Homeಅಂತರಾಷ್ಟ್ರೀಯಅಮೆರಿಕ ತೊರೆಯಿರಿ, ಇಲ್ಲ ಶೂಟ್ ಮಾಡುತ್ತೇವೆ: ಭಾರತ, ಚೀನಿ ಟೆಕ್ಕಿಗಳಿಗೆ ಬೆದರಿಕೆ

ಅಮೆರಿಕ ತೊರೆಯಿರಿ, ಇಲ್ಲ ಶೂಟ್ ಮಾಡುತ್ತೇವೆ: ಭಾರತ, ಚೀನಿ ಟೆಕ್ಕಿಗಳಿಗೆ ಬೆದರಿಕೆ

ಹಿಂತಿರುಗಿ ಹೋಗದೆ ಇದ್ದಲ್ಲಿ, ಕೆಲಸದ ಸ್ಥಳಗಳು, ಆಟದ ಮೈದಾನಗಳು ಮತ್ತು ಪೂಲ್‌ಗಳಲ್ಲಿ “ನಿರ್ದಯವಾಗಿ ಶೂಟ್” ಮಾಡದೇ ನಮಗೆ ಬೇರೆ ದಾರಿಯಿಲ್ಲ ಎಂದು ಪತ್ರದಲ್ಲಿ ತಿಳಿಸಿದೆ.

- Advertisement -
- Advertisement -

ಅಮೆರಿಕದಲ್ಲಿ ಮತ್ತೆ ಭಾರತೀಯರ ಮೇಲೆ ಜನಾಂಗೀಯ ದ್ವೇಷ ಆರಂಭವಾಗಿದೆ. ಟೆಕ್ಸಾಸ್‌ನ ಇರ್ವಿಂಗ್‌ನಲ್ಲಿ ವಾಸವಿರುವ ಭಾರತೀಯರು ಮತ್ತು ಚೀನಿಯರಿಗೆ ಅನಾಮಧೇಯ ಬೆದರಿಕೆ ಪತ್ರ ಬಂದಿದ್ದು, ತಮ್ಮ ದೇಶಗಳಿಗೆ ತೆರಳುವಂತೆ ಆದೇಶಿಸಲಾಗಿದೆ. ಇಲ್ಲದಿದ್ದರೇ ನಿರ್ದಯವಾಗಿ ಗುಂಡು ಹಾರಿಸುವುದಾಗಿ ಬೆದರಿಸಲಾಗಿದೆ.

ದಪ್ಪ ಅಕ್ಷರಗಳಲ್ಲಿ “ರಿಟರ್ನ್ ಬ್ಯಾಕ್ ಟು ಯುವರ್ ಕಂಟ್ರಿ”  ಎಂದು ಬರೆದಿರುವ ಈ ಪತ್ರವು  ಐಟಿ ಉದ್ಯಮ ಮತ್ತು ಇತರ ವೃತ್ತಿಪರ ಕ್ಷೇತ್ರಗಳಲ್ಲಿ ಉದ್ಯೋಗ ಪಡೆದಿರುವ ಭಾರತೀಯರು ಮತ್ತು ಚೀನೀಯರನ್ನು ಗುರಿಯಾಗಿಸಿಕೊಂಡಿದೆ. ಹಿಂತಿರುಗಿ ಹೋಗದೆ ಇದ್ದಲ್ಲಿ, ಕೆಲಸದ ಸ್ಥಳಗಳು, ಆಟದ ಮೈದಾನಗಳು ಮತ್ತು ಪೂಲ್‌ಗಳಲ್ಲಿ “ನಿರ್ದಯವಾಗಿ ಶೂಟ್” ಮಾಡದೇ ನಮಗೆ ಬೇರೆ ದಾರಿಯಿಲ್ಲ ಎಂದು ಪತ್ರದಲ್ಲಿ ತಿಳಿಸಿದೆ.

image courtesy: Thenewsminute

ಇರ್ವಿಂಗ್‌ನಲ್ಲಿರುವ ಪೊಲೀಸ್ ಇಲಾಖೆ ಭಾರತೀಯ ಮತ್ತು ಚೀನಾದ ಟೆಕ್ಕಿಗಳಿಗೆ ಬೆದರಿಕೆ ಹಾಕುವ ಜನಾಂಗೀಯ ಪತ್ರದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಬೆದರಿಕೆ ಪತ್ರವನ್ನು ಸಮುದಾಯದ ಸದಸ್ಯರೊಬ್ಬರು ಸ್ವೀಕರಿಸಿದ್ದು, ನಾವು ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಪೊಲೀಸರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇನ್ನು ಪತ್ರವನ್ನು ಟೆಕ್ಸಾಸ್‌ನ ಇರ್ವಿಂಗ್ ನಿವಾಸಿಯೊಬ್ಬರಿಗೆ ಕಳುಹಿಸಿದ್ದು, ಇದನ್ನು ಪ್ರತ್ಯೇಕ ಪ್ರಕರಣ ಎಂದೇ ಪರಿಗಣಿಸುತ್ತೇವೆ ಎಂದಿದ್ದಾರೆ.  ಪತ್ರದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಿದ್ದರೆ ತನಿಖಾ ಅಧಿಕಾರಿಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರನ್ನು ಕೋರಿದ್ದಾರೆ.

