HomeUncategorizedದಿಕ್ಕು ತಪ್ಪಿದ ಮಾತುಗಳು ಮತ್ತು ಅಡ್ಡ ಹಾದಿ ಹಿಡಿದ ಚುನಾವಣಾ ಕಥನ

ದಿಕ್ಕು ತಪ್ಪಿದ ಮಾತುಗಳು ಮತ್ತು ಅಡ್ಡ ಹಾದಿ ಹಿಡಿದ ಚುನಾವಣಾ ಕಥನ

- Advertisement -
- Advertisement -

ಪ್ರಜಾತಂತ್ರದ ಹಬ್ಬಗಳೆಂದು ಕರೆಯುವ ಚುನಾವಣೆಗಳು ಬಂದಿವೆ. ಜನರ ಬೇಕುಬೇಡಗಳನ್ನು ನಿರ್ಧರಿಸುವ ಸಮಯವಿದು. ಹಾಗಾಗಿ ಜನರ ದನಿಗಳು ಜೋರಾದರೆ ಮಾತ್ರ ಆಳಲು ಹೋಗುವವರಿಗೆ ಕೇಳಿಸಲು ಸಾಧ್ಯ. ಏಕೆಂದರೆ ಈಗ ಮಾತ್ರ ರಾಜಕೀಯ ಪಕ್ಷಗಳ ನಾಯಕರುಗಳು ಜನರ ಮನೆ ಮುಂದೆ ಬರುತ್ತಾರೆ. ಹೀಗೆ ಬರುವುದು ಅವರಿಗೆ ಅನಿವಾರ್ಯವಾಗಿರುತ್ತದೆ. ಇದನ್ನೆ ನಾವು ಪ್ರಜಾತಂತ್ರ ಎಂದು ಕರೆಯುವುದು. ಈ ಸಂದರ್ಭದಲ್ಲಿ ಮಾಧ್ಯಮಗಳು ಜನರ ದನಿಯಾಗಿ ಜನ ಮತ್ತು ರಾಜಕೀಯ ಪಕ್ಷಗಳ ನಡುವೆ ಸೇತುವೆಯಾಗಿ ಕೆಲಸ ಮಾಡಬೇಕು. ಪ್ರಜಾತಂತ್ರದ ಯಶಸ್ಸಿಗೆ ಇದು ಅಗತ್ಯ.
ಕರ್ನಾಟಕದಲ್ಲಿ ಚುನಾವಣೆ ಎರಡು ಹಂತಗಳಲ್ಲಿ ನಡೆಯುತ್ತಿದ್ದು ದಿನೇ ದಿನೇ ಕಾವೇರುತ್ತಿದೆ. ಆದರೆ ಬಹುತೇಕ ಮಾಧ್ಯಮಗಳು ಮಂಡ್ಯ ಕ್ಷೇತ್ರದ ಮೇಲೆ ಮಾತ್ರ ಗಮನ ಹರಿಸುತ್ತಿದ್ದಾರೆ, ಉಳಿದ ಕ್ಷೇತ್ರಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂಬ ಆರೋಪಗಳು ದೊಡ್ಡ ಮಟ್ಟದಲ್ಲಿ ಕೇಳಿ ಬರುತ್ತಿವೆ. ಮಂಡ್ಯ ಅಂದ್ರೆ ಇಂಡ್ಯ ಇದ್ದ ಹಾಗೆ ಎಂದು ತಮಾಷೆಗೆ ಹೇಳುತ್ತಿದ್ದುದ್ದನ್ನು ನಿಜ ಮಾಡಲು ಹೊರಟಂತಿದೆ ಮಾಧ್ಯಮಗಳ ನಡೆ. ಚಿತ್ರನಟರು ಇದ್ದರೆ ಟಿಆರ್‍ಪಿ ಸಿಗುತ್ತದೆ ಎಂಬ ಕಾರಣಕ್ಕೆ ಹೆಚ್ಚಿನ ಸಮಯ ಅದಕ್ಕೆ ಮೀಸಲಿಡುವುದು ಎಷ್ಟು ಸರಿ?
