Homeಮುಖಪುಟಉಕ್ರೇನ್‌, ಚೀನಾದಿಂದ ವಾಪಸಾದ ಮೆಡಿಕಲ್‌ ವಿದ್ಯಾರ್ಥಿಗಳಿಗೆ ಎಂಬಿಬಿಎಸ್‌ ಪೂರ್ಣಗೊಳಿಸಲು ಅವಕಾಶ: ಕೇಂದ್ರ ಸರ್ಕಾರ

ಉಕ್ರೇನ್‌, ಚೀನಾದಿಂದ ವಾಪಸಾದ ಮೆಡಿಕಲ್‌ ವಿದ್ಯಾರ್ಥಿಗಳಿಗೆ ಎಂಬಿಬಿಎಸ್‌ ಪೂರ್ಣಗೊಳಿಸಲು ಅವಕಾಶ: ಕೇಂದ್ರ ಸರ್ಕಾರ

- Advertisement -
- Advertisement -

ತಮ್ಮ ಕೋರ್ಸ್‌ಗಳನ್ನು ಮುಗಿಸದೆ ಉಕ್ರೇನ್ ಮತ್ತು ಚೀನಾದಿಂದ ಹಿಂತಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಎಂಬಿಬಿಎಸ್‌ ಪೂರ್ಣಗೊಳಿಸುವ ಅವಕಾಶವನ್ನು ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಯಾವುದೇ ಭಾರತೀಯ ವೈದ್ಯಕೀಯ ಕಾಲೇಜುಗಳಿಗೆ ದಾಖಲಾಗದೆ ಎಂಬಿಬಿಎಸ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಒಂದು ಅವಕಾಶ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಚೀನಾದಲ್ಲಿನ ಕೋವಿಡ್ -19 ಪ್ರಯಾಣದ ನಿರ್ಬಂಧ, ಉಕ್ರೇನ್ ಯುದ್ಧದಿಂದಾಗಿ ವೈದ್ಯಕೀಯ ಪದವಿ ಮತ್ತು ಬ್ಯಾಚುಲರ್ ಆಫ್ ಸರ್ಜರಿ ಪದವಿಗಳನ್ನು ಪೂರ್ಣಗೊಳಿಸಲು ಸಾಧ್ಯವಾಗದ ವೈದ್ಯಕೀಯ ವಿದ್ಯಾರ್ಥಿಗಳ ಮನವಿಯನ್ನು ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ವಿಕ್ರಮ್ ನಾಥ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದೆ.

ಕಳೆದ ವರ್ಷ ಫೆಬ್ರುವರಿಯಲ್ಲಿ ರಷ್ಯಾ ದೇಶವು ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ, ಉಕ್ರೇನ್‌ನಲ್ಲಿ ಓದುತ್ತಿದ್ದ 20,000 ಭಾರತೀಯ ವಿದ್ಯಾರ್ಥಿಗಳು ಹಿಂತಿರುಗಬೇಕಾಯಿತು. ಅವರಲ್ಲಿ 18,000 ವೈದ್ಯಕೀಯ ವಿದ್ಯಾರ್ಥಿಗಳಿದ್ದಾರೆ.

ಯುದ್ಧ ಪೀಡಿತ ದೇಶಕ್ಕೆ ಮರಳಲು ಸಾಧ್ಯವಾಗದ ಕಾರಣ ಭಾರತದಲ್ಲಿ ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಅವಕಾಶ ನೀಡಬೇಕು ಎಂದು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು.

ರಾಷ್ಟ್ರೀಯ ವೈದ್ಯಕೀಯ ಮಂಡಳಿ ಮತ್ತು ಸಂಬಂಧಿತ ಸಚಿವಾಲಯಗಳನ್ನು ಒಳಗೊಂಡಿರುವ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ ಅಧ್ಯಕ್ಷತೆಯ ಸಮಿತಿಯು ಈ ವಿಷಯವನ್ನು ಚರ್ಚಿಸಿದ ನಂತರ ಕೇಂದ್ರವು ತನ್ನ ನಿರ್ಧಾರವನ್ನು ಉನ್ನತ ನ್ಯಾಯಾಲಯಕ್ಕೆ ಬುಧವಾರ ತಿಳಿಸಿದೆ.

