HomeUncategorizedದಿಕ್ಕು ತಪ್ಪಿದ ಮಾತುಗಳು ಮತ್ತು ಅಡ್ಡ ಹಾದಿ ಹಿಡಿದ ಚುನಾವಣಾ ಕಥನ

ದಿಕ್ಕು ತಪ್ಪಿದ ಮಾತುಗಳು ಮತ್ತು ಅಡ್ಡ ಹಾದಿ ಹಿಡಿದ ಚುನಾವಣಾ ಕಥನ

- Advertisement -
- Advertisement -

ಪ್ರಜಾತಂತ್ರದ ಹಬ್ಬಗಳೆಂದು ಕರೆಯುವ ಚುನಾವಣೆಗಳು ಬಂದಿವೆ. ಜನರ ಬೇಕುಬೇಡಗಳನ್ನು ನಿರ್ಧರಿಸುವ ಸಮಯವಿದು. ಹಾಗಾಗಿ ಜನರ ದನಿಗಳು ಜೋರಾದರೆ ಮಾತ್ರ ಆಳಲು ಹೋಗುವವರಿಗೆ ಕೇಳಿಸಲು ಸಾಧ್ಯ. ಏಕೆಂದರೆ ಈಗ ಮಾತ್ರ ರಾಜಕೀಯ ಪಕ್ಷಗಳ ನಾಯಕರುಗಳು ಜನರ ಮನೆ ಮುಂದೆ ಬರುತ್ತಾರೆ. ಹೀಗೆ ಬರುವುದು ಅವರಿಗೆ ಅನಿವಾರ್ಯವಾಗಿರುತ್ತದೆ. ಇದನ್ನೆ ನಾವು ಪ್ರಜಾತಂತ್ರ ಎಂದು ಕರೆಯುವುದು. ಈ ಸಂದರ್ಭದಲ್ಲಿ ಮಾಧ್ಯಮಗಳು ಜನರ ದನಿಯಾಗಿ ಜನ ಮತ್ತು ರಾಜಕೀಯ ಪಕ್ಷಗಳ ನಡುವೆ ಸೇತುವೆಯಾಗಿ ಕೆಲಸ ಮಾಡಬೇಕು. ಪ್ರಜಾತಂತ್ರದ ಯಶಸ್ಸಿಗೆ ಇದು ಅಗತ್ಯ.
ಕರ್ನಾಟಕದಲ್ಲಿ ಚುನಾವಣೆ ಎರಡು ಹಂತಗಳಲ್ಲಿ ನಡೆಯುತ್ತಿದ್ದು ದಿನೇ ದಿನೇ ಕಾವೇರುತ್ತಿದೆ. ಆದರೆ ಬಹುತೇಕ ಮಾಧ್ಯಮಗಳು ಮಂಡ್ಯ ಕ್ಷೇತ್ರದ ಮೇಲೆ ಮಾತ್ರ ಗಮನ ಹರಿಸುತ್ತಿದ್ದಾರೆ, ಉಳಿದ ಕ್ಷೇತ್ರಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂಬ ಆರೋಪಗಳು ದೊಡ್ಡ ಮಟ್ಟದಲ್ಲಿ ಕೇಳಿ ಬರುತ್ತಿವೆ. ಮಂಡ್ಯ ಅಂದ್ರೆ ಇಂಡ್ಯ ಇದ್ದ ಹಾಗೆ ಎಂದು ತಮಾಷೆಗೆ ಹೇಳುತ್ತಿದ್ದುದ್ದನ್ನು ನಿಜ ಮಾಡಲು ಹೊರಟಂತಿದೆ ಮಾಧ್ಯಮಗಳ ನಡೆ. ಚಿತ್ರನಟರು ಇದ್ದರೆ ಟಿಆರ್‍ಪಿ ಸಿಗುತ್ತದೆ ಎಂಬ ಕಾರಣಕ್ಕೆ ಹೆಚ್ಚಿನ ಸಮಯ ಅದಕ್ಕೆ ಮೀಸಲಿಡುವುದು ಎಷ್ಟು ಸರಿ?
