Homeಅಂತರಾಷ್ಟ್ರೀಯಅಮೆರಿಕ ತೊರೆಯಿರಿ, ಇಲ್ಲ ಶೂಟ್ ಮಾಡುತ್ತೇವೆ: ಭಾರತ, ಚೀನಿ ಟೆಕ್ಕಿಗಳಿಗೆ ಬೆದರಿಕೆ

ಅಮೆರಿಕ ತೊರೆಯಿರಿ, ಇಲ್ಲ ಶೂಟ್ ಮಾಡುತ್ತೇವೆ: ಭಾರತ, ಚೀನಿ ಟೆಕ್ಕಿಗಳಿಗೆ ಬೆದರಿಕೆ

ಹಿಂತಿರುಗಿ ಹೋಗದೆ ಇದ್ದಲ್ಲಿ, ಕೆಲಸದ ಸ್ಥಳಗಳು, ಆಟದ ಮೈದಾನಗಳು ಮತ್ತು ಪೂಲ್‌ಗಳಲ್ಲಿ “ನಿರ್ದಯವಾಗಿ ಶೂಟ್” ಮಾಡದೇ ನಮಗೆ ಬೇರೆ ದಾರಿಯಿಲ್ಲ ಎಂದು ಪತ್ರದಲ್ಲಿ ತಿಳಿಸಿದೆ.

- Advertisement -
- Advertisement -

ಅಮೆರಿಕದಲ್ಲಿ ಮತ್ತೆ ಭಾರತೀಯರ ಮೇಲೆ ಜನಾಂಗೀಯ ದ್ವೇಷ ಆರಂಭವಾಗಿದೆ. ಟೆಕ್ಸಾಸ್‌ನ ಇರ್ವಿಂಗ್‌ನಲ್ಲಿ ವಾಸವಿರುವ ಭಾರತೀಯರು ಮತ್ತು ಚೀನಿಯರಿಗೆ ಅನಾಮಧೇಯ ಬೆದರಿಕೆ ಪತ್ರ ಬಂದಿದ್ದು, ತಮ್ಮ ದೇಶಗಳಿಗೆ ತೆರಳುವಂತೆ ಆದೇಶಿಸಲಾಗಿದೆ. ಇಲ್ಲದಿದ್ದರೇ ನಿರ್ದಯವಾಗಿ ಗುಂಡು ಹಾರಿಸುವುದಾಗಿ ಬೆದರಿಸಲಾಗಿದೆ.

ದಪ್ಪ ಅಕ್ಷರಗಳಲ್ಲಿ “ರಿಟರ್ನ್ ಬ್ಯಾಕ್ ಟು ಯುವರ್ ಕಂಟ್ರಿ”  ಎಂದು ಬರೆದಿರುವ ಈ ಪತ್ರವು  ಐಟಿ ಉದ್ಯಮ ಮತ್ತು ಇತರ ವೃತ್ತಿಪರ ಕ್ಷೇತ್ರಗಳಲ್ಲಿ ಉದ್ಯೋಗ ಪಡೆದಿರುವ ಭಾರತೀಯರು ಮತ್ತು ಚೀನೀಯರನ್ನು ಗುರಿಯಾಗಿಸಿಕೊಂಡಿದೆ. ಹಿಂತಿರುಗಿ ಹೋಗದೆ ಇದ್ದಲ್ಲಿ, ಕೆಲಸದ ಸ್ಥಳಗಳು, ಆಟದ ಮೈದಾನಗಳು ಮತ್ತು ಪೂಲ್‌ಗಳಲ್ಲಿ “ನಿರ್ದಯವಾಗಿ ಶೂಟ್” ಮಾಡದೇ ನಮಗೆ ಬೇರೆ ದಾರಿಯಿಲ್ಲ ಎಂದು ಪತ್ರದಲ್ಲಿ ತಿಳಿಸಿದೆ.

image courtesy: Thenewsminute

ಇರ್ವಿಂಗ್‌ನಲ್ಲಿರುವ ಪೊಲೀಸ್ ಇಲಾಖೆ ಭಾರತೀಯ ಮತ್ತು ಚೀನಾದ ಟೆಕ್ಕಿಗಳಿಗೆ ಬೆದರಿಕೆ ಹಾಕುವ ಜನಾಂಗೀಯ ಪತ್ರದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಬೆದರಿಕೆ ಪತ್ರವನ್ನು ಸಮುದಾಯದ ಸದಸ್ಯರೊಬ್ಬರು ಸ್ವೀಕರಿಸಿದ್ದು, ನಾವು ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಪೊಲೀಸರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇನ್ನು ಪತ್ರವನ್ನು ಟೆಕ್ಸಾಸ್‌ನ ಇರ್ವಿಂಗ್ ನಿವಾಸಿಯೊಬ್ಬರಿಗೆ ಕಳುಹಿಸಿದ್ದು, ಇದನ್ನು ಪ್ರತ್ಯೇಕ ಪ್ರಕರಣ ಎಂದೇ ಪರಿಗಣಿಸುತ್ತೇವೆ ಎಂದಿದ್ದಾರೆ.  ಪತ್ರದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಿದ್ದರೆ ತನಿಖಾ ಅಧಿಕಾರಿಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರನ್ನು ಕೋರಿದ್ದಾರೆ.

