Homeಅಂತರಾಷ್ಟ್ರೀಯರಾಯ್ಟರ್ಸ್‌‌ನ ಖ್ಯಾತ ಫೋಟೋಗ್ರಾಫರ್‌ ದಾನಿಶ್ ಸಿದ್ದೀಕಿ ಅಫ್ಘಾನ್‌ ಘರ್ಷಣೆಯಲ್ಲಿ ಮೃತ

ರಾಯ್ಟರ್ಸ್‌‌ನ ಖ್ಯಾತ ಫೋಟೋಗ್ರಾಫರ್‌ ದಾನಿಶ್ ಸಿದ್ದೀಕಿ ಅಫ್ಘಾನ್‌ ಘರ್ಷಣೆಯಲ್ಲಿ ಮೃತ

- Advertisement -
- Advertisement -

ರಾಯ್ಟರ್ಸ್‌ನ ಮುಖ್ಯ ಫೋಟೋಗ್ರಾಫರ್‌ ಆಗಿದ್ದ ದಾನಿಶ್ ಸಿದ್ದೀಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಟೋಲೋ ನ್ಯೂಸ್‌‌ ಶುಕ್ರವಾರ ವರದಿ ಮಾಡಿದೆ. ಅವರು ಅಫ್ಘಾನ್‌‌‌‌ ವಿಶೇಷ ಪಡೆಯೊಂದಿಗೆ ವರದಿಗಾಗಿ ಅಲ್ಲಿ ನಿಯೋಜನೆಗೊಂಡಿದ್ದರು ಎನ್ನಲಾಗಿದೆ.

ಪಾಕಿಸ್ತಾನ ಮತ್ತು ಅಫ್ಘಾನ್‌‌ನ ಪ್ರಮುಖ ಗಡಿಯಾಗಿರುವ ‘ಸ್ಪಿನ್ ಬೋಲ್ಡಾಕ್‌’ನ ಬಾರ್ಡರ್‌ ಕ್ರಾಸಿಂಗ್‌‌ ಅನ್ನು ತಾಲಿಬಾನ್‌‌ ವಶಪಡಿಸಿಕೊಂಡಿತ್ತು. ಈ ಪ್ರಮುಖ ಗಡಿಯನ್ನು ಹಿಂಪಡೆಯಲು ಕಾರ್ಯಾಚರಣೆ ಪ್ರಾರಂಭಿಸಿದ್ದ ಅಫ್ಘಾನ್ ಪಡೆಗಳು ಸ್ಪಿನ್ ಬೋಲ್ಡಾಕ್‌ನಲ್ಲಿ ತಾಲಿಬಾನ್‌ ಬಂಡುಕೋರರೊಂದಿಗೆ ಘರ್ಷಣೆ ನಡೆಸಿದ್ದವು ಎಂದು ಎಎಫ್ಪಿ ವರದಿ ಮಾಡಿದೆ.

ಇದನ್ನೂ ಓದಿ: 2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು ಸೆರೆಹಿಡಿದ ಫೋಟೊಗಳು

ದಾನಿಶ್ ಕಳೆದ ಕೆಲವು ದಿನಗಳಿಂದ ಕಂದಹಾರ್‌ನ ಪರಿಸ್ಥಿತಿಯನ್ನು ವರದಿ ಮಾಡುತ್ತಿದ್ದರು.

ಜುಲೈ 13 ರಂದು, ಅವರು ಮತ್ತು ಇತರ ವಿಶೇಷ ಪಡೆಗಳು ಪ್ರಯಾಣಿಸುತ್ತಿದ್ದ ವಾಹನವನ್ನು ಗುರಿಯಾಗಿಸಿ ಕನಿಷ್ಠ ಮೂರು ಸುತ್ತಿನ ಗುಂಡಿನ ಚಕಮಕಿ ನಡೆದಿದ್ದವು ಎಂದು ಅವರು ವಿಡಿಯೊ ಸಮೇತ ವರದಿ ಮಾಡಿದ್ದರು.

