Homeಅಂತರಾಷ್ಟ್ರೀಯಅಮೆರಿಕ ತೊರೆಯಿರಿ, ಇಲ್ಲ ಶೂಟ್ ಮಾಡುತ್ತೇವೆ: ಭಾರತ, ಚೀನಿ ಟೆಕ್ಕಿಗಳಿಗೆ ಬೆದರಿಕೆ

ಅಮೆರಿಕ ತೊರೆಯಿರಿ, ಇಲ್ಲ ಶೂಟ್ ಮಾಡುತ್ತೇವೆ: ಭಾರತ, ಚೀನಿ ಟೆಕ್ಕಿಗಳಿಗೆ ಬೆದರಿಕೆ

ಹಿಂತಿರುಗಿ ಹೋಗದೆ ಇದ್ದಲ್ಲಿ, ಕೆಲಸದ ಸ್ಥಳಗಳು, ಆಟದ ಮೈದಾನಗಳು ಮತ್ತು ಪೂಲ್‌ಗಳಲ್ಲಿ “ನಿರ್ದಯವಾಗಿ ಶೂಟ್” ಮಾಡದೇ ನಮಗೆ ಬೇರೆ ದಾರಿಯಿಲ್ಲ ಎಂದು ಪತ್ರದಲ್ಲಿ ತಿಳಿಸಿದೆ.

- Advertisement -
- Advertisement -

ಅಮೆರಿಕದಲ್ಲಿ ಮತ್ತೆ ಭಾರತೀಯರ ಮೇಲೆ ಜನಾಂಗೀಯ ದ್ವೇಷ ಆರಂಭವಾಗಿದೆ. ಟೆಕ್ಸಾಸ್‌ನ ಇರ್ವಿಂಗ್‌ನಲ್ಲಿ ವಾಸವಿರುವ ಭಾರತೀಯರು ಮತ್ತು ಚೀನಿಯರಿಗೆ ಅನಾಮಧೇಯ ಬೆದರಿಕೆ ಪತ್ರ ಬಂದಿದ್ದು, ತಮ್ಮ ದೇಶಗಳಿಗೆ ತೆರಳುವಂತೆ ಆದೇಶಿಸಲಾಗಿದೆ. ಇಲ್ಲದಿದ್ದರೇ ನಿರ್ದಯವಾಗಿ ಗುಂಡು ಹಾರಿಸುವುದಾಗಿ ಬೆದರಿಸಲಾಗಿದೆ.

ದಪ್ಪ ಅಕ್ಷರಗಳಲ್ಲಿ “ರಿಟರ್ನ್ ಬ್ಯಾಕ್ ಟು ಯುವರ್ ಕಂಟ್ರಿ”  ಎಂದು ಬರೆದಿರುವ ಈ ಪತ್ರವು  ಐಟಿ ಉದ್ಯಮ ಮತ್ತು ಇತರ ವೃತ್ತಿಪರ ಕ್ಷೇತ್ರಗಳಲ್ಲಿ ಉದ್ಯೋಗ ಪಡೆದಿರುವ ಭಾರತೀಯರು ಮತ್ತು ಚೀನೀಯರನ್ನು ಗುರಿಯಾಗಿಸಿಕೊಂಡಿದೆ. ಹಿಂತಿರುಗಿ ಹೋಗದೆ ಇದ್ದಲ್ಲಿ, ಕೆಲಸದ ಸ್ಥಳಗಳು, ಆಟದ ಮೈದಾನಗಳು ಮತ್ತು ಪೂಲ್‌ಗಳಲ್ಲಿ “ನಿರ್ದಯವಾಗಿ ಶೂಟ್” ಮಾಡದೇ ನಮಗೆ ಬೇರೆ ದಾರಿಯಿಲ್ಲ ಎಂದು ಪತ್ರದಲ್ಲಿ ತಿಳಿಸಿದೆ.

image courtesy: Thenewsminute

ಇರ್ವಿಂಗ್‌ನಲ್ಲಿರುವ ಪೊಲೀಸ್ ಇಲಾಖೆ ಭಾರತೀಯ ಮತ್ತು ಚೀನಾದ ಟೆಕ್ಕಿಗಳಿಗೆ ಬೆದರಿಕೆ ಹಾಕುವ ಜನಾಂಗೀಯ ಪತ್ರದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಬೆದರಿಕೆ ಪತ್ರವನ್ನು ಸಮುದಾಯದ ಸದಸ್ಯರೊಬ್ಬರು ಸ್ವೀಕರಿಸಿದ್ದು, ನಾವು ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಪೊಲೀಸರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇನ್ನು ಪತ್ರವನ್ನು ಟೆಕ್ಸಾಸ್‌ನ ಇರ್ವಿಂಗ್ ನಿವಾಸಿಯೊಬ್ಬರಿಗೆ ಕಳುಹಿಸಿದ್ದು, ಇದನ್ನು ಪ್ರತ್ಯೇಕ ಪ್ರಕರಣ ಎಂದೇ ಪರಿಗಣಿಸುತ್ತೇವೆ ಎಂದಿದ್ದಾರೆ.  ಪತ್ರದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಿದ್ದರೆ ತನಿಖಾ ಅಧಿಕಾರಿಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರನ್ನು ಕೋರಿದ್ದಾರೆ.

