Homeಮುಖಪುಟಉಕ್ರೇನ್‌, ಚೀನಾದಿಂದ ವಾಪಸಾದ ಮೆಡಿಕಲ್‌ ವಿದ್ಯಾರ್ಥಿಗಳಿಗೆ ಎಂಬಿಬಿಎಸ್‌ ಪೂರ್ಣಗೊಳಿಸಲು ಅವಕಾಶ: ಕೇಂದ್ರ ಸರ್ಕಾರ

ಉಕ್ರೇನ್‌, ಚೀನಾದಿಂದ ವಾಪಸಾದ ಮೆಡಿಕಲ್‌ ವಿದ್ಯಾರ್ಥಿಗಳಿಗೆ ಎಂಬಿಬಿಎಸ್‌ ಪೂರ್ಣಗೊಳಿಸಲು ಅವಕಾಶ: ಕೇಂದ್ರ ಸರ್ಕಾರ

- Advertisement -
- Advertisement -

ತಮ್ಮ ಕೋರ್ಸ್‌ಗಳನ್ನು ಮುಗಿಸದೆ ಉಕ್ರೇನ್ ಮತ್ತು ಚೀನಾದಿಂದ ಹಿಂತಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಎಂಬಿಬಿಎಸ್‌ ಪೂರ್ಣಗೊಳಿಸುವ ಅವಕಾಶವನ್ನು ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಯಾವುದೇ ಭಾರತೀಯ ವೈದ್ಯಕೀಯ ಕಾಲೇಜುಗಳಿಗೆ ದಾಖಲಾಗದೆ ಎಂಬಿಬಿಎಸ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಒಂದು ಅವಕಾಶ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಚೀನಾದಲ್ಲಿನ ಕೋವಿಡ್ -19 ಪ್ರಯಾಣದ ನಿರ್ಬಂಧ, ಉಕ್ರೇನ್ ಯುದ್ಧದಿಂದಾಗಿ ವೈದ್ಯಕೀಯ ಪದವಿ ಮತ್ತು ಬ್ಯಾಚುಲರ್ ಆಫ್ ಸರ್ಜರಿ ಪದವಿಗಳನ್ನು ಪೂರ್ಣಗೊಳಿಸಲು ಸಾಧ್ಯವಾಗದ ವೈದ್ಯಕೀಯ ವಿದ್ಯಾರ್ಥಿಗಳ ಮನವಿಯನ್ನು ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ವಿಕ್ರಮ್ ನಾಥ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದೆ.

ಕಳೆದ ವರ್ಷ ಫೆಬ್ರುವರಿಯಲ್ಲಿ ರಷ್ಯಾ ದೇಶವು ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ, ಉಕ್ರೇನ್‌ನಲ್ಲಿ ಓದುತ್ತಿದ್ದ 20,000 ಭಾರತೀಯ ವಿದ್ಯಾರ್ಥಿಗಳು ಹಿಂತಿರುಗಬೇಕಾಯಿತು. ಅವರಲ್ಲಿ 18,000 ವೈದ್ಯಕೀಯ ವಿದ್ಯಾರ್ಥಿಗಳಿದ್ದಾರೆ.

ಯುದ್ಧ ಪೀಡಿತ ದೇಶಕ್ಕೆ ಮರಳಲು ಸಾಧ್ಯವಾಗದ ಕಾರಣ ಭಾರತದಲ್ಲಿ ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಅವಕಾಶ ನೀಡಬೇಕು ಎಂದು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು.

ರಾಷ್ಟ್ರೀಯ ವೈದ್ಯಕೀಯ ಮಂಡಳಿ ಮತ್ತು ಸಂಬಂಧಿತ ಸಚಿವಾಲಯಗಳನ್ನು ಒಳಗೊಂಡಿರುವ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ ಅಧ್ಯಕ್ಷತೆಯ ಸಮಿತಿಯು ಈ ವಿಷಯವನ್ನು ಚರ್ಚಿಸಿದ ನಂತರ ಕೇಂದ್ರವು ತನ್ನ ನಿರ್ಧಾರವನ್ನು ಉನ್ನತ ನ್ಯಾಯಾಲಯಕ್ಕೆ ಬುಧವಾರ ತಿಳಿಸಿದೆ.

