Homeಕರ್ನಾಟಕದೆಹಲಿಯಿಂದ ಬರಿಗೈಯಲ್ಲಿ ವಾಪಸ್ ಬಂದಿರುವುದು ಸಿಎಂ ಬದಲಾವಣೆ ಸೂಚನೆ - ಕೆಎನ್ಆರ್

ದೆಹಲಿಯಿಂದ ಬರಿಗೈಯಲ್ಲಿ ವಾಪಸ್ ಬಂದಿರುವುದು ಸಿಎಂ ಬದಲಾವಣೆ ಸೂಚನೆ – ಕೆಎನ್ಆರ್

ಮಾತನಾಡಲು ಬಯಸಿದರೂ ಗೃಹ ಸಚಿವ ಅಮಿತ್ ಶಾ ಮುಖ್ಯಮಂತ್ರಿಗಳ ಭೇಟಿಗೆ ಅವಕಾಶ ನೀಡಿಲ್ಲ. ಇದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾಡಿದ ಅಪಮಾನ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಹೋಗಿ ಬರಿಗೈಯಲ್ಲಿ ವಾಪಸ್ ಬಂದಿರುವುದು ಸಿಎಂ ಸ್ಥಾನದಿಂದ ಅವರನ್ನು ಬದಲಾವಣೆ ಮಾಡುವ ಸೂಚನೆಯಾಗಿದೆ ಎಂದು ಮಾಜಿ ಶಾಸಕ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್ ರಾಜಣ್ಣ ಹೇಳಿದ್ದಾರೆ.

ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಯ ಸಂಬಂಧ ತೆಗೆದುಕೊಂಡು ಹೋಗಿದ್ದ ಲೀಸ್ಟ್ ಗೆ ಅನುಮೋದನೆ ನೀಡಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಬಂದಿವೆ. ಇದನ್ನು ನೋಡಿದರೆ ಯಡಿಯೂರಪ್ಪ ಬದಲಾವಣೆ ಖಚಿತ ಎಂಬುದು ತಿಳಿಯುತ್ತದೆ ಎಂದಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿಗಳ ಭೇಟಿಗೆ ಅವಕಾಶ ನೀಡಿಲ್ಲ. ಮಾತನಾಡಲು ಅವಕಾಶ ನೀಡಬೇಕೆಂದು ಮನವಿ ಮಾಡಿಕೊಂಡರೂ ಅಮಿತ್ ಶಾ ಅದಕ್ಕೆ ಕಿಮ್ಮತ್ತು ಕೊಟ್ಟಿಲ್ಲ. ಇದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾಡಿದ ಅಪಮಾನ. ಇದನ್ನು ಖಂಡಿಸುತ್ತೇನೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ನಮ್ಮ ನಾಯಕರು. ಅವರು ಕೇವಲ ಬಿಜೆಪಿಗೆ ಮಾತ್ರ ಮುಖ್ಯಮಂತ್ರಿಯಲ್ಲ. ನಮಗೂ ಮುಖ್ಯಮಂತ್ರಿಗಳು. ಒಂದು ರಾಜ್ಯವನ್ನು ಪ್ರತಿನಿಧಿಸುವವರು. ಅಂಥವರಿಗೆ ಭೇಟಿಗೆ ಅವಕಾಶ ಕಲ್ಪಿಸದೆ ಗೃಹ ಸಚಿವರು ಅವಮಾನ ಮಾಡಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.

