ಲಿ ಮಾತನಾಡಿದ ಅವರು, “ನ್ಯಾಯಾಧೀಶರು ನಿವೃತ್ತಿಯ ನಂತರ ಸರ್ಕಾರಿ ಹುದ್ದೆಗಳಿಗೆ ನೇಮಕೊಂಡರೆ ಅಥವಾ ಚುನಾವಣೆಗಳಲ್ಲಿ ಸ್ಪರ್ಧಿಸಲು ಪೀಠಕ್ಕೆ ರಾಜೀನಾಮೆ ನೀಡಿದರೆ, ಅದು ‘ಮಹತ್ವದ ನೈತಿಕ ಕಾಳಜಿಗಳನ್ನು ಹುಟ್ಟುಹಾಕುತ್ತದೆ ಮತ್ತು ಸಾರ್ವಜನಿಕ ಪರಿಶೀಲನೆಗೆ ಆಹ್ವಾನ ನೀಡುತ್ತದೆ” ಎಂದಿದ್ದಾರೆ.

ಭ್ರಷ್ಟಾಚಾರದ ಕುರಿತು ಮಾತನಾಡಿದ ಸಿಜೆಐ, “ಭ್ರಷ್ಟಾಚಾರ ಮತ್ತು ದುಷ್ಕೃತ್ಯದ ಪ್ರಕರಣಗಳು ಬೆಳಕಿಗೆ ಬಂದಾಗಲೆಲ್ಲಾ ಸುಪ್ರೀಂ ಕೋರ್ಟ್ ಅದನ್ನು ಪರಿಹರಿಸಲು ತಕ್ಷಣದ ಮತ್ತು ಸೂಕ್ತ ಕ್ರಮಗಳನ್ನು ನಿರಂತರವಾಗಿ ತೆಗೆದುಕೊಂಡಿದೆ” ಎಂದು ತಿಳಿಸಿದ್ದಾರೆ.

“ಪ್ರತಿಯೊಂದು ವ್ಯವಸ್ಥೆಯು ಎಷ್ಟೇ ಬಲಿಷ್ಠವಾಗಿದ್ದರೂ, ವೃತ್ತಿಪರ ದುಷ್ಕೃತ್ಯದ ಸಮಸ್ಯೆಗಳಿಗೆ ಗುರಿಯಾಗುತ್ತದೆ. ದುಃಖಕರವೆಂದರೆ, ನ್ಯಾಯಾಂಗದೊಳಗೆ ಭ್ರಷ್ಟಾಚಾರ ಮತ್ತು ದುಷ್ಕೃತ್ಯದ ನಿದರ್ಶನಗಳು ಕಂಡು ಬಂದಿವೆ. ಇಂತಹ ಘಟನೆಗಳು ಅನಿವಾರ್ಯವಾಗಿ ಸಾರ್ವಜನಿಕ ವಿಶ್ವಾಸದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ, ಒಟ್ಟಾರೆ ವ್ಯವಸ್ಥೆಯ ಸಮಗ್ರತೆಯ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ” ಎಂದಿದ್ದಾರೆ.

“ಆದಾಗ್ಯೂ, ಈ ವಿಶ್ವಾಸವನ್ನು ಪುನರ್ನಿರ್ಮಿಸುವ ಮಾರ್ಗವು ಈ ಸಮಸ್ಯೆಗಳನ್ನು ಪರಿಹರಿಸಲು ತೆಗೆದುಕೊಂಡ ತ್ವರಿತ, ನಿರ್ಣಾಯಕ ಮತ್ತು ಪಾರದರ್ಶಕ ಕ್ರಮದ ಮೇಲೆ ನಿಂತಿದೆ. ಭಾರತದಲ್ಲಿ, ಅಂತಹ ಪ್ರಕರಣಗಳು ಬೆಳಕಿಗೆ ಬಂದಾಗ, ಸುಪ್ರೀಂ ಕೋರ್ಟ್ ನಿರಂತರವಾಗಿ ದುಷ್ಕೃತ್ಯವನ್ನು ಪರಿಹರಿಸಲು ತಕ್ಷಣದ ಮತ್ತು ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದೆ” ಎಂದು ಸಿಜೆಐ ಹೇಳಿದ್ದಾರೆ.

ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ದೆಹಲಿಯ ಅಧಿಕೃತ ನಿವಾಸದಲ್ಲಿ ಭಾರಿ ಪ್ರಮಾಣದ ಹಣ ಪತ್ತೆಯಾದ ನಂತರ, ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಈ ನಡುವೆ ಸಿಜೆಐ ಮಾತನಾಡಿದ್ದಾರೆ.

