Homeಕರ್ನಾಟಕದೆಹಲಿಯಿಂದ ಬರಿಗೈಯಲ್ಲಿ ವಾಪಸ್ ಬಂದಿರುವುದು ಸಿಎಂ ಬದಲಾವಣೆ ಸೂಚನೆ - ಕೆಎನ್ಆರ್

ದೆಹಲಿಯಿಂದ ಬರಿಗೈಯಲ್ಲಿ ವಾಪಸ್ ಬಂದಿರುವುದು ಸಿಎಂ ಬದಲಾವಣೆ ಸೂಚನೆ – ಕೆಎನ್ಆರ್

ಮಾತನಾಡಲು ಬಯಸಿದರೂ ಗೃಹ ಸಚಿವ ಅಮಿತ್ ಶಾ ಮುಖ್ಯಮಂತ್ರಿಗಳ ಭೇಟಿಗೆ ಅವಕಾಶ ನೀಡಿಲ್ಲ. ಇದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾಡಿದ ಅಪಮಾನ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಹೋಗಿ ಬರಿಗೈಯಲ್ಲಿ ವಾಪಸ್ ಬಂದಿರುವುದು ಸಿಎಂ ಸ್ಥಾನದಿಂದ ಅವರನ್ನು ಬದಲಾವಣೆ ಮಾಡುವ ಸೂಚನೆಯಾಗಿದೆ ಎಂದು ಮಾಜಿ ಶಾಸಕ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್ ರಾಜಣ್ಣ ಹೇಳಿದ್ದಾರೆ.

ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಯ ಸಂಬಂಧ ತೆಗೆದುಕೊಂಡು ಹೋಗಿದ್ದ ಲೀಸ್ಟ್ ಗೆ ಅನುಮೋದನೆ ನೀಡಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಬಂದಿವೆ. ಇದನ್ನು ನೋಡಿದರೆ ಯಡಿಯೂರಪ್ಪ ಬದಲಾವಣೆ ಖಚಿತ ಎಂಬುದು ತಿಳಿಯುತ್ತದೆ ಎಂದಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿಗಳ ಭೇಟಿಗೆ ಅವಕಾಶ ನೀಡಿಲ್ಲ. ಮಾತನಾಡಲು ಅವಕಾಶ ನೀಡಬೇಕೆಂದು ಮನವಿ ಮಾಡಿಕೊಂಡರೂ ಅಮಿತ್ ಶಾ ಅದಕ್ಕೆ ಕಿಮ್ಮತ್ತು ಕೊಟ್ಟಿಲ್ಲ. ಇದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾಡಿದ ಅಪಮಾನ. ಇದನ್ನು ಖಂಡಿಸುತ್ತೇನೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ನಮ್ಮ ನಾಯಕರು. ಅವರು ಕೇವಲ ಬಿಜೆಪಿಗೆ ಮಾತ್ರ ಮುಖ್ಯಮಂತ್ರಿಯಲ್ಲ. ನಮಗೂ ಮುಖ್ಯಮಂತ್ರಿಗಳು. ಒಂದು ರಾಜ್ಯವನ್ನು ಪ್ರತಿನಿಧಿಸುವವರು. ಅಂಥವರಿಗೆ ಭೇಟಿಗೆ ಅವಕಾಶ ಕಲ್ಪಿಸದೆ ಗೃಹ ಸಚಿವರು ಅವಮಾನ ಮಾಡಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.

