Homeಅಂತರಾಷ್ಟ್ರೀಯಅಮೆರಿಕ ತೊರೆಯಿರಿ, ಇಲ್ಲ ಶೂಟ್ ಮಾಡುತ್ತೇವೆ: ಭಾರತ, ಚೀನಿ ಟೆಕ್ಕಿಗಳಿಗೆ ಬೆದರಿಕೆ

ಅಮೆರಿಕ ತೊರೆಯಿರಿ, ಇಲ್ಲ ಶೂಟ್ ಮಾಡುತ್ತೇವೆ: ಭಾರತ, ಚೀನಿ ಟೆಕ್ಕಿಗಳಿಗೆ ಬೆದರಿಕೆ

ಹಿಂತಿರುಗಿ ಹೋಗದೆ ಇದ್ದಲ್ಲಿ, ಕೆಲಸದ ಸ್ಥಳಗಳು, ಆಟದ ಮೈದಾನಗಳು ಮತ್ತು ಪೂಲ್‌ಗಳಲ್ಲಿ “ನಿರ್ದಯವಾಗಿ ಶೂಟ್” ಮಾಡದೇ ನಮಗೆ ಬೇರೆ ದಾರಿಯಿಲ್ಲ ಎಂದು ಪತ್ರದಲ್ಲಿ ತಿಳಿಸಿದೆ.

- Advertisement -
- Advertisement -

ಅಮೆರಿಕದಲ್ಲಿ ಮತ್ತೆ ಭಾರತೀಯರ ಮೇಲೆ ಜನಾಂಗೀಯ ದ್ವೇಷ ಆರಂಭವಾಗಿದೆ. ಟೆಕ್ಸಾಸ್‌ನ ಇರ್ವಿಂಗ್‌ನಲ್ಲಿ ವಾಸವಿರುವ ಭಾರತೀಯರು ಮತ್ತು ಚೀನಿಯರಿಗೆ ಅನಾಮಧೇಯ ಬೆದರಿಕೆ ಪತ್ರ ಬಂದಿದ್ದು, ತಮ್ಮ ದೇಶಗಳಿಗೆ ತೆರಳುವಂತೆ ಆದೇಶಿಸಲಾಗಿದೆ. ಇಲ್ಲದಿದ್ದರೇ ನಿರ್ದಯವಾಗಿ ಗುಂಡು ಹಾರಿಸುವುದಾಗಿ ಬೆದರಿಸಲಾಗಿದೆ.

ದಪ್ಪ ಅಕ್ಷರಗಳಲ್ಲಿ “ರಿಟರ್ನ್ ಬ್ಯಾಕ್ ಟು ಯುವರ್ ಕಂಟ್ರಿ”  ಎಂದು ಬರೆದಿರುವ ಈ ಪತ್ರವು  ಐಟಿ ಉದ್ಯಮ ಮತ್ತು ಇತರ ವೃತ್ತಿಪರ ಕ್ಷೇತ್ರಗಳಲ್ಲಿ ಉದ್ಯೋಗ ಪಡೆದಿರುವ ಭಾರತೀಯರು ಮತ್ತು ಚೀನೀಯರನ್ನು ಗುರಿಯಾಗಿಸಿಕೊಂಡಿದೆ. ಹಿಂತಿರುಗಿ ಹೋಗದೆ ಇದ್ದಲ್ಲಿ, ಕೆಲಸದ ಸ್ಥಳಗಳು, ಆಟದ ಮೈದಾನಗಳು ಮತ್ತು ಪೂಲ್‌ಗಳಲ್ಲಿ “ನಿರ್ದಯವಾಗಿ ಶೂಟ್” ಮಾಡದೇ ನಮಗೆ ಬೇರೆ ದಾರಿಯಿಲ್ಲ ಎಂದು ಪತ್ರದಲ್ಲಿ ತಿಳಿಸಿದೆ.

image courtesy: Thenewsminute

ಇರ್ವಿಂಗ್‌ನಲ್ಲಿರುವ ಪೊಲೀಸ್ ಇಲಾಖೆ ಭಾರತೀಯ ಮತ್ತು ಚೀನಾದ ಟೆಕ್ಕಿಗಳಿಗೆ ಬೆದರಿಕೆ ಹಾಕುವ ಜನಾಂಗೀಯ ಪತ್ರದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಬೆದರಿಕೆ ಪತ್ರವನ್ನು ಸಮುದಾಯದ ಸದಸ್ಯರೊಬ್ಬರು ಸ್ವೀಕರಿಸಿದ್ದು, ನಾವು ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಪೊಲೀಸರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇನ್ನು ಪತ್ರವನ್ನು ಟೆಕ್ಸಾಸ್‌ನ ಇರ್ವಿಂಗ್ ನಿವಾಸಿಯೊಬ್ಬರಿಗೆ ಕಳುಹಿಸಿದ್ದು, ಇದನ್ನು ಪ್ರತ್ಯೇಕ ಪ್ರಕರಣ ಎಂದೇ ಪರಿಗಣಿಸುತ್ತೇವೆ ಎಂದಿದ್ದಾರೆ.  ಪತ್ರದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಿದ್ದರೆ ತನಿಖಾ ಅಧಿಕಾರಿಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರನ್ನು ಕೋರಿದ್ದಾರೆ.