ಕೊರೋನಾ ಹಿನ್ನೆಯಲ್ಲಿ ಅಮೆರಿಕದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು, H-1B ವೀಸಾ ಹೊಂದಿದವರ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಹೊಸ ವೀಸಾಗಳ ವಿತರಣೆಯನ್ನು ನಿಲ್ಲಿಸಲು ಅಧ್ಯಕ್ಷ ಟ್ರಂಪ್ ಆದೇಶಿಸಿದ್ದರು. ವೀಸಾಗಳ ನವೀಕರಣ ಇಲ್ಲದೆ ಭಾರತಕ್ಕೆ ಮರಳಿದ್ದ ಅನೇಕ ಭಾರತೀಯರು ಇಲ್ಲೇ ಸಿಲುಕಿದ್ದರು. ಹೀಗಾಗಿ ಕೆಲ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. H-1B ವೀಸಾ ಹೊಂದಿದವರಲ್ಲಿ ಹೆಚ್ಚಿನವರು ಭಾರತೀಯರೇ ಆಗಿದ್ದಾರೆ.

ಸದ್ಯ ಬೆದರಿಕೆ ಪತ್ರವನ್ನು ಗಮನದಲ್ಲಿಇರಿಸಿಕೊಂಡು ನೋಡುವುದಾದರೇ, ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲೇ ಪತ್ರ ಬರೆಯಲಾಗಿದೆ ಎನ್ನಬಹುದು. ಅಮೆರಿಕದಲ್ಲಿನ ಐಟಿ ವಿಭಾಗದ ಅತಿಹೆಚ್ಚು ಉದ್ಯೋಗಗಳು ಭಾರತೀಯರು ಮತ್ತು ಚೀನಿಯರ ಪಾಲಾಗಿವೆ.

ಈ ಹಿಂದೆಯೂ ಕೂಡ ಯುಎಸ್‌ಎನಲ್ಲಿ ಭಾರತೀಯರನ್ನು ಗುರಿಯಾಗಿಸಿ ಜನಾಂಗೀಯ ಕೃತ್ಯ ನಡೆಸಲಾಗಿದೆ. 2017ರ ಫೆಬ್ರವರಿ 22 ರಂದು ಕಾನ್ಸಾಸ್‌ನ ಓಲಾಥೆಯ ಭಾರತೀಯ ನಿವಾಸಿ ಶ್ರೀನಿವಾಸ್ ಕುಚಿಭೋಟ್ಲಾ ಅವರನ್ನು ಆಡಮ್ ಪ್ಯೂರಿಂಟನ್ ಎಂಬುವವನು ಗುಂಡಿಕ್ಕಿ ಹತ್ಯೆ ಮಾಡಿದ್ದನು. ಜೊತೆಯಲ್ಲಿದ್ದ ಅಲೋಕ್ ಮದಾಸಾನಿ ಮೇಲೂ ದಾಳಿ ಮಾಡಿ ’ನನ್ನ ದೇಶ ಬಿಟ್ಟು ಹೊರಟುಹೋಗಿ’ ಮತ್ತು ಭಯೋತ್ಪಾದಕರು ಎಂದು ಕೂಗಿ ಗುಂಡು ಹಾರಿಸಲಾಗಿತ್ತು ಎಂದು ವರದಿಯಾಗಿದೆ.

ಇನ್ನು ನಿನ್ನೆಯ ಘಟನೆ ಮತ್ತೆ ಅಮೆರಿಕದಲ್ಲಿ ಭಾರತೀಯರ ಮೇಲೆ ದಾಳಿಗಳು ನಡೆಯುವ ಸಂಭವವನ್ನು ಸೂಚಿಸುತ್ತಿದೆ. ಪೊಲೀಸರು ಈ ಬಗ್ಗೆ ಕ್ರಮ ಕೈಗೊಳುವ ಭರವಸೆ ನೀಡಿದ್ದರೂ, ಟೆಕ್ಸಾಸ್‌ನ ಇರ್ವಿಂಗ್‌ನಲ್ಲಿ ವಾಸವಿರುವ ಭಾರತೀಯರು ಮತ್ತು ಚೀನಿಯರಲ್ಲಿ ಆತಂಕ ಕಡಿಮೆಯಾಗಿಲ್ಲ.


ಇದನ್ನೂ ಓದಿ:H-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...