Homeಕರ್ನಾಟಕಸೀಜ್ ಮಾಡಿದ ಹಣ ಬಿಜೆಪಿಗೆ ಹಿಂತಿರುಗಿಸಿದ ಅಧಿಕಾರಿಗಳು; ತನಿಖೆಗೆ ಆಗ್ರಹಿಸಿದ ಸಚಿವ ಕೃಷ್ಣ ಬೈರೇಗೌಡ

ಸೀಜ್ ಮಾಡಿದ ಹಣ ಬಿಜೆಪಿಗೆ ಹಿಂತಿರುಗಿಸಿದ ಅಧಿಕಾರಿಗಳು; ತನಿಖೆಗೆ ಆಗ್ರಹಿಸಿದ ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಚುನಾವಣಾ ಆಯೋಗ ವಶಕ್ಕೆ ಪಡೆದಿದ್ದ ಸುಮಾರು ₹2 ಕೋಟಿ ಹಣವನ್ನು, ಸೀಜ್ ಮಾಡಿದ ಕೆಲವೇ ಗಂಟೆಗಳಲ್ಲಿ ಐಟಿ ಅಧಿಕಾರಿಗಳು ಬಿಜೆಪಿಗೆ ವಾಪಸ್ ನೀಡಿದ್ದು, ‘ಬಿಜೆಪಿ ನಾಯಕರು ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪ ಮಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಿಜೆಪಿ ನಾಯಕರು ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಂಡು ಇಡೀ ವ್ಯವಸ್ಥೆಯನ್ನೇ ಅವಮಾನಿಸುವ ರೀತಿ ಚುನಾವಣೆ ನಡೆಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ಸರ್ಜಿಕಲ್ ಸ್ಟ್ರೈಕ್ ಆಗಿದ್ದು, ಈ ಗೋಲ್‌ಮಾಲ್ ಪ್ರಕರಣವನ್ನು ಚುನಾವಣಾ ಅಧಿಕಾರಿಗಳು ನ್ಯಾಯಯುತ ತನಿಖೆ ನಡೆಸಬೇಕು” ಎಂದು ಅವರು ಒತ್ತಾಯಿಸಿದರು.

“ಚುನಾವಣಾ ಖರ್ಚಿಗಾಗಿ ಬಿಜೆಪಿ ನಾಯಕರು ಅಕ್ರಮವಾಗಿ ಸಾಗಾಟ ನಡೆಸಿದ್ದ ₹2 ಕೋಟಿ ಹಣವನ್ನು ಚುನಾವಣಾ ಅಧಿಕಾರಿಗಳು ಶನಿವಾರ ಕಾಟನ್‌ ಪೇಟೆಯಲ್ಲಿಯಲ್ಲಿ ಸೀಜ್ ಮಾಡಿದ್ದಾರೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ. ಆದರೆ, ಆದಾಯ ತೆರಿಗೆ ಅಧಿಕಾರಿಗಳು ಸೀಜ್ ಮಾಡಲಾದ ಹಣಕ್ಕೆ ಕೇವಲ ನಾಲ್ಕು ಗಂಟೆಯಲ್ಲಿ ಕ್ಲೀನ್ ಚಿಟ್‌ ನೀಡಿ, ಹಣವನ್ನೂ ಬಿಜೆಪಿಗೆ ಹಿಂತಿರುಗಿಸಿದೆ. ಇದು ಹೇಗೆ ಸಾಧ್ಯವಾಯಿತು” ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

‘ಸಿಕ್ಕಿಬಿದ್ದ ಹಣಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಿರುವ ಬಿಜೆಪಿ, ಮಾರ್ಚ್‌ 27 ರಂದೇ ₹5 ಕೋಟಿ ಹಣವನ್ನು ಕೆನೆರಾ ಬ್ಯಾಂಕ್‌ನಿಂದ ವಿತ್‌ಡ್ರಾ ಮಾಡಿ ಇಟ್ಟುಕೊಂಡಿರುವುದಾಗಿ ತಿಳಿಸಿದೆ. ಅಲ್ಲದೆ, ಈ ಹಣವನ್ನು ಚುನಾವಣಾ ಖರ್ಚಿಗಾಗಿ ಮೈಸೂರು, ಚಾಮರಾಜನಗರ ಹಾಗೂ ಮಂಗಳೂರಿಗೆ ಕಳುಹಿಸುತ್ತಿರುವುದಾಗಿ ಮಾಹಿತಿ ನೀಡಿದೆ. ಆದರೆ, ಈ ದಾಖಲೆಗಳು ಎಷ್ಟರ ಮಟ್ಟಿಗೆ ಸಾಚಾತನ ಹೊಂದಿವೆ. ನೀತಿ ಸಂಹಿತೆ ನಿರ್ದಿಷ್ಟಗೊಳಿಸಿರುವ ಶೇ.90ರಷ್ಟು ಹಣವನ್ನು ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಈಗಾಗಲೇ ಖರ್ಚು ಮಾಡಿದ್ದು, ಈ ಬಗ್ಗೆ ಅಧಿಕಾರಿಗಳು ಕನಿಷ್ಟ ತನಿಖೆ ನಡೆಸದೆ ಹೋದದ್ದು ವಿಪರ್ಯಾಸ’ ಎಂದು ಅವರು ಅಸಮಾಧಾನ ಹೊರಹಾಕಿದರು.

