Homeಅಂತರಾಷ್ಟ್ರೀಯಅಮೆರಿಕ ತೊರೆಯಿರಿ, ಇಲ್ಲ ಶೂಟ್ ಮಾಡುತ್ತೇವೆ: ಭಾರತ, ಚೀನಿ ಟೆಕ್ಕಿಗಳಿಗೆ ಬೆದರಿಕೆ

ಅಮೆರಿಕ ತೊರೆಯಿರಿ, ಇಲ್ಲ ಶೂಟ್ ಮಾಡುತ್ತೇವೆ: ಭಾರತ, ಚೀನಿ ಟೆಕ್ಕಿಗಳಿಗೆ ಬೆದರಿಕೆ

ಹಿಂತಿರುಗಿ ಹೋಗದೆ ಇದ್ದಲ್ಲಿ, ಕೆಲಸದ ಸ್ಥಳಗಳು, ಆಟದ ಮೈದಾನಗಳು ಮತ್ತು ಪೂಲ್‌ಗಳಲ್ಲಿ “ನಿರ್ದಯವಾಗಿ ಶೂಟ್” ಮಾಡದೇ ನಮಗೆ ಬೇರೆ ದಾರಿಯಿಲ್ಲ ಎಂದು ಪತ್ರದಲ್ಲಿ ತಿಳಿಸಿದೆ.

- Advertisement -
- Advertisement -

ಅಮೆರಿಕದಲ್ಲಿ ಮತ್ತೆ ಭಾರತೀಯರ ಮೇಲೆ ಜನಾಂಗೀಯ ದ್ವೇಷ ಆರಂಭವಾಗಿದೆ. ಟೆಕ್ಸಾಸ್‌ನ ಇರ್ವಿಂಗ್‌ನಲ್ಲಿ ವಾಸವಿರುವ ಭಾರತೀಯರು ಮತ್ತು ಚೀನಿಯರಿಗೆ ಅನಾಮಧೇಯ ಬೆದರಿಕೆ ಪತ್ರ ಬಂದಿದ್ದು, ತಮ್ಮ ದೇಶಗಳಿಗೆ ತೆರಳುವಂತೆ ಆದೇಶಿಸಲಾಗಿದೆ. ಇಲ್ಲದಿದ್ದರೇ ನಿರ್ದಯವಾಗಿ ಗುಂಡು ಹಾರಿಸುವುದಾಗಿ ಬೆದರಿಸಲಾಗಿದೆ.

ದಪ್ಪ ಅಕ್ಷರಗಳಲ್ಲಿ “ರಿಟರ್ನ್ ಬ್ಯಾಕ್ ಟು ಯುವರ್ ಕಂಟ್ರಿ”  ಎಂದು ಬರೆದಿರುವ ಈ ಪತ್ರವು  ಐಟಿ ಉದ್ಯಮ ಮತ್ತು ಇತರ ವೃತ್ತಿಪರ ಕ್ಷೇತ್ರಗಳಲ್ಲಿ ಉದ್ಯೋಗ ಪಡೆದಿರುವ ಭಾರತೀಯರು ಮತ್ತು ಚೀನೀಯರನ್ನು ಗುರಿಯಾಗಿಸಿಕೊಂಡಿದೆ. ಹಿಂತಿರುಗಿ ಹೋಗದೆ ಇದ್ದಲ್ಲಿ, ಕೆಲಸದ ಸ್ಥಳಗಳು, ಆಟದ ಮೈದಾನಗಳು ಮತ್ತು ಪೂಲ್‌ಗಳಲ್ಲಿ “ನಿರ್ದಯವಾಗಿ ಶೂಟ್” ಮಾಡದೇ ನಮಗೆ ಬೇರೆ ದಾರಿಯಿಲ್ಲ ಎಂದು ಪತ್ರದಲ್ಲಿ ತಿಳಿಸಿದೆ.

image courtesy: Thenewsminute

ಇರ್ವಿಂಗ್‌ನಲ್ಲಿರುವ ಪೊಲೀಸ್ ಇಲಾಖೆ ಭಾರತೀಯ ಮತ್ತು ಚೀನಾದ ಟೆಕ್ಕಿಗಳಿಗೆ ಬೆದರಿಕೆ ಹಾಕುವ ಜನಾಂಗೀಯ ಪತ್ರದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಬೆದರಿಕೆ ಪತ್ರವನ್ನು ಸಮುದಾಯದ ಸದಸ್ಯರೊಬ್ಬರು ಸ್ವೀಕರಿಸಿದ್ದು, ನಾವು ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಪೊಲೀಸರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇನ್ನು ಪತ್ರವನ್ನು ಟೆಕ್ಸಾಸ್‌ನ ಇರ್ವಿಂಗ್ ನಿವಾಸಿಯೊಬ್ಬರಿಗೆ ಕಳುಹಿಸಿದ್ದು, ಇದನ್ನು ಪ್ರತ್ಯೇಕ ಪ್ರಕರಣ ಎಂದೇ ಪರಿಗಣಿಸುತ್ತೇವೆ ಎಂದಿದ್ದಾರೆ.  ಪತ್ರದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಿದ್ದರೆ ತನಿಖಾ ಅಧಿಕಾರಿಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರನ್ನು ಕೋರಿದ್ದಾರೆ.