ಕೊರೋನಾ ಹಿನ್ನೆಯಲ್ಲಿ ಅಮೆರಿಕದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು, H-1B ವೀಸಾ ಹೊಂದಿದವರ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಹೊಸ ವೀಸಾಗಳ ವಿತರಣೆಯನ್ನು ನಿಲ್ಲಿಸಲು ಅಧ್ಯಕ್ಷ ಟ್ರಂಪ್ ಆದೇಶಿಸಿದ್ದರು. ವೀಸಾಗಳ ನವೀಕರಣ ಇಲ್ಲದೆ ಭಾರತಕ್ಕೆ ಮರಳಿದ್ದ ಅನೇಕ ಭಾರತೀಯರು ಇಲ್ಲೇ ಸಿಲುಕಿದ್ದರು. ಹೀಗಾಗಿ ಕೆಲ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. H-1B ವೀಸಾ ಹೊಂದಿದವರಲ್ಲಿ ಹೆಚ್ಚಿನವರು ಭಾರತೀಯರೇ ಆಗಿದ್ದಾರೆ.

ಸದ್ಯ ಬೆದರಿಕೆ ಪತ್ರವನ್ನು ಗಮನದಲ್ಲಿಇರಿಸಿಕೊಂಡು ನೋಡುವುದಾದರೇ, ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲೇ ಪತ್ರ ಬರೆಯಲಾಗಿದೆ ಎನ್ನಬಹುದು. ಅಮೆರಿಕದಲ್ಲಿನ ಐಟಿ ವಿಭಾಗದ ಅತಿಹೆಚ್ಚು ಉದ್ಯೋಗಗಳು ಭಾರತೀಯರು ಮತ್ತು ಚೀನಿಯರ ಪಾಲಾಗಿವೆ.

ಈ ಹಿಂದೆಯೂ ಕೂಡ ಯುಎಸ್‌ಎನಲ್ಲಿ ಭಾರತೀಯರನ್ನು ಗುರಿಯಾಗಿಸಿ ಜನಾಂಗೀಯ ಕೃತ್ಯ ನಡೆಸಲಾಗಿದೆ. 2017ರ ಫೆಬ್ರವರಿ 22 ರಂದು ಕಾನ್ಸಾಸ್‌ನ ಓಲಾಥೆಯ ಭಾರತೀಯ ನಿವಾಸಿ ಶ್ರೀನಿವಾಸ್ ಕುಚಿಭೋಟ್ಲಾ ಅವರನ್ನು ಆಡಮ್ ಪ್ಯೂರಿಂಟನ್ ಎಂಬುವವನು ಗುಂಡಿಕ್ಕಿ ಹತ್ಯೆ ಮಾಡಿದ್ದನು. ಜೊತೆಯಲ್ಲಿದ್ದ ಅಲೋಕ್ ಮದಾಸಾನಿ ಮೇಲೂ ದಾಳಿ ಮಾಡಿ ’ನನ್ನ ದೇಶ ಬಿಟ್ಟು ಹೊರಟುಹೋಗಿ’ ಮತ್ತು ಭಯೋತ್ಪಾದಕರು ಎಂದು ಕೂಗಿ ಗುಂಡು ಹಾರಿಸಲಾಗಿತ್ತು ಎಂದು ವರದಿಯಾಗಿದೆ.

ಇನ್ನು ನಿನ್ನೆಯ ಘಟನೆ ಮತ್ತೆ ಅಮೆರಿಕದಲ್ಲಿ ಭಾರತೀಯರ ಮೇಲೆ ದಾಳಿಗಳು ನಡೆಯುವ ಸಂಭವವನ್ನು ಸೂಚಿಸುತ್ತಿದೆ. ಪೊಲೀಸರು ಈ ಬಗ್ಗೆ ಕ್ರಮ ಕೈಗೊಳುವ ಭರವಸೆ ನೀಡಿದ್ದರೂ, ಟೆಕ್ಸಾಸ್‌ನ ಇರ್ವಿಂಗ್‌ನಲ್ಲಿ ವಾಸವಿರುವ ಭಾರತೀಯರು ಮತ್ತು ಚೀನಿಯರಲ್ಲಿ ಆತಂಕ ಕಡಿಮೆಯಾಗಿಲ್ಲ.


ಇದನ್ನೂ ಓದಿ:H-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...