Homeಕರ್ನಾಟಕ‘ಮರ್ಯಾದೆಯಿಂದ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ವಾಪಾಸು ಕೊಡಿ’

‘ಮರ್ಯಾದೆಯಿಂದ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ವಾಪಾಸು ಕೊಡಿ’

ತಮ್ಮ ವಸ್ತುಗಳನ್ನು ನಾಶ ಮಾಡಿ ದೌರ್ಜನ್ಯ ಎಸಗಿದ ಮಂಗಳೂರು ಮಹಾನಗರ ಪಾಲಿಕೆ ವಿರುದ್ದ ಬೀದಿಬದಿ ವ್ಯಾಪಾರಿಗಳು ಅನಿರ್ಧಿಷ್ಠಾವಧಿ ಧರಣಿ ಎಚ್ಚರಿಕೆ ನೀಡಿದ್ದಾರೆ

- Advertisement -
- Advertisement -

ಮಂಗಳೂರಿನ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಯನ್ನು ಮಹಾನಗರ ಪಾಲಿಕೆ ಆರನೇ ದಿನವೂ ಮುಂದುವರೆಸಿದ್ದು, ಇದನ್ನು ಪ್ರತಿಭಟಿಸಿ ಮಂಗಳವಾರದಂದು ವ್ಯಾಪಾರಿಗಳು ನಗರದ ಲಾಲ್‌ಬಾಗ್‌ನಲ್ಲಿರುವ ಪಾಲಿಕೆಯ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಜೊತೆಗೆ ಕಾನೂನು ಮೀರಿ ತೆರವು ಮಾಡಿತ್ತಿರುವ ಪಾಲಿಕೆಯ ವಿರುದ್ದ ಬುಧವಾರದಿಂದ ಅನಿರ್ಧಿಷ್ಠಾವಧಿ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.

ಅನಧಿಕೃತ ಗೂಡಂಗಡಿ ಮತ್ತು ಪುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲು ಕಳೆದ ಬುಧವಾರದಂದು ಪಾಲಿಕೆಯ ಮೇಯರ್ ಮತ್ತು ಕಮೀಷನರ್‌‌‌‌ ಆದೇಶ ಹೊರಡಿಸಿದ್ದರು. ಅದರಂತೆ ಗುರುವಾರದಿಂದ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಆದರೆ ಬೀದಿಬದಿ ವ್ಯಾಪಾರಿಗಳಿಗೆ ಸರಕಾರವೇ ನೀಡಿದ್ದ ಗುರುತಿನ ಚೀಟಿಯಿದ್ದರೂ ಅಂತಹ ವ್ಯಾಪಾರಿಗಳನ್ನು ಕೂಡಾ ಅಧಿಕಾರಿಗಳು ತೆರವುಗೊಳಿಸಿದ್ದು, ಹಲವು ವ್ಯಾಪಾರಿಗಳ ಗಾಡಿ ಮತ್ತಿತರ ವಸ್ತುಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ನಿಯಮಬಾಹಿರವಾಗಿ ಜಜ್ಜಿ ನಾಶಪಡಿಸಲಾಗಿದೆ.

ಇದನ್ನೂ ಓದಿ:ಮಂಗಳೂರು: ತೆರವುಗೊಳಿಸಲು ಬಂದ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಬೀದಿಬದಿ ವ್ಯಾಪಾರಿಗಳು!

ಇಂದು ಕೂಡಾ ನಗರದ ಮೈದಾನ ರಸ್ತೆಯಲ್ಲಿ ಅಧಿಕಾರಿಗಳು ವ್ಯಾಪಾರಿಗಳ ವಸ್ತುಗಳನ್ನು ನಾಶಪಡಿಸಿದ್ದರು. ಆದರೆ ಇದನ್ನು ವಿರೋಧಿಸಿ ವ್ಯಾಪಾರಿಗಳು ಲಾರಿಯ ಅಡಿಯಲ್ಲಿ ಮಲಗಿ ಪ್ರತಿಭಟಿಸಿದ್ದಾರೆ. ಜೊತೆಗೆ ಪಾಲಿಕೆಗೆ ಮುತ್ತಿಗೆ ಹಾಕಿದ್ದು, ತಮ್ಮ ವಸ್ತುಗಳನ್ನು ನಾಶ ಪಡಿಸಿದ ಅಧಿಕಾರಿಗಳ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಬೀದಿಬದಿ ವ್ಯಾಪಾರಿ ಶ್ರೇಯೋಭಿವೃದ್ದಿ ಸಂಘದ ಗೌರವಾಧ್ಯಕ್ಷಾದ ಬಿ.ಕೆ. ಇಂತಿಯಾಝ್ ಮಾತನಾಡಿ, “ಬಡ ವ್ಯಾಪಾರಿಗಳ ಹೊಟ್ಟೆಗೆ ಹೊಡೆಯಬೇಡಿ, 2012 ರಲ್ಲೂ ಮಹಾನಗರ ಪಾಲಿಕೆ ಇದೇ ರೀತಿ ಮಾಡಿತ್ತು. ಈಗ ಮತ್ತೇ ಅದೇ ರೀತಿ ಮಾಡುತ್ತಿದೆ. ಅಧಿಕಾರಿಗಳಿಗೆ ಹೃದಯವಿದ್ದರೆ ಈ ರೀತಿ ಮಾಡುತ್ತಿರಲಿಲ್ಲ. 2012 ರಲ್ಲಿ ನಾವು ನಿರಂತರವಾಗಿ ಮೂರು ತಿಂಗಳು ಹೋರಾಟ ಮಾಡಿ ಗೆದ್ದಿದ್ದೇವೆ. ಈಗ ಕೂಡಾ ಅನ್ಯಾಯದ ವಿರುದ್ದ ಹೋರಾಡುತ್ತೇವೆ” ಎಂದು ಹೇಳಿದರು.

