Homeಕರ್ನಾಟಕದೆಹಲಿಯಿಂದ ಬರಿಗೈಯಲ್ಲಿ ವಾಪಸ್ ಬಂದಿರುವುದು ಸಿಎಂ ಬದಲಾವಣೆ ಸೂಚನೆ - ಕೆಎನ್ಆರ್

ದೆಹಲಿಯಿಂದ ಬರಿಗೈಯಲ್ಲಿ ವಾಪಸ್ ಬಂದಿರುವುದು ಸಿಎಂ ಬದಲಾವಣೆ ಸೂಚನೆ – ಕೆಎನ್ಆರ್

ಮಾತನಾಡಲು ಬಯಸಿದರೂ ಗೃಹ ಸಚಿವ ಅಮಿತ್ ಶಾ ಮುಖ್ಯಮಂತ್ರಿಗಳ ಭೇಟಿಗೆ ಅವಕಾಶ ನೀಡಿಲ್ಲ. ಇದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾಡಿದ ಅಪಮಾನ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಹೋಗಿ ಬರಿಗೈಯಲ್ಲಿ ವಾಪಸ್ ಬಂದಿರುವುದು ಸಿಎಂ ಸ್ಥಾನದಿಂದ ಅವರನ್ನು ಬದಲಾವಣೆ ಮಾಡುವ ಸೂಚನೆಯಾಗಿದೆ ಎಂದು ಮಾಜಿ ಶಾಸಕ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್ ರಾಜಣ್ಣ ಹೇಳಿದ್ದಾರೆ.

ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಯ ಸಂಬಂಧ ತೆಗೆದುಕೊಂಡು ಹೋಗಿದ್ದ ಲೀಸ್ಟ್ ಗೆ ಅನುಮೋದನೆ ನೀಡಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಬಂದಿವೆ. ಇದನ್ನು ನೋಡಿದರೆ ಯಡಿಯೂರಪ್ಪ ಬದಲಾವಣೆ ಖಚಿತ ಎಂಬುದು ತಿಳಿಯುತ್ತದೆ ಎಂದಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿಗಳ ಭೇಟಿಗೆ ಅವಕಾಶ ನೀಡಿಲ್ಲ. ಮಾತನಾಡಲು ಅವಕಾಶ ನೀಡಬೇಕೆಂದು ಮನವಿ ಮಾಡಿಕೊಂಡರೂ ಅಮಿತ್ ಶಾ ಅದಕ್ಕೆ ಕಿಮ್ಮತ್ತು ಕೊಟ್ಟಿಲ್ಲ. ಇದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾಡಿದ ಅಪಮಾನ. ಇದನ್ನು ಖಂಡಿಸುತ್ತೇನೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ನಮ್ಮ ನಾಯಕರು. ಅವರು ಕೇವಲ ಬಿಜೆಪಿಗೆ ಮಾತ್ರ ಮುಖ್ಯಮಂತ್ರಿಯಲ್ಲ. ನಮಗೂ ಮುಖ್ಯಮಂತ್ರಿಗಳು. ಒಂದು ರಾಜ್ಯವನ್ನು ಪ್ರತಿನಿಧಿಸುವವರು. ಅಂಥವರಿಗೆ ಭೇಟಿಗೆ ಅವಕಾಶ ಕಲ್ಪಿಸದೆ ಗೃಹ ಸಚಿವರು ಅವಮಾನ ಮಾಡಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.