ನಾನು ಇತ್ತೀಚೆಗೆ ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೆ. ಅವರ ಮನೆಯಲ್ಲಿ ನನ್ನನ್ನು ಬಿಟ್ಟು ಬೇರೆ ಯಾರೂ ಇರಲಿಲ್ಲ. ಮರುದಿನ ಬೆಳಗ್ಗೆ ಪತ್ರಿಕೆಯೊಂದರಲ್ಲಿ ಪರಮೇಶ್ವರ್ ವಿರುದ್ಧ ರಾಜಣ್ಣ ದೂರು ಹೇಳಿದ್ದಾರೆ ಎಂದು ವರದಿ ಬಂದಿತ್ತು. ನಾನು ಪರಮೇಶ್ವರ್ ವಿರುದ್ಧ ದೂರನ್ನೂ ಹೇಳಿಲ್ಲ. ಆ ಬಗ್ಗೆ ಮಾತನಾಡಿಯೇ ಇಲ್ಲ. ಆ ಪತ್ರಿಕೆಯಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರವಾದುದು ಎಂದು ಸ್ಪಷ್ಟಪಡಿಸಿದರು.

ಜಿಲ್ಲೆಯ ಎಲ್ಲಾ ನಾಯಕರು ಶಿರಾ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಪರಮೇಶ್ವರ್ ಕೂಡ ಸಾಕಷ್ಟು ಶ್ರಮ ಹಾಕಿದ್ದಾರೆ. ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಆದರೆ ಜನರಿಗೆ ತಪ್ಪು ಸಂದೇಶ, ಸುಳ್ಳು ಮಾಹಿತಿ ಹೋಗಬಾರದು. ವಿಶ್ವಾಸಕ್ಕೆ ಧಕ್ಕೆ ಬರುವಂತಹ ವರದಿ ಮಾಡಬಾರದು. ತಪ್ಪು ಮಾಹಿತಿ ನೀಡುವುದು ಸರಿಯಲ್ಲ ಎಂದು ತಿಳಿಸಿದರು.

ಶಿರಾ ಉಪಚುನಾವಣೆಯಲ್ಲಿ ಸುಳ್ಳು ಭರವಸೆಯಿಂದಲೇ ಬಿಜೆಪಿ ಗೆಲುವು ಸಾಧಿಸಿತು. ಕಾಡುಗೊಲ್ಲರನ್ನು ಎಸ್.ಟಿ.ಗೆ ಸೇರಿಸುತ್ತೇವೆ. ಕಾಡುಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪಿಸಿ ಜನಾಂಗದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ಸುಳ್ಳು ಆಶ್ವಾಸನೆ ಕೊಟ್ಟರು. ಮದ್ದಕ್ಕನಹಳ್ಳಿಯಲ್ಲಿ ಭೋವಿ ಸಮುದಾಯ ಎದುರಿಸುತ್ತಿರುವ ಸಮಸ್ಯೆ ಯನ್ನು ಬೆಳಗಾಗುವುದರೊಳಗೆ ಬಗೆಹರಿಸುತ್ತೇವೆ ಎಂದು ಕೀಳುಮಟ್ಟದ ಭರವಸೆ ನೀಡಿದರು ಎಂದು ಕಿಡಿಕಾರಿದರು.

ಎಡಗೈ ಸಮುದಾಯದವರಿಗೆ ಒಳಮೀಸಲಾತಿ ಕಲ್ಪಿಸುತ್ತೇವೆ. ನ್ಯಾ.ಸದಾಶಿವ ಆಯೋಗದ ವರದಿಯನ್ನು ಯಾಥಾವತ್ತಾಗಿ ಜಾರಿಮಾಡುತ್ತೇವೆ ಎಂದು ಭರವಸೆ ಕೊಟ್ಟರು. ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವ ಭರವಸೆ ನೀಡಿದರು. ಹಾಗಾಗಿ ಬಿಜೆಪಿ ಸರ್ಕಾರ ಮತ್ತು ಮುಖಂಡರು ಏನೆಲ್ಲ ಭರವಸೆ ನೀಡಿದ್ದಾರೆ ಅವೆಲ್ಲವನ್ನೂ ಕಾಲಮಿತಿಯೊಳಗೆ ಈಡೇಸಿಸಬೇಕು. ಜನರಿಗೆ ನೀಡಿರುವ ಭರವಸೆ ಈಡೇರಿಸದಿದ್ದರೆ ಸುಳ್ಳು ಹೇಳಿದಂತೆ ಆಗುತ್ತದೆ ಎಂದರು.


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...