Homeಕರ್ನಾಟಕ‘ಮರ್ಯಾದೆಯಿಂದ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ವಾಪಾಸು ಕೊಡಿ’

‘ಮರ್ಯಾದೆಯಿಂದ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ವಾಪಾಸು ಕೊಡಿ’

ತಮ್ಮ ವಸ್ತುಗಳನ್ನು ನಾಶ ಮಾಡಿ ದೌರ್ಜನ್ಯ ಎಸಗಿದ ಮಂಗಳೂರು ಮಹಾನಗರ ಪಾಲಿಕೆ ವಿರುದ್ದ ಬೀದಿಬದಿ ವ್ಯಾಪಾರಿಗಳು ಅನಿರ್ಧಿಷ್ಠಾವಧಿ ಧರಣಿ ಎಚ್ಚರಿಕೆ ನೀಡಿದ್ದಾರೆ

- Advertisement -
- Advertisement -

ಮಂಗಳೂರಿನ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಯನ್ನು ಮಹಾನಗರ ಪಾಲಿಕೆ ಆರನೇ ದಿನವೂ ಮುಂದುವರೆಸಿದ್ದು, ಇದನ್ನು ಪ್ರತಿಭಟಿಸಿ ಮಂಗಳವಾರದಂದು ವ್ಯಾಪಾರಿಗಳು ನಗರದ ಲಾಲ್‌ಬಾಗ್‌ನಲ್ಲಿರುವ ಪಾಲಿಕೆಯ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಜೊತೆಗೆ ಕಾನೂನು ಮೀರಿ ತೆರವು ಮಾಡಿತ್ತಿರುವ ಪಾಲಿಕೆಯ ವಿರುದ್ದ ಬುಧವಾರದಿಂದ ಅನಿರ್ಧಿಷ್ಠಾವಧಿ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.

ಅನಧಿಕೃತ ಗೂಡಂಗಡಿ ಮತ್ತು ಪುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲು ಕಳೆದ ಬುಧವಾರದಂದು ಪಾಲಿಕೆಯ ಮೇಯರ್ ಮತ್ತು ಕಮೀಷನರ್‌‌‌‌ ಆದೇಶ ಹೊರಡಿಸಿದ್ದರು. ಅದರಂತೆ ಗುರುವಾರದಿಂದ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಆದರೆ ಬೀದಿಬದಿ ವ್ಯಾಪಾರಿಗಳಿಗೆ ಸರಕಾರವೇ ನೀಡಿದ್ದ ಗುರುತಿನ ಚೀಟಿಯಿದ್ದರೂ ಅಂತಹ ವ್ಯಾಪಾರಿಗಳನ್ನು ಕೂಡಾ ಅಧಿಕಾರಿಗಳು ತೆರವುಗೊಳಿಸಿದ್ದು, ಹಲವು ವ್ಯಾಪಾರಿಗಳ ಗಾಡಿ ಮತ್ತಿತರ ವಸ್ತುಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ನಿಯಮಬಾಹಿರವಾಗಿ ಜಜ್ಜಿ ನಾಶಪಡಿಸಲಾಗಿದೆ.

ಇದನ್ನೂ ಓದಿ:ಮಂಗಳೂರು: ತೆರವುಗೊಳಿಸಲು ಬಂದ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಬೀದಿಬದಿ ವ್ಯಾಪಾರಿಗಳು!

ಇಂದು ಕೂಡಾ ನಗರದ ಮೈದಾನ ರಸ್ತೆಯಲ್ಲಿ ಅಧಿಕಾರಿಗಳು ವ್ಯಾಪಾರಿಗಳ ವಸ್ತುಗಳನ್ನು ನಾಶಪಡಿಸಿದ್ದರು. ಆದರೆ ಇದನ್ನು ವಿರೋಧಿಸಿ ವ್ಯಾಪಾರಿಗಳು ಲಾರಿಯ ಅಡಿಯಲ್ಲಿ ಮಲಗಿ ಪ್ರತಿಭಟಿಸಿದ್ದಾರೆ. ಜೊತೆಗೆ ಪಾಲಿಕೆಗೆ ಮುತ್ತಿಗೆ ಹಾಕಿದ್ದು, ತಮ್ಮ ವಸ್ತುಗಳನ್ನು ನಾಶ ಪಡಿಸಿದ ಅಧಿಕಾರಿಗಳ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಬೀದಿಬದಿ ವ್ಯಾಪಾರಿ ಶ್ರೇಯೋಭಿವೃದ್ದಿ ಸಂಘದ ಗೌರವಾಧ್ಯಕ್ಷಾದ ಬಿ.ಕೆ. ಇಂತಿಯಾಝ್ ಮಾತನಾಡಿ, “ಬಡ ವ್ಯಾಪಾರಿಗಳ ಹೊಟ್ಟೆಗೆ ಹೊಡೆಯಬೇಡಿ, 2012 ರಲ್ಲೂ ಮಹಾನಗರ ಪಾಲಿಕೆ ಇದೇ ರೀತಿ ಮಾಡಿತ್ತು. ಈಗ ಮತ್ತೇ ಅದೇ ರೀತಿ ಮಾಡುತ್ತಿದೆ. ಅಧಿಕಾರಿಗಳಿಗೆ ಹೃದಯವಿದ್ದರೆ ಈ ರೀತಿ ಮಾಡುತ್ತಿರಲಿಲ್ಲ. 2012 ರಲ್ಲಿ ನಾವು ನಿರಂತರವಾಗಿ ಮೂರು ತಿಂಗಳು ಹೋರಾಟ ಮಾಡಿ ಗೆದ್ದಿದ್ದೇವೆ. ಈಗ ಕೂಡಾ ಅನ್ಯಾಯದ ವಿರುದ್ದ ಹೋರಾಡುತ್ತೇವೆ” ಎಂದು ಹೇಳಿದರು.

