Homeಕರ್ನಾಟಕಸೀಜ್ ಮಾಡಿದ ಹಣ ಬಿಜೆಪಿಗೆ ಹಿಂತಿರುಗಿಸಿದ ಅಧಿಕಾರಿಗಳು; ತನಿಖೆಗೆ ಆಗ್ರಹಿಸಿದ ಸಚಿವ ಕೃಷ್ಣ ಬೈರೇಗೌಡ

ಸೀಜ್ ಮಾಡಿದ ಹಣ ಬಿಜೆಪಿಗೆ ಹಿಂತಿರುಗಿಸಿದ ಅಧಿಕಾರಿಗಳು; ತನಿಖೆಗೆ ಆಗ್ರಹಿಸಿದ ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಚುನಾವಣಾ ಆಯೋಗ ವಶಕ್ಕೆ ಪಡೆದಿದ್ದ ಸುಮಾರು ₹2 ಕೋಟಿ ಹಣವನ್ನು, ಸೀಜ್ ಮಾಡಿದ ಕೆಲವೇ ಗಂಟೆಗಳಲ್ಲಿ ಐಟಿ ಅಧಿಕಾರಿಗಳು ಬಿಜೆಪಿಗೆ ವಾಪಸ್ ನೀಡಿದ್ದು, ‘ಬಿಜೆಪಿ ನಾಯಕರು ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪ ಮಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಿಜೆಪಿ ನಾಯಕರು ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಂಡು ಇಡೀ ವ್ಯವಸ್ಥೆಯನ್ನೇ ಅವಮಾನಿಸುವ ರೀತಿ ಚುನಾವಣೆ ನಡೆಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ಸರ್ಜಿಕಲ್ ಸ್ಟ್ರೈಕ್ ಆಗಿದ್ದು, ಈ ಗೋಲ್‌ಮಾಲ್ ಪ್ರಕರಣವನ್ನು ಚುನಾವಣಾ ಅಧಿಕಾರಿಗಳು ನ್ಯಾಯಯುತ ತನಿಖೆ ನಡೆಸಬೇಕು” ಎಂದು ಅವರು ಒತ್ತಾಯಿಸಿದರು.

“ಚುನಾವಣಾ ಖರ್ಚಿಗಾಗಿ ಬಿಜೆಪಿ ನಾಯಕರು ಅಕ್ರಮವಾಗಿ ಸಾಗಾಟ ನಡೆಸಿದ್ದ ₹2 ಕೋಟಿ ಹಣವನ್ನು ಚುನಾವಣಾ ಅಧಿಕಾರಿಗಳು ಶನಿವಾರ ಕಾಟನ್‌ ಪೇಟೆಯಲ್ಲಿಯಲ್ಲಿ ಸೀಜ್ ಮಾಡಿದ್ದಾರೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ. ಆದರೆ, ಆದಾಯ ತೆರಿಗೆ ಅಧಿಕಾರಿಗಳು ಸೀಜ್ ಮಾಡಲಾದ ಹಣಕ್ಕೆ ಕೇವಲ ನಾಲ್ಕು ಗಂಟೆಯಲ್ಲಿ ಕ್ಲೀನ್ ಚಿಟ್‌ ನೀಡಿ, ಹಣವನ್ನೂ ಬಿಜೆಪಿಗೆ ಹಿಂತಿರುಗಿಸಿದೆ. ಇದು ಹೇಗೆ ಸಾಧ್ಯವಾಯಿತು” ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

‘ಸಿಕ್ಕಿಬಿದ್ದ ಹಣಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಿರುವ ಬಿಜೆಪಿ, ಮಾರ್ಚ್‌ 27 ರಂದೇ ₹5 ಕೋಟಿ ಹಣವನ್ನು ಕೆನೆರಾ ಬ್ಯಾಂಕ್‌ನಿಂದ ವಿತ್‌ಡ್ರಾ ಮಾಡಿ ಇಟ್ಟುಕೊಂಡಿರುವುದಾಗಿ ತಿಳಿಸಿದೆ. ಅಲ್ಲದೆ, ಈ ಹಣವನ್ನು ಚುನಾವಣಾ ಖರ್ಚಿಗಾಗಿ ಮೈಸೂರು, ಚಾಮರಾಜನಗರ ಹಾಗೂ ಮಂಗಳೂರಿಗೆ ಕಳುಹಿಸುತ್ತಿರುವುದಾಗಿ ಮಾಹಿತಿ ನೀಡಿದೆ. ಆದರೆ, ಈ ದಾಖಲೆಗಳು ಎಷ್ಟರ ಮಟ್ಟಿಗೆ ಸಾಚಾತನ ಹೊಂದಿವೆ. ನೀತಿ ಸಂಹಿತೆ ನಿರ್ದಿಷ್ಟಗೊಳಿಸಿರುವ ಶೇ.90ರಷ್ಟು ಹಣವನ್ನು ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಈಗಾಗಲೇ ಖರ್ಚು ಮಾಡಿದ್ದು, ಈ ಬಗ್ಗೆ ಅಧಿಕಾರಿಗಳು ಕನಿಷ್ಟ ತನಿಖೆ ನಡೆಸದೆ ಹೋದದ್ದು ವಿಪರ್ಯಾಸ’ ಎಂದು ಅವರು ಅಸಮಾಧಾನ ಹೊರಹಾಕಿದರು.

