Homeಅಂತರಾಷ್ಟ್ರೀಯಅಮೆರಿಕ ತೊರೆಯಿರಿ, ಇಲ್ಲ ಶೂಟ್ ಮಾಡುತ್ತೇವೆ: ಭಾರತ, ಚೀನಿ ಟೆಕ್ಕಿಗಳಿಗೆ ಬೆದರಿಕೆ

ಅಮೆರಿಕ ತೊರೆಯಿರಿ, ಇಲ್ಲ ಶೂಟ್ ಮಾಡುತ್ತೇವೆ: ಭಾರತ, ಚೀನಿ ಟೆಕ್ಕಿಗಳಿಗೆ ಬೆದರಿಕೆ

ಹಿಂತಿರುಗಿ ಹೋಗದೆ ಇದ್ದಲ್ಲಿ, ಕೆಲಸದ ಸ್ಥಳಗಳು, ಆಟದ ಮೈದಾನಗಳು ಮತ್ತು ಪೂಲ್‌ಗಳಲ್ಲಿ “ನಿರ್ದಯವಾಗಿ ಶೂಟ್” ಮಾಡದೇ ನಮಗೆ ಬೇರೆ ದಾರಿಯಿಲ್ಲ ಎಂದು ಪತ್ರದಲ್ಲಿ ತಿಳಿಸಿದೆ.

- Advertisement -
- Advertisement -

ಅಮೆರಿಕದಲ್ಲಿ ಮತ್ತೆ ಭಾರತೀಯರ ಮೇಲೆ ಜನಾಂಗೀಯ ದ್ವೇಷ ಆರಂಭವಾಗಿದೆ. ಟೆಕ್ಸಾಸ್‌ನ ಇರ್ವಿಂಗ್‌ನಲ್ಲಿ ವಾಸವಿರುವ ಭಾರತೀಯರು ಮತ್ತು ಚೀನಿಯರಿಗೆ ಅನಾಮಧೇಯ ಬೆದರಿಕೆ ಪತ್ರ ಬಂದಿದ್ದು, ತಮ್ಮ ದೇಶಗಳಿಗೆ ತೆರಳುವಂತೆ ಆದೇಶಿಸಲಾಗಿದೆ. ಇಲ್ಲದಿದ್ದರೇ ನಿರ್ದಯವಾಗಿ ಗುಂಡು ಹಾರಿಸುವುದಾಗಿ ಬೆದರಿಸಲಾಗಿದೆ.

ದಪ್ಪ ಅಕ್ಷರಗಳಲ್ಲಿ “ರಿಟರ್ನ್ ಬ್ಯಾಕ್ ಟು ಯುವರ್ ಕಂಟ್ರಿ”  ಎಂದು ಬರೆದಿರುವ ಈ ಪತ್ರವು  ಐಟಿ ಉದ್ಯಮ ಮತ್ತು ಇತರ ವೃತ್ತಿಪರ ಕ್ಷೇತ್ರಗಳಲ್ಲಿ ಉದ್ಯೋಗ ಪಡೆದಿರುವ ಭಾರತೀಯರು ಮತ್ತು ಚೀನೀಯರನ್ನು ಗುರಿಯಾಗಿಸಿಕೊಂಡಿದೆ. ಹಿಂತಿರುಗಿ ಹೋಗದೆ ಇದ್ದಲ್ಲಿ, ಕೆಲಸದ ಸ್ಥಳಗಳು, ಆಟದ ಮೈದಾನಗಳು ಮತ್ತು ಪೂಲ್‌ಗಳಲ್ಲಿ “ನಿರ್ದಯವಾಗಿ ಶೂಟ್” ಮಾಡದೇ ನಮಗೆ ಬೇರೆ ದಾರಿಯಿಲ್ಲ ಎಂದು ಪತ್ರದಲ್ಲಿ ತಿಳಿಸಿದೆ.

image courtesy: Thenewsminute

ಇರ್ವಿಂಗ್‌ನಲ್ಲಿರುವ ಪೊಲೀಸ್ ಇಲಾಖೆ ಭಾರತೀಯ ಮತ್ತು ಚೀನಾದ ಟೆಕ್ಕಿಗಳಿಗೆ ಬೆದರಿಕೆ ಹಾಕುವ ಜನಾಂಗೀಯ ಪತ್ರದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಬೆದರಿಕೆ ಪತ್ರವನ್ನು ಸಮುದಾಯದ ಸದಸ್ಯರೊಬ್ಬರು ಸ್ವೀಕರಿಸಿದ್ದು, ನಾವು ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಪೊಲೀಸರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇನ್ನು ಪತ್ರವನ್ನು ಟೆಕ್ಸಾಸ್‌ನ ಇರ್ವಿಂಗ್ ನಿವಾಸಿಯೊಬ್ಬರಿಗೆ ಕಳುಹಿಸಿದ್ದು, ಇದನ್ನು ಪ್ರತ್ಯೇಕ ಪ್ರಕರಣ ಎಂದೇ ಪರಿಗಣಿಸುತ್ತೇವೆ ಎಂದಿದ್ದಾರೆ.  ಪತ್ರದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಿದ್ದರೆ ತನಿಖಾ ಅಧಿಕಾರಿಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರನ್ನು ಕೋರಿದ್ದಾರೆ.