ಎಂಬಿಬಿಎಸ್ ಅಂತಿಮ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳಿಗೆ ಒಂದು ಅವಕಾಶವನ್ನು ನೀಡಲು ಸಮಿತಿಯು ನಿರ್ಧರಿಸಿದೆ. ವಿದ್ಯಾರ್ಥಿಗಳು ಯಾವುದೇ ಭಾರತೀಯ ಕಾಲೇಜುಗಳಿಗೆ ದಾಖಲಾಗುವ ಅಗತ್ಯವಿಲ್ಲ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ನ್ಯಾಯಾಲಯಕ್ಕೆ ಹೇಳಿದ್ದಾರೆ.

ರಾಷ್ಟ್ರೀಯ ವೈದ್ಯಕೀಯ ಆಯೋಗವು ಎಂಬಿಬಿಎಸ್ ಕೋರ್ಸ್‌ಗೆ ನಿಗದಿಪಡಿಸಿದ ಪಠ್ಯಕ್ರಮದಲ್ಲಿ ನಡೆಸಲಾದ ತಮ್ಮ ಥಿಯರಿ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಹಾಜರಾಗುತ್ತಾರೆ, ಆದರೆ ಪ್ರಾಯೋಗಿಕ ಪರೀಕ್ಷೆಗಳು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ನಡೆಯುತ್ತವೆ.

ಪರೀಕ್ಷೆಯಲ್ಲಿ ತೇರ್ಗಡೆಯಾದ ನಂತರ ವಿದ್ಯಾರ್ಥಿಗಳು ಕಡ್ಡಾಯವಾಗಿ ಎರಡು ವರ್ಷಗಳ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಪೂರ್ಣಗೊಳಿಸಬೇಕಾಗುತ್ತದೆ ಎಂದು ಸಮಿತಿ ಹೇಳಿದೆ. ವಿದ್ಯಾರ್ಥಿಗಳಿಗೆ ಎರಡನೇ ವರ್ಷದಲ್ಲಿ ಅವರ ಇಂಟರ್ನ್‌ಶಿಪ್‌ಗೆ ಅವಕಾಶವಿರುತ್ತದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಗೋಪಾಲ್‌ ಶಂಕರನಾರಾಯಣನ್‌, ರಾಷ್ಟ್ರೀಯ ವೈದ್ಯಕೀಯ ಆಯೋಗ ಸೂಚಿಸಿರುವ ಪಠ್ಯಕ್ರಮದಲ್ಲಿನ ವ್ಯತ್ಯಾಸ ಹಾಗೂ ವಿದೇಶಿ ವೈದ್ಯಕೀಯ ಸಂಸ್ಥೆಗಳಲ್ಲಿ ಅನುಸರಿಸುವ ವ್ಯತ್ಯಾಸ ವಿದ್ಯಾರ್ಥಿಗಳಿಗೆ ಅಡ್ಡಿಯಾಗಬಹುದು ಎಂದು ಹೇಳಿರುವುದಾಗಿ ‘ಲೈವ್ ಲಾ’ ವರದಿ ಮಾಡಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಕೇವಲ ಒಂದು ಪ್ರಯತ್ನ ಸಾಕಾಗುವುದಿಲ್ಲ ಎಂದು ಅರ್ಜಿದಾರರು ಕಳವಳ ವ್ಯಕ್ತಪಡಿಸಿದರು.