‘ಅಲ್ಲದೆ, ಕಳೆದ ಒಂದು ತಿಂಗಳಿನಿಂದ ಬಿಜೆಪಿ ಒಂದು ರೂಪಾಯಿಯನ್ನೂ ಚುನಾವಣೆಗಾಗಿ ಖರ್ಚು ಮಾಡಿಲ್ಲವೇ? ಹೀಗೆ ಯಾವುದೋ ಉದ್ದೇಶಕ್ಕೆ ಬ್ಯಾಂಕಿನಿಂದ ಹಣ ಪಡೆದ ದಾಖಲೆಗಳನ್ನು ತೋರಿಸಿದಾಕ್ಷಣ ಅದರ ಸಾಚಾತನದ ಬಗ್ಗೆ ಕಿಂಚಿತ್ತೂ ತನಿಖೆ ನಡೆಸದೆ, ಬೆಳಕಿನ ವೇಗದಲ್ಲಿ ಅಧಿಕಾರಿಗಳು ಹಣವನ್ನು ಹಿಂತಿರುಗಿಸಿದ್ದಾರೆ. ಹೀಗೆ ಯಾವುದೋ ದಾಖಲೆಗಳನ್ನು ತೋರಿಸಿ ಕಳ್ಳತನದಿಂದ ಸಿಕ್ಕಿಬಿದ್ದ ಹಣವನ್ನು ಬಿಡಿಸಿಕೊಳ್ಳುವುದಾದರೆ ಚುನಾವಣೆ ಪಾವಿತ್ಯ್ರತೆ ಉಳಿಯುವುದು ಹೇಗೆ ಸಾಧ್ಯ? ನಾವೂ ಹೀಗೆ ಹಣದ ಮೂಲಕ ವಹಿವಾಟು ನಡೆಸಿದರೆ ನಮ್ಮ ಎಲ್ಲಾ ವಹಿವಾಟನ್ನು ಮನ್ನಾ ಮಾಡ್ತೀರ? ಅಧಿಕಾರಿಗಳ ಇಂತಹ ವರ್ತನೆ ಚುನಾವಣೆ ಕಾನೂನು ಅಡಿ ನಡೆಯುತ್ತಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ’ ಎಂದರು.

‘ಐವತ್ತು ಸಾವಿರಕ್ಕೆ ಮೇಲ್ಪಟ್ಟ ಯಾವುದೇ ಹಣದ ವಹಿವಾಟುಗಳು ಬ್ಯಾಂಕ್ ಖಾತೆ ಅಥವಾ ಚೆಕ್ ಮೂಲಕ ನಡೆಯಬೇಕು ಎಂಬ ಕಾನೂನು ಇದೆ. ಚುನಾವಣಾ ಸಂದರ್ಭದಲ್ಲಿ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಿನ ಹಣದ ವಹಿವಾಟನ್ನು ಚೆಕ್ ಮೂಲಕವೇ ನಡೆಸಬೇಕು ಎಂಬುದನ್ನು ಚುನಾವಣಾ ನೀತಿ ಸಂಹಿತೆಯೇ ಹೇಳುತ್ತದೆ. ಆದರೆ, ಈ ವಿಚಾರ ನಮ್ಮ ಅಧಿಕಾರಿಗಳಿಗೆ ಗೊತ್ತಿಲ್ಲದೆ ಹೋದದ್ದು ದುರಾದೃಷ್ಟಕರ. ಕಾನೂನು ಉಲ್ಲಂಘಿಸಿ ಅಥವಾ ಮುಂಚಿಂತವಾಗಿಯೇ ಮಾಹಿತಿ ನೀಡದೆ ಹೀಗೆ ₹2 ಕೋಟಿ ಹಣವನ್ನು ವರ್ಗಾಯಿಸುತ್ತಿರುವುದು ಮನಿ ಲಾಂಡರಿಂಗ್ ಅಲ್ಲವೇ? ಈ ಬಗ್ಗೆ ಅಧಿಕಾರಿಗಳು ಏಕೆ ಪ್ರಶ್ನಿಸುತ್ತಿಲ್ಲ. ಅಥವಾ ಬಿಜೆಪಿ ನಾಯಕರು ಚುನಾವಣಾ ಅಧಿಕಾರಿಗಳ ಸಹಾಯದೊಂದಿಗೆ ಹೊಸ ಮನಿ ಲಾಂಡರಿಂಗ್ ನಡೆಸುತ್ತಿದ್ದಾರ” ಎಂದು ಅವರು ಕಟುವಾಗಿ ಪ್ರಶ್ನಿಸಿದರು.

