Homeಮುಖಪುಟಡಾ.ಕಫೀಲ್ ಖಾನ್‌ಗೆ ಅವರ ಹುದ್ದೆ ಹಿಂತಿರುಗಿಸಿ- ಯುಪಿ ಸರ್ಕಾರಕ್ಕೆ ಪತ್ರ ಬರೆದ ವೈದ್ಯಕೀಯ ಸಂಘ

ಡಾ.ಕಫೀಲ್ ಖಾನ್‌ಗೆ ಅವರ ಹುದ್ದೆ ಹಿಂತಿರುಗಿಸಿ- ಯುಪಿ ಸರ್ಕಾರಕ್ಕೆ ಪತ್ರ ಬರೆದ ವೈದ್ಯಕೀಯ ಸಂಘ

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯಿದೆಯಡಿ (ಎನ್‌ಎಸ್‌ಎ) ಬಂಧನದಲ್ಲಿದ್ದ ಉತ್ತರ ಪ್ರದೇಶದ ಡಾ.ಕಫೀಲ್ ಖಾನ್ ಇತ್ತೀಚೆಗೆ ಬಿಡುಗಡೆಯಾಗಿದ್ದರು. ವೈದ್ಯ ಹುದ್ದೆಯಿಂದ ಅಮಾನತುಗೊಂಡಿದ್ದ ಕಫೀಲ್ ಖಾನ್ ಅವರ ಪರವಾಗಿ ಭಾರತೀಯ ವೈದ್ಯಕೀಯ ಸಂಘವು ಉತ್ತರ ಪ್ರದೇಶ ಸರ್ಕಾರಕ್ಕೆ ಪತ್ರ ಬರೆದು, “ಕಫೀಲ್ ಖಾನ್ ಅಮಾನತನ್ನು ಮರು ಪರೀಶೀಲಿಸಿ ಅವರಿಗೆ ಹುದ್ದೆಯಲ್ಲಿ ಮುಂದುವರೆಯಲು ಅವಕಾಶ ನೀಡಬೇಕು” ಎಂದು ಹೇಳಿಕೊಂಡಿದೆ.

ನವೆಂಬರ್ 10 ರಂದು ಉತ್ತರ ಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ವೈದ್ಯಕೀಯ ಸಂಘ, “ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಿಂದ ಕಫೀಲ್‌ ಖಾನ್ ಅವರನ್ನು ಅಮಾನತುಗೊಳಿಸಿರುವ ಕುರಿತು ನಮ್ಮ ಸಂಸ್ಥೆಗೆ ನಮ್ಮದೇ ಸದಸ್ಯರಾದ ಕಫೀಲ್‌ ಖಾನ್ ಅವರಿಂದ ಪತ್ರ ಬಂದಿದ್ದು, ಇದರ ಕುರಿತು ಮರುಪರಿಶೀಲನೆಯನ್ನು ಕೈಗೊಂಡು ಸಹಾನುಭೂತಿಯ ಮೇರೆಗೆ ಅವರ ಮನವಿಯನ್ನು ಪುರಸ್ಕರಿಸಬೇಕೆಂದು ಕೇಳಿಕೊಳ್ಳುತ್ತೇವೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಯಾವುದೇ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿಲ್ಲ, ವೈದ್ಯನಾಗಿಯೇ ಉಳಿಯುವೆ: ಡಾ.ಕಫೀಲ್ ಖಾನ್

ಇದನ್ನೂ ಓದಿ: ತೋರಿಕೆಯ ದೇಶಭಕ್ತಿಗೂ ನಿಜವಾದ ದೇಶಭಕ್ತಿಗೂ ತುಂಬಾ ವ್ಯತ್ಯಾಸವಿದೆ – ಡಾ.ಕಫೀಲ್ ಖಾನ್ ಸಂದರ್ಶನ

2017ರಲ್ಲಿ ಗೋರಖ್ ಪುರದ ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ದುರಂತದ ಪ್ರಕರಣದಲ್ಲಿ ಕಫೀಲ್‌ ಖಾನ್‌ ಅಮಾನತು ಮತ್ತು 9 ತಿಂಗಳ ಜೈಲುವಾಸಕ್ಕೆ ಒಳಗಾಗಿದ್ದರು. ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಮತ್ತು ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಡಾ.ಕಫೀಲ್ ಅವರ ಮೇಲಿತ್ತು. ಆದರೆ ನ್ಯಾಯಾಲಯ ಅವರು ಅಮಾಯಕರು ಮತ್ತು ಉದ್ದೇಶಪೂರ್ವಕವಾಗಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿ ಪ್ರಕರಣ ಕೈಬಿಟ್ಟಿತ್ತು. ಆದರೂ ಉತ್ತರ ಪ್ರದೇಶದ ಯೋಗಿ ಸರ್ಕಾರ ಡಾ.ಕಫೀಲ್ ಖಾನ್‌ ಮೇಲೆ ಮರು ತನಿಖೆ ನಡೆಸುವುದಾಗಿ ಹೇಳಿದೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆಗೆ ಕೊಂಡ್ಯೊಯ್ದ ಡಾ.ಕಫೀಲ್ ಖಾನ್!