ಕರ್ನಾಟಕದಲ್ಲಿರುವ ಚಾಮರಾಜನಗರದಲ್ಲಿ ಅಭಿವೃದ್ದಿ ಕೆಲಸಗಳು ಆಗುತ್ತಿವೆಯೇ ಇಲ್ಲವೇ? ಬೀದರ್‍ನ ಜನಗಳ ಪರಿಸ್ಥಿತಿ ಏನು? ರಾಜ್ಯದ ಜನರಿಗೆ ವಿದ್ಯುತ್ ಕೊಡುವುದಕ್ಕೋಸ್ಕರ ನೆಲೆ ಕಳೆದುಕೊಂಡ ಉತ್ತರ ಕನ್ನಡದ ಜನ ಈಗ ಹೇಗಿದ್ದಾರೆ? ಅಲ್ಲಿನ ಸಂಸದನ ಬೆಂಕಿಯುಗುಳುವ, ತೇಜೋವಧೆಯ ಭಾಷಣಗಳಿಂದ ಅಲ್ಲಿನ ಜನಕ್ಕೇನಾದರೂ ಉಪಯೋಗವಿದೆಯೇ? ಚಿತ್ರದುರ್ಗದ ಜನರು ಬರದಿಂದ ಬೇಯುತ್ತಿರುವುದಕ್ಕೆ ಪರಿಹಾರಗಳೇನು? ಕೋಲಾರ ಚಿಕ್ಕಬಳ್ಳಾಪುರದ ಜನರಿಗೆ ಕುಡಿಯಲು ಉತ್ತಮ ನೀರು ಸಿಗುತ್ತಿದೆಯೇ? ಈ ಯಾವ ವಿಷಯಗಳ ಕುರಿತು ಚುನಾವಣಾ ಸಂದರ್ಭದಲ್ಲಾದರೂ ಮಾಧ್ಯಮಗಳು ಗಮನಹರಿಸುತ್ತಿಲ್ಲ ಎಂಬುದನ್ನು ನಾವು ಮರೆಯಬಾರದು.
ಇನ್ನು ಚುನಾವಣಾ ಸಮಯದಲ್ಲಿ ಕೆಲ ರಾಜಕಾರಣಿಗಳು ಮನಸ್ಸಿಗೆ ಬಂದಹಾಗೆ ಮಾತಾಡುವುದು, ಕೆಟ್ಟ ಕೊಳಕು ಬೈಯ್ಯುವುದನ್ನು ತಮ್ಮ ಕಾಯಕ ಮಾಡಿಕೊಂಡಿರುತ್ತಾರೆ. ಎದುರಾಳಿಗಳನ್ನು ಹಣಿಯಲು ಈ ಕುತಂತ್ರವನ್ನು ಬಳಸುತ್ತಾರೆ. ಕರ್ನಾಟಕದಲ್ಲಿ ಈ ಹಿಂದೆ ಉಪಚುನಾವಣೆಯೊಂದರ ಸಂದರ್ಭದಲ್ಲಿ ಬಿಜೆಪಿ ಪ್ರತಾಪ್ ಸಿಂಹ ಎಂಬ ವ್ಯಕ್ತಿ ‘ಇನ್ನೂ ಗಂಡ ಸತ್ತು ಒಂದು ವಾರ ಆಗಿಲ್ಲ, ಆಗಲೇ ಅವರಿಗೆ ಗೂಟದ ಕಾರಿನ ಮೇಲೆ ಆಸೆ’ ಎಂದಿದ್ದನು. ಇನ್ನು ಈ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅನ್ನು ಟೀಕಿಸುವ ಭರದಲ್ಲಿ ಗಂಡ ಸತ್ತು ತಿಂಗಳಾಗಿಲ್ಲ ಆಗಲೇ ಚುನಾವಣೆಗೆ ಬೇಕಾಯ್ತಾ ಎಂದು ಜೆಡಿಎಸ್‍ನ ಎಚ್.ಡಿ ರೇವಣ್ಣ ಹೇಳುವ ಮೂಲಕ ಸರಿಯಾಗಿ ಛೀಮಾರಿ ಹಾಕಿಸಿಕೊಂಡರು.
