HomeUncategorizedದಿಕ್ಕು ತಪ್ಪಿದ ಮಾತುಗಳು ಮತ್ತು ಅಡ್ಡ ಹಾದಿ ಹಿಡಿದ ಚುನಾವಣಾ ಕಥನ

ದಿಕ್ಕು ತಪ್ಪಿದ ಮಾತುಗಳು ಮತ್ತು ಅಡ್ಡ ಹಾದಿ ಹಿಡಿದ ಚುನಾವಣಾ ಕಥನ

- Advertisement -
- Advertisement -

ಪ್ರಜಾತಂತ್ರದ ಹಬ್ಬಗಳೆಂದು ಕರೆಯುವ ಚುನಾವಣೆಗಳು ಬಂದಿವೆ. ಜನರ ಬೇಕುಬೇಡಗಳನ್ನು ನಿರ್ಧರಿಸುವ ಸಮಯವಿದು. ಹಾಗಾಗಿ ಜನರ ದನಿಗಳು ಜೋರಾದರೆ ಮಾತ್ರ ಆಳಲು ಹೋಗುವವರಿಗೆ ಕೇಳಿಸಲು ಸಾಧ್ಯ. ಏಕೆಂದರೆ ಈಗ ಮಾತ್ರ ರಾಜಕೀಯ ಪಕ್ಷಗಳ ನಾಯಕರುಗಳು ಜನರ ಮನೆ ಮುಂದೆ ಬರುತ್ತಾರೆ. ಹೀಗೆ ಬರುವುದು ಅವರಿಗೆ ಅನಿವಾರ್ಯವಾಗಿರುತ್ತದೆ. ಇದನ್ನೆ ನಾವು ಪ್ರಜಾತಂತ್ರ ಎಂದು ಕರೆಯುವುದು. ಈ ಸಂದರ್ಭದಲ್ಲಿ ಮಾಧ್ಯಮಗಳು ಜನರ ದನಿಯಾಗಿ ಜನ ಮತ್ತು ರಾಜಕೀಯ ಪಕ್ಷಗಳ ನಡುವೆ ಸೇತುವೆಯಾಗಿ ಕೆಲಸ ಮಾಡಬೇಕು. ಪ್ರಜಾತಂತ್ರದ ಯಶಸ್ಸಿಗೆ ಇದು ಅಗತ್ಯ.
ಕರ್ನಾಟಕದಲ್ಲಿ ಚುನಾವಣೆ ಎರಡು ಹಂತಗಳಲ್ಲಿ ನಡೆಯುತ್ತಿದ್ದು ದಿನೇ ದಿನೇ ಕಾವೇರುತ್ತಿದೆ. ಆದರೆ ಬಹುತೇಕ ಮಾಧ್ಯಮಗಳು ಮಂಡ್ಯ ಕ್ಷೇತ್ರದ ಮೇಲೆ ಮಾತ್ರ ಗಮನ ಹರಿಸುತ್ತಿದ್ದಾರೆ, ಉಳಿದ ಕ್ಷೇತ್ರಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂಬ ಆರೋಪಗಳು ದೊಡ್ಡ ಮಟ್ಟದಲ್ಲಿ ಕೇಳಿ ಬರುತ್ತಿವೆ. ಮಂಡ್ಯ ಅಂದ್ರೆ ಇಂಡ್ಯ ಇದ್ದ ಹಾಗೆ ಎಂದು ತಮಾಷೆಗೆ ಹೇಳುತ್ತಿದ್ದುದ್ದನ್ನು ನಿಜ ಮಾಡಲು ಹೊರಟಂತಿದೆ ಮಾಧ್ಯಮಗಳ ನಡೆ. ಚಿತ್ರನಟರು ಇದ್ದರೆ ಟಿಆರ್‍ಪಿ ಸಿಗುತ್ತದೆ ಎಂಬ ಕಾರಣಕ್ಕೆ ಹೆಚ್ಚಿನ ಸಮಯ ಅದಕ್ಕೆ ಮೀಸಲಿಡುವುದು ಎಷ್ಟು ಸರಿ?