ಪ್ರತಿಯೊಂದು ಪ್ರಜಾಪ್ರಭುತ್ವದಲ್ಲಿಯೂ ನ್ಯಾಯಾಂಗವು ನ್ಯಾಯವನ್ನು ನೀಡುವುದಲ್ಲದೆ, ಸತ್ಯವನ್ನು ಅಧಿಕಾರಕ್ಕೆ ಹಿಡಿದಿಡಲು ಅರ್ಹವಾದ ಸಂಸ್ಥೆಯಾಗಿ ನೋಡಬೇಕು. “ನ್ಯಾಯಾಂಗದ ನ್ಯಾಯಸಮ್ಮತತೆ” ಮತ್ತು “ಸಾರ್ವಜನಿಕ ವಿಶ್ವಾಸ” ಎಂಬ ಪದಗಳು ಪರಸ್ಪರ ಸಂಬಂಧ ಹೊಂದಿವೆ ಎಂದು ಸಿಜೆಐ ಗವಾಯಿ ಹೇಳಿದ್ದಾರೆ.

“ಕಾನೂನುಬದ್ಧತೆ ಮತ್ತು ಸಾರ್ವಜನಿಕ ವಿಶ್ವಾಸವನ್ನು ಯಾವುದೇ ಬಲವಂತದ ಆದೇಶ ಕಾಪಾಡುವುದಿಲ್ಲ. ಬದಲಿಗೆ ನ್ಯಾಯಾಲಯಗಳು ಗಳಿಸಿದ ವಿಶ್ವಾಸಾರ್ಹತೆಯ ಮೂಲಕ ಪಡೆಯಲಾಗುತ್ತದೆ. ಈ ವಿಶ್ವಾಸದ ಕೊರೆತೆಯು ನ್ಯಾಯಾಂಗದ ಸಾಂವಿಧಾನಿಕ ಪಾತ್ರವನ್ನು ದುರ್ಬಲಗೊಳಿಸುವ ಅಪಾಯವನ್ನುಂಟುಮಾಡುತ್ತದೆ. ಪಾರದರ್ಶಕತೆ ಮತ್ತು ಹೊಣೆಗಾರಿಕೆ ಪ್ರಜಾಪ್ರಭುತ್ವದ ಸದ್ಗುಣಗಳಾಗಿವೆ” ಎಂದಿದ್ದಾರೆ.

ನ್ಯಾಯಾಧೀಶರು ತೆಗೆದುಕೊಳ್ಳುವ ನಿವೃತ್ತಿಯ ನಂತರದ ಕೆಲಸಗಳ ಬಗ್ಗೆ ಆಗಾಗ್ಗೆ ಚರ್ಚೆಯಾಗುವ ಮಾತನಾಡಿದ ಸಿಜೆಐ, “ನಿವೃತ್ತಿಯ ನಂತರದ ಕೆಲಸಗಳ ಸಮಯ ಮತ್ತು ಸ್ವರೂಪವು ನ್ಯಾಯಾಂಗದ ಸಮಗ್ರತೆಯ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಹಾಳುಮಾಡಬಹುದು. ಏಕೆಂದರೆ ಇದು ನ್ಯಾಯಾಂಗ ನಿರ್ಧಾರಗಳು ಭವಿಷ್ಯದ ಸರ್ಕಾರಿ ನೇಮಕಾತಿಗಳು ಅಥವಾ ರಾಜಕೀಯ ಒಳಗೊಳ್ಳುವಿಕೆಯಿಂದ ಪ್ರಭಾವಿತವಾಗಿರುತ್ತದೆ ಎಂಬ ಗ್ರಹಿಕೆಯನ್ನು ಉಂಟುಮಾಡಬಹುದು ಎಂದಿದ್ದಾರೆ.

