ವಿವಾದಿತ ಸಿಗಂದೂರು ಚೌಡೇಶ್ವರಿ ದೇವಸ್ಥಾನ ನಿರ್ವಹಣೆಗೆ ಜಿಲ್ಲಾಡಳಿತ ರಚಿಸಿರುವ ಸಮಿತಿಯನ್ನು ಹಿಂಪಡೆಯಬೇಕೆಂದು ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡುತ್ತೇನೆ ಎಂದು ದೇವಸ್ಥಾನ ಟ್ರಸ್ಟ್ನ ಧರ್ಮದರ್ಶಿ ರಾಮಪ್ಪ ತಿಳಿಸಿದ್ದಾರೆ.
ನೆನ್ನೆ ಸಂಜೆಯಷ್ಟೆ ನೂತನ ಸಮಿತಿ ಸಭೆ ನಡೆಸಿದ ಬೆನ್ನಲ್ಲೆ ಈ ಸಮಿತಿಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಈಡಿಗ ಸಮುದಾಯ ಪ್ರತಿಭಟಿಸ ಬೇಕೆಂದು ರಾಮಪ್ಪ ಬಹಿರಂಗ ಕರೆ ನೀಡಿದ್ದಾರೆ.
ಇಂದು ಆರ್ಯ ಈಡಿಗ ಸಮುದಾಯಭವನದಲ್ಲಿನಡೆದ ದಿನಪತ್ರಿಕೆಯೊಂದರ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, “ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಯಾವ ಭ್ರಷ್ಟಾಚಾರಗಳು ನಡೆದಿಲ್ಲ. ಇದು ಹಿಂದುಳಿದ ವರ್ಗಗಳ ಧಾರ್ಮಿಕ ಕೇಂದ್ರ. ಆದರೂ ದೇವಸ್ಥಾನಕ್ಕೆ ಸಮಿತಿ ರಚನೆ ಮಾಡುವ ಮೂಲಕ ಏನೋ ಕಂಟಕ ಮಾಡಲು ಸರ್ಕಾರ ಹೊರಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇವಸ್ಥಾನಕ್ಕೆ ಮಾಡಿರುವ ಸಮಿತಿಯನ್ನು ಹಿಂಪಡೆಯಬೇಕೆಂದು ಆರ್ಯ ಈಡಿಗ ಮಠದ ಶ್ರೀರೇಣುಕಾನಂದ ಶ್ರೀಗಳು ಮತ್ತು ಸಮುದಾಯ ಹೋರಾಟ ನಡೆಸಬೇಕು. ಅದಕ್ಕೆ ನಾನು ಎಲ್ಲಾ ರೀತಿಯ ಬೆಂಬಲವನ್ನು ನೀಡುತ್ತೇನೆ ಎಂದು ಘೋಷಿಸಿದರು.
ಇದನ್ನೂ ಓದಿ: ನೋಂದಣಿಯಾಗದ, ಆಸ್ತಿಯಿಲ್ಲದ RSS ಗೆ ಕಟ್ಟಡ ಕಟ್ಟುತ್ತಿರುವುದೇಕೆ?: ಬಿ.ಕೆ ಹರಿಪ್ರಸಾದ್ ಪ್ರಶ್ನೆ