“ಇದು ಅಖಿಲ ಭಾರತ ವಕೀಲಿ ಪರೀಕ್ಷೆಯಂತಲ್ಲ, ನೀವು ಅನುತ್ತೀರ್ಣರಾದರೆ ನೀವು ಇನ್ನೂ ನಿಮ್ಮ ಎಲ್‌ಎಲ್‌ಬಿ [ಬ್ಯಾಚುಲರ್ ಆಫ್ ಲಾಸ್] ಪದವಿಯನ್ನು ಹೊಂದಿರುತ್ತೀರಿ” ಎಂದು ಶಂಕರನಾರಾಯಣನ್ ವಾದಿಸಿದರು. “ಈ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ, ಅವರಿಗೆ ಏನೂ ಉಳಿಯುವುದಿಲ್ಲ” ಎಂದು ತಿಳಿಸಿದರು.

ಆದರೆ, ಸಮಿತಿ ನೀಡಿದ ಶಿಫಾರಸುಗಳನ್ನು ಅಂಗೀಕರಿಸಿದ ಸುಪ್ರೀಂ ಕೋರ್ಟ್ ಪ್ರಕರಣವನ್ನು ವಿಲೇವಾರಿ ಮಾಡಿದೆ.

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದುದರ ಪರಿಣಾಮವಾಗಿ ಭಾರತಕ್ಕೆ ಮರಳಿದ್ದ ಸುಮಾರು 20 ಸಾವಿರಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಭಾರತದ ವಿವಿಗಳಲ್ಲಿ ಸೀಟು ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ 2022ರ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಹೇಳಿತ್ತು.

ಇದನ್ನೂ ಓದಿರಿ: ಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

ಭಾರತದ ವೈದ್ಯ ಶಿಕ್ಷಣದ ಗುಣಮಟ್ಟಕ್ಕೆ ಧಕ್ಕೆ ಉಂಟಾಗುವುದರಿಂದ ಆ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿತ್ತು.

ಇಲ್ಲಿನ ನೀಟ್‌ ಪರೀಕ್ಷೆಯಲ್ಲಿ ಕಳಪೆ ಸಾಧನೆ ಮಾಡಿದ ಮತ್ತು ಅಗ್ಗದ ವೈದ್ಯಕೀಯ ವೆಚ್ಚದ ಕಾರಣಕ್ಕಾಗಿ ವಿದ್ಯಾರ್ಥಿಗಳು ಉಕ್ರೇನ್‌ನಂತಹ ರಾಷ್ಟ್ರಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಹೋಗುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ವಾದಿಸಿತ್ತು.

ಕಳಪೆ ಮೆರಿಟ್ ಹೊಂದಿರುವ ವಿದ್ಯಾರ್ಥಿಗಳಿಗೆ ನಾವು ಪ್ರವೇಶ ನೀಡಿದ್ದೆ ಆದರೆ ಅದು ಭವಿಷ್ಯದಲ್ಲಿ ವೈದ್ಯಕೀಯ ಶಿಕ್ಷಣದ ಗುಣಮಟ್ಟದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹಾಗಾಗಿ ರಾಷ್ಟ್ರೀಯ ವೈದ್ಯಕೀಯ ಆಯೋಗವು ಗುಣಮಟ್ಟ ಕಾಪಾಡುವ ಕುರಿತು ನಿರ್ದೇಶನ ನೀಡಿದೆ ಎಂದು ಕೇಂದ್ರ ಸರ್ಕಾರ ತಿಳಿಸಿತ್ತು.

ಈ ವಿದ್ಯಾರ್ಥಿಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ದಾಖಲು ಮಾಡಿಕೊಳ್ಳಲು ಅವಕಾಶ ನೀಡಿದರೂ ಸಹ ಆ ಕಾಲೇಜುಗಳ ಶುಲ್ಕವನ್ನು ಭರಿಸಲು ಅವರು ಶಕ್ತರಾಗಿಲ್ಲ ಎಂದೂ ಸಹ ಅಫಿಡವಿಟ್‌ನಲ್ಲಿ ಸ್ಪಷ್ಟಪಡಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...