Homeಮುಖಪುಟಸರ್ಕಾರದ ಹುದ್ದೆಗೆ ನಿವೃತ್ತಿ - ಸಿಎಂ ಮಮತಾ ಬ್ಯಾನರ್ಜಿಯವರ ಮುಖ್ಯ ಸಲಹೆಗಾರರಾಗಿ ನೇಮಕಗೊಂಡ ಅಲಪಾನ್‌ ಬಂದೋಪಾದ್ಯಾಯ್‌

ಸರ್ಕಾರದ ಹುದ್ದೆಗೆ ನಿವೃತ್ತಿ – ಸಿಎಂ ಮಮತಾ ಬ್ಯಾನರ್ಜಿಯವರ ಮುಖ್ಯ ಸಲಹೆಗಾರರಾಗಿ ನೇಮಕಗೊಂಡ ಅಲಪಾನ್‌ ಬಂದೋಪಾದ್ಯಾಯ್‌

- Advertisement -
- Advertisement -

ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ನಡುವಿನ ಆಡಳಿತಾತ್ಮಕ ಬಿಕ್ಕಟ್ಟು ಇನ್ನಷ್ಟು ತೀವ್ರಗೊಂಡಿದೆ. ಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ಮೋದಿ ನಡುವಿನ ರಾಜಕೀಯ ಸಂಘರ್ಷ ಹೊಸ ತಿರುವು ಪಡೆದುಕೊಂಡಿದೆ. ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದು ಕೊರತೆ, ಪಿಂಚಣಿ ಇಲಾಖೆಗೆ ವರ್ಗಾವಣೆ ಗೊಂಡಿದ್ದ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪಾನ್‌ ಬಂದೋಪಾದ್ಯಾಯ್‌ ತಮ್ಮ ಹುದ್ದೆಯಿಂದ ನಿವೃತ್ತರಾಗಿದ್ದಾರೆ. ಅದೇ ಸಮಯಕ್ಕೆ ಸಿಎಂ ಮಮತಾ ಬ್ಯಾನರ್ಜಿಯವರು ಅವರನ್ನು ತಮ್ಮ ಮುಖ್ಯ ಸಲಹೆಗಾರರಾಗಿ ನೇಮಕ ಮಾಡಿಕೊಂಡಿದ್ದಾರೆ.

ಕೇಂದ್ರ ಸರ್ಕಾರದ ಆದೇಶದಂತೆ ಇಂದು ಬೆಳಗ್ಗೆ 10 ಗಂಟೆಯ ಒಳಗೆ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಸೇವೆಯಿಂದ ಬಿಡುಗಡೆಗೊಂಡು ಕೇಂದ್ರ ಸರ್ಕಾರದ ಸೇವೆಗೆ ವರದಿ ಮಾಡಿಕೊಳ್ಳಬೇಕಿದ್ದ ಅಲಪಾನ್‌ ಬಂದೋಪಾದ್ಯಾಯ್‌ ತಮ್ಮ ಉದ್ಯೋಗದಿಂದಲೇ ನಿವೃತ್ತಿಗೊಂಡಿದ್ದಾರೆ. ಜೊತೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ದಿಢೀರ್‌ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬಂದೋಪಾದ್ಯಾಯ ಅವರನ್ನು ತಮ್ಮ ಮಖ್ಯ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದಾರೆ.

ಕೇಂದ್ರ ಸರ್ಕಾರದ ವರ್ಗಾವಣೆ ಆದೇಶಕ್ಕೆ ತಿರುಗೇಟು ನೀಡಲು ಮುಂದಾದ ಮಮತಾ ಬ್ಯಾನರ್ಜಿ ತನ್ನ ಮುಖ್ಯ ಕಾರ್ಯದರ್ಶಿಯಾಗಿದ್ದ ಬಂದೋಪಾದ್ಯಾಯ ಅವರನ್ನು ಸರ್ಕಾರದ ಮುಖ್ಯ ಸಲಹೆಗಾರರನ್ನಾಗಿ ನೇಮಿಸಿಕೊಂಡಿದೆ. ಆ ಮೂಲಕ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿಯವರೊಂದಿಗೆ ಮತ್ತೊಂದು ಸುತ್ತಿನ ರಾಜಕೀಯ ಸಂಘರ್ಷಕ್ಕೆ ಮುಂದಾಗಿದ್ದಾರೆ.

ಪಶ್ಚಿಮ ಬಂಗಾಳದ ಈ ರಾಜಕೀಯ ಹೈಡ್ರಾಮಾ ಹಿರಿಯ ಐಎಎಸ್‌ ಅಧಿಕಾರಿ ಬಂದೋಪಾದ್ಯಾಯ ಅವರನ್ನು ರಕ್ಷಿಸುವಂತೆ ಕಾಣುತ್ತಿಲ್ಲ. ಕೇಂದ್ರ ಸರ್ಕಾರ ತನ್ನ ಆದೇಶಕ್ಕೆ ವಿರುದ್ಧ ನಡೆದ ಬಂದೋಪಾದ್ಯಾಯ ಅವರ ವಿರುದ್ಧ ಕ್ರಮಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಬಂದೋಪಾದ್ಯಾಯ ಅವರ ವಿರುದ್ಧ ಕೇಂದ್ರ ಸರ್ಕಾರ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಲಿದೆ ಎನ್ನಲಾಗಿದೆ.