ನಾನು ಇತ್ತೀಚೆಗೆ ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೆ. ಅವರ ಮನೆಯಲ್ಲಿ ನನ್ನನ್ನು ಬಿಟ್ಟು ಬೇರೆ ಯಾರೂ ಇರಲಿಲ್ಲ. ಮರುದಿನ ಬೆಳಗ್ಗೆ ಪತ್ರಿಕೆಯೊಂದರಲ್ಲಿ ಪರಮೇಶ್ವರ್ ವಿರುದ್ಧ ರಾಜಣ್ಣ ದೂರು ಹೇಳಿದ್ದಾರೆ ಎಂದು ವರದಿ ಬಂದಿತ್ತು. ನಾನು ಪರಮೇಶ್ವರ್ ವಿರುದ್ಧ ದೂರನ್ನೂ ಹೇಳಿಲ್ಲ. ಆ ಬಗ್ಗೆ ಮಾತನಾಡಿಯೇ ಇಲ್ಲ. ಆ ಪತ್ರಿಕೆಯಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರವಾದುದು ಎಂದು ಸ್ಪಷ್ಟಪಡಿಸಿದರು.

ಜಿಲ್ಲೆಯ ಎಲ್ಲಾ ನಾಯಕರು ಶಿರಾ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಪರಮೇಶ್ವರ್ ಕೂಡ ಸಾಕಷ್ಟು ಶ್ರಮ ಹಾಕಿದ್ದಾರೆ. ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಆದರೆ ಜನರಿಗೆ ತಪ್ಪು ಸಂದೇಶ, ಸುಳ್ಳು ಮಾಹಿತಿ ಹೋಗಬಾರದು. ವಿಶ್ವಾಸಕ್ಕೆ ಧಕ್ಕೆ ಬರುವಂತಹ ವರದಿ ಮಾಡಬಾರದು. ತಪ್ಪು ಮಾಹಿತಿ ನೀಡುವುದು ಸರಿಯಲ್ಲ ಎಂದು ತಿಳಿಸಿದರು.

ಶಿರಾ ಉಪಚುನಾವಣೆಯಲ್ಲಿ ಸುಳ್ಳು ಭರವಸೆಯಿಂದಲೇ ಬಿಜೆಪಿ ಗೆಲುವು ಸಾಧಿಸಿತು. ಕಾಡುಗೊಲ್ಲರನ್ನು ಎಸ್.ಟಿ.ಗೆ ಸೇರಿಸುತ್ತೇವೆ. ಕಾಡುಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪಿಸಿ ಜನಾಂಗದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ಸುಳ್ಳು ಆಶ್ವಾಸನೆ ಕೊಟ್ಟರು. ಮದ್ದಕ್ಕನಹಳ್ಳಿಯಲ್ಲಿ ಭೋವಿ ಸಮುದಾಯ ಎದುರಿಸುತ್ತಿರುವ ಸಮಸ್ಯೆ ಯನ್ನು ಬೆಳಗಾಗುವುದರೊಳಗೆ ಬಗೆಹರಿಸುತ್ತೇವೆ ಎಂದು ಕೀಳುಮಟ್ಟದ ಭರವಸೆ ನೀಡಿದರು ಎಂದು ಕಿಡಿಕಾರಿದರು.

ಎಡಗೈ ಸಮುದಾಯದವರಿಗೆ ಒಳಮೀಸಲಾತಿ ಕಲ್ಪಿಸುತ್ತೇವೆ. ನ್ಯಾ.ಸದಾಶಿವ ಆಯೋಗದ ವರದಿಯನ್ನು ಯಾಥಾವತ್ತಾಗಿ ಜಾರಿಮಾಡುತ್ತೇವೆ ಎಂದು ಭರವಸೆ ಕೊಟ್ಟರು. ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವ ಭರವಸೆ ನೀಡಿದರು. ಹಾಗಾಗಿ ಬಿಜೆಪಿ ಸರ್ಕಾರ ಮತ್ತು ಮುಖಂಡರು ಏನೆಲ್ಲ ಭರವಸೆ ನೀಡಿದ್ದಾರೆ ಅವೆಲ್ಲವನ್ನೂ ಕಾಲಮಿತಿಯೊಳಗೆ ಈಡೇಸಿಸಬೇಕು. ಜನರಿಗೆ ನೀಡಿರುವ ಭರವಸೆ ಈಡೇರಿಸದಿದ್ದರೆ ಸುಳ್ಳು ಹೇಳಿದಂತೆ ಆಗುತ್ತದೆ ಎಂದರು.


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...