Homeಕರ್ನಾಟಕ‘ಮರ್ಯಾದೆಯಿಂದ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ವಾಪಾಸು ಕೊಡಿ’

‘ಮರ್ಯಾದೆಯಿಂದ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ವಾಪಾಸು ಕೊಡಿ’

ತಮ್ಮ ವಸ್ತುಗಳನ್ನು ನಾಶ ಮಾಡಿ ದೌರ್ಜನ್ಯ ಎಸಗಿದ ಮಂಗಳೂರು ಮಹಾನಗರ ಪಾಲಿಕೆ ವಿರುದ್ದ ಬೀದಿಬದಿ ವ್ಯಾಪಾರಿಗಳು ಅನಿರ್ಧಿಷ್ಠಾವಧಿ ಧರಣಿ ಎಚ್ಚರಿಕೆ ನೀಡಿದ್ದಾರೆ

- Advertisement -
- Advertisement -

ಮಂಗಳೂರಿನ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಯನ್ನು ಮಹಾನಗರ ಪಾಲಿಕೆ ಆರನೇ ದಿನವೂ ಮುಂದುವರೆಸಿದ್ದು, ಇದನ್ನು ಪ್ರತಿಭಟಿಸಿ ಮಂಗಳವಾರದಂದು ವ್ಯಾಪಾರಿಗಳು ನಗರದ ಲಾಲ್‌ಬಾಗ್‌ನಲ್ಲಿರುವ ಪಾಲಿಕೆಯ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಜೊತೆಗೆ ಕಾನೂನು ಮೀರಿ ತೆರವು ಮಾಡಿತ್ತಿರುವ ಪಾಲಿಕೆಯ ವಿರುದ್ದ ಬುಧವಾರದಿಂದ ಅನಿರ್ಧಿಷ್ಠಾವಧಿ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.

ಅನಧಿಕೃತ ಗೂಡಂಗಡಿ ಮತ್ತು ಪುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲು ಕಳೆದ ಬುಧವಾರದಂದು ಪಾಲಿಕೆಯ ಮೇಯರ್ ಮತ್ತು ಕಮೀಷನರ್‌‌‌‌ ಆದೇಶ ಹೊರಡಿಸಿದ್ದರು. ಅದರಂತೆ ಗುರುವಾರದಿಂದ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಆದರೆ ಬೀದಿಬದಿ ವ್ಯಾಪಾರಿಗಳಿಗೆ ಸರಕಾರವೇ ನೀಡಿದ್ದ ಗುರುತಿನ ಚೀಟಿಯಿದ್ದರೂ ಅಂತಹ ವ್ಯಾಪಾರಿಗಳನ್ನು ಕೂಡಾ ಅಧಿಕಾರಿಗಳು ತೆರವುಗೊಳಿಸಿದ್ದು, ಹಲವು ವ್ಯಾಪಾರಿಗಳ ಗಾಡಿ ಮತ್ತಿತರ ವಸ್ತುಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ನಿಯಮಬಾಹಿರವಾಗಿ ಜಜ್ಜಿ ನಾಶಪಡಿಸಲಾಗಿದೆ.

ಇದನ್ನೂ ಓದಿ:ಮಂಗಳೂರು: ತೆರವುಗೊಳಿಸಲು ಬಂದ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಬೀದಿಬದಿ ವ್ಯಾಪಾರಿಗಳು!

ಇಂದು ಕೂಡಾ ನಗರದ ಮೈದಾನ ರಸ್ತೆಯಲ್ಲಿ ಅಧಿಕಾರಿಗಳು ವ್ಯಾಪಾರಿಗಳ ವಸ್ತುಗಳನ್ನು ನಾಶಪಡಿಸಿದ್ದರು. ಆದರೆ ಇದನ್ನು ವಿರೋಧಿಸಿ ವ್ಯಾಪಾರಿಗಳು ಲಾರಿಯ ಅಡಿಯಲ್ಲಿ ಮಲಗಿ ಪ್ರತಿಭಟಿಸಿದ್ದಾರೆ. ಜೊತೆಗೆ ಪಾಲಿಕೆಗೆ ಮುತ್ತಿಗೆ ಹಾಕಿದ್ದು, ತಮ್ಮ ವಸ್ತುಗಳನ್ನು ನಾಶ ಪಡಿಸಿದ ಅಧಿಕಾರಿಗಳ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಬೀದಿಬದಿ ವ್ಯಾಪಾರಿ ಶ್ರೇಯೋಭಿವೃದ್ದಿ ಸಂಘದ ಗೌರವಾಧ್ಯಕ್ಷಾದ ಬಿ.ಕೆ. ಇಂತಿಯಾಝ್ ಮಾತನಾಡಿ, “ಬಡ ವ್ಯಾಪಾರಿಗಳ ಹೊಟ್ಟೆಗೆ ಹೊಡೆಯಬೇಡಿ, 2012 ರಲ್ಲೂ ಮಹಾನಗರ ಪಾಲಿಕೆ ಇದೇ ರೀತಿ ಮಾಡಿತ್ತು. ಈಗ ಮತ್ತೇ ಅದೇ ರೀತಿ ಮಾಡುತ್ತಿದೆ. ಅಧಿಕಾರಿಗಳಿಗೆ ಹೃದಯವಿದ್ದರೆ ಈ ರೀತಿ ಮಾಡುತ್ತಿರಲಿಲ್ಲ. 2012 ರಲ್ಲಿ ನಾವು ನಿರಂತರವಾಗಿ ಮೂರು ತಿಂಗಳು ಹೋರಾಟ ಮಾಡಿ ಗೆದ್ದಿದ್ದೇವೆ. ಈಗ ಕೂಡಾ ಅನ್ಯಾಯದ ವಿರುದ್ದ ಹೋರಾಡುತ್ತೇವೆ” ಎಂದು ಹೇಳಿದರು.