ಕರ್ನಾಟಕದಲ್ಲಿರುವ ಚಾಮರಾಜನಗರದಲ್ಲಿ ಅಭಿವೃದ್ದಿ ಕೆಲಸಗಳು ಆಗುತ್ತಿವೆಯೇ ಇಲ್ಲವೇ? ಬೀದರ್‍ನ ಜನಗಳ ಪರಿಸ್ಥಿತಿ ಏನು? ರಾಜ್ಯದ ಜನರಿಗೆ ವಿದ್ಯುತ್ ಕೊಡುವುದಕ್ಕೋಸ್ಕರ ನೆಲೆ ಕಳೆದುಕೊಂಡ ಉತ್ತರ ಕನ್ನಡದ ಜನ ಈಗ ಹೇಗಿದ್ದಾರೆ? ಅಲ್ಲಿನ ಸಂಸದನ ಬೆಂಕಿಯುಗುಳುವ, ತೇಜೋವಧೆಯ ಭಾಷಣಗಳಿಂದ ಅಲ್ಲಿನ ಜನಕ್ಕೇನಾದರೂ ಉಪಯೋಗವಿದೆಯೇ? ಚಿತ್ರದುರ್ಗದ ಜನರು ಬರದಿಂದ ಬೇಯುತ್ತಿರುವುದಕ್ಕೆ ಪರಿಹಾರಗಳೇನು? ಕೋಲಾರ ಚಿಕ್ಕಬಳ್ಳಾಪುರದ ಜನರಿಗೆ ಕುಡಿಯಲು ಉತ್ತಮ ನೀರು ಸಿಗುತ್ತಿದೆಯೇ? ಈ ಯಾವ ವಿಷಯಗಳ ಕುರಿತು ಚುನಾವಣಾ ಸಂದರ್ಭದಲ್ಲಾದರೂ ಮಾಧ್ಯಮಗಳು ಗಮನಹರಿಸುತ್ತಿಲ್ಲ ಎಂಬುದನ್ನು ನಾವು ಮರೆಯಬಾರದು.
ಇನ್ನು ಚುನಾವಣಾ ಸಮಯದಲ್ಲಿ ಕೆಲ ರಾಜಕಾರಣಿಗಳು ಮನಸ್ಸಿಗೆ ಬಂದಹಾಗೆ ಮಾತಾಡುವುದು, ಕೆಟ್ಟ ಕೊಳಕು ಬೈಯ್ಯುವುದನ್ನು ತಮ್ಮ ಕಾಯಕ ಮಾಡಿಕೊಂಡಿರುತ್ತಾರೆ. ಎದುರಾಳಿಗಳನ್ನು ಹಣಿಯಲು ಈ ಕುತಂತ್ರವನ್ನು ಬಳಸುತ್ತಾರೆ. ಕರ್ನಾಟಕದಲ್ಲಿ ಈ ಹಿಂದೆ ಉಪಚುನಾವಣೆಯೊಂದರ ಸಂದರ್ಭದಲ್ಲಿ ಬಿಜೆಪಿ ಪ್ರತಾಪ್ ಸಿಂಹ ಎಂಬ ವ್ಯಕ್ತಿ ‘ಇನ್ನೂ ಗಂಡ ಸತ್ತು ಒಂದು ವಾರ ಆಗಿಲ್ಲ, ಆಗಲೇ ಅವರಿಗೆ ಗೂಟದ ಕಾರಿನ ಮೇಲೆ ಆಸೆ’ ಎಂದಿದ್ದನು. ಇನ್ನು ಈ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅನ್ನು ಟೀಕಿಸುವ ಭರದಲ್ಲಿ ಗಂಡ ಸತ್ತು ತಿಂಗಳಾಗಿಲ್ಲ ಆಗಲೇ ಚುನಾವಣೆಗೆ ಬೇಕಾಯ್ತಾ ಎಂದು ಜೆಡಿಎಸ್‍ನ ಎಚ್.ಡಿ ರೇವಣ್ಣ ಹೇಳುವ ಮೂಲಕ ಸರಿಯಾಗಿ ಛೀಮಾರಿ ಹಾಕಿಸಿಕೊಂಡರು.
