Homeಕರ್ನಾಟಕ‘ಮರ್ಯಾದೆಯಿಂದ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ವಾಪಾಸು ಕೊಡಿ’

‘ಮರ್ಯಾದೆಯಿಂದ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ವಾಪಾಸು ಕೊಡಿ’

ತಮ್ಮ ವಸ್ತುಗಳನ್ನು ನಾಶ ಮಾಡಿ ದೌರ್ಜನ್ಯ ಎಸಗಿದ ಮಂಗಳೂರು ಮಹಾನಗರ ಪಾಲಿಕೆ ವಿರುದ್ದ ಬೀದಿಬದಿ ವ್ಯಾಪಾರಿಗಳು ಅನಿರ್ಧಿಷ್ಠಾವಧಿ ಧರಣಿ ಎಚ್ಚರಿಕೆ ನೀಡಿದ್ದಾರೆ

- Advertisement -
- Advertisement -

ಮಂಗಳೂರಿನ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಯನ್ನು ಮಹಾನಗರ ಪಾಲಿಕೆ ಆರನೇ ದಿನವೂ ಮುಂದುವರೆಸಿದ್ದು, ಇದನ್ನು ಪ್ರತಿಭಟಿಸಿ ಮಂಗಳವಾರದಂದು ವ್ಯಾಪಾರಿಗಳು ನಗರದ ಲಾಲ್‌ಬಾಗ್‌ನಲ್ಲಿರುವ ಪಾಲಿಕೆಯ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಜೊತೆಗೆ ಕಾನೂನು ಮೀರಿ ತೆರವು ಮಾಡಿತ್ತಿರುವ ಪಾಲಿಕೆಯ ವಿರುದ್ದ ಬುಧವಾರದಿಂದ ಅನಿರ್ಧಿಷ್ಠಾವಧಿ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.

ಅನಧಿಕೃತ ಗೂಡಂಗಡಿ ಮತ್ತು ಪುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲು ಕಳೆದ ಬುಧವಾರದಂದು ಪಾಲಿಕೆಯ ಮೇಯರ್ ಮತ್ತು ಕಮೀಷನರ್‌‌‌‌ ಆದೇಶ ಹೊರಡಿಸಿದ್ದರು. ಅದರಂತೆ ಗುರುವಾರದಿಂದ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಆದರೆ ಬೀದಿಬದಿ ವ್ಯಾಪಾರಿಗಳಿಗೆ ಸರಕಾರವೇ ನೀಡಿದ್ದ ಗುರುತಿನ ಚೀಟಿಯಿದ್ದರೂ ಅಂತಹ ವ್ಯಾಪಾರಿಗಳನ್ನು ಕೂಡಾ ಅಧಿಕಾರಿಗಳು ತೆರವುಗೊಳಿಸಿದ್ದು, ಹಲವು ವ್ಯಾಪಾರಿಗಳ ಗಾಡಿ ಮತ್ತಿತರ ವಸ್ತುಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ನಿಯಮಬಾಹಿರವಾಗಿ ಜಜ್ಜಿ ನಾಶಪಡಿಸಲಾಗಿದೆ.

ಇದನ್ನೂ ಓದಿ:ಮಂಗಳೂರು: ತೆರವುಗೊಳಿಸಲು ಬಂದ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಬೀದಿಬದಿ ವ್ಯಾಪಾರಿಗಳು!

ಇಂದು ಕೂಡಾ ನಗರದ ಮೈದಾನ ರಸ್ತೆಯಲ್ಲಿ ಅಧಿಕಾರಿಗಳು ವ್ಯಾಪಾರಿಗಳ ವಸ್ತುಗಳನ್ನು ನಾಶಪಡಿಸಿದ್ದರು. ಆದರೆ ಇದನ್ನು ವಿರೋಧಿಸಿ ವ್ಯಾಪಾರಿಗಳು ಲಾರಿಯ ಅಡಿಯಲ್ಲಿ ಮಲಗಿ ಪ್ರತಿಭಟಿಸಿದ್ದಾರೆ. ಜೊತೆಗೆ ಪಾಲಿಕೆಗೆ ಮುತ್ತಿಗೆ ಹಾಕಿದ್ದು, ತಮ್ಮ ವಸ್ತುಗಳನ್ನು ನಾಶ ಪಡಿಸಿದ ಅಧಿಕಾರಿಗಳ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಬೀದಿಬದಿ ವ್ಯಾಪಾರಿ ಶ್ರೇಯೋಭಿವೃದ್ದಿ ಸಂಘದ ಗೌರವಾಧ್ಯಕ್ಷಾದ ಬಿ.ಕೆ. ಇಂತಿಯಾಝ್ ಮಾತನಾಡಿ, “ಬಡ ವ್ಯಾಪಾರಿಗಳ ಹೊಟ್ಟೆಗೆ ಹೊಡೆಯಬೇಡಿ, 2012 ರಲ್ಲೂ ಮಹಾನಗರ ಪಾಲಿಕೆ ಇದೇ ರೀತಿ ಮಾಡಿತ್ತು. ಈಗ ಮತ್ತೇ ಅದೇ ರೀತಿ ಮಾಡುತ್ತಿದೆ. ಅಧಿಕಾರಿಗಳಿಗೆ ಹೃದಯವಿದ್ದರೆ ಈ ರೀತಿ ಮಾಡುತ್ತಿರಲಿಲ್ಲ. 2012 ರಲ್ಲಿ ನಾವು ನಿರಂತರವಾಗಿ ಮೂರು ತಿಂಗಳು ಹೋರಾಟ ಮಾಡಿ ಗೆದ್ದಿದ್ದೇವೆ. ಈಗ ಕೂಡಾ ಅನ್ಯಾಯದ ವಿರುದ್ದ ಹೋರಾಡುತ್ತೇವೆ” ಎಂದು ಹೇಳಿದರು.