ಇಂದು ಕಾಂಗ್ರೆಸ್ ಜೊತೆಗಿರುವ ಪಕ್ಷದ ನಾಯಕಮಣಿಯೊಬ್ಬ ಉತ್ತರ ಪ್ರದೇಶದಲ್ಲಿ ತಮ್ಮ ಪ್ರತಿಸ್ಪರ್ಧಿ ಮಹಿಳಾ ಅಭ್ಯರ್ಥಿಯ ವಿರುದ್ಧ ಅವರು ಎಷ್ಟು ಅಗಲ ಬಿಂದಿ ಇಟ್ಟುಕೊಂಡಿದ್ದಾರೆ ಅಷ್ಟು ಗಂಡಂದಿರು ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಇದೇ ಉತ್ತರ ಪ್ರದೇಶದ ಬಿಜೆಪಿ ವ್ಯಕ್ತಿಯೊಬ್ಬರು ಮಾಯವತಿಯವರು ಫೇಶಿಯಲ್ ಮಾಡಿಸಿಕೊಳ್ಳುತ್ತಾರೆ, ಸೌಂದರ್ಯಕ್ಕೆ ಹೆಚ್ಚಿನ ಸಮಯ ನೀಡುತ್ತಾರೆ ಅವರನ್ನು ಗೆಲ್ಲಿಸಬಾರದು ಎಂದಿದ್ದ. ಇವೆಲ್ಲಾ ಉಸಾಬರಿ ಇವರಿಗೆ ಏಕೆ ಎಂಬುದು ಸರಳ ಪ್ರಶ್ನೆ. ಆದರೆ ಇವರೆಲ್ಲರೂ ಮಹಿಳೆಯವರ ವಿರುದ್ಧವೇ ಏಕೆ ತಮ್ಮ ನಾಲಿಗೆಯನ್ನು ಹರಿಯಬಿಡುತ್ತಾರೆ ಎಂಬುದು ಬಹಳ ದೊಡ್ಡ ಪ್ರಶ್ನೆಯಾಗಿದೆ. ಇಂದಿಗೂ ನಮ್ಮನ್ನು ಆಳಲು ಹೋಗುವವರು ಮಹಿಳೆಯರ ಕುರಿತು ಎಂತಹ ಕೀಳು ಮನಸ್ಥಿತಿ ಹೊಂದಿದ್ದಾರೆ ಎಂಬುದು ಇದರಿಂದ ತಿಳಿದುಬರುತ್ತದೆ. ಇದರಲ್ಲಿ ಪಕ್ಷಭೇದವೇ ಇಲ್ಲವಾದರೂ ಸಂಸ್ಕøತಿ ರಕ್ಷಕರ ಪಕ್ಷ ಎಂದು ಕರೆಸಿಕೊಳ್ಳುವ ಬಿಜೆಪಿಯವರು ಬೆಂಕಿ ಹಚ್ಚುವ ಮಾತಾಡುವುದರಲ್ಲಿ, ಸಮುದಾಯಗಳನ್ನು ಅವಮಾನಿಸುವ ವಿಚಾರದಲ್ಲಿ ಅಗ್ರಗಣ್ಯರು.
