Homeಕರ್ನಾಟಕಸೀಜ್ ಮಾಡಿದ ಹಣ ಬಿಜೆಪಿಗೆ ಹಿಂತಿರುಗಿಸಿದ ಅಧಿಕಾರಿಗಳು; ತನಿಖೆಗೆ ಆಗ್ರಹಿಸಿದ ಸಚಿವ ಕೃಷ್ಣ ಬೈರೇಗೌಡ

ಸೀಜ್ ಮಾಡಿದ ಹಣ ಬಿಜೆಪಿಗೆ ಹಿಂತಿರುಗಿಸಿದ ಅಧಿಕಾರಿಗಳು; ತನಿಖೆಗೆ ಆಗ್ರಹಿಸಿದ ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಚುನಾವಣಾ ಆಯೋಗ ವಶಕ್ಕೆ ಪಡೆದಿದ್ದ ಸುಮಾರು ₹2 ಕೋಟಿ ಹಣವನ್ನು, ಸೀಜ್ ಮಾಡಿದ ಕೆಲವೇ ಗಂಟೆಗಳಲ್ಲಿ ಐಟಿ ಅಧಿಕಾರಿಗಳು ಬಿಜೆಪಿಗೆ ವಾಪಸ್ ನೀಡಿದ್ದು, ‘ಬಿಜೆಪಿ ನಾಯಕರು ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪ ಮಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಿಜೆಪಿ ನಾಯಕರು ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಂಡು ಇಡೀ ವ್ಯವಸ್ಥೆಯನ್ನೇ ಅವಮಾನಿಸುವ ರೀತಿ ಚುನಾವಣೆ ನಡೆಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ಸರ್ಜಿಕಲ್ ಸ್ಟ್ರೈಕ್ ಆಗಿದ್ದು, ಈ ಗೋಲ್‌ಮಾಲ್ ಪ್ರಕರಣವನ್ನು ಚುನಾವಣಾ ಅಧಿಕಾರಿಗಳು ನ್ಯಾಯಯುತ ತನಿಖೆ ನಡೆಸಬೇಕು” ಎಂದು ಅವರು ಒತ್ತಾಯಿಸಿದರು.

“ಚುನಾವಣಾ ಖರ್ಚಿಗಾಗಿ ಬಿಜೆಪಿ ನಾಯಕರು ಅಕ್ರಮವಾಗಿ ಸಾಗಾಟ ನಡೆಸಿದ್ದ ₹2 ಕೋಟಿ ಹಣವನ್ನು ಚುನಾವಣಾ ಅಧಿಕಾರಿಗಳು ಶನಿವಾರ ಕಾಟನ್‌ ಪೇಟೆಯಲ್ಲಿಯಲ್ಲಿ ಸೀಜ್ ಮಾಡಿದ್ದಾರೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ. ಆದರೆ, ಆದಾಯ ತೆರಿಗೆ ಅಧಿಕಾರಿಗಳು ಸೀಜ್ ಮಾಡಲಾದ ಹಣಕ್ಕೆ ಕೇವಲ ನಾಲ್ಕು ಗಂಟೆಯಲ್ಲಿ ಕ್ಲೀನ್ ಚಿಟ್‌ ನೀಡಿ, ಹಣವನ್ನೂ ಬಿಜೆಪಿಗೆ ಹಿಂತಿರುಗಿಸಿದೆ. ಇದು ಹೇಗೆ ಸಾಧ್ಯವಾಯಿತು” ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

‘ಸಿಕ್ಕಿಬಿದ್ದ ಹಣಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಿರುವ ಬಿಜೆಪಿ, ಮಾರ್ಚ್‌ 27 ರಂದೇ ₹5 ಕೋಟಿ ಹಣವನ್ನು ಕೆನೆರಾ ಬ್ಯಾಂಕ್‌ನಿಂದ ವಿತ್‌ಡ್ರಾ ಮಾಡಿ ಇಟ್ಟುಕೊಂಡಿರುವುದಾಗಿ ತಿಳಿಸಿದೆ. ಅಲ್ಲದೆ, ಈ ಹಣವನ್ನು ಚುನಾವಣಾ ಖರ್ಚಿಗಾಗಿ ಮೈಸೂರು, ಚಾಮರಾಜನಗರ ಹಾಗೂ ಮಂಗಳೂರಿಗೆ ಕಳುಹಿಸುತ್ತಿರುವುದಾಗಿ ಮಾಹಿತಿ ನೀಡಿದೆ. ಆದರೆ, ಈ ದಾಖಲೆಗಳು ಎಷ್ಟರ ಮಟ್ಟಿಗೆ ಸಾಚಾತನ ಹೊಂದಿವೆ. ನೀತಿ ಸಂಹಿತೆ ನಿರ್ದಿಷ್ಟಗೊಳಿಸಿರುವ ಶೇ.90ರಷ್ಟು ಹಣವನ್ನು ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಈಗಾಗಲೇ ಖರ್ಚು ಮಾಡಿದ್ದು, ಈ ಬಗ್ಗೆ ಅಧಿಕಾರಿಗಳು ಕನಿಷ್ಟ ತನಿಖೆ ನಡೆಸದೆ ಹೋದದ್ದು ವಿಪರ್ಯಾಸ’ ಎಂದು ಅವರು ಅಸಮಾಧಾನ ಹೊರಹಾಕಿದರು.