ನಾನು ಇತ್ತೀಚೆಗೆ ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೆ. ಅವರ ಮನೆಯಲ್ಲಿ ನನ್ನನ್ನು ಬಿಟ್ಟು ಬೇರೆ ಯಾರೂ ಇರಲಿಲ್ಲ. ಮರುದಿನ ಬೆಳಗ್ಗೆ ಪತ್ರಿಕೆಯೊಂದರಲ್ಲಿ ಪರಮೇಶ್ವರ್ ವಿರುದ್ಧ ರಾಜಣ್ಣ ದೂರು ಹೇಳಿದ್ದಾರೆ ಎಂದು ವರದಿ ಬಂದಿತ್ತು. ನಾನು ಪರಮೇಶ್ವರ್ ವಿರುದ್ಧ ದೂರನ್ನೂ ಹೇಳಿಲ್ಲ. ಆ ಬಗ್ಗೆ ಮಾತನಾಡಿಯೇ ಇಲ್ಲ. ಆ ಪತ್ರಿಕೆಯಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರವಾದುದು ಎಂದು ಸ್ಪಷ್ಟಪಡಿಸಿದರು.

ಜಿಲ್ಲೆಯ ಎಲ್ಲಾ ನಾಯಕರು ಶಿರಾ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಪರಮೇಶ್ವರ್ ಕೂಡ ಸಾಕಷ್ಟು ಶ್ರಮ ಹಾಕಿದ್ದಾರೆ. ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಆದರೆ ಜನರಿಗೆ ತಪ್ಪು ಸಂದೇಶ, ಸುಳ್ಳು ಮಾಹಿತಿ ಹೋಗಬಾರದು. ವಿಶ್ವಾಸಕ್ಕೆ ಧಕ್ಕೆ ಬರುವಂತಹ ವರದಿ ಮಾಡಬಾರದು. ತಪ್ಪು ಮಾಹಿತಿ ನೀಡುವುದು ಸರಿಯಲ್ಲ ಎಂದು ತಿಳಿಸಿದರು.

ಶಿರಾ ಉಪಚುನಾವಣೆಯಲ್ಲಿ ಸುಳ್ಳು ಭರವಸೆಯಿಂದಲೇ ಬಿಜೆಪಿ ಗೆಲುವು ಸಾಧಿಸಿತು. ಕಾಡುಗೊಲ್ಲರನ್ನು ಎಸ್.ಟಿ.ಗೆ ಸೇರಿಸುತ್ತೇವೆ. ಕಾಡುಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪಿಸಿ ಜನಾಂಗದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ಸುಳ್ಳು ಆಶ್ವಾಸನೆ ಕೊಟ್ಟರು. ಮದ್ದಕ್ಕನಹಳ್ಳಿಯಲ್ಲಿ ಭೋವಿ ಸಮುದಾಯ ಎದುರಿಸುತ್ತಿರುವ ಸಮಸ್ಯೆ ಯನ್ನು ಬೆಳಗಾಗುವುದರೊಳಗೆ ಬಗೆಹರಿಸುತ್ತೇವೆ ಎಂದು ಕೀಳುಮಟ್ಟದ ಭರವಸೆ ನೀಡಿದರು ಎಂದು ಕಿಡಿಕಾರಿದರು.

ಎಡಗೈ ಸಮುದಾಯದವರಿಗೆ ಒಳಮೀಸಲಾತಿ ಕಲ್ಪಿಸುತ್ತೇವೆ. ನ್ಯಾ.ಸದಾಶಿವ ಆಯೋಗದ ವರದಿಯನ್ನು ಯಾಥಾವತ್ತಾಗಿ ಜಾರಿಮಾಡುತ್ತೇವೆ ಎಂದು ಭರವಸೆ ಕೊಟ್ಟರು. ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವ ಭರವಸೆ ನೀಡಿದರು. ಹಾಗಾಗಿ ಬಿಜೆಪಿ ಸರ್ಕಾರ ಮತ್ತು ಮುಖಂಡರು ಏನೆಲ್ಲ ಭರವಸೆ ನೀಡಿದ್ದಾರೆ ಅವೆಲ್ಲವನ್ನೂ ಕಾಲಮಿತಿಯೊಳಗೆ ಈಡೇಸಿಸಬೇಕು. ಜನರಿಗೆ ನೀಡಿರುವ ಭರವಸೆ ಈಡೇರಿಸದಿದ್ದರೆ ಸುಳ್ಳು ಹೇಳಿದಂತೆ ಆಗುತ್ತದೆ ಎಂದರು.


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...