ಕಳೆದ ಐದು ವರ್ಷಗಳ ಅವಧಿಯಲ್ಲಿ ತಮ್ಮ ಪಕ್ಷ ಮತ್ತು ತಾನು ಏನೆಲ್ಲಾ ಮಾಡಿದ್ದೇನೆ ಎಂಬುದರ ಆಧಾರದಲ್ಲಿ ಆಡಳಿತ ಪಕ್ಷ ಮತ್ತು ಅದರ ಅಭ್ಯರ್ಥಿಗಳು ಮತ ಕೇಳಬೇಕು. ಹಾಗೆಯೇ ವಿರೋಧ ಪಕ್ಷಗಳು ಆಳುವ ಪಕ್ಷ ಹೇಗೆ ವಿಫಲವಾಗಿದೆ ಮತ್ತು ನಾವು ಅಧಿಕಾರಕ್ಕೆ ಬಂದರೆ ಏನು ಮಾಡುತ್ತೇವೆ ಎಂಬದರ ಮೇಲೆ ಮತಯಾಚಿಸಬೇಕು. ಆದರೆ ಇಂದು ಏನಾಗುತ್ತಿದೆ? ಆಡಳಿತ ನಡೆಸುತ್ತಿದ್ದ ಪಕ್ಷವೂ ಗಡಿಯನ್ನು, ಸೈನಿಕರನ್ನು ದೇಶದ ರಕ್ಷಣೆಯನ್ನು ಮುಂದಿಟ್ಟು ಓಟು ಕೇಳುತ್ತದೆ. ಸ್ವತಃ ಪ್ರಧಾನಿಯವರೇ ಧರ್ಮವನ್ನು ಮುಂದಿಟ್ಟು ಅತಿರೇಕದ ಮಾತುಗಳನ್ನು ಆಡುತ್ತಿದ್ದರೆ, ಮಾಧ್ಯಮಗಳು ಸಹ ರಾಷ್ಟ್ರ ಅಪಾಯದಲ್ಲಿದೆ ಎಂದು ಬಿಂಬಿಸುತ್ತವೆ. ದುರ್ಬಲ ಪ್ರತಿಪಕ್ಷಗಳು ದಿಕ್ಕು ತೋಚದೇ ಕೂರುತ್ತವೆ. ಎಲ್ಲೊ ಒಂದಿಷ್ಟು ಜನಪರವಾಗಿ ಪ್ರತಿಪಕ್ಷಗಳು ಮಾತಾಡಿದರೂ ಸಹ ಈಗಾಗಲೇ ಮಾರಿಕೊಂಡಿರುವ ಮಾಧ್ಯಮಗಳು ಅದಕ್ಕೆ ಮಹತ್ವ ಕೊಡುವುದಿಲ್ಲ.
ಇಂದು ದೊಡ್ಡ ಕಾರ್ಪೊರೇಟ್‍ಗಳು, ಯಾರು ಗೆದ್ದರೆ ನಮಗೆ ಅನುಕೂಲ ಎಂಬ ಆಧಾರದಲ್ಲಿ ಚುನಾವಣೆಗಳನ್ನು ನಿರ್ಧರಿಸಲು ಸಾವಿರಾರು ಕೋಟಿ ಫಂಡ್ ಮಾಡಲು ಚುನಾವಣಾ ಬಾಂಡ್‍ಗಳಂತಹ ಅಧಿಕೃತ ದಾರಿಗಳೂ ತೆರೆದುಕೊಂಡಿವೆ. ತಮ್ಮ ಅನುಕೂಲಕ್ಕೆ ತಕ್ಕಂತೆ ಅಭಿಪ್ರಾಯ ರೂಪಿಸಲು ಅವರು ಮಾಧ್ಯಮಗಳನ್ನು ತಯಾರು ಮಾಡಿಕೊಂಡಿರುತ್ತಾರೆ. ಮಾಧ್ಯಮಗಳು ಅವರು ಹೇಳಿದಂತೆ ತುತ್ತೂರಿ ಊದುತ್ತವೆ. ಇದನ್ನು ಬದಲಿಸಬೇಕಾದ ಜವಾಬ್ದಾರಿಯನ್ನು ಇಂದು ಪರ್ಯಾಯ ಮಾಧ್ಯಮಗಳು ಹೊತ್ತಿಕೊಳ್ಳಲೇಬೇಕಿದೆ. ಇದು ಕಾಲದ ತುರ್ತಾಗಿದ್ದು ದೇಶದ ಆರೋಗ್ಯದ ದೃಷ್ಟಿಯಿಂದ, ಪ್ರಜಾತಂತ್ರದ ದೃಷ್ಟಿಯಿಂದ, ಭವಿಷ್ಯದ ದೃಷ್ಟಿಯಿಂದ ಬಹಳ ಬಹಳ ಮಹತ್ವದ್ದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...