‘ಅಲ್ಲದೆ, ಕಳೆದ ಒಂದು ತಿಂಗಳಿನಿಂದ ಬಿಜೆಪಿ ಒಂದು ರೂಪಾಯಿಯನ್ನೂ ಚುನಾವಣೆಗಾಗಿ ಖರ್ಚು ಮಾಡಿಲ್ಲವೇ? ಹೀಗೆ ಯಾವುದೋ ಉದ್ದೇಶಕ್ಕೆ ಬ್ಯಾಂಕಿನಿಂದ ಹಣ ಪಡೆದ ದಾಖಲೆಗಳನ್ನು ತೋರಿಸಿದಾಕ್ಷಣ ಅದರ ಸಾಚಾತನದ ಬಗ್ಗೆ ಕಿಂಚಿತ್ತೂ ತನಿಖೆ ನಡೆಸದೆ, ಬೆಳಕಿನ ವೇಗದಲ್ಲಿ ಅಧಿಕಾರಿಗಳು ಹಣವನ್ನು ಹಿಂತಿರುಗಿಸಿದ್ದಾರೆ. ಹೀಗೆ ಯಾವುದೋ ದಾಖಲೆಗಳನ್ನು ತೋರಿಸಿ ಕಳ್ಳತನದಿಂದ ಸಿಕ್ಕಿಬಿದ್ದ ಹಣವನ್ನು ಬಿಡಿಸಿಕೊಳ್ಳುವುದಾದರೆ ಚುನಾವಣೆ ಪಾವಿತ್ಯ್ರತೆ ಉಳಿಯುವುದು ಹೇಗೆ ಸಾಧ್ಯ? ನಾವೂ ಹೀಗೆ ಹಣದ ಮೂಲಕ ವಹಿವಾಟು ನಡೆಸಿದರೆ ನಮ್ಮ ಎಲ್ಲಾ ವಹಿವಾಟನ್ನು ಮನ್ನಾ ಮಾಡ್ತೀರ? ಅಧಿಕಾರಿಗಳ ಇಂತಹ ವರ್ತನೆ ಚುನಾವಣೆ ಕಾನೂನು ಅಡಿ ನಡೆಯುತ್ತಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ’ ಎಂದರು.

‘ಐವತ್ತು ಸಾವಿರಕ್ಕೆ ಮೇಲ್ಪಟ್ಟ ಯಾವುದೇ ಹಣದ ವಹಿವಾಟುಗಳು ಬ್ಯಾಂಕ್ ಖಾತೆ ಅಥವಾ ಚೆಕ್ ಮೂಲಕ ನಡೆಯಬೇಕು ಎಂಬ ಕಾನೂನು ಇದೆ. ಚುನಾವಣಾ ಸಂದರ್ಭದಲ್ಲಿ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಿನ ಹಣದ ವಹಿವಾಟನ್ನು ಚೆಕ್ ಮೂಲಕವೇ ನಡೆಸಬೇಕು ಎಂಬುದನ್ನು ಚುನಾವಣಾ ನೀತಿ ಸಂಹಿತೆಯೇ ಹೇಳುತ್ತದೆ. ಆದರೆ, ಈ ವಿಚಾರ ನಮ್ಮ ಅಧಿಕಾರಿಗಳಿಗೆ ಗೊತ್ತಿಲ್ಲದೆ ಹೋದದ್ದು ದುರಾದೃಷ್ಟಕರ. ಕಾನೂನು ಉಲ್ಲಂಘಿಸಿ ಅಥವಾ ಮುಂಚಿಂತವಾಗಿಯೇ ಮಾಹಿತಿ ನೀಡದೆ ಹೀಗೆ ₹2 ಕೋಟಿ ಹಣವನ್ನು ವರ್ಗಾಯಿಸುತ್ತಿರುವುದು ಮನಿ ಲಾಂಡರಿಂಗ್ ಅಲ್ಲವೇ? ಈ ಬಗ್ಗೆ ಅಧಿಕಾರಿಗಳು ಏಕೆ ಪ್ರಶ್ನಿಸುತ್ತಿಲ್ಲ. ಅಥವಾ ಬಿಜೆಪಿ ನಾಯಕರು ಚುನಾವಣಾ ಅಧಿಕಾರಿಗಳ ಸಹಾಯದೊಂದಿಗೆ ಹೊಸ ಮನಿ ಲಾಂಡರಿಂಗ್ ನಡೆಸುತ್ತಿದ್ದಾರ” ಎಂದು ಅವರು ಕಟುವಾಗಿ ಪ್ರಶ್ನಿಸಿದರು.

