Homeಮುಖಪುಟಸರ್ಕಾರದ ಹುದ್ದೆಗೆ ನಿವೃತ್ತಿ - ಸಿಎಂ ಮಮತಾ ಬ್ಯಾನರ್ಜಿಯವರ ಮುಖ್ಯ ಸಲಹೆಗಾರರಾಗಿ ನೇಮಕಗೊಂಡ ಅಲಪಾನ್‌ ಬಂದೋಪಾದ್ಯಾಯ್‌

ಸರ್ಕಾರದ ಹುದ್ದೆಗೆ ನಿವೃತ್ತಿ – ಸಿಎಂ ಮಮತಾ ಬ್ಯಾನರ್ಜಿಯವರ ಮುಖ್ಯ ಸಲಹೆಗಾರರಾಗಿ ನೇಮಕಗೊಂಡ ಅಲಪಾನ್‌ ಬಂದೋಪಾದ್ಯಾಯ್‌

- Advertisement -
- Advertisement -

ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ನಡುವಿನ ಆಡಳಿತಾತ್ಮಕ ಬಿಕ್ಕಟ್ಟು ಇನ್ನಷ್ಟು ತೀವ್ರಗೊಂಡಿದೆ. ಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ಮೋದಿ ನಡುವಿನ ರಾಜಕೀಯ ಸಂಘರ್ಷ ಹೊಸ ತಿರುವು ಪಡೆದುಕೊಂಡಿದೆ. ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದು ಕೊರತೆ, ಪಿಂಚಣಿ ಇಲಾಖೆಗೆ ವರ್ಗಾವಣೆ ಗೊಂಡಿದ್ದ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪಾನ್‌ ಬಂದೋಪಾದ್ಯಾಯ್‌ ತಮ್ಮ ಹುದ್ದೆಯಿಂದ ನಿವೃತ್ತರಾಗಿದ್ದಾರೆ. ಅದೇ ಸಮಯಕ್ಕೆ ಸಿಎಂ ಮಮತಾ ಬ್ಯಾನರ್ಜಿಯವರು ಅವರನ್ನು ತಮ್ಮ ಮುಖ್ಯ ಸಲಹೆಗಾರರಾಗಿ ನೇಮಕ ಮಾಡಿಕೊಂಡಿದ್ದಾರೆ.

ಕೇಂದ್ರ ಸರ್ಕಾರದ ಆದೇಶದಂತೆ ಇಂದು ಬೆಳಗ್ಗೆ 10 ಗಂಟೆಯ ಒಳಗೆ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಸೇವೆಯಿಂದ ಬಿಡುಗಡೆಗೊಂಡು ಕೇಂದ್ರ ಸರ್ಕಾರದ ಸೇವೆಗೆ ವರದಿ ಮಾಡಿಕೊಳ್ಳಬೇಕಿದ್ದ ಅಲಪಾನ್‌ ಬಂದೋಪಾದ್ಯಾಯ್‌ ತಮ್ಮ ಉದ್ಯೋಗದಿಂದಲೇ ನಿವೃತ್ತಿಗೊಂಡಿದ್ದಾರೆ. ಜೊತೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ದಿಢೀರ್‌ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬಂದೋಪಾದ್ಯಾಯ ಅವರನ್ನು ತಮ್ಮ ಮಖ್ಯ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದಾರೆ.

ಕೇಂದ್ರ ಸರ್ಕಾರದ ವರ್ಗಾವಣೆ ಆದೇಶಕ್ಕೆ ತಿರುಗೇಟು ನೀಡಲು ಮುಂದಾದ ಮಮತಾ ಬ್ಯಾನರ್ಜಿ ತನ್ನ ಮುಖ್ಯ ಕಾರ್ಯದರ್ಶಿಯಾಗಿದ್ದ ಬಂದೋಪಾದ್ಯಾಯ ಅವರನ್ನು ಸರ್ಕಾರದ ಮುಖ್ಯ ಸಲಹೆಗಾರರನ್ನಾಗಿ ನೇಮಿಸಿಕೊಂಡಿದೆ. ಆ ಮೂಲಕ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿಯವರೊಂದಿಗೆ ಮತ್ತೊಂದು ಸುತ್ತಿನ ರಾಜಕೀಯ ಸಂಘರ್ಷಕ್ಕೆ ಮುಂದಾಗಿದ್ದಾರೆ.

ಪಶ್ಚಿಮ ಬಂಗಾಳದ ಈ ರಾಜಕೀಯ ಹೈಡ್ರಾಮಾ ಹಿರಿಯ ಐಎಎಸ್‌ ಅಧಿಕಾರಿ ಬಂದೋಪಾದ್ಯಾಯ ಅವರನ್ನು ರಕ್ಷಿಸುವಂತೆ ಕಾಣುತ್ತಿಲ್ಲ. ಕೇಂದ್ರ ಸರ್ಕಾರ ತನ್ನ ಆದೇಶಕ್ಕೆ ವಿರುದ್ಧ ನಡೆದ ಬಂದೋಪಾದ್ಯಾಯ ಅವರ ವಿರುದ್ಧ ಕ್ರಮಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಬಂದೋಪಾದ್ಯಾಯ ಅವರ ವಿರುದ್ಧ ಕೇಂದ್ರ ಸರ್ಕಾರ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಲಿದೆ ಎನ್ನಲಾಗಿದೆ.