ಈಗಲೂ ಸಹ ಸಿಎಎ ವಿರೋಧಿ ಹೋರಾಟಗಳು ಉತ್ತುಂಗದಲ್ಲಿದ್ದಾಗ 2019 ರ ಡಿಸೆಂಬರ್ 13 ರಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಾ.ಕಫೀಲ್‌ ಖಾನ್ ಅವರನ್ನು ಜನವರಿಯಲ್ಲಿ ಮುಂಬೈನಲ್ಲಿ ಬಂಧಿಸಲಾಗಿತ್ತು.

ಆದರೆ, “ಡಾ.ಕಫೀಲ್‌ ಖಾನ್‌ರವರ ಭಾಷಣವು ಹಿಂಸೆಗೆ ಅನುವು ಮಾಡಿಕೊಡುವ ಅಥವಾ ಪ್ರಚೋದನಾಕಾರಿಯಾಗಿಲ್ಲ. ಅವರ ಮೇಲೆ ಎನ್‌ಎಸ್‌ಎ ಪ್ರಕರಣ ಹಾಕಿರುವುದು ಕಾನೂನುಬಾಹಿರ ಎಂದಿದ್ದ ಅಲಹಾಬಾದ್ ಹೈಕೋರ್ಟ್ ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಮತ್ತು ಅವರ ಮೇಲಿನ NSA ಪ್ರಕರಣ ಕೈಬಿಡುವಂತೆ” ಆದೇಶಿಸಿತ್ತು.

ಇದನ್ನೂ ಓದಿ: ಸಿಎಎ ವಿರುದ್ಧ ಮಾತನಾಡಿದ್ದಕ್ಕಾಗಿ ಡಾ. ಕಫೀಲ್ ಖಾನ್ ಮೇಲೆ ಕೇಸು, ಬಂಧನ

ಮಥುರಾ ಜೈಲಿನಿಂದ ಬಿಡುಗಡೆಗೊಂಡ ಅವರು, “ಮುಂಬೈನಿಂದ ಮಥುರಾಗೆ ಕರೆತರುವಾಗ ನನ್ನನ್ನು ಎನ್‌ಕೌಂಟರ್ ಮಾಡದಿರುವುದಕ್ಕೆ ಉಳಿದಿದ್ದೇನೆ. ಅಲಹಾಬಾದ್ ನ್ಯಾಯಾಲಯವು ನನ್ನ ಮೇಲಿನ ಆರೋಪಗಳನ್ನು ಮುಕ್ತಗೊಳಿಸಿರುವುದಕ್ಕೆ ನ್ಯಾಯಾಲಯಕ್ಕೆ ಧನ್ಯವಾದ ಅರ್ಪಿಸುತ್ತೇನೆ. ಈಗಲೂ ನಾನು ದೇಶ ಸೇವೆ ಮಾಡಲು ಸಿದ್ಧನಿದ್ದೇನೆ” ಎಂದಿದ್ದರು.


 

ಇದನ್ನೂ ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಮ ಮಂದಿರ, ಸಿಖ್ಖರ ಉಲ್ಲೇಖ ನೀತಿ ಸಂಹಿತೆ ಉಲ್ಲಂಘನೆಯಾಗದು: ಪ್ರಧಾನಿ ಮೋದಿಗೆ ಕ್ಲೀನ್ ಚಿಟ್...

0
ರಾಮ ಮಂದಿರ ನಿರ್ಮಾಣ, ಸಿಖ್‌ ತೀರ್ಥಯಾತ್ರೆಯ ಹಾದಿಯಾದ ಕರ್ತಾರ್‌ಪುರ್‌ ಸಾಹಿಬ್‌ ಕಾರಿಡಾರ್‌ ಅಭಿವೃದ್ಧಿ, ಸಿಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್‌ ಪ್ರತಿಗಳನ್ನು ಅಫ್ಗಾನಿಸ್ತಾನದಿಂದ ವಾಪಸ್‌ ತರಲು ಸರ್ಕಾರದ ಕ್ರಮ ಕೈಗೊಂಡಿರುವುದನ್ನು ಉಲ್ಲೇಖಿಸಿ...