ಕರ್ನಾಟಕದಲ್ಲಿರುವ ಚಾಮರಾಜನಗರದಲ್ಲಿ ಅಭಿವೃದ್ದಿ ಕೆಲಸಗಳು ಆಗುತ್ತಿವೆಯೇ ಇಲ್ಲವೇ? ಬೀದರ್‍ನ ಜನಗಳ ಪರಿಸ್ಥಿತಿ ಏನು? ರಾಜ್ಯದ ಜನರಿಗೆ ವಿದ್ಯುತ್ ಕೊಡುವುದಕ್ಕೋಸ್ಕರ ನೆಲೆ ಕಳೆದುಕೊಂಡ ಉತ್ತರ ಕನ್ನಡದ ಜನ ಈಗ ಹೇಗಿದ್ದಾರೆ? ಅಲ್ಲಿನ ಸಂಸದನ ಬೆಂಕಿಯುಗುಳುವ, ತೇಜೋವಧೆಯ ಭಾಷಣಗಳಿಂದ ಅಲ್ಲಿನ ಜನಕ್ಕೇನಾದರೂ ಉಪಯೋಗವಿದೆಯೇ? ಚಿತ್ರದುರ್ಗದ ಜನರು ಬರದಿಂದ ಬೇಯುತ್ತಿರುವುದಕ್ಕೆ ಪರಿಹಾರಗಳೇನು? ಕೋಲಾರ ಚಿಕ್ಕಬಳ್ಳಾಪುರದ ಜನರಿಗೆ ಕುಡಿಯಲು ಉತ್ತಮ ನೀರು ಸಿಗುತ್ತಿದೆಯೇ? ಈ ಯಾವ ವಿಷಯಗಳ ಕುರಿತು ಚುನಾವಣಾ ಸಂದರ್ಭದಲ್ಲಾದರೂ ಮಾಧ್ಯಮಗಳು ಗಮನಹರಿಸುತ್ತಿಲ್ಲ ಎಂಬುದನ್ನು ನಾವು ಮರೆಯಬಾರದು.
ಇನ್ನು ಚುನಾವಣಾ ಸಮಯದಲ್ಲಿ ಕೆಲ ರಾಜಕಾರಣಿಗಳು ಮನಸ್ಸಿಗೆ ಬಂದಹಾಗೆ ಮಾತಾಡುವುದು, ಕೆಟ್ಟ ಕೊಳಕು ಬೈಯ್ಯುವುದನ್ನು ತಮ್ಮ ಕಾಯಕ ಮಾಡಿಕೊಂಡಿರುತ್ತಾರೆ. ಎದುರಾಳಿಗಳನ್ನು ಹಣಿಯಲು ಈ ಕುತಂತ್ರವನ್ನು ಬಳಸುತ್ತಾರೆ. ಕರ್ನಾಟಕದಲ್ಲಿ ಈ ಹಿಂದೆ ಉಪಚುನಾವಣೆಯೊಂದರ ಸಂದರ್ಭದಲ್ಲಿ ಬಿಜೆಪಿ ಪ್ರತಾಪ್ ಸಿಂಹ ಎಂಬ ವ್ಯಕ್ತಿ ‘ಇನ್ನೂ ಗಂಡ ಸತ್ತು ಒಂದು ವಾರ ಆಗಿಲ್ಲ, ಆಗಲೇ ಅವರಿಗೆ ಗೂಟದ ಕಾರಿನ ಮೇಲೆ ಆಸೆ’ ಎಂದಿದ್ದನು. ಇನ್ನು ಈ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅನ್ನು ಟೀಕಿಸುವ ಭರದಲ್ಲಿ ಗಂಡ ಸತ್ತು ತಿಂಗಳಾಗಿಲ್ಲ ಆಗಲೇ ಚುನಾವಣೆಗೆ ಬೇಕಾಯ್ತಾ ಎಂದು ಜೆಡಿಎಸ್‍ನ ಎಚ್.ಡಿ ರೇವಣ್ಣ ಹೇಳುವ ಮೂಲಕ ಸರಿಯಾಗಿ ಛೀಮಾರಿ ಹಾಕಿಸಿಕೊಂಡರು.