ಸಂಘದ ಮಾಜಿ ಗೌರವಾಧ್ಯಕ್ಷರಾದ ಸುನಿಲ್‌ ಕುಮಾರ್‌ ಬಜಾಲ್ ಮಾತನಾಡಿ, “ಪಾಲಿಕೆ ಅಧಿಕಾರಿಗಳು ಮುಟ್ಟುಗೋಳು ಹಾಕಿರುವ ವಸ್ತುಗಳನ್ನು ಮರ್ಯಾದೆಯಿಂದ ವಾಪಾಸು ತಂದು ಕೊಡಬೇಕು ಮತ್ತು ನಾಶ ಮಾಡಿರುವ ವಸ್ತುಗಳಿಗೆ ಪರಿಹಾರ ಕೊಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವ ಮಂಗಳೂರು ಮನಪಾ ವಿರುದ್ಧ ಪ್ರತಿಭಟನೆ

ಈ ಮಧ್ಯೆ ಮಹಾನಗರ ಪಾಲಿಕೆಯು ಬೈಕಂಪಾಡಿಯ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ತೆರಳಿದ್ದು, ಅಲ್ಲಿ ವ್ಯಾಪಾರಿ ಸಂಘದ ಪದಾಧಿಕಾರಿಗಳು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅವರಿಗೆ ಕಾನೂನಿನ ಪಾಠ ಮಾಡಿದ್ದಾರೆ.

ಕಳೆದ ಶನಿವಾರದಂದು ವ್ಯಾಪಾರಿಗಳನ್ನು ತೆರವುಗೊಳಿಸಲು ಬಂದಿದ್ದ ಪಾಲಿಕೆ ಅಧಿಕಾರಿಗಳನ್ನು ಬೀದಿಬದಿ ವ್ಯಾಪಾರಿಗಳು ತಡೆದಿದ್ದು, ತೆರವು ಕಾರ್ಯಾಚರಣೆ ಮಾಡುವ ಆದೇಶ ಪತ್ರವನ್ನು ಕೇಳಿದ್ದಾರೆ. ಜೊತಗೆ ಸರ್ಕಾರ ನೀಡಿದ ಗುರುತಿನ ಚೀಟಿ ಇರುವ ವ್ಯಾಪಾರಿಗಳ ತೆರವು ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಬೀದಿಯಲ್ಲೇ ತರಾಟೆಗೆ ತೆಗೆದುಕೊಂಡಿದ್ದರು.

‘ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಕಾದರೆ, ಪಟ್ಟಣ ವ್ಯಾಪಾರಿ ಸಮಿತಿಯ ಸಭೆ ನಡೆದು ಅಲ್ಲಿ ನಿರ್ಧಾರವಾಬೇಕಾಗುತ್ತದೆ, ಇದು ಕಾನೂನು’ ಎಂದು ಬೀದಿಬದಿ ವ್ಯಾಪಾರಿ ಸಂಘದ ಅಧ್ಯಕ್ಷ ಮೊಹಮ್ಮದ್‌ ಮುಸ್ತಫಾ ಹೇಳಿದ್ದಾರೆ. ಆದರೆ ಪಾಲಿಕೆಯು ಇದು ಯಾವುದನ್ನೂ ಪಾಲಿಸದೆ, ಸರ್ಕಾರವೇ ಗುರುತಿನ ಚೀಟಿ ನೀಡಿದ ಮತ್ತು ಗುರುತಿನ ಚೀಟಿ ನೀಡಲು ಸರ್ವೆ ಆಗಿರುವ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿದೆ. ಅಲ್ಲದೆ ಮುಟ್ಟುಗೋಳು ಹಾಕಿಗೊಂಡಿರುವ ವಸ್ತುಗಳನ್ನು ನಾಶಪಡಿಸುತ್ತಿದೆ.

“ಮುಟ್ಟುಗೋಳು ಹಾಕಿರುವ ವಸ್ತುಗಳನ್ನು ಯಾವುದೆ ಕಾರಣಕ್ಕೂ ನಾಶ ಪಡಿಸಬಾರದು. ದಂಡ ಪಡೆದು ವ್ಯಾಪಾರಿಗಳಿಗೆ ಅವುಗಳನ್ನು ವಾಪಾಸು ಕೊಡಬೇಕು. ಆದರೆ ಪಾಲಿಕೆ ಇದನ್ನು ಮಾಡುತ್ತಿಲ್ಲ” ಎಂದು ಮುಸ್ತಫಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೀಗ ಸತತವಾಗಿ ಆರನೇ ದಿನವೂ ಪಾಲಿಕೆಯಿಂದ ದಾಳಿ ಮುಂದುವರೆದಿರುವುದರಿಂದ ನಾಳೆಯಿಂದ ಪಾಲಿಕೆ ಮುಂದೆ ಅನಿರ್ಧಿಷ್ಠಾವಧಿ ಧರಣಿ ಕೂರುವುದಾಗಿ ಸಂಘದ ತೀರ್ಮಾನಿಸಿದೆ ಎಂದು ಮುಸ್ತಫಾ ಹೇಳಿದ್ದಾರೆ.

ಇದನ್ನೂ ಓದಿ:ಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...