Homeಕರ್ನಾಟಕದೆಹಲಿಯಿಂದ ಬರಿಗೈಯಲ್ಲಿ ವಾಪಸ್ ಬಂದಿರುವುದು ಸಿಎಂ ಬದಲಾವಣೆ ಸೂಚನೆ - ಕೆಎನ್ಆರ್

ದೆಹಲಿಯಿಂದ ಬರಿಗೈಯಲ್ಲಿ ವಾಪಸ್ ಬಂದಿರುವುದು ಸಿಎಂ ಬದಲಾವಣೆ ಸೂಚನೆ – ಕೆಎನ್ಆರ್

ಮಾತನಾಡಲು ಬಯಸಿದರೂ ಗೃಹ ಸಚಿವ ಅಮಿತ್ ಶಾ ಮುಖ್ಯಮಂತ್ರಿಗಳ ಭೇಟಿಗೆ ಅವಕಾಶ ನೀಡಿಲ್ಲ. ಇದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾಡಿದ ಅಪಮಾನ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಹೋಗಿ ಬರಿಗೈಯಲ್ಲಿ ವಾಪಸ್ ಬಂದಿರುವುದು ಸಿಎಂ ಸ್ಥಾನದಿಂದ ಅವರನ್ನು ಬದಲಾವಣೆ ಮಾಡುವ ಸೂಚನೆಯಾಗಿದೆ ಎಂದು ಮಾಜಿ ಶಾಸಕ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್ ರಾಜಣ್ಣ ಹೇಳಿದ್ದಾರೆ.

ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಯ ಸಂಬಂಧ ತೆಗೆದುಕೊಂಡು ಹೋಗಿದ್ದ ಲೀಸ್ಟ್ ಗೆ ಅನುಮೋದನೆ ನೀಡಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಬಂದಿವೆ. ಇದನ್ನು ನೋಡಿದರೆ ಯಡಿಯೂರಪ್ಪ ಬದಲಾವಣೆ ಖಚಿತ ಎಂಬುದು ತಿಳಿಯುತ್ತದೆ ಎಂದಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿಗಳ ಭೇಟಿಗೆ ಅವಕಾಶ ನೀಡಿಲ್ಲ. ಮಾತನಾಡಲು ಅವಕಾಶ ನೀಡಬೇಕೆಂದು ಮನವಿ ಮಾಡಿಕೊಂಡರೂ ಅಮಿತ್ ಶಾ ಅದಕ್ಕೆ ಕಿಮ್ಮತ್ತು ಕೊಟ್ಟಿಲ್ಲ. ಇದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾಡಿದ ಅಪಮಾನ. ಇದನ್ನು ಖಂಡಿಸುತ್ತೇನೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ನಮ್ಮ ನಾಯಕರು. ಅವರು ಕೇವಲ ಬಿಜೆಪಿಗೆ ಮಾತ್ರ ಮುಖ್ಯಮಂತ್ರಿಯಲ್ಲ. ನಮಗೂ ಮುಖ್ಯಮಂತ್ರಿಗಳು. ಒಂದು ರಾಜ್ಯವನ್ನು ಪ್ರತಿನಿಧಿಸುವವರು. ಅಂಥವರಿಗೆ ಭೇಟಿಗೆ ಅವಕಾಶ ಕಲ್ಪಿಸದೆ ಗೃಹ ಸಚಿವರು ಅವಮಾನ ಮಾಡಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.