ಇಂದು ಕಾಂಗ್ರೆಸ್ ಜೊತೆಗಿರುವ ಪಕ್ಷದ ನಾಯಕಮಣಿಯೊಬ್ಬ ಉತ್ತರ ಪ್ರದೇಶದಲ್ಲಿ ತಮ್ಮ ಪ್ರತಿಸ್ಪರ್ಧಿ ಮಹಿಳಾ ಅಭ್ಯರ್ಥಿಯ ವಿರುದ್ಧ ಅವರು ಎಷ್ಟು ಅಗಲ ಬಿಂದಿ ಇಟ್ಟುಕೊಂಡಿದ್ದಾರೆ ಅಷ್ಟು ಗಂಡಂದಿರು ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಇದೇ ಉತ್ತರ ಪ್ರದೇಶದ ಬಿಜೆಪಿ ವ್ಯಕ್ತಿಯೊಬ್ಬರು ಮಾಯವತಿಯವರು ಫೇಶಿಯಲ್ ಮಾಡಿಸಿಕೊಳ್ಳುತ್ತಾರೆ, ಸೌಂದರ್ಯಕ್ಕೆ ಹೆಚ್ಚಿನ ಸಮಯ ನೀಡುತ್ತಾರೆ ಅವರನ್ನು ಗೆಲ್ಲಿಸಬಾರದು ಎಂದಿದ್ದ. ಇವೆಲ್ಲಾ ಉಸಾಬರಿ ಇವರಿಗೆ ಏಕೆ ಎಂಬುದು ಸರಳ ಪ್ರಶ್ನೆ. ಆದರೆ ಇವರೆಲ್ಲರೂ ಮಹಿಳೆಯವರ ವಿರುದ್ಧವೇ ಏಕೆ ತಮ್ಮ ನಾಲಿಗೆಯನ್ನು ಹರಿಯಬಿಡುತ್ತಾರೆ ಎಂಬುದು ಬಹಳ ದೊಡ್ಡ ಪ್ರಶ್ನೆಯಾಗಿದೆ. ಇಂದಿಗೂ ನಮ್ಮನ್ನು ಆಳಲು ಹೋಗುವವರು ಮಹಿಳೆಯರ ಕುರಿತು ಎಂತಹ ಕೀಳು ಮನಸ್ಥಿತಿ ಹೊಂದಿದ್ದಾರೆ ಎಂಬುದು ಇದರಿಂದ ತಿಳಿದುಬರುತ್ತದೆ. ಇದರಲ್ಲಿ ಪಕ್ಷಭೇದವೇ ಇಲ್ಲವಾದರೂ ಸಂಸ್ಕøತಿ ರಕ್ಷಕರ ಪಕ್ಷ ಎಂದು ಕರೆಸಿಕೊಳ್ಳುವ ಬಿಜೆಪಿಯವರು ಬೆಂಕಿ ಹಚ್ಚುವ ಮಾತಾಡುವುದರಲ್ಲಿ, ಸಮುದಾಯಗಳನ್ನು ಅವಮಾನಿಸುವ ವಿಚಾರದಲ್ಲಿ ಅಗ್ರಗಣ್ಯರು.
