Homeಕರ್ನಾಟಕ'ನನ್ನನ್ನು ಯಾರೂ ಅಪಹರಣ ಮಾಡಿಲ್ಲ': ರೇವಣ್ಣ ಕಿಡ್ನಾಪ್‌ ಮಾಡಿಸಿದ್ದಾರೆ ಎನ್ನಲಾಗಿದ್ದ ಮಹಿಳೆಯಿಂದ ವಿಡಿಯೋ ಹೇಳಿಕೆ

‘ನನ್ನನ್ನು ಯಾರೂ ಅಪಹರಣ ಮಾಡಿಲ್ಲ’: ರೇವಣ್ಣ ಕಿಡ್ನಾಪ್‌ ಮಾಡಿಸಿದ್ದಾರೆ ಎನ್ನಲಾಗಿದ್ದ ಮಹಿಳೆಯಿಂದ ವಿಡಿಯೋ ಹೇಳಿಕೆ

- Advertisement -
- Advertisement -

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರಿಂದ ಅಪಹರಣಕ್ಕೊಳಗಾಗಿದ್ದಾರೆ ಎನ್ನಲಾದ ಸಂತ್ರಸ್ತೆ ಮಹಿಳೆ ವಿಡಿಯೋವೊಂದನ್ನು ವೈರಲ್‌ ಮಾಡಿದ್ದು, ರೇವಣ್ಣ ಕುಟುಂಬ ನನ್ನನ್ನು ಇಚ್ಛೆಗೆ ವಿರುದ್ಧವಾಗಿ ಇಟ್ಟುಕೊಂಡಿಲ್ಲ, ನನಗೆ ಯಾವುದೇ ತೊಂದರೆ ನೀಡಿಲ್ಲ ಎಂದು ಹೇಳಿಕೊಂಡಿದ್ದಾರೆ.

ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವ ಹೆಚ್ ಡಿ ರೇವಣ್ಣ ಅವರ ಸಹಾಯಕರ ನಿವಾಸದಿಂದ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಹಿಳೆಯನ್ನು ರಕ್ಷಿಸಿದ ಒಂದು ವಾರದ ನಂತರ ವೀಡಿಯೊ ವೈರಲ್‌ ಆಗಿದೆ. ರೇವಣ್ಣ ಮತ್ತು ಇತರರು ತಾಯಿಯನ್ನು ಅಪಹರಿಸಿದ್ದಾರೆ ಎಂದು ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮಗ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣ ಮತ್ತು ಸತೀಶ್‌ ಬಾಬಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ.

2 ನಿಮಿಷ 32 ಸೆಕೆಂಡ್ ಇರುವ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿದ್ದು, ನನ್ನನ್ನು ಯಾರೂ ಅಪಹರಣ ಮಾಡಿಲ್ಲ, ನಾನಾಗಿ ಮನೆಯಿಂದ ಬಂದಿದ್ದೇನೆ. ಭವಾನಿ, ರೇವಣ್ಣ, ಪ್ರಜ್ವಲ್ ಮತ್ತು ಬಾಬಣ್ಣರಿಂದ ಯಾವುದೇ ತೊಂದರೆ ಆಗಿಲ್ಲ ಎಂದು ಹೇಳಲಾಗಿದೆ. ಇದಲ್ಲದೆ ನಮ್ಮ ಊರಿನವರು ಏನೇನೋ ಮಾತನಾಡಿದ್ದನ್ನು ಕೇಳಿ ಬೇಸರವಾಗಿತ್ತು. ಹೀಗಾಗಿ 4 ದಿನ ಇದ್ದು ಹೋಗೋಣವೆಂದು ನೆಂಟರ ಮನೆಗೆ ಬಂದಿದ್ದೇನೆ. ಸಂಬಂಧಿಕರ ಮನೆಯಲ್ಲಿ ಇದ್ದೇನೆ, 2 ದಿನಗಳ ಬಳಿಕ ನಾನೇ ಬರುತ್ತೇನೆ ಎಂದು ಉಲ್ಲೇಖಿಸಿದ್ದು, ಗಾಬರಿ ಪಡಬೇಡಿ ಏನೂ ತೊಂದರೆ ಆಗಿಲ್ಲ, ಚನ್ನಾಗಿ ಇದ್ದೇನೆ ವಾಪಸ್ ಬರುತ್ತೇನೆ. ಯಾರೂ ಏನೆ ಅಂದರು ತಲೆಗೆ ಹಾಕಿಕೊಳ್ಳಬೇಡಿ. ಅವರಿಂದ ನಮಗೆ ತೊಂದರೆ ಆಗಿಲ್ಲ. ಮೊಬೈಲ್‍ಗೂ ನಮಗೂ ಸಂಬಂಧವಿಲ್ಲ. ನಾಲ್ಕು ದಿನ ನೆಂಟರ ಮನೆಗೆ ಹೋಗಿದ್ದೆ, ಈ ಬಗ್ಗೆ ಎಲ್ಲಿ ಬೇಕಾದರೂ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.

ಮಹಿಳೆ ಅಪಹರಣ ಪ್ರಕರಣದ ಇನ್ನೋರ್ವ ಆರೋಪಿ ಸತೀಶ್ ಬಾಬಣ್ಣನ ಹೆಸರನ್ನೂ ವಿಡಿಯೋದಲ್ಲಿ ಉಲ್ಲೇಖಿಸಿದ್ದಾರೆ, ಅವರು ನನಗೆ ಯಾವುದೇ ತೊಂದರೆ ಮಾಡಿಲ್ಲ. ಅವರು ನನ್ನನ್ನು ಚೆನ್ನಾಗಿ ನೋಡಿಕೊಂಡರು ಮತ್ತು ನನ್ನನ್ನು ಹಿಂದಕ್ಕೆ ಕಳುಹಿಸಿದರು. ಅವರು ನನಗೆ ಯಾವುದೇ ಸಮಸ್ಯೆಗಳನ್ನು ಉಂಟುಮಾಡಿಲ್ಲ. ನನ್ನ ಮಗ ಆತಂಕಗೊಂಡು ದೂರು ನೀಡಿದ್ದಾರೆ. ಯಾರೂ ನನ್ನನ್ನು ಅಪಹರಿಸಿಲ್ಲ. ನಾನು ನನ್ನ ಸ್ವಂತ ಇಚ್ಛೆಯಿಂದ ಹೋಗಿದ್ದೇನೆ ಮತ್ತು ಹಿಂತಿರುಗುತ್ತೇನೆ ಎಂದು ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಏಪ್ರಿಲ್ 26ರಂದು ಸಾರ್ವಜನಿಕವಾಗಿ ಸೋರಿಕೆಯಾದ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ವಿಡಿಯೋಗಳಲ್ಲಿ ಈ ಮಹಿಳೆಯ ವಿಡಿಯೋ ಕೂಡ ಸೇರಿದೆ ಎಂದು ಹೇಳಲಾಗಿತ್ತು. ಅದಕ್ಕಾಗಿ ಮಹಿಳೆಯನ್ನು ಅಪಹರಿಸಿರುವ ಆರೋಪ ಕೇಳಿ ಬಂದಿತ್ತು.

ಇದನ್ನು ಓದಿ: 96 ಲೋಕಸಭಾ ಕ್ಷೇತ್ರಗಳಲ್ಲಿ 4ನೇ ಹಂತದ ಮತದಾನ ಆರಂಭ: ಆಂಧ್ರ, ಒಡಿಶಾ ವಿಧಾನಸಭೆಗೂ ಮತದಾನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...