ಸಂಘದ ಮಾಜಿ ಗೌರವಾಧ್ಯಕ್ಷರಾದ ಸುನಿಲ್‌ ಕುಮಾರ್‌ ಬಜಾಲ್ ಮಾತನಾಡಿ, “ಪಾಲಿಕೆ ಅಧಿಕಾರಿಗಳು ಮುಟ್ಟುಗೋಳು ಹಾಕಿರುವ ವಸ್ತುಗಳನ್ನು ಮರ್ಯಾದೆಯಿಂದ ವಾಪಾಸು ತಂದು ಕೊಡಬೇಕು ಮತ್ತು ನಾಶ ಮಾಡಿರುವ ವಸ್ತುಗಳಿಗೆ ಪರಿಹಾರ ಕೊಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವ ಮಂಗಳೂರು ಮನಪಾ ವಿರುದ್ಧ ಪ್ರತಿಭಟನೆ

ಈ ಮಧ್ಯೆ ಮಹಾನಗರ ಪಾಲಿಕೆಯು ಬೈಕಂಪಾಡಿಯ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ತೆರಳಿದ್ದು, ಅಲ್ಲಿ ವ್ಯಾಪಾರಿ ಸಂಘದ ಪದಾಧಿಕಾರಿಗಳು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅವರಿಗೆ ಕಾನೂನಿನ ಪಾಠ ಮಾಡಿದ್ದಾರೆ.

ಕಳೆದ ಶನಿವಾರದಂದು ವ್ಯಾಪಾರಿಗಳನ್ನು ತೆರವುಗೊಳಿಸಲು ಬಂದಿದ್ದ ಪಾಲಿಕೆ ಅಧಿಕಾರಿಗಳನ್ನು ಬೀದಿಬದಿ ವ್ಯಾಪಾರಿಗಳು ತಡೆದಿದ್ದು, ತೆರವು ಕಾರ್ಯಾಚರಣೆ ಮಾಡುವ ಆದೇಶ ಪತ್ರವನ್ನು ಕೇಳಿದ್ದಾರೆ. ಜೊತಗೆ ಸರ್ಕಾರ ನೀಡಿದ ಗುರುತಿನ ಚೀಟಿ ಇರುವ ವ್ಯಾಪಾರಿಗಳ ತೆರವು ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಬೀದಿಯಲ್ಲೇ ತರಾಟೆಗೆ ತೆಗೆದುಕೊಂಡಿದ್ದರು.

‘ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಕಾದರೆ, ಪಟ್ಟಣ ವ್ಯಾಪಾರಿ ಸಮಿತಿಯ ಸಭೆ ನಡೆದು ಅಲ್ಲಿ ನಿರ್ಧಾರವಾಬೇಕಾಗುತ್ತದೆ, ಇದು ಕಾನೂನು’ ಎಂದು ಬೀದಿಬದಿ ವ್ಯಾಪಾರಿ ಸಂಘದ ಅಧ್ಯಕ್ಷ ಮೊಹಮ್ಮದ್‌ ಮುಸ್ತಫಾ ಹೇಳಿದ್ದಾರೆ. ಆದರೆ ಪಾಲಿಕೆಯು ಇದು ಯಾವುದನ್ನೂ ಪಾಲಿಸದೆ, ಸರ್ಕಾರವೇ ಗುರುತಿನ ಚೀಟಿ ನೀಡಿದ ಮತ್ತು ಗುರುತಿನ ಚೀಟಿ ನೀಡಲು ಸರ್ವೆ ಆಗಿರುವ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿದೆ. ಅಲ್ಲದೆ ಮುಟ್ಟುಗೋಳು ಹಾಕಿಗೊಂಡಿರುವ ವಸ್ತುಗಳನ್ನು ನಾಶಪಡಿಸುತ್ತಿದೆ.

“ಮುಟ್ಟುಗೋಳು ಹಾಕಿರುವ ವಸ್ತುಗಳನ್ನು ಯಾವುದೆ ಕಾರಣಕ್ಕೂ ನಾಶ ಪಡಿಸಬಾರದು. ದಂಡ ಪಡೆದು ವ್ಯಾಪಾರಿಗಳಿಗೆ ಅವುಗಳನ್ನು ವಾಪಾಸು ಕೊಡಬೇಕು. ಆದರೆ ಪಾಲಿಕೆ ಇದನ್ನು ಮಾಡುತ್ತಿಲ್ಲ” ಎಂದು ಮುಸ್ತಫಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೀಗ ಸತತವಾಗಿ ಆರನೇ ದಿನವೂ ಪಾಲಿಕೆಯಿಂದ ದಾಳಿ ಮುಂದುವರೆದಿರುವುದರಿಂದ ನಾಳೆಯಿಂದ ಪಾಲಿಕೆ ಮುಂದೆ ಅನಿರ್ಧಿಷ್ಠಾವಧಿ ಧರಣಿ ಕೂರುವುದಾಗಿ ಸಂಘದ ತೀರ್ಮಾನಿಸಿದೆ ಎಂದು ಮುಸ್ತಫಾ ಹೇಳಿದ್ದಾರೆ.

ಇದನ್ನೂ ಓದಿ:ಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...