ಎಂಬಿಬಿಎಸ್ ಅಂತಿಮ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳಿಗೆ ಒಂದು ಅವಕಾಶವನ್ನು ನೀಡಲು ಸಮಿತಿಯು ನಿರ್ಧರಿಸಿದೆ. ವಿದ್ಯಾರ್ಥಿಗಳು ಯಾವುದೇ ಭಾರತೀಯ ಕಾಲೇಜುಗಳಿಗೆ ದಾಖಲಾಗುವ ಅಗತ್ಯವಿಲ್ಲ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ನ್ಯಾಯಾಲಯಕ್ಕೆ ಹೇಳಿದ್ದಾರೆ.

ರಾಷ್ಟ್ರೀಯ ವೈದ್ಯಕೀಯ ಆಯೋಗವು ಎಂಬಿಬಿಎಸ್ ಕೋರ್ಸ್‌ಗೆ ನಿಗದಿಪಡಿಸಿದ ಪಠ್ಯಕ್ರಮದಲ್ಲಿ ನಡೆಸಲಾದ ತಮ್ಮ ಥಿಯರಿ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಹಾಜರಾಗುತ್ತಾರೆ, ಆದರೆ ಪ್ರಾಯೋಗಿಕ ಪರೀಕ್ಷೆಗಳು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ನಡೆಯುತ್ತವೆ.

ಪರೀಕ್ಷೆಯಲ್ಲಿ ತೇರ್ಗಡೆಯಾದ ನಂತರ ವಿದ್ಯಾರ್ಥಿಗಳು ಕಡ್ಡಾಯವಾಗಿ ಎರಡು ವರ್ಷಗಳ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಪೂರ್ಣಗೊಳಿಸಬೇಕಾಗುತ್ತದೆ ಎಂದು ಸಮಿತಿ ಹೇಳಿದೆ. ವಿದ್ಯಾರ್ಥಿಗಳಿಗೆ ಎರಡನೇ ವರ್ಷದಲ್ಲಿ ಅವರ ಇಂಟರ್ನ್‌ಶಿಪ್‌ಗೆ ಅವಕಾಶವಿರುತ್ತದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಗೋಪಾಲ್‌ ಶಂಕರನಾರಾಯಣನ್‌, ರಾಷ್ಟ್ರೀಯ ವೈದ್ಯಕೀಯ ಆಯೋಗ ಸೂಚಿಸಿರುವ ಪಠ್ಯಕ್ರಮದಲ್ಲಿನ ವ್ಯತ್ಯಾಸ ಹಾಗೂ ವಿದೇಶಿ ವೈದ್ಯಕೀಯ ಸಂಸ್ಥೆಗಳಲ್ಲಿ ಅನುಸರಿಸುವ ವ್ಯತ್ಯಾಸ ವಿದ್ಯಾರ್ಥಿಗಳಿಗೆ ಅಡ್ಡಿಯಾಗಬಹುದು ಎಂದು ಹೇಳಿರುವುದಾಗಿ ‘ಲೈವ್ ಲಾ’ ವರದಿ ಮಾಡಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಕೇವಲ ಒಂದು ಪ್ರಯತ್ನ ಸಾಕಾಗುವುದಿಲ್ಲ ಎಂದು ಅರ್ಜಿದಾರರು ಕಳವಳ ವ್ಯಕ್ತಪಡಿಸಿದರು.