ಸಂಘದ ಮಾಜಿ ಗೌರವಾಧ್ಯಕ್ಷರಾದ ಸುನಿಲ್‌ ಕುಮಾರ್‌ ಬಜಾಲ್ ಮಾತನಾಡಿ, “ಪಾಲಿಕೆ ಅಧಿಕಾರಿಗಳು ಮುಟ್ಟುಗೋಳು ಹಾಕಿರುವ ವಸ್ತುಗಳನ್ನು ಮರ್ಯಾದೆಯಿಂದ ವಾಪಾಸು ತಂದು ಕೊಡಬೇಕು ಮತ್ತು ನಾಶ ಮಾಡಿರುವ ವಸ್ತುಗಳಿಗೆ ಪರಿಹಾರ ಕೊಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವ ಮಂಗಳೂರು ಮನಪಾ ವಿರುದ್ಧ ಪ್ರತಿಭಟನೆ

ಈ ಮಧ್ಯೆ ಮಹಾನಗರ ಪಾಲಿಕೆಯು ಬೈಕಂಪಾಡಿಯ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ತೆರಳಿದ್ದು, ಅಲ್ಲಿ ವ್ಯಾಪಾರಿ ಸಂಘದ ಪದಾಧಿಕಾರಿಗಳು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅವರಿಗೆ ಕಾನೂನಿನ ಪಾಠ ಮಾಡಿದ್ದಾರೆ.

ಕಳೆದ ಶನಿವಾರದಂದು ವ್ಯಾಪಾರಿಗಳನ್ನು ತೆರವುಗೊಳಿಸಲು ಬಂದಿದ್ದ ಪಾಲಿಕೆ ಅಧಿಕಾರಿಗಳನ್ನು ಬೀದಿಬದಿ ವ್ಯಾಪಾರಿಗಳು ತಡೆದಿದ್ದು, ತೆರವು ಕಾರ್ಯಾಚರಣೆ ಮಾಡುವ ಆದೇಶ ಪತ್ರವನ್ನು ಕೇಳಿದ್ದಾರೆ. ಜೊತಗೆ ಸರ್ಕಾರ ನೀಡಿದ ಗುರುತಿನ ಚೀಟಿ ಇರುವ ವ್ಯಾಪಾರಿಗಳ ತೆರವು ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಬೀದಿಯಲ್ಲೇ ತರಾಟೆಗೆ ತೆಗೆದುಕೊಂಡಿದ್ದರು.

‘ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಕಾದರೆ, ಪಟ್ಟಣ ವ್ಯಾಪಾರಿ ಸಮಿತಿಯ ಸಭೆ ನಡೆದು ಅಲ್ಲಿ ನಿರ್ಧಾರವಾಬೇಕಾಗುತ್ತದೆ, ಇದು ಕಾನೂನು’ ಎಂದು ಬೀದಿಬದಿ ವ್ಯಾಪಾರಿ ಸಂಘದ ಅಧ್ಯಕ್ಷ ಮೊಹಮ್ಮದ್‌ ಮುಸ್ತಫಾ ಹೇಳಿದ್ದಾರೆ. ಆದರೆ ಪಾಲಿಕೆಯು ಇದು ಯಾವುದನ್ನೂ ಪಾಲಿಸದೆ, ಸರ್ಕಾರವೇ ಗುರುತಿನ ಚೀಟಿ ನೀಡಿದ ಮತ್ತು ಗುರುತಿನ ಚೀಟಿ ನೀಡಲು ಸರ್ವೆ ಆಗಿರುವ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿದೆ. ಅಲ್ಲದೆ ಮುಟ್ಟುಗೋಳು ಹಾಕಿಗೊಂಡಿರುವ ವಸ್ತುಗಳನ್ನು ನಾಶಪಡಿಸುತ್ತಿದೆ.

“ಮುಟ್ಟುಗೋಳು ಹಾಕಿರುವ ವಸ್ತುಗಳನ್ನು ಯಾವುದೆ ಕಾರಣಕ್ಕೂ ನಾಶ ಪಡಿಸಬಾರದು. ದಂಡ ಪಡೆದು ವ್ಯಾಪಾರಿಗಳಿಗೆ ಅವುಗಳನ್ನು ವಾಪಾಸು ಕೊಡಬೇಕು. ಆದರೆ ಪಾಲಿಕೆ ಇದನ್ನು ಮಾಡುತ್ತಿಲ್ಲ” ಎಂದು ಮುಸ್ತಫಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೀಗ ಸತತವಾಗಿ ಆರನೇ ದಿನವೂ ಪಾಲಿಕೆಯಿಂದ ದಾಳಿ ಮುಂದುವರೆದಿರುವುದರಿಂದ ನಾಳೆಯಿಂದ ಪಾಲಿಕೆ ಮುಂದೆ ಅನಿರ್ಧಿಷ್ಠಾವಧಿ ಧರಣಿ ಕೂರುವುದಾಗಿ ಸಂಘದ ತೀರ್ಮಾನಿಸಿದೆ ಎಂದು ಮುಸ್ತಫಾ ಹೇಳಿದ್ದಾರೆ.

ಇದನ್ನೂ ಓದಿ:ಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...