“ನ್ಯಾಯಾಧೀಶರು ನಿವೃತ್ತಿಯ ನಂತರದ ಕೆಲಸಗಳನ್ನು ತೆಗೆದುಕೊಳ್ಳುತ್ತಾರೆ ಎಂಬುದು ಇನ್ನೊಂದು ಚರ್ಚೆಯ ಅಂಶ. ಭಾರತದಲ್ಲಿ, ನ್ಯಾಯಾಧೀಶರು ನಿಗದಿತ ನಿವೃತ್ತಿ ವಯಸ್ಸಿಗೆ ಒಳಪಟ್ಟಿರುತ್ತಾರೆ. ನ್ಯಾಯಾಧೀಶರು ನಿವೃತ್ತಿಯ ನಂತರ ತಕ್ಷಣವೇ ಸರ್ಕಾರದೊಂದಿಗೆ ಮತ್ತೊಂದು ನೇಮಕಾತಿ ಪಡೆದರೆ ಅಥವಾ ಚುನಾವಣೆಗಳಲ್ಲಿ ಸ್ಪರ್ಧಿಸಲು ಪೀಠಕ್ಕೆ ರಾಜೀನಾಮೆ ನೀಡಿದರೆ, ಅದು ಗಮನಾರ್ಹವಾದ ನೈತಿಕ ಕಾಳಜಿಗಳನ್ನು ಹುಟ್ಟುಹಾಕುತ್ತದೆ ಮತ್ತು ಸಾರ್ವಜನಿಕ ಪರಿಶೀಲನೆಗೆ ಆಹ್ವಾನ ನೀಡುತ್ತದೆ” ಎಂದು ಹೇಳಿದ್ದಾರೆ.

ನ್ಯಾಯಾಧೀಶರು ರಾಜಕೀಯ ಹುದ್ದೆಗೆ ಚುನಾವಣೆಯಲ್ಲಿ ಸ್ಪರ್ಧಿಸುವುದು ನ್ಯಾಯಾಂಗದ ಸ್ವಾತಂತ್ರ್ಯ ಮತ್ತು ನಿಷ್ಪಕ್ಷಪಾತತೆಯ ಬಗ್ಗೆ ಅನುಮಾನಗಳಿಗೆ ಕಾರಣವಾಗಬಹುದು. ಏಕೆಂದರೆ ಇದನ್ನು ಹಿತಾಸಕ್ತಿ ಸಂಘರ್ಷ ಅಥವಾ ಸರ್ಕಾರದ ಪರವಾಗಿ ಗೆಲ್ಲುವ ಪ್ರಯತ್ನವೆಂದು ಪರಿಗಣಿಸಬಹುದು ಎಂದು ಸಿಜೆಐ ಹೇಳಿದ್ದಾರೆ.

“ಈ ಹಿನ್ನೆಲೆಯಲ್ಲಿ, ನನ್ನ ಅನೇಕ ಸಹೋದ್ಯೋಗಿಗಳು ಮತ್ತು ನಾನು ಸರ್ಕಾರದಿಂದ ನಿವೃತ್ತಿಯ ನಂತರದ ಯಾವುದೇ ಹುದ್ದೆಗಳನ್ನು ಸ್ವೀಕರಿಸುವುದಿಲ್ಲ ಎಂದು ಸಾರ್ವಜನಿಕವಾಗಿ ಪ್ರತಿಜ್ಞೆ ಮಾಡಿದ್ದೇವೆ. ಈ ಬದ್ಧತೆಯು ನ್ಯಾಯಾಂಗದ ವಿಶ್ವಾಸಾರ್ಹತೆ ಮತ್ತು ಸ್ವಾತಂತ್ರ್ಯವನ್ನು ಕಾಪಾಡುವ ಪ್ರಯತ್ನವಾಗಿದೆ” ಎಂದಿದ್ದಾರೆ.

ಮಾಹಿತಿಯು ಮುಕ್ತವಾಗಿ ಹರಿಯುವ ಮತ್ತು ಗ್ರಹಿಕೆಗಳು ವೇಗವಾಗಿ ರೂಪುಗೊಳ್ಳುವ ಈ ಡಿಜಿಟಲ್ ಯುಗದಲ್ಲಿ, ನ್ಯಾಯಾಂಗವು ತನ್ನ ಸ್ವಾತಂತ್ರ್ಯಕ್ಕೆ ಧಕ್ಕೆ ತರದೆ, ಸುಲಭವಾಗಿ ಪ್ರವೇಶಿಸಬಹುದಾದ, ಗ್ರಹಿಸಬಹುದಾದ ಮತ್ತು ಉತ್ತರಿಸುವ ಸವಾಲನ್ನು ಎದುರಿಸಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.

ಸೌಜನ್ಯ : newindianexpress.com

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಐಎಎಸ್‌ ಅಧಿಕಾರಿ: ರಾಷ್ಟ್ರೀಯ ಎಸ್‌ಸಿ ಆಯೋಗದಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...