‘ಅಲ್ಲದೆ, ಕಳೆದ ಒಂದು ತಿಂಗಳಿನಿಂದ ಬಿಜೆಪಿ ಒಂದು ರೂಪಾಯಿಯನ್ನೂ ಚುನಾವಣೆಗಾಗಿ ಖರ್ಚು ಮಾಡಿಲ್ಲವೇ? ಹೀಗೆ ಯಾವುದೋ ಉದ್ದೇಶಕ್ಕೆ ಬ್ಯಾಂಕಿನಿಂದ ಹಣ ಪಡೆದ ದಾಖಲೆಗಳನ್ನು ತೋರಿಸಿದಾಕ್ಷಣ ಅದರ ಸಾಚಾತನದ ಬಗ್ಗೆ ಕಿಂಚಿತ್ತೂ ತನಿಖೆ ನಡೆಸದೆ, ಬೆಳಕಿನ ವೇಗದಲ್ಲಿ ಅಧಿಕಾರಿಗಳು ಹಣವನ್ನು ಹಿಂತಿರುಗಿಸಿದ್ದಾರೆ. ಹೀಗೆ ಯಾವುದೋ ದಾಖಲೆಗಳನ್ನು ತೋರಿಸಿ ಕಳ್ಳತನದಿಂದ ಸಿಕ್ಕಿಬಿದ್ದ ಹಣವನ್ನು ಬಿಡಿಸಿಕೊಳ್ಳುವುದಾದರೆ ಚುನಾವಣೆ ಪಾವಿತ್ಯ್ರತೆ ಉಳಿಯುವುದು ಹೇಗೆ ಸಾಧ್ಯ? ನಾವೂ ಹೀಗೆ ಹಣದ ಮೂಲಕ ವಹಿವಾಟು ನಡೆಸಿದರೆ ನಮ್ಮ ಎಲ್ಲಾ ವಹಿವಾಟನ್ನು ಮನ್ನಾ ಮಾಡ್ತೀರ? ಅಧಿಕಾರಿಗಳ ಇಂತಹ ವರ್ತನೆ ಚುನಾವಣೆ ಕಾನೂನು ಅಡಿ ನಡೆಯುತ್ತಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ’ ಎಂದರು.

‘ಐವತ್ತು ಸಾವಿರಕ್ಕೆ ಮೇಲ್ಪಟ್ಟ ಯಾವುದೇ ಹಣದ ವಹಿವಾಟುಗಳು ಬ್ಯಾಂಕ್ ಖಾತೆ ಅಥವಾ ಚೆಕ್ ಮೂಲಕ ನಡೆಯಬೇಕು ಎಂಬ ಕಾನೂನು ಇದೆ. ಚುನಾವಣಾ ಸಂದರ್ಭದಲ್ಲಿ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಿನ ಹಣದ ವಹಿವಾಟನ್ನು ಚೆಕ್ ಮೂಲಕವೇ ನಡೆಸಬೇಕು ಎಂಬುದನ್ನು ಚುನಾವಣಾ ನೀತಿ ಸಂಹಿತೆಯೇ ಹೇಳುತ್ತದೆ. ಆದರೆ, ಈ ವಿಚಾರ ನಮ್ಮ ಅಧಿಕಾರಿಗಳಿಗೆ ಗೊತ್ತಿಲ್ಲದೆ ಹೋದದ್ದು ದುರಾದೃಷ್ಟಕರ. ಕಾನೂನು ಉಲ್ಲಂಘಿಸಿ ಅಥವಾ ಮುಂಚಿಂತವಾಗಿಯೇ ಮಾಹಿತಿ ನೀಡದೆ ಹೀಗೆ ₹2 ಕೋಟಿ ಹಣವನ್ನು ವರ್ಗಾಯಿಸುತ್ತಿರುವುದು ಮನಿ ಲಾಂಡರಿಂಗ್ ಅಲ್ಲವೇ? ಈ ಬಗ್ಗೆ ಅಧಿಕಾರಿಗಳು ಏಕೆ ಪ್ರಶ್ನಿಸುತ್ತಿಲ್ಲ. ಅಥವಾ ಬಿಜೆಪಿ ನಾಯಕರು ಚುನಾವಣಾ ಅಧಿಕಾರಿಗಳ ಸಹಾಯದೊಂದಿಗೆ ಹೊಸ ಮನಿ ಲಾಂಡರಿಂಗ್ ನಡೆಸುತ್ತಿದ್ದಾರ” ಎಂದು ಅವರು ಕಟುವಾಗಿ ಪ್ರಶ್ನಿಸಿದರು.