ಪುಲಿಟ್ಜೆರ್ ಪ್ರಶಸ್ತಿ ವಿಜೇತ ಪತ್ರಕರ್ತ

2018 ರಲ್ಲಿ ತನ್ನ ‘ಫೀಚರ್‌ ಫೋಟೋಗ್ರಾಫಿ’ ಸರಣಿಗಾಗಿ ಪ್ರತಿಷ್ಠಿತ ಪುಲಿಟ್ಜೆರ್‌‌ ಪ್ರಶಸ್ತಿಯನ್ನು ಅವರು ಪಡೆದಿದ್ದರು. ಆ ವರ್ಷ ರಾಯ್ಟರ್ಸ್‌ನ ಒಟ್ಟು ಏಳು ಪತ್ರಕರ್ತರಿಗೆ ಪ್ರಶಸ್ತಿ ಬಂದಿದ್ದು, ಅದರಲ್ಲಿನ ಇಬ್ಬರು ಭಾರತೀಯರಲ್ಲಿ ದಾನಿಶ್ ಸಿದ್ದೀಕಿ ಒಬ್ಬರಾಗಿದ್ದಾರೆ. ಅಂದಿನ ಅವರ ಫೋಟೊ ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟನ್ನು ದಾಖಲಿಸಿತ್ತು.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಾಟ್ಸಾಪ್ ಫಾರ್ವಾಡ್ ಸಂದೇಶವನ್ನು ಉಲ್ಲೇಖಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ಫೋಟೊ ಜರ್ನಲಿಸ್ಟ್ ಆಗಿದ್ದ ಸಮಯದಲ್ಲಿ ದಾನಿಶ್, ಅಫ್ಘಾನಿಸ್ತಾನ ಮತ್ತು ಇರಾಕ್ ಯುದ್ಧಗಳು, ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟು, ಹಾಂಗ್ ಕಾಂಗ್ ಪ್ರತಿಭಟನೆಗಳು, ನೇಪಾಳ ಭೂಕಂಪಗಳು, ಉತ್ತರ ಕೊರಿಯಾದಲ್ಲಿ ನಡೆದ ಕ್ರೀಡಾಕೂಟಗಳ ವರದಿಗಳ ಸಹಿತ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪಿನ ವರದಿಗಳನ್ನು ಮಾಡಿದ್ದರು.

ಅವರ ಫೋಟೋಗಳು ಹಲವಾರು ನಿಯತಕಾಲಿಕೆಗಳು, ಪತ್ರಿಕೆಗಳು, ಸ್ಲೈಡ್‌ಶೋಗಳು ಮತ್ತು ಗ್ಯಾಲರಿಗಳಲ್ಲಿ ವ್ಯಾಪಕವಾಗಿ ಪ್ರಕಟಗೊಂಡಿವೆ.

ದಾನಿಶ್ ಸಿದ್ದೀಕಿ ಅವರ ನಿಧನವನ್ನು ಖಂಡಿಸಿ, ಅಫ್ಘಾನಿಸ್ತಾನದ ಭಾರತದ ರಾಯಭಾರಿ ಟ್ವೀಟ್ ಮಾಡಿದ್ದು, “ನಿನ್ನೆ ರಾತ್ರಿ ಕಂದಹಾರ್‌ನಲ್ಲಿ ಸ್ನೇಹಿತ ದಾನಿಶ್ ಸಿದ್ದೀಕಿ ಹತ್ಯೆಯ ದುಃಖದ ಸುದ್ದಿ ತಿಳಿದು ತೀವ್ರವಾಗಿ ವಿಚಲಿತರಾಗಿದ್ದೇನೆ. ಭಾರತೀಯ ಪತ್ರಕರ್ತ ಮತ್ತು ಪುಲಿಟ್ಜೆರ್ ಪ್ರಶಸ್ತಿ ವಿಜೇತ ಅಫಘಾನ್ ಭದ್ರತಾ ಪಡೆಗಳೊಂದಿಗೆ ಇದ್ದರು. 2 ವಾರಗಳ ಹಿಂದೆ ಅವರು ಕಾಬೂಲ್‌ಗೆ ತೆರಳುವ ಮೊದಲು ನಾನು ಅವರನ್ನು ಭೇಟಿಯಾಗಿದ್ದೆ. ಅವರ ಕುಟುಂಬ ಮತ್ತು ರಾಯಿಟರ್ಸ್‌ಗೆ ಸಂತಾಪ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ವರ್‌ ಯಾತ್ರೆಗೆ ಒಪ್ಪಿಗೆ ನೀಡಿದ ಯೋಗಿ ಸರ್ಕಾರ: ಜನರ ಜೀವನ, ಆರೋಗ್ಯ ಮುಖ್ಯ ಎಂದ ಸುಪ್ರಿಂ

ಇಷ್ಟೇ ಅಲ್ಲದೆ ದಾನಿಶ್ ಸಿದ್ದೀಕಿ ಅವರ ನಿಧನಕ್ಕೆ ಹಲವಾರು ಪತ್ರಕರ್ತರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...