ಕೊರೋನಾ ಹಿನ್ನೆಯಲ್ಲಿ ಅಮೆರಿಕದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು, H-1B ವೀಸಾ ಹೊಂದಿದವರ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಹೊಸ ವೀಸಾಗಳ ವಿತರಣೆಯನ್ನು ನಿಲ್ಲಿಸಲು ಅಧ್ಯಕ್ಷ ಟ್ರಂಪ್ ಆದೇಶಿಸಿದ್ದರು. ವೀಸಾಗಳ ನವೀಕರಣ ಇಲ್ಲದೆ ಭಾರತಕ್ಕೆ ಮರಳಿದ್ದ ಅನೇಕ ಭಾರತೀಯರು ಇಲ್ಲೇ ಸಿಲುಕಿದ್ದರು. ಹೀಗಾಗಿ ಕೆಲ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. H-1B ವೀಸಾ ಹೊಂದಿದವರಲ್ಲಿ ಹೆಚ್ಚಿನವರು ಭಾರತೀಯರೇ ಆಗಿದ್ದಾರೆ.

ಸದ್ಯ ಬೆದರಿಕೆ ಪತ್ರವನ್ನು ಗಮನದಲ್ಲಿಇರಿಸಿಕೊಂಡು ನೋಡುವುದಾದರೇ, ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲೇ ಪತ್ರ ಬರೆಯಲಾಗಿದೆ ಎನ್ನಬಹುದು. ಅಮೆರಿಕದಲ್ಲಿನ ಐಟಿ ವಿಭಾಗದ ಅತಿಹೆಚ್ಚು ಉದ್ಯೋಗಗಳು ಭಾರತೀಯರು ಮತ್ತು ಚೀನಿಯರ ಪಾಲಾಗಿವೆ.

ಈ ಹಿಂದೆಯೂ ಕೂಡ ಯುಎಸ್‌ಎನಲ್ಲಿ ಭಾರತೀಯರನ್ನು ಗುರಿಯಾಗಿಸಿ ಜನಾಂಗೀಯ ಕೃತ್ಯ ನಡೆಸಲಾಗಿದೆ. 2017ರ ಫೆಬ್ರವರಿ 22 ರಂದು ಕಾನ್ಸಾಸ್‌ನ ಓಲಾಥೆಯ ಭಾರತೀಯ ನಿವಾಸಿ ಶ್ರೀನಿವಾಸ್ ಕುಚಿಭೋಟ್ಲಾ ಅವರನ್ನು ಆಡಮ್ ಪ್ಯೂರಿಂಟನ್ ಎಂಬುವವನು ಗುಂಡಿಕ್ಕಿ ಹತ್ಯೆ ಮಾಡಿದ್ದನು. ಜೊತೆಯಲ್ಲಿದ್ದ ಅಲೋಕ್ ಮದಾಸಾನಿ ಮೇಲೂ ದಾಳಿ ಮಾಡಿ ’ನನ್ನ ದೇಶ ಬಿಟ್ಟು ಹೊರಟುಹೋಗಿ’ ಮತ್ತು ಭಯೋತ್ಪಾದಕರು ಎಂದು ಕೂಗಿ ಗುಂಡು ಹಾರಿಸಲಾಗಿತ್ತು ಎಂದು ವರದಿಯಾಗಿದೆ.

ಇನ್ನು ನಿನ್ನೆಯ ಘಟನೆ ಮತ್ತೆ ಅಮೆರಿಕದಲ್ಲಿ ಭಾರತೀಯರ ಮೇಲೆ ದಾಳಿಗಳು ನಡೆಯುವ ಸಂಭವವನ್ನು ಸೂಚಿಸುತ್ತಿದೆ. ಪೊಲೀಸರು ಈ ಬಗ್ಗೆ ಕ್ರಮ ಕೈಗೊಳುವ ಭರವಸೆ ನೀಡಿದ್ದರೂ, ಟೆಕ್ಸಾಸ್‌ನ ಇರ್ವಿಂಗ್‌ನಲ್ಲಿ ವಾಸವಿರುವ ಭಾರತೀಯರು ಮತ್ತು ಚೀನಿಯರಲ್ಲಿ ಆತಂಕ ಕಡಿಮೆಯಾಗಿಲ್ಲ.


ಇದನ್ನೂ ಓದಿ:H-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...