ಇಂದು ಕಾಂಗ್ರೆಸ್ ಜೊತೆಗಿರುವ ಪಕ್ಷದ ನಾಯಕಮಣಿಯೊಬ್ಬ ಉತ್ತರ ಪ್ರದೇಶದಲ್ಲಿ ತಮ್ಮ ಪ್ರತಿಸ್ಪರ್ಧಿ ಮಹಿಳಾ ಅಭ್ಯರ್ಥಿಯ ವಿರುದ್ಧ ಅವರು ಎಷ್ಟು ಅಗಲ ಬಿಂದಿ ಇಟ್ಟುಕೊಂಡಿದ್ದಾರೆ ಅಷ್ಟು ಗಂಡಂದಿರು ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಇದೇ ಉತ್ತರ ಪ್ರದೇಶದ ಬಿಜೆಪಿ ವ್ಯಕ್ತಿಯೊಬ್ಬರು ಮಾಯವತಿಯವರು ಫೇಶಿಯಲ್ ಮಾಡಿಸಿಕೊಳ್ಳುತ್ತಾರೆ, ಸೌಂದರ್ಯಕ್ಕೆ ಹೆಚ್ಚಿನ ಸಮಯ ನೀಡುತ್ತಾರೆ ಅವರನ್ನು ಗೆಲ್ಲಿಸಬಾರದು ಎಂದಿದ್ದ. ಇವೆಲ್ಲಾ ಉಸಾಬರಿ ಇವರಿಗೆ ಏಕೆ ಎಂಬುದು ಸರಳ ಪ್ರಶ್ನೆ. ಆದರೆ ಇವರೆಲ್ಲರೂ ಮಹಿಳೆಯವರ ವಿರುದ್ಧವೇ ಏಕೆ ತಮ್ಮ ನಾಲಿಗೆಯನ್ನು ಹರಿಯಬಿಡುತ್ತಾರೆ ಎಂಬುದು ಬಹಳ ದೊಡ್ಡ ಪ್ರಶ್ನೆಯಾಗಿದೆ. ಇಂದಿಗೂ ನಮ್ಮನ್ನು ಆಳಲು ಹೋಗುವವರು ಮಹಿಳೆಯರ ಕುರಿತು ಎಂತಹ ಕೀಳು ಮನಸ್ಥಿತಿ ಹೊಂದಿದ್ದಾರೆ ಎಂಬುದು ಇದರಿಂದ ತಿಳಿದುಬರುತ್ತದೆ. ಇದರಲ್ಲಿ ಪಕ್ಷಭೇದವೇ ಇಲ್ಲವಾದರೂ ಸಂಸ್ಕøತಿ ರಕ್ಷಕರ ಪಕ್ಷ ಎಂದು ಕರೆಸಿಕೊಳ್ಳುವ ಬಿಜೆಪಿಯವರು ಬೆಂಕಿ ಹಚ್ಚುವ ಮಾತಾಡುವುದರಲ್ಲಿ, ಸಮುದಾಯಗಳನ್ನು ಅವಮಾನಿಸುವ ವಿಚಾರದಲ್ಲಿ ಅಗ್ರಗಣ್ಯರು.