ಅಲಪಾನ್‌ ಬಂದೋಪಾದ್ಯಾಯ್‌ ಅವರ ಸ್ಥಾನಕ್ಕೆ ಹೆ.ಕೆ. ದ್ವಿವೇದಿಯವರು ಪಶ್ಚಿಮ ಬಂಗಾಳದ ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿಯ ವರ್ಗಾವಣೆ ಆದೇಶವನ್ನು ಹಿಂಪಡೆಯಬೇಕು ಎಂದು ಮಮತಾ ಬ್ಯಾನರ್ಜಿ ಕೇಂದ್ರಕ್ಕೆ 5 ಪುಟಗಳ ಪತ್ರವನ್ನು ಬರೆದಿದ್ದರು. ಇಂದು ಕೇಂದ್ರ ಸರ್ಕಾರ ವರ್ಗಾವಣೆ ಆದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಪತ್ರಕ್ಕೆ ಉತ್ತರಿಸಿದೆ.

ಕೇಂದ್ರ ಸರ್ಕಾರ ವರ್ಗಾವಣೆ ಆದೇಶವನ್ನು ಹಿಂಪಡೆಯಲು ನಿರಾಕರಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ನಿವೃತ್ತಿಗೊಳಿಸಿ ಅವರ ಜಾಗಕ್ಕೆ ಹೊಸ ಕಾರ್ಯದರ್ಶಿಯನ್ನು ನೇಮಕ ಮಾಡಿದೆ. ಜೊತೆಗೆ ಹಿಂದಿನ ಮುಖ್ಯಕಾರ್ಯದರ್ಶಿಯನ್ನು ಸರ್ಕಾರದ ಮುಖ್ಯ ಸಲಹೆಗಾರರನ್ನಾಗಿ ನೇಮಿಸಿಕೊಂಡಿದೆ. ಆ ಮೂಲಕ ತಮ್ಮ ಪರವಾಗಿರುವ ಅಧಿಕಾರಿಯನ್ನು ರಕ್ಷಿಸುವ ಪ್ರಯತ್ನವನ್ನು ಮಮತಾ ಬ್ಯಾನರ್ಜಿ ಮಾಡಿದ್ದಾರೆ.

ಈ ಎಲ್ಲ ಬೆಳವಣಿಗೆಯ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪ್ರಧಾನಿ ಮೋದಿಯವರ ಮೇಲೆ ಆರೋಪದ ಸುರಿಮಳೆಯನ್ನು ಮುಂದುವರೆಸಿದ್ದಾರೆ.

ಇದೊಂದು ರಾಜಕೀಯ ದಾಳಿ. ನಾನು ಇದುವರೆಗೆ ಇಂತಹ ಹೃದಯವಿಲ್ಲದ ಪ್ರಧಾನ ಮಂತ್ರಿಯನ್ನು ನೋಡಿರಲಿಲ್ಲ. ಮುಖ್ಯಮಂತ್ರಿಯ ಮೇಲೆ ದಾಳಿ ನಡೆಸಲು ಪ್ರಧಾನಿ ಮೋದಿ ಬಯಸುತ್ತಾರೆ. ಆ ಕಾರಣದಿಂದ ರಾಜ್ಯದ ಮುಖ್ಯ ಕಾರ್ಯದರ್ಶಿಯ ಮೇಲೆ ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರದೊಂದಿಗೆ ಚರ್ಚೆಯನ್ನು ನಡೆಸಲು ಸಿದ್ಧವಿಲ್ಲ. ಯಾಕೆಂದರೆ ಅವರು ಚುನಾವಣೆಯಲ್ಲಿ ಸೋತಿದ್ದಾರೆ. ಯಾಕೆಂದರೆ ಪ್ರಧಾನಿಯವರು ಮಮತಾ ಬ್ಯಾನರ್ಜಿಯನ್ನು ದ್ವೇಷಿಸುತ್ತಾರೆ ಎನ್ನುವ ಮೂಲಕ ಮುಖ್ಯ ಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿಯವರ ಮೇಲಿನ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ.

ಕೇಂದ್ರ ಒಂದು ವಿಚಾರವನ್ನು ನೆನಪಿನಲ್ಲಿಟ್ಟುಕೊಳ್ಳಲಿ. ಅಲಪಾನ್‌ ಬಂದೋಪಾದ್ಯಾಯ್‌ ಅವರ ಸೇವಾವಧಿ ಮುಗಿದಿದೆ. ಅವರು ಕೇಂದ್ರದ ಸೇವೆಗೆ ಇನ್ನು ಲಭ್ಯರಿಲ್ಲ. ಚಂಡಮಾರುತ ಮತ್ತು ಕೊರೋನಾ ಸಾಂಕ್ರಾಮಿಕದಿಂದ ನಲುಗಿ ಹೋಗಿರುವ ಪಶ್ಚಿಮ ಬಂಗಾಳಕ್ಕೆ ಬಂದೋಪಾದ್ಯಾಯ್‌ ಅವರ ಸೇವೆಯ ಅವಶ್ಯಕತೆಯಿದೆ. ಅವರು ಸರ್ಕಾರದೊಟ್ಟಿಗೆ ಇನ್ನು ಮುಂದೆ ಕೆಲಸ ಮಾಡುತ್ತಾರೆ. ಬಡವರು ಮತ್ತು ಸಂಕಷ್ಟದಲ್ಲಿರುವ ದೇಶದ, ರಾಜ್ಯದ ಜನರ ಪರವಾಗಿನ ತಮ್ಮ ಕೆಲಸವನ್ನು ಬಂದೋಪಾದ್ಯಾಯ್‌ ಅವರು ಮುಂದುವರೆಸಲಿದ್ದಾರೆ ಎಂದು ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರಕ್ಕೆ ತಮ್ಮ ನಡುವಿನ ರಾಜಕೀಯ ಸಂಘರ್ಷ ಇನ್ನು ಮುಗಿದಿಲ್ಲವೆನ್ನುವ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.


ಇದನ್ನೂ ಓದಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಡಕತ್ತರಿಯಲ್ಲಿ‌ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪಾನ್‌ ಬಂದೋಪಾದ್ಯಾಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...