Homeಕರ್ನಾಟಕ‘ಮರ್ಯಾದೆಯಿಂದ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ವಾಪಾಸು ಕೊಡಿ’

‘ಮರ್ಯಾದೆಯಿಂದ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ವಾಪಾಸು ಕೊಡಿ’

ತಮ್ಮ ವಸ್ತುಗಳನ್ನು ನಾಶ ಮಾಡಿ ದೌರ್ಜನ್ಯ ಎಸಗಿದ ಮಂಗಳೂರು ಮಹಾನಗರ ಪಾಲಿಕೆ ವಿರುದ್ದ ಬೀದಿಬದಿ ವ್ಯಾಪಾರಿಗಳು ಅನಿರ್ಧಿಷ್ಠಾವಧಿ ಧರಣಿ ಎಚ್ಚರಿಕೆ ನೀಡಿದ್ದಾರೆ

- Advertisement -
- Advertisement -

ಮಂಗಳೂರಿನ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಯನ್ನು ಮಹಾನಗರ ಪಾಲಿಕೆ ಆರನೇ ದಿನವೂ ಮುಂದುವರೆಸಿದ್ದು, ಇದನ್ನು ಪ್ರತಿಭಟಿಸಿ ಮಂಗಳವಾರದಂದು ವ್ಯಾಪಾರಿಗಳು ನಗರದ ಲಾಲ್‌ಬಾಗ್‌ನಲ್ಲಿರುವ ಪಾಲಿಕೆಯ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಜೊತೆಗೆ ಕಾನೂನು ಮೀರಿ ತೆರವು ಮಾಡಿತ್ತಿರುವ ಪಾಲಿಕೆಯ ವಿರುದ್ದ ಬುಧವಾರದಿಂದ ಅನಿರ್ಧಿಷ್ಠಾವಧಿ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.

ಅನಧಿಕೃತ ಗೂಡಂಗಡಿ ಮತ್ತು ಪುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲು ಕಳೆದ ಬುಧವಾರದಂದು ಪಾಲಿಕೆಯ ಮೇಯರ್ ಮತ್ತು ಕಮೀಷನರ್‌‌‌‌ ಆದೇಶ ಹೊರಡಿಸಿದ್ದರು. ಅದರಂತೆ ಗುರುವಾರದಿಂದ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಆದರೆ ಬೀದಿಬದಿ ವ್ಯಾಪಾರಿಗಳಿಗೆ ಸರಕಾರವೇ ನೀಡಿದ್ದ ಗುರುತಿನ ಚೀಟಿಯಿದ್ದರೂ ಅಂತಹ ವ್ಯಾಪಾರಿಗಳನ್ನು ಕೂಡಾ ಅಧಿಕಾರಿಗಳು ತೆರವುಗೊಳಿಸಿದ್ದು, ಹಲವು ವ್ಯಾಪಾರಿಗಳ ಗಾಡಿ ಮತ್ತಿತರ ವಸ್ತುಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ನಿಯಮಬಾಹಿರವಾಗಿ ಜಜ್ಜಿ ನಾಶಪಡಿಸಲಾಗಿದೆ.

ಇದನ್ನೂ ಓದಿ:ಮಂಗಳೂರು: ತೆರವುಗೊಳಿಸಲು ಬಂದ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಬೀದಿಬದಿ ವ್ಯಾಪಾರಿಗಳು!

ಇಂದು ಕೂಡಾ ನಗರದ ಮೈದಾನ ರಸ್ತೆಯಲ್ಲಿ ಅಧಿಕಾರಿಗಳು ವ್ಯಾಪಾರಿಗಳ ವಸ್ತುಗಳನ್ನು ನಾಶಪಡಿಸಿದ್ದರು. ಆದರೆ ಇದನ್ನು ವಿರೋಧಿಸಿ ವ್ಯಾಪಾರಿಗಳು ಲಾರಿಯ ಅಡಿಯಲ್ಲಿ ಮಲಗಿ ಪ್ರತಿಭಟಿಸಿದ್ದಾರೆ. ಜೊತೆಗೆ ಪಾಲಿಕೆಗೆ ಮುತ್ತಿಗೆ ಹಾಕಿದ್ದು, ತಮ್ಮ ವಸ್ತುಗಳನ್ನು ನಾಶ ಪಡಿಸಿದ ಅಧಿಕಾರಿಗಳ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಬೀದಿಬದಿ ವ್ಯಾಪಾರಿ ಶ್ರೇಯೋಭಿವೃದ್ದಿ ಸಂಘದ ಗೌರವಾಧ್ಯಕ್ಷಾದ ಬಿ.ಕೆ. ಇಂತಿಯಾಝ್ ಮಾತನಾಡಿ, “ಬಡ ವ್ಯಾಪಾರಿಗಳ ಹೊಟ್ಟೆಗೆ ಹೊಡೆಯಬೇಡಿ, 2012 ರಲ್ಲೂ ಮಹಾನಗರ ಪಾಲಿಕೆ ಇದೇ ರೀತಿ ಮಾಡಿತ್ತು. ಈಗ ಮತ್ತೇ ಅದೇ ರೀತಿ ಮಾಡುತ್ತಿದೆ. ಅಧಿಕಾರಿಗಳಿಗೆ ಹೃದಯವಿದ್ದರೆ ಈ ರೀತಿ ಮಾಡುತ್ತಿರಲಿಲ್ಲ. 2012 ರಲ್ಲಿ ನಾವು ನಿರಂತರವಾಗಿ ಮೂರು ತಿಂಗಳು ಹೋರಾಟ ಮಾಡಿ ಗೆದ್ದಿದ್ದೇವೆ. ಈಗ ಕೂಡಾ ಅನ್ಯಾಯದ ವಿರುದ್ದ ಹೋರಾಡುತ್ತೇವೆ” ಎಂದು ಹೇಳಿದರು.