ಕೊರೋನಾ ಹಿನ್ನೆಯಲ್ಲಿ ಅಮೆರಿಕದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು, H-1B ವೀಸಾ ಹೊಂದಿದವರ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಹೊಸ ವೀಸಾಗಳ ವಿತರಣೆಯನ್ನು ನಿಲ್ಲಿಸಲು ಅಧ್ಯಕ್ಷ ಟ್ರಂಪ್ ಆದೇಶಿಸಿದ್ದರು. ವೀಸಾಗಳ ನವೀಕರಣ ಇಲ್ಲದೆ ಭಾರತಕ್ಕೆ ಮರಳಿದ್ದ ಅನೇಕ ಭಾರತೀಯರು ಇಲ್ಲೇ ಸಿಲುಕಿದ್ದರು. ಹೀಗಾಗಿ ಕೆಲ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. H-1B ವೀಸಾ ಹೊಂದಿದವರಲ್ಲಿ ಹೆಚ್ಚಿನವರು ಭಾರತೀಯರೇ ಆಗಿದ್ದಾರೆ.

ಸದ್ಯ ಬೆದರಿಕೆ ಪತ್ರವನ್ನು ಗಮನದಲ್ಲಿಇರಿಸಿಕೊಂಡು ನೋಡುವುದಾದರೇ, ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲೇ ಪತ್ರ ಬರೆಯಲಾಗಿದೆ ಎನ್ನಬಹುದು. ಅಮೆರಿಕದಲ್ಲಿನ ಐಟಿ ವಿಭಾಗದ ಅತಿಹೆಚ್ಚು ಉದ್ಯೋಗಗಳು ಭಾರತೀಯರು ಮತ್ತು ಚೀನಿಯರ ಪಾಲಾಗಿವೆ.

ಈ ಹಿಂದೆಯೂ ಕೂಡ ಯುಎಸ್‌ಎನಲ್ಲಿ ಭಾರತೀಯರನ್ನು ಗುರಿಯಾಗಿಸಿ ಜನಾಂಗೀಯ ಕೃತ್ಯ ನಡೆಸಲಾಗಿದೆ. 2017ರ ಫೆಬ್ರವರಿ 22 ರಂದು ಕಾನ್ಸಾಸ್‌ನ ಓಲಾಥೆಯ ಭಾರತೀಯ ನಿವಾಸಿ ಶ್ರೀನಿವಾಸ್ ಕುಚಿಭೋಟ್ಲಾ ಅವರನ್ನು ಆಡಮ್ ಪ್ಯೂರಿಂಟನ್ ಎಂಬುವವನು ಗುಂಡಿಕ್ಕಿ ಹತ್ಯೆ ಮಾಡಿದ್ದನು. ಜೊತೆಯಲ್ಲಿದ್ದ ಅಲೋಕ್ ಮದಾಸಾನಿ ಮೇಲೂ ದಾಳಿ ಮಾಡಿ ’ನನ್ನ ದೇಶ ಬಿಟ್ಟು ಹೊರಟುಹೋಗಿ’ ಮತ್ತು ಭಯೋತ್ಪಾದಕರು ಎಂದು ಕೂಗಿ ಗುಂಡು ಹಾರಿಸಲಾಗಿತ್ತು ಎಂದು ವರದಿಯಾಗಿದೆ.

ಇನ್ನು ನಿನ್ನೆಯ ಘಟನೆ ಮತ್ತೆ ಅಮೆರಿಕದಲ್ಲಿ ಭಾರತೀಯರ ಮೇಲೆ ದಾಳಿಗಳು ನಡೆಯುವ ಸಂಭವವನ್ನು ಸೂಚಿಸುತ್ತಿದೆ. ಪೊಲೀಸರು ಈ ಬಗ್ಗೆ ಕ್ರಮ ಕೈಗೊಳುವ ಭರವಸೆ ನೀಡಿದ್ದರೂ, ಟೆಕ್ಸಾಸ್‌ನ ಇರ್ವಿಂಗ್‌ನಲ್ಲಿ ವಾಸವಿರುವ ಭಾರತೀಯರು ಮತ್ತು ಚೀನಿಯರಲ್ಲಿ ಆತಂಕ ಕಡಿಮೆಯಾಗಿಲ್ಲ.


ಇದನ್ನೂ ಓದಿ:H-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...