ನಾನು ಇತ್ತೀಚೆಗೆ ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೆ. ಅವರ ಮನೆಯಲ್ಲಿ ನನ್ನನ್ನು ಬಿಟ್ಟು ಬೇರೆ ಯಾರೂ ಇರಲಿಲ್ಲ. ಮರುದಿನ ಬೆಳಗ್ಗೆ ಪತ್ರಿಕೆಯೊಂದರಲ್ಲಿ ಪರಮೇಶ್ವರ್ ವಿರುದ್ಧ ರಾಜಣ್ಣ ದೂರು ಹೇಳಿದ್ದಾರೆ ಎಂದು ವರದಿ ಬಂದಿತ್ತು. ನಾನು ಪರಮೇಶ್ವರ್ ವಿರುದ್ಧ ದೂರನ್ನೂ ಹೇಳಿಲ್ಲ. ಆ ಬಗ್ಗೆ ಮಾತನಾಡಿಯೇ ಇಲ್ಲ. ಆ ಪತ್ರಿಕೆಯಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರವಾದುದು ಎಂದು ಸ್ಪಷ್ಟಪಡಿಸಿದರು.

ಜಿಲ್ಲೆಯ ಎಲ್ಲಾ ನಾಯಕರು ಶಿರಾ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಪರಮೇಶ್ವರ್ ಕೂಡ ಸಾಕಷ್ಟು ಶ್ರಮ ಹಾಕಿದ್ದಾರೆ. ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಆದರೆ ಜನರಿಗೆ ತಪ್ಪು ಸಂದೇಶ, ಸುಳ್ಳು ಮಾಹಿತಿ ಹೋಗಬಾರದು. ವಿಶ್ವಾಸಕ್ಕೆ ಧಕ್ಕೆ ಬರುವಂತಹ ವರದಿ ಮಾಡಬಾರದು. ತಪ್ಪು ಮಾಹಿತಿ ನೀಡುವುದು ಸರಿಯಲ್ಲ ಎಂದು ತಿಳಿಸಿದರು.

ಶಿರಾ ಉಪಚುನಾವಣೆಯಲ್ಲಿ ಸುಳ್ಳು ಭರವಸೆಯಿಂದಲೇ ಬಿಜೆಪಿ ಗೆಲುವು ಸಾಧಿಸಿತು. ಕಾಡುಗೊಲ್ಲರನ್ನು ಎಸ್.ಟಿ.ಗೆ ಸೇರಿಸುತ್ತೇವೆ. ಕಾಡುಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪಿಸಿ ಜನಾಂಗದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ಸುಳ್ಳು ಆಶ್ವಾಸನೆ ಕೊಟ್ಟರು. ಮದ್ದಕ್ಕನಹಳ್ಳಿಯಲ್ಲಿ ಭೋವಿ ಸಮುದಾಯ ಎದುರಿಸುತ್ತಿರುವ ಸಮಸ್ಯೆ ಯನ್ನು ಬೆಳಗಾಗುವುದರೊಳಗೆ ಬಗೆಹರಿಸುತ್ತೇವೆ ಎಂದು ಕೀಳುಮಟ್ಟದ ಭರವಸೆ ನೀಡಿದರು ಎಂದು ಕಿಡಿಕಾರಿದರು.

ಎಡಗೈ ಸಮುದಾಯದವರಿಗೆ ಒಳಮೀಸಲಾತಿ ಕಲ್ಪಿಸುತ್ತೇವೆ. ನ್ಯಾ.ಸದಾಶಿವ ಆಯೋಗದ ವರದಿಯನ್ನು ಯಾಥಾವತ್ತಾಗಿ ಜಾರಿಮಾಡುತ್ತೇವೆ ಎಂದು ಭರವಸೆ ಕೊಟ್ಟರು. ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವ ಭರವಸೆ ನೀಡಿದರು. ಹಾಗಾಗಿ ಬಿಜೆಪಿ ಸರ್ಕಾರ ಮತ್ತು ಮುಖಂಡರು ಏನೆಲ್ಲ ಭರವಸೆ ನೀಡಿದ್ದಾರೆ ಅವೆಲ್ಲವನ್ನೂ ಕಾಲಮಿತಿಯೊಳಗೆ ಈಡೇಸಿಸಬೇಕು. ಜನರಿಗೆ ನೀಡಿರುವ ಭರವಸೆ ಈಡೇರಿಸದಿದ್ದರೆ ಸುಳ್ಳು ಹೇಳಿದಂತೆ ಆಗುತ್ತದೆ ಎಂದರು.


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...