“ಇದು ಅಖಿಲ ಭಾರತ ವಕೀಲಿ ಪರೀಕ್ಷೆಯಂತಲ್ಲ, ನೀವು ಅನುತ್ತೀರ್ಣರಾದರೆ ನೀವು ಇನ್ನೂ ನಿಮ್ಮ ಎಲ್‌ಎಲ್‌ಬಿ [ಬ್ಯಾಚುಲರ್ ಆಫ್ ಲಾಸ್] ಪದವಿಯನ್ನು ಹೊಂದಿರುತ್ತೀರಿ” ಎಂದು ಶಂಕರನಾರಾಯಣನ್ ವಾದಿಸಿದರು. “ಈ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ, ಅವರಿಗೆ ಏನೂ ಉಳಿಯುವುದಿಲ್ಲ” ಎಂದು ತಿಳಿಸಿದರು.

ಆದರೆ, ಸಮಿತಿ ನೀಡಿದ ಶಿಫಾರಸುಗಳನ್ನು ಅಂಗೀಕರಿಸಿದ ಸುಪ್ರೀಂ ಕೋರ್ಟ್ ಪ್ರಕರಣವನ್ನು ವಿಲೇವಾರಿ ಮಾಡಿದೆ.

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದುದರ ಪರಿಣಾಮವಾಗಿ ಭಾರತಕ್ಕೆ ಮರಳಿದ್ದ ಸುಮಾರು 20 ಸಾವಿರಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಭಾರತದ ವಿವಿಗಳಲ್ಲಿ ಸೀಟು ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ 2022ರ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಹೇಳಿತ್ತು.

ಇದನ್ನೂ ಓದಿರಿ: ಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

ಭಾರತದ ವೈದ್ಯ ಶಿಕ್ಷಣದ ಗುಣಮಟ್ಟಕ್ಕೆ ಧಕ್ಕೆ ಉಂಟಾಗುವುದರಿಂದ ಆ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿತ್ತು.

ಇಲ್ಲಿನ ನೀಟ್‌ ಪರೀಕ್ಷೆಯಲ್ಲಿ ಕಳಪೆ ಸಾಧನೆ ಮಾಡಿದ ಮತ್ತು ಅಗ್ಗದ ವೈದ್ಯಕೀಯ ವೆಚ್ಚದ ಕಾರಣಕ್ಕಾಗಿ ವಿದ್ಯಾರ್ಥಿಗಳು ಉಕ್ರೇನ್‌ನಂತಹ ರಾಷ್ಟ್ರಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಹೋಗುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ವಾದಿಸಿತ್ತು.

ಕಳಪೆ ಮೆರಿಟ್ ಹೊಂದಿರುವ ವಿದ್ಯಾರ್ಥಿಗಳಿಗೆ ನಾವು ಪ್ರವೇಶ ನೀಡಿದ್ದೆ ಆದರೆ ಅದು ಭವಿಷ್ಯದಲ್ಲಿ ವೈದ್ಯಕೀಯ ಶಿಕ್ಷಣದ ಗುಣಮಟ್ಟದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹಾಗಾಗಿ ರಾಷ್ಟ್ರೀಯ ವೈದ್ಯಕೀಯ ಆಯೋಗವು ಗುಣಮಟ್ಟ ಕಾಪಾಡುವ ಕುರಿತು ನಿರ್ದೇಶನ ನೀಡಿದೆ ಎಂದು ಕೇಂದ್ರ ಸರ್ಕಾರ ತಿಳಿಸಿತ್ತು.

ಈ ವಿದ್ಯಾರ್ಥಿಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ದಾಖಲು ಮಾಡಿಕೊಳ್ಳಲು ಅವಕಾಶ ನೀಡಿದರೂ ಸಹ ಆ ಕಾಲೇಜುಗಳ ಶುಲ್ಕವನ್ನು ಭರಿಸಲು ಅವರು ಶಕ್ತರಾಗಿಲ್ಲ ಎಂದೂ ಸಹ ಅಫಿಡವಿಟ್‌ನಲ್ಲಿ ಸ್ಪಷ್ಟಪಡಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...