“ಸ್ವಾಭಿಮಾನ ಕಳೆದುಕೊಂಡಿರುವ ಕೆಲವು ಅಧಿಕಾರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಬಿಜೆಪಿ ನಾಯಕರು ಅಧಿಕಾರಿಗಳನ್ನೂ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಮೇಲಿನ ಸರ್ಜಿಕಲ್ ಸ್ಟ್ರೈಕ್ ಆಗಿದ್ದು, ಚುನಾವಣಾ ಅಧಿಕಾರಿಗಳು ಈ ಗೋಲ್‌ಮಾಲ್ ಬಗ್ಗೆ ನ್ಯಾಯಯುತ ತನಿಖೆ ನಡೆಸಬೇಕು” ಎಂದು ಅವರು ಆಗ್ರಹಿಸಿದರು.

ದೇವೇಗೌಡರಿಗೆ ತಿರುಗೇಟು

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು, ‘ಮೋದಿ ರಾಜ್ಯಕ್ಕೆ ಅಕ್ಷಯ ಪಾತ್ರೆ’ ನೀಡಿದ್ದಾರೆ ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಕೃಷ್ಣ ಬೈರೇಗೌಡ, “ದೇವೇಗೌಡರ ಕುಟುಂಬ ಹೇಗಿದ್ದರೂ ಪ್ರಧಾನಿ ಜೊತೆಗೆ ತುಂಬಾ ನಿಕಟವಾಗಿದೆ. ಅಲ್ಲದೆ, ಅವರು ರಾಜ್ಯಕ್ಕೆ ಅಕ್ಷಯ ಪಾತ್ರೆ ನೀಡಿದ್ದಾರೆ ಎಂದು ಕೊಂಡಾಡುತ್ತಿದ್ದಾರೆ. ಹಾಗಾದರೆ, ಆ ಅಕ್ಷಯ ಪಾತ್ರೆಯಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಕೊಡಿಸಿಬಿಡಿ’ ಎಂದು ತಿರುಗೇಟು ನೀಡಿದರು.

‘ಕಳೆದ ಬಜೆಟ್‌ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ₹56 ಕೋಟಿ ಘೋಷಿಸಿತ್ತು. ಈ ಪೈಕಿ ಕನಿಷ್ಟ ₹500 ಕೋಟಿಯನ್ನಾದರೂ ಕೊಡಿಸಿ. ದೊಡ್ಡ ಮನಸ್ಸು ಮಾಡಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ. ಸಮುದ್ರಕ್ಕೆ ಸೇರುವ ನೀರನ್ನು ಉಳಿಸಿ ಬೆಂಗಳೂರಿಗೆ ಕುಡಿಯುವ ನೀರನ್ನಾದರೂ ಪೂರೈಸಬಹುದು. ಮಂಡ್ಯದ ರೈತರ ಭೂಮಿಗೂ ನೀರುಣಿಸಬಹುದು” ಎಂದು ಮಾಜಿ ಪ್ರಧಾನಿಗೆ ಸವಾಲು ಹಾಕಿದರು.

ಇದನ್ನೂ ಓದಿ; ‘ಜನರಲ್ ಬೋಗಿ’ ಕಡಿಮೆ ಮಾಡಿ, ‘ಗಣ್ಯರ ರೈಲು’ಗಳನ್ನು ಪ್ರಚಾರ ಮಾಡುತ್ತಿರುವ ಮೋದಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...