ಕಳೆದ ಐದು ವರ್ಷಗಳ ಅವಧಿಯಲ್ಲಿ ತಮ್ಮ ಪಕ್ಷ ಮತ್ತು ತಾನು ಏನೆಲ್ಲಾ ಮಾಡಿದ್ದೇನೆ ಎಂಬುದರ ಆಧಾರದಲ್ಲಿ ಆಡಳಿತ ಪಕ್ಷ ಮತ್ತು ಅದರ ಅಭ್ಯರ್ಥಿಗಳು ಮತ ಕೇಳಬೇಕು. ಹಾಗೆಯೇ ವಿರೋಧ ಪಕ್ಷಗಳು ಆಳುವ ಪಕ್ಷ ಹೇಗೆ ವಿಫಲವಾಗಿದೆ ಮತ್ತು ನಾವು ಅಧಿಕಾರಕ್ಕೆ ಬಂದರೆ ಏನು ಮಾಡುತ್ತೇವೆ ಎಂಬದರ ಮೇಲೆ ಮತಯಾಚಿಸಬೇಕು. ಆದರೆ ಇಂದು ಏನಾಗುತ್ತಿದೆ? ಆಡಳಿತ ನಡೆಸುತ್ತಿದ್ದ ಪಕ್ಷವೂ ಗಡಿಯನ್ನು, ಸೈನಿಕರನ್ನು ದೇಶದ ರಕ್ಷಣೆಯನ್ನು ಮುಂದಿಟ್ಟು ಓಟು ಕೇಳುತ್ತದೆ. ಸ್ವತಃ ಪ್ರಧಾನಿಯವರೇ ಧರ್ಮವನ್ನು ಮುಂದಿಟ್ಟು ಅತಿರೇಕದ ಮಾತುಗಳನ್ನು ಆಡುತ್ತಿದ್ದರೆ, ಮಾಧ್ಯಮಗಳು ಸಹ ರಾಷ್ಟ್ರ ಅಪಾಯದಲ್ಲಿದೆ ಎಂದು ಬಿಂಬಿಸುತ್ತವೆ. ದುರ್ಬಲ ಪ್ರತಿಪಕ್ಷಗಳು ದಿಕ್ಕು ತೋಚದೇ ಕೂರುತ್ತವೆ. ಎಲ್ಲೊ ಒಂದಿಷ್ಟು ಜನಪರವಾಗಿ ಪ್ರತಿಪಕ್ಷಗಳು ಮಾತಾಡಿದರೂ ಸಹ ಈಗಾಗಲೇ ಮಾರಿಕೊಂಡಿರುವ ಮಾಧ್ಯಮಗಳು ಅದಕ್ಕೆ ಮಹತ್ವ ಕೊಡುವುದಿಲ್ಲ.
ಇಂದು ದೊಡ್ಡ ಕಾರ್ಪೊರೇಟ್‍ಗಳು, ಯಾರು ಗೆದ್ದರೆ ನಮಗೆ ಅನುಕೂಲ ಎಂಬ ಆಧಾರದಲ್ಲಿ ಚುನಾವಣೆಗಳನ್ನು ನಿರ್ಧರಿಸಲು ಸಾವಿರಾರು ಕೋಟಿ ಫಂಡ್ ಮಾಡಲು ಚುನಾವಣಾ ಬಾಂಡ್‍ಗಳಂತಹ ಅಧಿಕೃತ ದಾರಿಗಳೂ ತೆರೆದುಕೊಂಡಿವೆ. ತಮ್ಮ ಅನುಕೂಲಕ್ಕೆ ತಕ್ಕಂತೆ ಅಭಿಪ್ರಾಯ ರೂಪಿಸಲು ಅವರು ಮಾಧ್ಯಮಗಳನ್ನು ತಯಾರು ಮಾಡಿಕೊಂಡಿರುತ್ತಾರೆ. ಮಾಧ್ಯಮಗಳು ಅವರು ಹೇಳಿದಂತೆ ತುತ್ತೂರಿ ಊದುತ್ತವೆ. ಇದನ್ನು ಬದಲಿಸಬೇಕಾದ ಜವಾಬ್ದಾರಿಯನ್ನು ಇಂದು ಪರ್ಯಾಯ ಮಾಧ್ಯಮಗಳು ಹೊತ್ತಿಕೊಳ್ಳಲೇಬೇಕಿದೆ. ಇದು ಕಾಲದ ತುರ್ತಾಗಿದ್ದು ದೇಶದ ಆರೋಗ್ಯದ ದೃಷ್ಟಿಯಿಂದ, ಪ್ರಜಾತಂತ್ರದ ದೃಷ್ಟಿಯಿಂದ, ಭವಿಷ್ಯದ ದೃಷ್ಟಿಯಿಂದ ಬಹಳ ಬಹಳ ಮಹತ್ವದ್ದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...