ಕಳೆದ ಐದು ವರ್ಷಗಳ ಅವಧಿಯಲ್ಲಿ ತಮ್ಮ ಪಕ್ಷ ಮತ್ತು ತಾನು ಏನೆಲ್ಲಾ ಮಾಡಿದ್ದೇನೆ ಎಂಬುದರ ಆಧಾರದಲ್ಲಿ ಆಡಳಿತ ಪಕ್ಷ ಮತ್ತು ಅದರ ಅಭ್ಯರ್ಥಿಗಳು ಮತ ಕೇಳಬೇಕು. ಹಾಗೆಯೇ ವಿರೋಧ ಪಕ್ಷಗಳು ಆಳುವ ಪಕ್ಷ ಹೇಗೆ ವಿಫಲವಾಗಿದೆ ಮತ್ತು ನಾವು ಅಧಿಕಾರಕ್ಕೆ ಬಂದರೆ ಏನು ಮಾಡುತ್ತೇವೆ ಎಂಬದರ ಮೇಲೆ ಮತಯಾಚಿಸಬೇಕು. ಆದರೆ ಇಂದು ಏನಾಗುತ್ತಿದೆ? ಆಡಳಿತ ನಡೆಸುತ್ತಿದ್ದ ಪಕ್ಷವೂ ಗಡಿಯನ್ನು, ಸೈನಿಕರನ್ನು ದೇಶದ ರಕ್ಷಣೆಯನ್ನು ಮುಂದಿಟ್ಟು ಓಟು ಕೇಳುತ್ತದೆ. ಸ್ವತಃ ಪ್ರಧಾನಿಯವರೇ ಧರ್ಮವನ್ನು ಮುಂದಿಟ್ಟು ಅತಿರೇಕದ ಮಾತುಗಳನ್ನು ಆಡುತ್ತಿದ್ದರೆ, ಮಾಧ್ಯಮಗಳು ಸಹ ರಾಷ್ಟ್ರ ಅಪಾಯದಲ್ಲಿದೆ ಎಂದು ಬಿಂಬಿಸುತ್ತವೆ. ದುರ್ಬಲ ಪ್ರತಿಪಕ್ಷಗಳು ದಿಕ್ಕು ತೋಚದೇ ಕೂರುತ್ತವೆ. ಎಲ್ಲೊ ಒಂದಿಷ್ಟು ಜನಪರವಾಗಿ ಪ್ರತಿಪಕ್ಷಗಳು ಮಾತಾಡಿದರೂ ಸಹ ಈಗಾಗಲೇ ಮಾರಿಕೊಂಡಿರುವ ಮಾಧ್ಯಮಗಳು ಅದಕ್ಕೆ ಮಹತ್ವ ಕೊಡುವುದಿಲ್ಲ.
ಇಂದು ದೊಡ್ಡ ಕಾರ್ಪೊರೇಟ್‍ಗಳು, ಯಾರು ಗೆದ್ದರೆ ನಮಗೆ ಅನುಕೂಲ ಎಂಬ ಆಧಾರದಲ್ಲಿ ಚುನಾವಣೆಗಳನ್ನು ನಿರ್ಧರಿಸಲು ಸಾವಿರಾರು ಕೋಟಿ ಫಂಡ್ ಮಾಡಲು ಚುನಾವಣಾ ಬಾಂಡ್‍ಗಳಂತಹ ಅಧಿಕೃತ ದಾರಿಗಳೂ ತೆರೆದುಕೊಂಡಿವೆ. ತಮ್ಮ ಅನುಕೂಲಕ್ಕೆ ತಕ್ಕಂತೆ ಅಭಿಪ್ರಾಯ ರೂಪಿಸಲು ಅವರು ಮಾಧ್ಯಮಗಳನ್ನು ತಯಾರು ಮಾಡಿಕೊಂಡಿರುತ್ತಾರೆ. ಮಾಧ್ಯಮಗಳು ಅವರು ಹೇಳಿದಂತೆ ತುತ್ತೂರಿ ಊದುತ್ತವೆ. ಇದನ್ನು ಬದಲಿಸಬೇಕಾದ ಜವಾಬ್ದಾರಿಯನ್ನು ಇಂದು ಪರ್ಯಾಯ ಮಾಧ್ಯಮಗಳು ಹೊತ್ತಿಕೊಳ್ಳಲೇಬೇಕಿದೆ. ಇದು ಕಾಲದ ತುರ್ತಾಗಿದ್ದು ದೇಶದ ಆರೋಗ್ಯದ ದೃಷ್ಟಿಯಿಂದ, ಪ್ರಜಾತಂತ್ರದ ದೃಷ್ಟಿಯಿಂದ, ಭವಿಷ್ಯದ ದೃಷ್ಟಿಯಿಂದ ಬಹಳ ಬಹಳ ಮಹತ್ವದ್ದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...