ಕೊರೋನಾ ಹಿನ್ನೆಯಲ್ಲಿ ಅಮೆರಿಕದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು, H-1B ವೀಸಾ ಹೊಂದಿದವರ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಹೊಸ ವೀಸಾಗಳ ವಿತರಣೆಯನ್ನು ನಿಲ್ಲಿಸಲು ಅಧ್ಯಕ್ಷ ಟ್ರಂಪ್ ಆದೇಶಿಸಿದ್ದರು. ವೀಸಾಗಳ ನವೀಕರಣ ಇಲ್ಲದೆ ಭಾರತಕ್ಕೆ ಮರಳಿದ್ದ ಅನೇಕ ಭಾರತೀಯರು ಇಲ್ಲೇ ಸಿಲುಕಿದ್ದರು. ಹೀಗಾಗಿ ಕೆಲ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. H-1B ವೀಸಾ ಹೊಂದಿದವರಲ್ಲಿ ಹೆಚ್ಚಿನವರು ಭಾರತೀಯರೇ ಆಗಿದ್ದಾರೆ.

ಸದ್ಯ ಬೆದರಿಕೆ ಪತ್ರವನ್ನು ಗಮನದಲ್ಲಿಇರಿಸಿಕೊಂಡು ನೋಡುವುದಾದರೇ, ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲೇ ಪತ್ರ ಬರೆಯಲಾಗಿದೆ ಎನ್ನಬಹುದು. ಅಮೆರಿಕದಲ್ಲಿನ ಐಟಿ ವಿಭಾಗದ ಅತಿಹೆಚ್ಚು ಉದ್ಯೋಗಗಳು ಭಾರತೀಯರು ಮತ್ತು ಚೀನಿಯರ ಪಾಲಾಗಿವೆ.

ಈ ಹಿಂದೆಯೂ ಕೂಡ ಯುಎಸ್‌ಎನಲ್ಲಿ ಭಾರತೀಯರನ್ನು ಗುರಿಯಾಗಿಸಿ ಜನಾಂಗೀಯ ಕೃತ್ಯ ನಡೆಸಲಾಗಿದೆ. 2017ರ ಫೆಬ್ರವರಿ 22 ರಂದು ಕಾನ್ಸಾಸ್‌ನ ಓಲಾಥೆಯ ಭಾರತೀಯ ನಿವಾಸಿ ಶ್ರೀನಿವಾಸ್ ಕುಚಿಭೋಟ್ಲಾ ಅವರನ್ನು ಆಡಮ್ ಪ್ಯೂರಿಂಟನ್ ಎಂಬುವವನು ಗುಂಡಿಕ್ಕಿ ಹತ್ಯೆ ಮಾಡಿದ್ದನು. ಜೊತೆಯಲ್ಲಿದ್ದ ಅಲೋಕ್ ಮದಾಸಾನಿ ಮೇಲೂ ದಾಳಿ ಮಾಡಿ ’ನನ್ನ ದೇಶ ಬಿಟ್ಟು ಹೊರಟುಹೋಗಿ’ ಮತ್ತು ಭಯೋತ್ಪಾದಕರು ಎಂದು ಕೂಗಿ ಗುಂಡು ಹಾರಿಸಲಾಗಿತ್ತು ಎಂದು ವರದಿಯಾಗಿದೆ.

ಇನ್ನು ನಿನ್ನೆಯ ಘಟನೆ ಮತ್ತೆ ಅಮೆರಿಕದಲ್ಲಿ ಭಾರತೀಯರ ಮೇಲೆ ದಾಳಿಗಳು ನಡೆಯುವ ಸಂಭವವನ್ನು ಸೂಚಿಸುತ್ತಿದೆ. ಪೊಲೀಸರು ಈ ಬಗ್ಗೆ ಕ್ರಮ ಕೈಗೊಳುವ ಭರವಸೆ ನೀಡಿದ್ದರೂ, ಟೆಕ್ಸಾಸ್‌ನ ಇರ್ವಿಂಗ್‌ನಲ್ಲಿ ವಾಸವಿರುವ ಭಾರತೀಯರು ಮತ್ತು ಚೀನಿಯರಲ್ಲಿ ಆತಂಕ ಕಡಿಮೆಯಾಗಿಲ್ಲ.


ಇದನ್ನೂ ಓದಿ:H-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...