ಕೊರೋನಾ ಹಿನ್ನೆಯಲ್ಲಿ ಅಮೆರಿಕದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು, H-1B ವೀಸಾ ಹೊಂದಿದವರ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಹೊಸ ವೀಸಾಗಳ ವಿತರಣೆಯನ್ನು ನಿಲ್ಲಿಸಲು ಅಧ್ಯಕ್ಷ ಟ್ರಂಪ್ ಆದೇಶಿಸಿದ್ದರು. ವೀಸಾಗಳ ನವೀಕರಣ ಇಲ್ಲದೆ ಭಾರತಕ್ಕೆ ಮರಳಿದ್ದ ಅನೇಕ ಭಾರತೀಯರು ಇಲ್ಲೇ ಸಿಲುಕಿದ್ದರು. ಹೀಗಾಗಿ ಕೆಲ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. H-1B ವೀಸಾ ಹೊಂದಿದವರಲ್ಲಿ ಹೆಚ್ಚಿನವರು ಭಾರತೀಯರೇ ಆಗಿದ್ದಾರೆ.

ಸದ್ಯ ಬೆದರಿಕೆ ಪತ್ರವನ್ನು ಗಮನದಲ್ಲಿಇರಿಸಿಕೊಂಡು ನೋಡುವುದಾದರೇ, ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲೇ ಪತ್ರ ಬರೆಯಲಾಗಿದೆ ಎನ್ನಬಹುದು. ಅಮೆರಿಕದಲ್ಲಿನ ಐಟಿ ವಿಭಾಗದ ಅತಿಹೆಚ್ಚು ಉದ್ಯೋಗಗಳು ಭಾರತೀಯರು ಮತ್ತು ಚೀನಿಯರ ಪಾಲಾಗಿವೆ.

ಈ ಹಿಂದೆಯೂ ಕೂಡ ಯುಎಸ್‌ಎನಲ್ಲಿ ಭಾರತೀಯರನ್ನು ಗುರಿಯಾಗಿಸಿ ಜನಾಂಗೀಯ ಕೃತ್ಯ ನಡೆಸಲಾಗಿದೆ. 2017ರ ಫೆಬ್ರವರಿ 22 ರಂದು ಕಾನ್ಸಾಸ್‌ನ ಓಲಾಥೆಯ ಭಾರತೀಯ ನಿವಾಸಿ ಶ್ರೀನಿವಾಸ್ ಕುಚಿಭೋಟ್ಲಾ ಅವರನ್ನು ಆಡಮ್ ಪ್ಯೂರಿಂಟನ್ ಎಂಬುವವನು ಗುಂಡಿಕ್ಕಿ ಹತ್ಯೆ ಮಾಡಿದ್ದನು. ಜೊತೆಯಲ್ಲಿದ್ದ ಅಲೋಕ್ ಮದಾಸಾನಿ ಮೇಲೂ ದಾಳಿ ಮಾಡಿ ’ನನ್ನ ದೇಶ ಬಿಟ್ಟು ಹೊರಟುಹೋಗಿ’ ಮತ್ತು ಭಯೋತ್ಪಾದಕರು ಎಂದು ಕೂಗಿ ಗುಂಡು ಹಾರಿಸಲಾಗಿತ್ತು ಎಂದು ವರದಿಯಾಗಿದೆ.

ಇನ್ನು ನಿನ್ನೆಯ ಘಟನೆ ಮತ್ತೆ ಅಮೆರಿಕದಲ್ಲಿ ಭಾರತೀಯರ ಮೇಲೆ ದಾಳಿಗಳು ನಡೆಯುವ ಸಂಭವವನ್ನು ಸೂಚಿಸುತ್ತಿದೆ. ಪೊಲೀಸರು ಈ ಬಗ್ಗೆ ಕ್ರಮ ಕೈಗೊಳುವ ಭರವಸೆ ನೀಡಿದ್ದರೂ, ಟೆಕ್ಸಾಸ್‌ನ ಇರ್ವಿಂಗ್‌ನಲ್ಲಿ ವಾಸವಿರುವ ಭಾರತೀಯರು ಮತ್ತು ಚೀನಿಯರಲ್ಲಿ ಆತಂಕ ಕಡಿಮೆಯಾಗಿಲ್ಲ.


ಇದನ್ನೂ ಓದಿ:H-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...