Homeಮುಖಪುಟಡಾ.ಕಫೀಲ್ ಖಾನ್‌ಗೆ ಅವರ ಹುದ್ದೆ ಹಿಂತಿರುಗಿಸಿ- ಯುಪಿ ಸರ್ಕಾರಕ್ಕೆ ಪತ್ರ ಬರೆದ ವೈದ್ಯಕೀಯ ಸಂಘ

ಡಾ.ಕಫೀಲ್ ಖಾನ್‌ಗೆ ಅವರ ಹುದ್ದೆ ಹಿಂತಿರುಗಿಸಿ- ಯುಪಿ ಸರ್ಕಾರಕ್ಕೆ ಪತ್ರ ಬರೆದ ವೈದ್ಯಕೀಯ ಸಂಘ

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯಿದೆಯಡಿ (ಎನ್‌ಎಸ್‌ಎ) ಬಂಧನದಲ್ಲಿದ್ದ ಉತ್ತರ ಪ್ರದೇಶದ ಡಾ.ಕಫೀಲ್ ಖಾನ್ ಇತ್ತೀಚೆಗೆ ಬಿಡುಗಡೆಯಾಗಿದ್ದರು. ವೈದ್ಯ ಹುದ್ದೆಯಿಂದ ಅಮಾನತುಗೊಂಡಿದ್ದ ಕಫೀಲ್ ಖಾನ್ ಅವರ ಪರವಾಗಿ ಭಾರತೀಯ ವೈದ್ಯಕೀಯ ಸಂಘವು ಉತ್ತರ ಪ್ರದೇಶ ಸರ್ಕಾರಕ್ಕೆ ಪತ್ರ ಬರೆದು, “ಕಫೀಲ್ ಖಾನ್ ಅಮಾನತನ್ನು ಮರು ಪರೀಶೀಲಿಸಿ ಅವರಿಗೆ ಹುದ್ದೆಯಲ್ಲಿ ಮುಂದುವರೆಯಲು ಅವಕಾಶ ನೀಡಬೇಕು” ಎಂದು ಹೇಳಿಕೊಂಡಿದೆ.

ನವೆಂಬರ್ 10 ರಂದು ಉತ್ತರ ಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ವೈದ್ಯಕೀಯ ಸಂಘ, “ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಿಂದ ಕಫೀಲ್‌ ಖಾನ್ ಅವರನ್ನು ಅಮಾನತುಗೊಳಿಸಿರುವ ಕುರಿತು ನಮ್ಮ ಸಂಸ್ಥೆಗೆ ನಮ್ಮದೇ ಸದಸ್ಯರಾದ ಕಫೀಲ್‌ ಖಾನ್ ಅವರಿಂದ ಪತ್ರ ಬಂದಿದ್ದು, ಇದರ ಕುರಿತು ಮರುಪರಿಶೀಲನೆಯನ್ನು ಕೈಗೊಂಡು ಸಹಾನುಭೂತಿಯ ಮೇರೆಗೆ ಅವರ ಮನವಿಯನ್ನು ಪುರಸ್ಕರಿಸಬೇಕೆಂದು ಕೇಳಿಕೊಳ್ಳುತ್ತೇವೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಯಾವುದೇ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿಲ್ಲ, ವೈದ್ಯನಾಗಿಯೇ ಉಳಿಯುವೆ: ಡಾ.ಕಫೀಲ್ ಖಾನ್

ಇದನ್ನೂ ಓದಿ: ತೋರಿಕೆಯ ದೇಶಭಕ್ತಿಗೂ ನಿಜವಾದ ದೇಶಭಕ್ತಿಗೂ ತುಂಬಾ ವ್ಯತ್ಯಾಸವಿದೆ – ಡಾ.ಕಫೀಲ್ ಖಾನ್ ಸಂದರ್ಶನ