ಸಂಘದ ಮಾಜಿ ಗೌರವಾಧ್ಯಕ್ಷರಾದ ಸುನಿಲ್‌ ಕುಮಾರ್‌ ಬಜಾಲ್ ಮಾತನಾಡಿ, “ಪಾಲಿಕೆ ಅಧಿಕಾರಿಗಳು ಮುಟ್ಟುಗೋಳು ಹಾಕಿರುವ ವಸ್ತುಗಳನ್ನು ಮರ್ಯಾದೆಯಿಂದ ವಾಪಾಸು ತಂದು ಕೊಡಬೇಕು ಮತ್ತು ನಾಶ ಮಾಡಿರುವ ವಸ್ತುಗಳಿಗೆ ಪರಿಹಾರ ಕೊಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವ ಮಂಗಳೂರು ಮನಪಾ ವಿರುದ್ಧ ಪ್ರತಿಭಟನೆ

ಈ ಮಧ್ಯೆ ಮಹಾನಗರ ಪಾಲಿಕೆಯು ಬೈಕಂಪಾಡಿಯ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ತೆರಳಿದ್ದು, ಅಲ್ಲಿ ವ್ಯಾಪಾರಿ ಸಂಘದ ಪದಾಧಿಕಾರಿಗಳು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅವರಿಗೆ ಕಾನೂನಿನ ಪಾಠ ಮಾಡಿದ್ದಾರೆ.

ಕಳೆದ ಶನಿವಾರದಂದು ವ್ಯಾಪಾರಿಗಳನ್ನು ತೆರವುಗೊಳಿಸಲು ಬಂದಿದ್ದ ಪಾಲಿಕೆ ಅಧಿಕಾರಿಗಳನ್ನು ಬೀದಿಬದಿ ವ್ಯಾಪಾರಿಗಳು ತಡೆದಿದ್ದು, ತೆರವು ಕಾರ್ಯಾಚರಣೆ ಮಾಡುವ ಆದೇಶ ಪತ್ರವನ್ನು ಕೇಳಿದ್ದಾರೆ. ಜೊತಗೆ ಸರ್ಕಾರ ನೀಡಿದ ಗುರುತಿನ ಚೀಟಿ ಇರುವ ವ್ಯಾಪಾರಿಗಳ ತೆರವು ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಬೀದಿಯಲ್ಲೇ ತರಾಟೆಗೆ ತೆಗೆದುಕೊಂಡಿದ್ದರು.

‘ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಕಾದರೆ, ಪಟ್ಟಣ ವ್ಯಾಪಾರಿ ಸಮಿತಿಯ ಸಭೆ ನಡೆದು ಅಲ್ಲಿ ನಿರ್ಧಾರವಾಬೇಕಾಗುತ್ತದೆ, ಇದು ಕಾನೂನು’ ಎಂದು ಬೀದಿಬದಿ ವ್ಯಾಪಾರಿ ಸಂಘದ ಅಧ್ಯಕ್ಷ ಮೊಹಮ್ಮದ್‌ ಮುಸ್ತಫಾ ಹೇಳಿದ್ದಾರೆ. ಆದರೆ ಪಾಲಿಕೆಯು ಇದು ಯಾವುದನ್ನೂ ಪಾಲಿಸದೆ, ಸರ್ಕಾರವೇ ಗುರುತಿನ ಚೀಟಿ ನೀಡಿದ ಮತ್ತು ಗುರುತಿನ ಚೀಟಿ ನೀಡಲು ಸರ್ವೆ ಆಗಿರುವ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿದೆ. ಅಲ್ಲದೆ ಮುಟ್ಟುಗೋಳು ಹಾಕಿಗೊಂಡಿರುವ ವಸ್ತುಗಳನ್ನು ನಾಶಪಡಿಸುತ್ತಿದೆ.

“ಮುಟ್ಟುಗೋಳು ಹಾಕಿರುವ ವಸ್ತುಗಳನ್ನು ಯಾವುದೆ ಕಾರಣಕ್ಕೂ ನಾಶ ಪಡಿಸಬಾರದು. ದಂಡ ಪಡೆದು ವ್ಯಾಪಾರಿಗಳಿಗೆ ಅವುಗಳನ್ನು ವಾಪಾಸು ಕೊಡಬೇಕು. ಆದರೆ ಪಾಲಿಕೆ ಇದನ್ನು ಮಾಡುತ್ತಿಲ್ಲ” ಎಂದು ಮುಸ್ತಫಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೀಗ ಸತತವಾಗಿ ಆರನೇ ದಿನವೂ ಪಾಲಿಕೆಯಿಂದ ದಾಳಿ ಮುಂದುವರೆದಿರುವುದರಿಂದ ನಾಳೆಯಿಂದ ಪಾಲಿಕೆ ಮುಂದೆ ಅನಿರ್ಧಿಷ್ಠಾವಧಿ ಧರಣಿ ಕೂರುವುದಾಗಿ ಸಂಘದ ತೀರ್ಮಾನಿಸಿದೆ ಎಂದು ಮುಸ್ತಫಾ ಹೇಳಿದ್ದಾರೆ.

ಇದನ್ನೂ ಓದಿ:ಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...