“ಸ್ವಾಭಿಮಾನ ಕಳೆದುಕೊಂಡಿರುವ ಕೆಲವು ಅಧಿಕಾರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಬಿಜೆಪಿ ನಾಯಕರು ಅಧಿಕಾರಿಗಳನ್ನೂ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಮೇಲಿನ ಸರ್ಜಿಕಲ್ ಸ್ಟ್ರೈಕ್ ಆಗಿದ್ದು, ಚುನಾವಣಾ ಅಧಿಕಾರಿಗಳು ಈ ಗೋಲ್‌ಮಾಲ್ ಬಗ್ಗೆ ನ್ಯಾಯಯುತ ತನಿಖೆ ನಡೆಸಬೇಕು” ಎಂದು ಅವರು ಆಗ್ರಹಿಸಿದರು.

ದೇವೇಗೌಡರಿಗೆ ತಿರುಗೇಟು

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು, ‘ಮೋದಿ ರಾಜ್ಯಕ್ಕೆ ಅಕ್ಷಯ ಪಾತ್ರೆ’ ನೀಡಿದ್ದಾರೆ ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಕೃಷ್ಣ ಬೈರೇಗೌಡ, “ದೇವೇಗೌಡರ ಕುಟುಂಬ ಹೇಗಿದ್ದರೂ ಪ್ರಧಾನಿ ಜೊತೆಗೆ ತುಂಬಾ ನಿಕಟವಾಗಿದೆ. ಅಲ್ಲದೆ, ಅವರು ರಾಜ್ಯಕ್ಕೆ ಅಕ್ಷಯ ಪಾತ್ರೆ ನೀಡಿದ್ದಾರೆ ಎಂದು ಕೊಂಡಾಡುತ್ತಿದ್ದಾರೆ. ಹಾಗಾದರೆ, ಆ ಅಕ್ಷಯ ಪಾತ್ರೆಯಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಕೊಡಿಸಿಬಿಡಿ’ ಎಂದು ತಿರುಗೇಟು ನೀಡಿದರು.

‘ಕಳೆದ ಬಜೆಟ್‌ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ₹56 ಕೋಟಿ ಘೋಷಿಸಿತ್ತು. ಈ ಪೈಕಿ ಕನಿಷ್ಟ ₹500 ಕೋಟಿಯನ್ನಾದರೂ ಕೊಡಿಸಿ. ದೊಡ್ಡ ಮನಸ್ಸು ಮಾಡಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ. ಸಮುದ್ರಕ್ಕೆ ಸೇರುವ ನೀರನ್ನು ಉಳಿಸಿ ಬೆಂಗಳೂರಿಗೆ ಕುಡಿಯುವ ನೀರನ್ನಾದರೂ ಪೂರೈಸಬಹುದು. ಮಂಡ್ಯದ ರೈತರ ಭೂಮಿಗೂ ನೀರುಣಿಸಬಹುದು” ಎಂದು ಮಾಜಿ ಪ್ರಧಾನಿಗೆ ಸವಾಲು ಹಾಕಿದರು.

ಇದನ್ನೂ ಓದಿ; ‘ಜನರಲ್ ಬೋಗಿ’ ಕಡಿಮೆ ಮಾಡಿ, ‘ಗಣ್ಯರ ರೈಲು’ಗಳನ್ನು ಪ್ರಚಾರ ಮಾಡುತ್ತಿರುವ ಮೋದಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...