ಸಂಘದ ಮಾಜಿ ಗೌರವಾಧ್ಯಕ್ಷರಾದ ಸುನಿಲ್‌ ಕುಮಾರ್‌ ಬಜಾಲ್ ಮಾತನಾಡಿ, “ಪಾಲಿಕೆ ಅಧಿಕಾರಿಗಳು ಮುಟ್ಟುಗೋಳು ಹಾಕಿರುವ ವಸ್ತುಗಳನ್ನು ಮರ್ಯಾದೆಯಿಂದ ವಾಪಾಸು ತಂದು ಕೊಡಬೇಕು ಮತ್ತು ನಾಶ ಮಾಡಿರುವ ವಸ್ತುಗಳಿಗೆ ಪರಿಹಾರ ಕೊಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವ ಮಂಗಳೂರು ಮನಪಾ ವಿರುದ್ಧ ಪ್ರತಿಭಟನೆ

ಈ ಮಧ್ಯೆ ಮಹಾನಗರ ಪಾಲಿಕೆಯು ಬೈಕಂಪಾಡಿಯ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ತೆರಳಿದ್ದು, ಅಲ್ಲಿ ವ್ಯಾಪಾರಿ ಸಂಘದ ಪದಾಧಿಕಾರಿಗಳು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅವರಿಗೆ ಕಾನೂನಿನ ಪಾಠ ಮಾಡಿದ್ದಾರೆ.

ಕಳೆದ ಶನಿವಾರದಂದು ವ್ಯಾಪಾರಿಗಳನ್ನು ತೆರವುಗೊಳಿಸಲು ಬಂದಿದ್ದ ಪಾಲಿಕೆ ಅಧಿಕಾರಿಗಳನ್ನು ಬೀದಿಬದಿ ವ್ಯಾಪಾರಿಗಳು ತಡೆದಿದ್ದು, ತೆರವು ಕಾರ್ಯಾಚರಣೆ ಮಾಡುವ ಆದೇಶ ಪತ್ರವನ್ನು ಕೇಳಿದ್ದಾರೆ. ಜೊತಗೆ ಸರ್ಕಾರ ನೀಡಿದ ಗುರುತಿನ ಚೀಟಿ ಇರುವ ವ್ಯಾಪಾರಿಗಳ ತೆರವು ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಬೀದಿಯಲ್ಲೇ ತರಾಟೆಗೆ ತೆಗೆದುಕೊಂಡಿದ್ದರು.

‘ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಕಾದರೆ, ಪಟ್ಟಣ ವ್ಯಾಪಾರಿ ಸಮಿತಿಯ ಸಭೆ ನಡೆದು ಅಲ್ಲಿ ನಿರ್ಧಾರವಾಬೇಕಾಗುತ್ತದೆ, ಇದು ಕಾನೂನು’ ಎಂದು ಬೀದಿಬದಿ ವ್ಯಾಪಾರಿ ಸಂಘದ ಅಧ್ಯಕ್ಷ ಮೊಹಮ್ಮದ್‌ ಮುಸ್ತಫಾ ಹೇಳಿದ್ದಾರೆ. ಆದರೆ ಪಾಲಿಕೆಯು ಇದು ಯಾವುದನ್ನೂ ಪಾಲಿಸದೆ, ಸರ್ಕಾರವೇ ಗುರುತಿನ ಚೀಟಿ ನೀಡಿದ ಮತ್ತು ಗುರುತಿನ ಚೀಟಿ ನೀಡಲು ಸರ್ವೆ ಆಗಿರುವ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿದೆ. ಅಲ್ಲದೆ ಮುಟ್ಟುಗೋಳು ಹಾಕಿಗೊಂಡಿರುವ ವಸ್ತುಗಳನ್ನು ನಾಶಪಡಿಸುತ್ತಿದೆ.

“ಮುಟ್ಟುಗೋಳು ಹಾಕಿರುವ ವಸ್ತುಗಳನ್ನು ಯಾವುದೆ ಕಾರಣಕ್ಕೂ ನಾಶ ಪಡಿಸಬಾರದು. ದಂಡ ಪಡೆದು ವ್ಯಾಪಾರಿಗಳಿಗೆ ಅವುಗಳನ್ನು ವಾಪಾಸು ಕೊಡಬೇಕು. ಆದರೆ ಪಾಲಿಕೆ ಇದನ್ನು ಮಾಡುತ್ತಿಲ್ಲ” ಎಂದು ಮುಸ್ತಫಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೀಗ ಸತತವಾಗಿ ಆರನೇ ದಿನವೂ ಪಾಲಿಕೆಯಿಂದ ದಾಳಿ ಮುಂದುವರೆದಿರುವುದರಿಂದ ನಾಳೆಯಿಂದ ಪಾಲಿಕೆ ಮುಂದೆ ಅನಿರ್ಧಿಷ್ಠಾವಧಿ ಧರಣಿ ಕೂರುವುದಾಗಿ ಸಂಘದ ತೀರ್ಮಾನಿಸಿದೆ ಎಂದು ಮುಸ್ತಫಾ ಹೇಳಿದ್ದಾರೆ.

ಇದನ್ನೂ ಓದಿ:ಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...