ಅಲಪಾನ್‌ ಬಂದೋಪಾದ್ಯಾಯ್‌ ಅವರ ಸ್ಥಾನಕ್ಕೆ ಹೆ.ಕೆ. ದ್ವಿವೇದಿಯವರು ಪಶ್ಚಿಮ ಬಂಗಾಳದ ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿಯ ವರ್ಗಾವಣೆ ಆದೇಶವನ್ನು ಹಿಂಪಡೆಯಬೇಕು ಎಂದು ಮಮತಾ ಬ್ಯಾನರ್ಜಿ ಕೇಂದ್ರಕ್ಕೆ 5 ಪುಟಗಳ ಪತ್ರವನ್ನು ಬರೆದಿದ್ದರು. ಇಂದು ಕೇಂದ್ರ ಸರ್ಕಾರ ವರ್ಗಾವಣೆ ಆದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಪತ್ರಕ್ಕೆ ಉತ್ತರಿಸಿದೆ.

ಕೇಂದ್ರ ಸರ್ಕಾರ ವರ್ಗಾವಣೆ ಆದೇಶವನ್ನು ಹಿಂಪಡೆಯಲು ನಿರಾಕರಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ನಿವೃತ್ತಿಗೊಳಿಸಿ ಅವರ ಜಾಗಕ್ಕೆ ಹೊಸ ಕಾರ್ಯದರ್ಶಿಯನ್ನು ನೇಮಕ ಮಾಡಿದೆ. ಜೊತೆಗೆ ಹಿಂದಿನ ಮುಖ್ಯಕಾರ್ಯದರ್ಶಿಯನ್ನು ಸರ್ಕಾರದ ಮುಖ್ಯ ಸಲಹೆಗಾರರನ್ನಾಗಿ ನೇಮಿಸಿಕೊಂಡಿದೆ. ಆ ಮೂಲಕ ತಮ್ಮ ಪರವಾಗಿರುವ ಅಧಿಕಾರಿಯನ್ನು ರಕ್ಷಿಸುವ ಪ್ರಯತ್ನವನ್ನು ಮಮತಾ ಬ್ಯಾನರ್ಜಿ ಮಾಡಿದ್ದಾರೆ.

ಈ ಎಲ್ಲ ಬೆಳವಣಿಗೆಯ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪ್ರಧಾನಿ ಮೋದಿಯವರ ಮೇಲೆ ಆರೋಪದ ಸುರಿಮಳೆಯನ್ನು ಮುಂದುವರೆಸಿದ್ದಾರೆ.

ಇದೊಂದು ರಾಜಕೀಯ ದಾಳಿ. ನಾನು ಇದುವರೆಗೆ ಇಂತಹ ಹೃದಯವಿಲ್ಲದ ಪ್ರಧಾನ ಮಂತ್ರಿಯನ್ನು ನೋಡಿರಲಿಲ್ಲ. ಮುಖ್ಯಮಂತ್ರಿಯ ಮೇಲೆ ದಾಳಿ ನಡೆಸಲು ಪ್ರಧಾನಿ ಮೋದಿ ಬಯಸುತ್ತಾರೆ. ಆ ಕಾರಣದಿಂದ ರಾಜ್ಯದ ಮುಖ್ಯ ಕಾರ್ಯದರ್ಶಿಯ ಮೇಲೆ ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರದೊಂದಿಗೆ ಚರ್ಚೆಯನ್ನು ನಡೆಸಲು ಸಿದ್ಧವಿಲ್ಲ. ಯಾಕೆಂದರೆ ಅವರು ಚುನಾವಣೆಯಲ್ಲಿ ಸೋತಿದ್ದಾರೆ. ಯಾಕೆಂದರೆ ಪ್ರಧಾನಿಯವರು ಮಮತಾ ಬ್ಯಾನರ್ಜಿಯನ್ನು ದ್ವೇಷಿಸುತ್ತಾರೆ ಎನ್ನುವ ಮೂಲಕ ಮುಖ್ಯ ಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿಯವರ ಮೇಲಿನ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ.

ಕೇಂದ್ರ ಒಂದು ವಿಚಾರವನ್ನು ನೆನಪಿನಲ್ಲಿಟ್ಟುಕೊಳ್ಳಲಿ. ಅಲಪಾನ್‌ ಬಂದೋಪಾದ್ಯಾಯ್‌ ಅವರ ಸೇವಾವಧಿ ಮುಗಿದಿದೆ. ಅವರು ಕೇಂದ್ರದ ಸೇವೆಗೆ ಇನ್ನು ಲಭ್ಯರಿಲ್ಲ. ಚಂಡಮಾರುತ ಮತ್ತು ಕೊರೋನಾ ಸಾಂಕ್ರಾಮಿಕದಿಂದ ನಲುಗಿ ಹೋಗಿರುವ ಪಶ್ಚಿಮ ಬಂಗಾಳಕ್ಕೆ ಬಂದೋಪಾದ್ಯಾಯ್‌ ಅವರ ಸೇವೆಯ ಅವಶ್ಯಕತೆಯಿದೆ. ಅವರು ಸರ್ಕಾರದೊಟ್ಟಿಗೆ ಇನ್ನು ಮುಂದೆ ಕೆಲಸ ಮಾಡುತ್ತಾರೆ. ಬಡವರು ಮತ್ತು ಸಂಕಷ್ಟದಲ್ಲಿರುವ ದೇಶದ, ರಾಜ್ಯದ ಜನರ ಪರವಾಗಿನ ತಮ್ಮ ಕೆಲಸವನ್ನು ಬಂದೋಪಾದ್ಯಾಯ್‌ ಅವರು ಮುಂದುವರೆಸಲಿದ್ದಾರೆ ಎಂದು ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರಕ್ಕೆ ತಮ್ಮ ನಡುವಿನ ರಾಜಕೀಯ ಸಂಘರ್ಷ ಇನ್ನು ಮುಗಿದಿಲ್ಲವೆನ್ನುವ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.


ಇದನ್ನೂ ಓದಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಡಕತ್ತರಿಯಲ್ಲಿ‌ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪಾನ್‌ ಬಂದೋಪಾದ್ಯಾಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...