“ಸ್ವಾಭಿಮಾನ ಕಳೆದುಕೊಂಡಿರುವ ಕೆಲವು ಅಧಿಕಾರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಬಿಜೆಪಿ ನಾಯಕರು ಅಧಿಕಾರಿಗಳನ್ನೂ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಮೇಲಿನ ಸರ್ಜಿಕಲ್ ಸ್ಟ್ರೈಕ್ ಆಗಿದ್ದು, ಚುನಾವಣಾ ಅಧಿಕಾರಿಗಳು ಈ ಗೋಲ್‌ಮಾಲ್ ಬಗ್ಗೆ ನ್ಯಾಯಯುತ ತನಿಖೆ ನಡೆಸಬೇಕು” ಎಂದು ಅವರು ಆಗ್ರಹಿಸಿದರು.

ದೇವೇಗೌಡರಿಗೆ ತಿರುಗೇಟು

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು, ‘ಮೋದಿ ರಾಜ್ಯಕ್ಕೆ ಅಕ್ಷಯ ಪಾತ್ರೆ’ ನೀಡಿದ್ದಾರೆ ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಕೃಷ್ಣ ಬೈರೇಗೌಡ, “ದೇವೇಗೌಡರ ಕುಟುಂಬ ಹೇಗಿದ್ದರೂ ಪ್ರಧಾನಿ ಜೊತೆಗೆ ತುಂಬಾ ನಿಕಟವಾಗಿದೆ. ಅಲ್ಲದೆ, ಅವರು ರಾಜ್ಯಕ್ಕೆ ಅಕ್ಷಯ ಪಾತ್ರೆ ನೀಡಿದ್ದಾರೆ ಎಂದು ಕೊಂಡಾಡುತ್ತಿದ್ದಾರೆ. ಹಾಗಾದರೆ, ಆ ಅಕ್ಷಯ ಪಾತ್ರೆಯಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಕೊಡಿಸಿಬಿಡಿ’ ಎಂದು ತಿರುಗೇಟು ನೀಡಿದರು.

‘ಕಳೆದ ಬಜೆಟ್‌ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ₹56 ಕೋಟಿ ಘೋಷಿಸಿತ್ತು. ಈ ಪೈಕಿ ಕನಿಷ್ಟ ₹500 ಕೋಟಿಯನ್ನಾದರೂ ಕೊಡಿಸಿ. ದೊಡ್ಡ ಮನಸ್ಸು ಮಾಡಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ. ಸಮುದ್ರಕ್ಕೆ ಸೇರುವ ನೀರನ್ನು ಉಳಿಸಿ ಬೆಂಗಳೂರಿಗೆ ಕುಡಿಯುವ ನೀರನ್ನಾದರೂ ಪೂರೈಸಬಹುದು. ಮಂಡ್ಯದ ರೈತರ ಭೂಮಿಗೂ ನೀರುಣಿಸಬಹುದು” ಎಂದು ಮಾಜಿ ಪ್ರಧಾನಿಗೆ ಸವಾಲು ಹಾಕಿದರು.

ಇದನ್ನೂ ಓದಿ; ‘ಜನರಲ್ ಬೋಗಿ’ ಕಡಿಮೆ ಮಾಡಿ, ‘ಗಣ್ಯರ ರೈಲು’ಗಳನ್ನು ಪ್ರಚಾರ ಮಾಡುತ್ತಿರುವ ಮೋದಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...