2017ರಲ್ಲಿ ಗೋರಖ್ ಪುರದ ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ದುರಂತದ ಪ್ರಕರಣದಲ್ಲಿ ಕಫೀಲ್‌ ಖಾನ್‌ ಅಮಾನತು ಮತ್ತು 9 ತಿಂಗಳ ಜೈಲುವಾಸಕ್ಕೆ ಒಳಗಾಗಿದ್ದರು. ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಮತ್ತು ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಡಾ.ಕಫೀಲ್ ಅವರ ಮೇಲಿತ್ತು. ಆದರೆ ನ್ಯಾಯಾಲಯ ಅವರು ಅಮಾಯಕರು ಮತ್ತು ಉದ್ದೇಶಪೂರ್ವಕವಾಗಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿ ಪ್ರಕರಣ ಕೈಬಿಟ್ಟಿತ್ತು. ಆದರೂ ಉತ್ತರ ಪ್ರದೇಶದ ಯೋಗಿ ಸರ್ಕಾರ ಡಾ.ಕಫೀಲ್ ಖಾನ್‌ ಮೇಲೆ ಮರು ತನಿಖೆ ನಡೆಸುವುದಾಗಿ ಹೇಳಿದೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆಗೆ ಕೊಂಡ್ಯೊಯ್ದ ಡಾ.ಕಫೀಲ್ ಖಾನ್!

ಈಗಲೂ ಸಹ ಸಿಎಎ ವಿರೋಧಿ ಹೋರಾಟಗಳು ಉತ್ತುಂಗದಲ್ಲಿದ್ದಾಗ 2019 ರ ಡಿಸೆಂಬರ್ 13 ರಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಾ.ಕಫೀಲ್‌ ಖಾನ್ ಅವರನ್ನು ಜನವರಿಯಲ್ಲಿ ಮುಂಬೈನಲ್ಲಿ ಬಂಧಿಸಲಾಗಿತ್ತು.

ಆದರೆ, “ಡಾ.ಕಫೀಲ್‌ ಖಾನ್‌ರವರ ಭಾಷಣವು ಹಿಂಸೆಗೆ ಅನುವು ಮಾಡಿಕೊಡುವ ಅಥವಾ ಪ್ರಚೋದನಾಕಾರಿಯಾಗಿಲ್ಲ. ಅವರ ಮೇಲೆ ಎನ್‌ಎಸ್‌ಎ ಪ್ರಕರಣ ಹಾಕಿರುವುದು ಕಾನೂನುಬಾಹಿರ ಎಂದಿದ್ದ ಅಲಹಾಬಾದ್ ಹೈಕೋರ್ಟ್ ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಮತ್ತು ಅವರ ಮೇಲಿನ NSA ಪ್ರಕರಣ ಕೈಬಿಡುವಂತೆ” ಆದೇಶಿಸಿತ್ತು.

ಇದನ್ನೂ ಓದಿ: ಸಿಎಎ ವಿರುದ್ಧ ಮಾತನಾಡಿದ್ದಕ್ಕಾಗಿ ಡಾ. ಕಫೀಲ್ ಖಾನ್ ಮೇಲೆ ಕೇಸು, ಬಂಧನ

ಮಥುರಾ ಜೈಲಿನಿಂದ ಬಿಡುಗಡೆಗೊಂಡ ಅವರು, “ಮುಂಬೈನಿಂದ ಮಥುರಾಗೆ ಕರೆತರುವಾಗ ನನ್ನನ್ನು ಎನ್‌ಕೌಂಟರ್ ಮಾಡದಿರುವುದಕ್ಕೆ ಉಳಿದಿದ್ದೇನೆ. ಅಲಹಾಬಾದ್ ನ್ಯಾಯಾಲಯವು ನನ್ನ ಮೇಲಿನ ಆರೋಪಗಳನ್ನು ಮುಕ್ತಗೊಳಿಸಿರುವುದಕ್ಕೆ ನ್ಯಾಯಾಲಯಕ್ಕೆ ಧನ್ಯವಾದ ಅರ್ಪಿಸುತ್ತೇನೆ. ಈಗಲೂ ನಾನು ದೇಶ ಸೇವೆ ಮಾಡಲು ಸಿದ್ಧನಿದ್ದೇನೆ” ಎಂದಿದ್ದರು.


 

ಇದನ್ನೂ ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...